Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಅವ್ಶೆಜ್ಞಾನಿಕ ಆದೇಶ ನೀಡುತ್ತಿರುವ ಕಾವೇರಿ ನೀರು ನಿರ್ವಹಣಾ ಮಂಡಳಿಯನ್ನು ರದ್ದುಪಡಿಸಿ; ಎಸ್.ಜಯಪ್ರಕಾಶ್

ಮೈಸೂರು; ಅವ್ಶೆಜ್ಞಾನಿಕವಾಗಿ ಕರ್ನಾಟಕ ರಾಜ್ಯಕ್ಕೆ ಆದೇಶಗಳನ್ನು ನೀಡುತ್ತಿರುವ ಕಾವೇರಿ ನೀರು ನಿರ್ವಹಣಾ ಮಂಡಳಿಯನ್ನು ಕೂಡಲೇ ಕೇಂದ್ರ ಸರ್ಕಾರ, ಸುಪ್ರೀಂಕೋರ್ಟ್ ರದ್ದುಪಡಿಸಬೇಕು ಎಂದು ಕಾವೇರಿ ಕ್ರಿಯಾ ಸಮಿತಿಯ ಅಧ್ಯಕ್ಷ  ಎಸ್.ಜಯಪ್ರಕಾಶ್ (ಜೆಪಿ) ಆಗ್ರಹಿಸಿದರು. ನಗರದ ಪುರಭವನದ ಮುಂದೆ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ, ಕಾವೇರಿ ಕ್ರಿಯಾಸಮಿತಿಯಿಂದ ನಡೆಸಿದ ಮೌನ ಪ್ರತಿಭಟನಾ ಧರಣಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  ಕಾವೇರಿ ನೀರು ನಿರ್ವಹಣಾ ಮಂಡಳಿ ಪ್ರಾರಂಭ ಆದಾಗಿನಿಂದ ತಮಿಳುನಾಡಿನ ಪರ ಏಕ ಪಕ್ಷಿಯವಾಗಿ ಅವೈಜ್ಞಾನಿಕ ತೀರ್ಪನ್ನು ನೀಡುತ್ತಾ ಬಂದಿದೆ….

Read More

ಡಾ. ಈ.ಸಿ. ನಿಂಗರಾಜ್ ಗೌಡ ನಿವಾಸದಲ್ಲಿ ಹರ್ ಘರ್ ತಿರಂಗಾ’ ಅಭಿಯಾನ.

ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕರೆ ಮೇರೆಗೆ ದೇಶಾದ್ಯಂತ ನಡೆಯುತ್ತಿರುವಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯರು ಹಾಗೂ ಭಾರತೀಯ ಜನತಾ ಪಾರ್ಟಿಯ ಮೈಸೂರು ವಿಭಾಗದ ಸಹ ಪ್ರಭಾರಿಗಳಾದ ಡಾ. ಈ.ಸಿ. ನಿಂಗರಾಜ್ ಗೌಡ ಅವರು ತಮ್ಮ ನಿವಾಸದಲ್ಲಿ ರಾಷ್ಟçಧ್ವಜ ತ್ರಿವರ್ಣ ಧ್ವಜವನ್ನು ಹಾರಿಸಿ ದೇಶಭಕ್ತಿ ಹಾಗೂ ರಾಷ್ಟಾçಭಿಮಾನದ ಸಂದೇಶ ಸಾರಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, `ತ್ಯಾಗ, ಸಮೃದ್ಧಿ ಮತ್ತು ಶಾಂತಿಯ ಸಂಕೇತವಾಗಿರುವ ತ್ರಿವರ್ಣ ಧ್ವಜ ಹಾಗೂವಂದೇ ಮಾತರಂ’ ಘೋಷಣೆ,…

Read More

ವಿಜ್ಞಾನ ಮತ್ತು ತಂತ್ರಜ್ಞಾನದ ಅಡಿಯಳಾಗಿ ನಮ್ಮ ಮೂಲ ಗ್ರಾಮೀಣ ಸಂಸ್ಕöತಿಯ ಮರೆಯಬಾರದು; ಪ್ರೊ. ನಂಜಯ್ಯ ಹೊಂಗನೂರು

ಮೈಸೂರು : ಪ್ರತಿಯೊಬ್ಬ ವ್ಯಕ್ತಿಗೂ ಪ್ರಕೃತಿ, ಸಂಸ್ಕöತಿ, ಸೃಜನಶೀಲತೆ ಬಹಳ ಮುಖ್ಯ. ಈ ಮೂರು ಸಂಗತಿಗಳನ್ನು ಮೈಗೂಡಿಸಿಕೊಂಡವರು ಜೀವನದಲ್ಲಿ ಸಾಧನೆ ಮಾಡಿ ಸಮಾಜದಲ್ಲಿ ಯಶಸ್ಸು ಗಳಿಸುತ್ತಾರೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಹಾಗೂ ಜಾನಪದ ವಿದ್ವಾಂಸ ಪ್ರೊ. ನಂಜಯ್ಯ ಹೊಂಗನೂರು ಹೇಳಿದರು.ಅದಮ್ಯ ರಂಗಶಾಲೆಯ ವತಿಯಿಂದ ನಗರದ ಹೂಟಗಳ್ಳಿಯಲ್ಲಿರುವ ದಕ್ಷ ಕಾಲೇಜಿನ ಸಭಾಂಗಣದಲ್ಲಿ ನಡೆದ ‘ಪಠ್ಯಾಧಾರಿತ ರಂಗರೂಪ ಪ್ರದರ್ಶನ ಹಾಗೂ ಗಣ್ಯ ಸಾಧಕರಿಗೆ ಅಭಿನಂದನ ಸಮಾರಂಭ’ದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಸೃಜನಶೀಲತೆ…

Read More

ಮೈಸೂರಿನ ಹೊಸ ಮಠದ ಶ್ರೀ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ (79) ಅವರು ಗುರುವಾರ ಲಿಂಗೈಕ್ಯರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಇಂದು ಬೆಳಗ್ಗೆ 10:30ಕ್ಕೆ ಹೃದಯಾಘಾತದಿಂದ ನಿಧನರಾದರು.ಮೈಸೂರು ಜಿಲ್ಲೆಯ ತಿ.. ನರಸೀಪುರ ತಾಲೂಕಿನ ಮುಡುಕನಪುರ ಗ್ರಾಮದ ಸಿದ್ಧಬಸವದೇವರು ಮತ್ತು ಮರಿಲಿಂಗಮ್ಮ ದಂಪತಿಯ ಮಗನಾಗಿ 1950 ಫೆಬ್ರುವರಿ 1 ರಂದು ಜನಿಸಿದ್ದ ಚಿದಾನಂದಸ್ವಾಮಿಯವರ ಪೂರ್ವಾಶ್ರಮದ ಹೆಸರು ಎಸ್. ಚಂದ್ರಶೇಖರಸ್ವಾಮಿ. ತಂದೆ ಶ್ರೀ ಸಿದ್ದಬಸವದೇವರು, ಗುರುಶಾಂತಸ್ವಾಮಿಗಳ ಪೂರ್ವಾಶ್ರಮದ…

Read More

ಪಿರಿಯಾಪಟ್ಟಣದಲ್ಲಿ ಹರ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ

ಪಿರಿಯಾಪಟ್ಟಣ: ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ಮಹನೀಯರ ತ್ಯಾಗ, ಬಲಿದಾನದಿಂದ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಅದರ ನೆನಪಿಗಾಗಿ ಹರ್ ಘರ್ ತಿರಂಗಾ ಅಭಿಯಾನ ನಡೆಸಲಾಗುತ್ತಿದೆ ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ವಿ.ರಾಜೇಂದ್ರ ತಿಳಿಸಿದರು. ಪಟ್ಟಣದ ಶ್ರೀ ಮಸಣಿಕಮ್ಮ ದೇವಾಲಯದ ಆವರಣದಲ್ಲಿ ಗುರುವಾರ ತಾಲ್ಲೂಕು ಬಿಜೆಪಿ ಘಟಕ ಹಾಗೂ ಯುವ ಮೋರ್ಚಾ ವತಿಯಿಂದ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಬೈಕ್ ರ್‍ಯಾಲಿಗೆ ಚಾಲನೆ ನೀಡಿ ಮಾತನಾಡಿದ ಅವರು ರಾಷ್ಟ್ರಧ್ವಜ ದೇಶದ ಐಕ್ಯತೆ, ಸೌಹಾರ್ದತೆ ಹಾಗೂ ಹೆಮ್ಮೆಯ ಸಂಕೇತ….

Read More

ಶಾಸಕರಿಂದ 2.54 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಮೈಸೂರು; ಇಲ್ಲಿನ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡ ಅವರು ಗುರುವಾರ ಕ್ಷೇತ್ರದ ಎರಡು ವಾರ್ಡ್ಗಳಲ್ಲಿ ಒಟ್ಟು 2 ಕೋಟಿ 54 ಲಕ್ಷ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.ಮೈಸೂರು ಮಹಾನಗರ ಪಾಲಿಕೆಯ ವಲಯ ಕಚೇರಿ-4 ವ್ಯಾಪ್ತಿಯ ಗೋಕುಲಂ ವಾರ್ಡ್ನಲ್ಲಿ ನಗರಪಾಲಿಕೆ ಅನುದಾನದಡಿ 2 ಕೋಟಿ ರೂವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ, ಗೋಕುಲಂ ಕಾಂಟೂರ್ ರಸ್ತೆಯ ಸಿದ್ದಲಿಂಗೇಶ್ವರ ಗ್ಯಾಸ್ ಏಜೆನ್ಸಿಯಿಂದ 1ನೇ ಮುಖ್ಯ ರಸ್ತೆಯ ಡಾ. ಪುನೀತ್ ರಾಜ್‌ಕುಮಾರ್…

Read More

ಡಾ.ಹೆಚ್.ಸಿ.ಮಹದೇವಪ್ಪರಿಗೆ ಸಚಿವ ಸ್ಥಾನ ನೀಡಲು ಆಗ್ರಹಿಸಿ ವಿವಿಧ ಪ್ರಗತಿಪರ, ದಲಿತ ಸಂಘಟನೆಗಳಿ0ದ ಬೃಹತ್ ಪ್ರತಿಭಟನೆ

ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಹಿರಿಯ ಶಾಸಕ ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಪ್ರಗತಿಪರ ಸಂಘಟನೆಗಳು,ದಲಿತ ಸಂಘಟನೆಗಳು,ಡಾ.ಎಚ್.ಸಿ.ಮಹದೇವಪ್ಪ ಅಭಿಮಾನಿಗಳ ಬಳಗದಿಂದ ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.ನಗರದ ಪುರಭವನ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಹಿರಿಯ ದಲಿತ ನಾಯಕರಾದ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ನೀಡಲು ಆಗ್ರಹಿಸಿ ನಾನಾ ಘೋಷಣೆಗಳನ್ನು ಕೂಗಿದರು. ನಂತರ,ಅಲ್ಲಿAದ ಹೊರಟು ಚಾಮರಾಜ ಒಡೆಯರ್‌ವೃತ್ತದಲ್ಲಿ ಕೆಲಕಾಲ ಮಾನವಸರಪಳಿ ನಿರ್ಮಿಸಿ ರಸ್ತೆತಡೆ ನಡೆಸಿದರು. ಇದರಿಂದಾಗಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಯಿತು….

Read More

ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ನಗರದಲ್ಲಿ ವಿವಿಧ ಸಂಘ, ಸಂಸ್ಥೆಗಳಿ0ದ ಪ್ರತಿಭಟನೆ

ಬಸ್ ತಡೆ ನಡೆಸಿದವರ ಬಂಧನ;ನಗರದ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಜಮಾಯಿಸಿದ ಕರ್ನಾಟಕ ಸೇನಾ ಪಡೆಯ ಮುಖಂಡರು, ಕಾರ್ಯಕರ್ತರು, ಕೆಲಕಾಲ ಪ್ರತಿಭಟನೆ ನಡೆಸಿದರು. ಕಾವೇರಿ ನಮ್ಮದು ಎಂದು ಘೋಷಣೆ ಕೂಗಿದರು. ತಮಿಳುನಾಡಿಗೆ ನೀರು ಬಿಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು. ಘೋಷಣೆ ಕೂಗುತ್ತಾ ಬೆಂಗಳೂರಿಗೆ ತೆರಳುವ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ತಡೆಯಲು ಯತ್ನಿಸಿದರು. ರಸ್ತೆಗೆ ಅಡ್ಡಲಾಗಿ ಕುಳಿತು ಘೋಷಣೆ ಕೂಗಿದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ, ಸಿಎಆರ್ ಮೈದಾನಕ್ಕೆ ಕರೆದೊಯ್ದರು. ಕರ್ನಾಟಕ ಸೇನಾ ಪಡೆ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್‌ಗೌಡ…

Read More

ಸಮಾಜದ ಉನ್ನತಿ ಹಾಗೂ ಪರಿವರ್ತನೆಗೆ ಅಗತ್ಯವಾದ ಸಂಶೋಧನೆಗಳು ಆಗಬೇಕಾದ ಅನಿವಾರ್ಯತೆಯಿದೆ

ಮೈಸೂರು; ನಗರದ ಮಾನಸಗಂಗೋತ್ರಿಯ ಡಾ. ಬಿ.ಆರ್. ಅಂಬೇಡ್ಕರ್ ಸಂಶೋಧನ ಮತ್ತು ವಿಸ್ತರಣ ಕೇಂದ್ರದಲ್ಲಿ ಸಂಶೋಧನೆಯ ಮಹತ್ವ ಕುರಿತು ವಿಶೇಷ ಉಪನ್ಯಾಸ ಮತ್ತು ಸಂಶೋಧಕರೊAದಿಗೆ ಸಂವಾದ ಕಾರ್ಯಕ್ರಮ ನಡೆಯಿತು.ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಪೀಠದ ಸಂದರ್ಶಕ ಪ್ರಾಧ್ಯಾಪಕ ಪ್ರೊ. ರಹಮತ್ ತರೀಕೆರೆಯವರು ನೂತನ ಸಂಶೋಧನಾರ್ಥಿಗಳಿಗೆ ಸಂಶೋಧನೆಯ ರೂಪು-ರೇಷೆಗಳನ್ನು ವಿಸ್ತಾರವಾಗಿ ತಿಳಿಸಿದರು, ಮಾನವನ ಹುಟ್ಟಿನಿಂದಲೇ ಆತನ ಸಂಶೋಧನೆಯ ಗುಣವು ಜಾಗೃತವಾಗಿದೆ. ಮಾನವನ ನಾಗರೀಕತೆಯ ಉನ್ನತಿ ಹಾಗೂ ವಿಕಸನವು ಆತನ ಸಂಶೋಧನಾ ಗುಣದಿಂದಲೇ ಸಾಧ್ಯವಾಗಿದೆ. ಸಮಾಜದ ಉನ್ನತಿ ಹಾಗೂ ಪರಿವರ್ತನೆಗೆ ಅಗತ್ಯವಾದ…

Read More

ಹರ್ ಘರ್ ತಿರಂಗಾ ಹಾಗೂ ವಂದೇ ಮಾತರಂನ 150ನೇ ವರ್ಷದ ಸಂಭ್ರಮಾಚರಣೆ

ಮೈಸೂರು; ನಗರದ ಎಸ್.ಬಿ.ಆರ್.ಆರ್. ಮಹಾಜನ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ‘ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಹಾಗೂ ವಂದೇ ಮಾತರಂ ಗೀತೆಯ 150ನೇ ವರ್ಷದ ಸಂಭ್ರಮಾಚರಣೆ’ಯನ್ನು ಹಮ್ಮಿಕೊಳ್ಳಲಾಗಿತ್ತು.ಎಲ್ಲಾ ಎನ್‌ಸಿಸಿ ಕೆಡೆಟ್‌ಗಳು ಒಟ್ಟಾಗಿ ‘ವಂದೇ ಮಾತರಂ’ ಗೀತೆಯನ್ನು ಹಾಡುವ ಮೂಲಕ ದೇಶಭಕ್ತಿ ಹಾಗೂ ರಾಷ್ಟç ಪ್ರೇಮವನ್ನು ಮೆರೆದರು.ಕಾಲೇಜಿನ ಆವರಣದಲ್ಲಿ ಹರ್ ಘರ್ ತಿರಂಗಾ ರ‍್ಯಾಲಿ ನಡೆಸಲಾಯಿತು. ರ‍್ಯಾಲಿಯ ಮೂಲಕ ದೇಶಭಕ್ತಿ, ರಾಷ್ಟಿçÃಯ ಏಕತೆ ಹಾಗೂ ರಾಷ್ಟಾçಭಿಮಾನದ ಸಂದೇಶವನ್ನು ಸಾರಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಆರ್. ಜಯಕುಮಾರಿ, ಶೈಕ್ಷಣಿಕ…

Read More