ಇತಿಹಾಸದ ಕಾಲಗರ್ಭದಲ್ಲಿ ಮುಚ್ಚಿ ಹೋಗಿರುವ ಕಂದಕಗಳ ಪರಿಶೀಲನೆ ನಡೆಸಿ: ತಹಶೀಲ್ದಾರ್ ನಿಸರ್ಗ ಪ್ರಿಯಾ
ಪಿರಿಯಾಪಟ್ಟಣ: ಪಿರಿಯಾಪಟ್ಟಣದ ಇತಿಹಾಸದ ಕಾಲಗರ್ಭದಲ್ಲಿ ಮುಚ್ಚಿ ಹೋಗಿರುವ ಕೋಟೆ ಕಂದಕಗಳ ಬಗ್ಗೆ ಪರಿಶೀಲನೆ ನಡೆಸುವಂತೆ ತಹಸೀಲ್ದಾರ್ ನಿಸರ್ಗ ಪ್ರಿಯ ಸೂಚಿಸಿದರು. ಪಟ್ಟಣದ ಚನ್ನಕೇಶವ ದೇವಾಲಯದ ಬಳಿ ಪುರಾತತ್ವ ಇಲಾಖೆ ಮತ್ತು ಸರ್ವೆ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಿದ ಸಂದರ್ಭ ಭೇಟಿ ನೀಡಿ ಮಾತನಾಡಿದರು ದೂರುದಾರರು ಕಂದಕಗಳನ್ನು ಮುಚ್ಚಿ ಜಮೀನು ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ ಇವುಗಳನ್ನು ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಿ ಕ್ರಮ ವಹಿಸುವಂತೆ ಸರ್ವೇ ಇಲಾಖೆ ಎಡಿಎಲ್ ಆರ್ ಮುನಿಯಪ್ಪ ಅವರಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ…