Skip to main content

3Kaala News

ಸುಭಾಷಿತ 

ನಾವು ಮಾಡುವ ಕೆಲಸದಲ್ಲಿ ಸಂಪೂರ್ಣ ಶ್ರದ್ಧೆ ಮತ್ತು ಭಕ್ತಿ ಇದ್ದಾಗ ಮಾತ್ರ ಯಶಸ್ಸು ಒಲಿಯುತ್ತದೆ. ಅರ್ಧಮನಸ್ಸಿನಿಂದ ಮಾಡುವ ಕೆಲಸ ಎಂದಿಗೂ ಪರಿಪೂರ್ಣ ಫಲ ನೀಡಲಾರದು.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಡಿ. ದೇವರಾಜು ಅರಸು: ಲಕ್ಷ್ಮಿಕಾಂತ್.

ಪಿರಿಯಾಪಟ್ಟಣದಲ್ಲಿ ಡಿ. ದೇವರಾಜ ಅರಸು ರವರ ಜಯಂತಿ ಆಚರಣೆ  ಪಿರಿಯಾಪಟ್ಟಣ : ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರು ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕಲ್ಪಿಸಿದ ಸಾಮಾಜಿಕ ಹರಿಕಾರರು ಎಂದು ಎಂದು ರಾವಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಲಕ್ಷ್ಮಿಕಾಂತ್ ಹೇಳಿದರು. ಪಟ್ಟಣದ ಅರಸು ಕಲಾಭವನದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್‌, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ ಡಿ. ದೇವರಾಜ ಅರಸು ರವರ 111 ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು…

Read More

ಜ್ಞಾನದಾಹವನ್ನು ಸಂಸ್ಕೃತ ಭಾಷೆ ನೀಗಿಸಿದೆ; ಡಾ. ಸಿ ಶಿವರಾಜು

ಮೈಸೂರು; ಜ್ಞಾನದಾಹವನ್ನು ಸಂಸ್ಕೃತ ಭಾಷೆ ನೀಗಿಸಿದೆ ಎಂದು ಬೆಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಸಿ ಶಿವರಾಜು ಹೇಳಿದರು.ಮೈಸೂರಿನ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಂಸ್ಕೃತೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ತಂತ್ರಜ್ಞಾನ ಯುಗದಲ್ಲಿ ಜೆಎಸ್‌ಎಸ್ ಸಂಸ್ಥೆ ಸಂಶೋಧನಾ ಕೇಂದ್ರ ತೆರೆದಿರುವುದು ಹೆಮ್ಮೆಯ ಸಂಗತಿ. ಸಂಸ್ಕೃತ ಗ್ರಂಥಭAಡಾರವನ್ನು ಸಂರಕ್ಷಿಸುವ ಕಾರ್ಯವನ್ನು ಜೆಎಸ್‌ಎಸ್ ಸಂಸ್ಥೆ ಕೈಗೊಂಡಿರುವುದು ಅಭಿಮಾನದ ಸಂಗತಿ ಎಂದು ತಿಳಿಸಿದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರೊ.ರಾಮಚಂದ್ರ ಜಿ ಭಟ್, ಸಂಸ್ಕೃತ ವಿಶ್ವ ಭಾ಼ಷೆಯಾಗಿದ್ದು, ಸಮಸ್ತ ಮಾನವ…

Read More

ಸೊಳ್ಳೆ ನಿಯಂತ್ರಣವೇ ರೋಗ ನಿಯಂತ್ರಣ – ಸ್ವಚ್ಛ ಪರಿಸರವೇ ಆರೋಗ್ಯದ ರಕ್ಷಾಕವಚ; ಡಾ. ರೇಚಣ್ಣ

ಮೈಸೂರು; ಸೊಳ್ಳೆ ನಿಯಂತ್ರಣವೇ ರೋಗ ನಿಯಂತ್ರಣ – ಸ್ವಚ್ಛ ಪರಿಸರವೇ ಆರೋಗ್ಯದ ರಕ್ಷಾಕವಚವಾಗಿದೆ ಎಂದು ಜೆಎಸ್‌ಎಸ್ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ರೇಚಣ್ಣ ಹೇಳಿದರು.ನಗರದ ಜೆಎಸ್‌ಎಸ್ ಮಹಿಳಾ ಕಾಲೇಜಿನ ಜೈವಿಕ ತಂತ್ರಜ್ಞಾನ ವಿಭಾಗದ ವತಿಯಿಂದ ಸೊಳ್ಳೆಗಳಿಂದ ಹರಡುವ ರೋಗಗಳ ಕುರಿತು ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು,ಸೊಳ್ಳೆಗಳಿಂದ ಹರಡುವ ರೋಗಗಳು ಸಾರ್ವಜನಿಕ ಆರೋಗ್ಯಕ್ಕೆ ದೊಡ್ಡ ಸವಾಲಾಗಿದ್ದು, ಅವುಗಳ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಮತ್ತು ಜನಜಾಗೃತಿಯೇ ಅತ್ಯಂತ ಪರಿಣಾಮಕಾರಿ ಮಾರ್ಗ ಎಂದು ತಿಳಿಸಿದರು. ಡೆಂಗ್ಯೂ, ಮಲೇರಿಯಾ, ಚಿಕೂನ್‌ಗುನ್ಯಾ…

Read More

ವಿಬಿ ಜಿ ರಾಮ್ ಜಿ ಬಲಗೊಳಿಸಲು ಜಾಬ್ ಕಾರ್ಡ್ ಮೇಳಜಿಲ್ಲೆಯಾದ್ಯಂತ 255 ಗ್ರಾಮ ಪಂಚಾಯಿತಿಗಳಲ್ಲೂ ಅಭಿಯಾನ ಆರಂಭ

ಮೈಸೂರು: ಪ್ರತಿ ಕುಟುಂಬಕ್ಕೆ ಉದ್ಯೋಗ ಭದ್ರತೆ ನೀಡುವ ಉದ್ದೇಶದೊಂದಿಗೆ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್(ಗ್ರಾಮೀಣ)(ವಿಬಿಜಿರಾಮ್ ಜಿ) ಅನ್ನು ಮತ್ತಷ್ಟು ಬಲಪಡಿಸಿ ವಿಸ್ತರಿಸಲು ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲೂ ಜಾಬ್ ಕಾರ್ಡ್ ಮೇಳ ಆರಂಭವಾಗಿದೆ.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೂಚನೆ ಮೇರೆಗೆ ಜಿಲ್ಲಾ ಪಂಚಾಯಿತಿ ನಿರ್ದೇಶನದಲ್ಲಿ ಜಿಲ್ಲೆಯ 255 ಗ್ರಾಮ ಪಂಚಾಯಿತಿಗಳಲ್ಲಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್(ಗ್ರಾಮೀಣ)(ವಿಬಿ ಜಿ ರಾಮ್ ಜಿ) ಜಾಬ್ ಕಾರ್ಡ್ ಮೇಳ ನಡೆಸಲು…

Read More

ಪಾದಚಾರಿ ಮಾರ್ಗ ತೆರವಿಗೆ ಆದೇಶಿದ್ದು ಯಾರು ಎಂಬುದನ್ನು ನಗರಪಾಲಿಕೆಯ ಅಧಿಕಾರಿಗಳು ಬಹಿರಂಗಪಡಿಸಲಿ; ಎಂ. ಲಕ್ಷ್ಮಣ್

ಮೈಸೂರು: ನಗರದಲ್ಲಿರುವ ಪಾದಚಾರಿ ಮಾರ್ಗ ತೆರವುಗೊಳಿಸುವಂತೆ ನಗರಪಾಲಿಕೆಗೆ ಆದೇಶಿಸಿದ್ದು ಯಾರು ಎಂಬುದನ್ನು ಸಂಬAಧಿಸಿದ ಅಧಿಕಾರಿಗಳು ಕೂಡಲೇ ಜನರಿಗೆ ತಿಳಿಸಬೇಕು ಎಂದು ಕೆಪಿಸಿಸಿ ವಕ್ತಾರ ಎಂ.ಲP್ಪ್ಷö್ಮಣ್ ಒತ್ತಾಯಿಸಿದರು.ಗುರುವಾರ ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಂ ಬೀದಿಬದಿ ವ್ಯಾಪಾರಿಗಳ ಸಭೆ ನಡೆಸಿ ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರು ನಗರದಲ್ಲಿ ಮಹಾನಗರಪಾಲಿಕೆಯವರು ರಾಜ್ಯ ಸರ್ಕಾರ, ಸುಪ್ರಿಂಕೋರ್ಟ್ ಆದೇಶವಿಲ್ಲದಿದ್ದರೂ ಪಾದಚಾರಿ ಮಾರ್ಗ ತೆರವು ಕಾರ್ಯ ಮಾಡುತ್ತಿದ್ದಾರೆ. ಸುಪ್ರಿಂಕೋರ್ಟ್ ಯಾವುದೋ ಒಂದು ಪಾದಚಾರಿ ಅಪಘಾತ ಪ್ರಕರಣದಲ್ಲಿ ಆದೇಶ ಮಾಡಿದೆ. ಪಾದಚಾರಿ ನಡೆದು ಹೋಗುವಾಗ…

Read More

ನಗರಪಾಲಿಕೆಯಿಂದ ನಗರದ ಐದು ಜಿವಿಪಿ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯಾಚರಣೆ, 6.35 ಟನ್ ತ್ಯಾಜ್ಯವನ್ನು ತೆರವು

ಮೈಸೂರು; ಮಹಾನಗರ ಪಾಲಿಕೆ ಹಮ್ಮಿಕೊಂಡಿರುವ `ಸ್ವಾತಂತ್ರೊ÷್ಯÃತ್ಸವ ಸ್ವಚ್ಛತಾ ಅಭಿಯಾನ-2026: 80 ತ್ಯಾಜ್ಯಮುಕ್ತ ತಾಣಗಳು’ ಅಭಿಯಾನದಡಿ ನಗರದ ವಿವಿಧ ವಲಯಗಳಲ್ಲಿ ತ್ಯಾಜ್ಯ ಸಂಗ್ರಹವಾಗುತ್ತಿದ್ದ ಸ್ಥಳಗಳನ್ನು ಸ್ವಚ್ಛಗೊಳಿಸಿ, ತ್ಯಾಜ್ಯಮುಕ್ತ ತಾಣಗಳಾಗಿ ಪರಿವರ್ತಿಸಲಾಗುತ್ತಿದ್ದು, ಗುರುವಾರ ನಗರದ ವಿವಿಧ ವಲಯಗಳ ಐದು ಜಿವಿಪಿ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯಾಚರಣೆ ಕೈಗೊಳ್ಳಲಾಯಿತು. ಒಟ್ಟಾರೆ 170 ಮಂದಿ ಭಾಗವಹಿಸಿ, ಸುಮಾರು 6.35 ಟನ್ ತ್ಯಾಜ್ಯವನ್ನು ತೆರವುಗೊಳಿಸಿದರು.ವಲಯ 5ರ ಕೆಂಪೇಗೌಡ ಕ್ರೀಡಾಂಗಣ, ಕುಂಬಾರಕೊಪ್ಪಲು ಪ್ರದೇಶದಲ್ಲಿ ನಡೆದ ಸ್ವಚ್ಛತಾ ಕಾರ್ಯಾಚರಣೆಯಲ್ಲಿ 50 ಮಂದಿ ಭಾಗವಹಿಸಿ, ಸುಮಾರು 1 ಟನ್ ತ್ಯಾಜ್ಯವನ್ನು…

Read More

ಯುವ ಜನತೆ ಮದ್ಯ ಹಾಗೂ ಮಾದಕ ವಸ್ತುಗಳ ದಾಸ್ಯಕ್ಕೆ ಒಳಗಾಗಿ ಜೀವನ ಹಾಳು ಮಾಡಿಕೊಳ್ಳಬಾರದು; ನಾಗರಾಜ ಸಿದ್ದಪ್ಪ ಅಂಕಸದೊಡ್ಡಿ

ಮೈಸೂರು; ಮದ್ಯ ಮತ್ತು ಮಾದಕ ವಸ್ತುಗಳ ವ್ಯಸನ ದುಶ್ಚಟಗಳಿಂದ ಯುವಸಮುದಾಯದ ಭವಿಷ್ಯವು ನಾಶವಾಗಲಿದೆ ಹಾಗಾಗಿ ಹದಿಹರೆಯದ ದಿನಗಳಂದೇ ಎಚ್ಚರಿಕೆ ವಹಿಸಿ ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಾಗರಾಜ ಸಿದ್ದಪ್ಪ ಅಂಕಸದೊಡ್ಡಿ ತಿಳಿಸಿದರು.ಗುರುವಾರ ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿ ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮೈಸೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಆರೋಗ್ಯ…

Read More