Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಆ.25 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ಮೈಸೂರು: ವಿ,ವಿ,ಮೊಹಲ್ಲಾ ಉಪವಿಭಾಗ ವ್ಯಾಪ್ತಿಯ 11 ಕೆ.ವಿ ಒಂಟಿಕೊಪ್ಪಲು ವಿದ್ಯುತ್ ಮಾರ್ಗದಲ್ಲಿ ಭೂಗತ ಕೇಬಲ್ ಕೆಲಸದ ನಿಮಿತ್ತ ಆಗಸ್ಟ್ 25 ರÀಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.ಗೋಕುಲ 2 ಮತ್ತು 3ನೇ ಹಂತ, ಕಾಂಟೂರು ರಸ್ತೆ, ವಿ.ವಿಮೊಹಲ್ಲಾ 2 ರಿಂದ 6ನೇ ಮೇನ್, ಆದಿಪಂಪಾ ರಸ್ತೆ, ಕೆ.ಡಿ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ, 66/11 ಕೆ.ವಿ ಆಯರಹಳ್ಳಿ, 66/11 ಕೆ.ವಿ ಮಾರಶೆಟ್ಟಿಹಳ್ಳಿ ಹಾಗೂ 66/11 ಕೆ.ವಿ ಮರಡಿಹುಂಡಿ ವಿದ್ಯುತ್ ವಿತರಣಾ ಕೇಂದ್ರಗಳ ವ್ಯಾಪ್ತಿಯಲ್ಲಿ ಕವಿಪ್ರನಿನಿ ವತಿಯಿಂದ ತುರ್ತು ನಿರ್ವಹಣಾ…

Read More

ಆ.25ರಂದು ಚಕ್ರವರ್ತಿ ಸೂಲಿಬೆಲೆ ರಿಂದ ಸಂಕಟದಲ್ಲಿ ಒಗ್ಗಟ್ಟೇ ಮೂಲಮಂತ್ರ ಕುರಿತಾಗಿ ಭಾಷಣ

ಮೈಸೂರು: ಶ್ರೀ ಕೃಷ್ಣ ಟ್ರಸ್ಟ್ ಹಾಗೂ ಶ್ರೀ ಕೃಷ್ಣ ಮಿತ್ರ ಮಂಡಳಿ ಹಾಗೂ ಚಾತುರ್ಮಾಸ್ಯ ಸಮಿತಿವತಿಯಿಂದ ಉಡುಪಿ ಕಾಣಿಯೂರು ಮಠದ ಪೀಠಾಧಿಪತಿಗಳಾದ ಶ್ರೀ ವಿದ್ಯಾವಲ್ಲಭತೀರ್ಥಸ್ವಾಮೀಜಿಯವರ 35ನೇ ವರ್ಷದ ಚಾತುರ್ಮಾಸ್ಯ ವ್ರತದ ಅಂಗವಾಗಿ ವಾಗ್ಮಿಚಕ್ರವರ್ತಿ ಸೂಲಿಬೆಲೆ ರವರಿಂದ ಸಂಕಟದಲ್ಲಿ ಒಗ್ಗಟ್ಟೇ ಮೂಲಮಂತ್ರ ವಿಷಯದ ಕುರಿತಾಗಿ ಭಾಷಣ ಕಾರ್ಯಕ್ರಮವನ್ನುಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣ ದಾಮದಲ್ಲಿ ಆಗಸ್ಟ್ 25ರ ಮಂಗಳವಾರ ಸಂಜೆ 7 ಗಂಟೆಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷರು ಹಾಗೂ ಚಾತುರ್ಮಾಸ್ಯ ಸಮಿತಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಸಾಗರಕಟ್ಟೆ ಮಠದಲ್ಲಿ ಶ್ರೀಗುರು ರಾಘವೇಂದ್ರರ 355ನೇ ಆರಾಧನಾ ಮಹೋತ್ಸವ

ಮೈಸೂರು; ನಗರದ ವಿ.ವಿ.ಮೊಹಲ್ಲಾದ 12ನೇ ಅಡ್ಡರಸ್ತೆಯಲ್ಲಿರುವ ಶ್ರೀ ಸಾಗರಕಟ್ಟೆರಾಯರ ಮಠದಲ್ಲಿ ಆ.29ರಿಂದ 31ರವರೆಗೆ ಶ್ರೀ ಗುರು ರಾಘವೇಂದ್ರ ರ 355ನೇ ಆರಾಧನಾ ಮಹೋತ್ಸವವನ್ನು ಏರ್ಪಡಿಸಲಾಗಿದೆ.ಆರಾಧನಾ ಸಮಯದಲ್ಲಿ ಪ್ರತಿದಿನ ಬೆಳಿಗ್ಗೆ 7 ಗಂಟೆಗೆ ಪಾದಪೂಜೆ, ಬೆಳಿಗ್ಗೆ 8.45ಕ್ಕೆ ಪಂಚಾಮೃತಅಭಿಷೇಕ, ಮಧ್ಯಾಹ್ನ 12ಕ್ಕೆ ಅಲಂಕಾರ ಬ್ರಾಹ್ಮಣ ಪೂಜೆ, ಸಂಜೆ 6.30ರಿಂದ 8.15ರವರೆಗೆ ಸಂಗೀತ ಕಾರ್ಯಕ್ರಮಆಯೋಜಿಸಲಾಗಿದೆ.ಸಂಗೀತಕಾರ್ಯಕ್ರಮದ ನಂತರ ಪಲ್ಲಕ್ಕಿ ಉತ್ಸವ, ರಥೋತ್ಸವ, ಮಹಾಮಂಗಳಾರತಿ, ಪ್ರಸಾದ ವಿನಿಯೋಗವಿರುತ್ತದೆ.ಆ.31ರಂದು ಸೋಮವಾರ ಬೆಳಿಗ್ಗೆ 11.30ಕ್ಕೆ ರಥೋತ್ಸವ ಇರುತ್ತದೆ.ಸಂಜೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಆ.29ರಂದು ಪೂರ್ವಾರಾಧನೆ ಪ್ರಯುಕ್ತ…

Read More

ಶೋಭ ಗೆ ಪಿಎಚ್. ಡಿ

ಮೈಸೂರು: ಶೋಭ ಎಲ್. ಎನ್ ಅವರು ಸಂಶೋಧನೆ ನಡೆಸಿ ಸಾದರಪಡಿಸಿದ ‘ಇಪ್ಪತ್ತೊಂದನೆಯ ಶತಮಾನದ ಮಹಿಳಾ ಅಂಕಣ ಸಾಹಿತ್ಯ: ಬಹುಶಿಸ್ತೀಯ ನೆಲೆಗಳು’ ಮಹಾಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾನಿಲಯ ಪಿಎಚ್.ಡಿ ಪದವಿ ಘೋಷಿಸಿದೆ.ಅವರು ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕಿಯಾದ ಡಾ.ಎಸ್.ಡಿ.ಶಶಿಕಲಾ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಶೋಭ ಅವರು ಮೈಸೂರು ನಗರದ ನಿವಾಸಿಯಾಗಿದ್ದು,ಕೆ.ಆರ್.ಪೇಟೆಯ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Read More

ಪಂಚವಳ್ಳಿ ಗ್ರಾ.ಪಂ.ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ

ಪಿರಿಯಾಪಟ್ಟಣ: ತಾಲ್ಲೂಕಿನ ಪಂಚವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ಸಾಮಾಜಿಕ ಲೆಕ್ಕ ಪರಿಶೋಧನಾ ಸಭೆ ನಡೆಯಿತು. ಈ ಸಂದರ್ಭದಲ್ಲಿ ಗ್ರಾ.ಪಂ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿ, ಸಾರ್ವಜನಿಕರಿಗೆ ದೊರೆಯುತ್ತಿರುವ ಸರ್ಕಾರಿ ಸೌಲಭ್ಯಗಳು, ಗ್ರಾಮದಲ್ಲಿನ ಮೂಲಭೂತ ಸಮಸ್ಯೆಗಳ ಕುರಿತು ಸಭೆಯಲ್ಲಿ ವಿವರವಾಗಿ ಚರ್ಚಿಸಲಾಯಿತು. ಕಾರ್ಯಕ್ರಮದಲ್ಲಿ ಸಾಮಾಜಿಕ ಪರಿಶೋಧನಾ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಸಿ.ಆರ್.ಯೋಗೀಶ್ ಮಾತನಾಡಿ ಈ ಹಿಂದೆ ಇದ್ದ ಎಂಜಿ  ನರೇಗಾ ಬದಲಿಗೆ ಕೇಂದ್ರ ಸರ್ಕಾರ ಜಾರಿಗೆ  ವಿಕಸಿತ ಭಾರತ–ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್‌  (ವಿಬಿಜಿ ರಾಮ್‌ ಜಿ) …

Read More

ಬೃಹತ್ ಎಲ್‌ಪಿಜಿ ಸಂಗ್ರಹಾರ ಬಗ್ಗೆ ಭಾರತ ಯೋಚಿಸಬೇಕು: ಭಾಮಿ ವಿ ಶೆಣೈ

ಮೈಸೂರು: ಕಚ್ಚಾ ತೈಲದ ಬದಲಿಗೆ ಬೃಹತ್ ಎಲ್ ಪಿ ಜಿ ಸಂಗ್ರಹಾರ ಬಗ್ಗೆ ಭಾರತ ಯೋಚಿಸಬೇಕು. ಕಚ್ಚಾ ತೈಲದ ಸಂಗ್ರಹಾರ ಮುಂದಿನ ದಿನಗಳಲ್ಲಿ ಅಗತ್ಯವಿಲ್ಲ ಎಂದು ಇಂಧನ ತಜ್ಞ ಭಾಮಿ ವಿ ಶಣೈ ಹೇಳಿದರು.ನಗರದ ಮೈಸೂರು ಗ್ರಾಹಕರ ಪರಿಷತ್ ನಲ್ಲಿ ಇಂದು ಸಮಾನ ಮನಸ್ಕರು ಆಯೋಜಿಸಿದ್ದ ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದ ನಾವು ಕಲಿತ ಪಾಠ ಎನ್ನುವ ಕುರಿತ ಮಾತುಕತೆಯಲ್ಲಿ ಮಾತನಾಡಿದ ಅವರು,“ತೈಲ ಯುಗ ಅಂತ್ಯ ಆರಂಭವಾಗಿದೆ. ಇದರ ಜೊತೆಗೆ ಕಚ್ಚಾತೈಲದ ಲಭ್ಯತೆ ಇಂದು ಅಗಾಧವಾಗಿ ಬೆಳೆದಿದೆ. ಆದರೆ…

Read More

ಮೂವರನ್ನು ಹತ್ತಿರದಿಂದಲೇ ಅರಣ್ಯ ಇಲಾಖೆ ಸಿಬ್ಬಂದಿ ಎನ್‌ಕೌಂಟರ್ ಮಾಡಿರುವುದು ಮರಣೋತ್ತರ ಪರೀಕ್ಷಾ ವರದಿಯಿಂದ ದೃಢ

ಹನೂರು ; ತಾಲೂಕಿನ ಕಾವೇರಿ ವನ್ಯ ಜೀವಿಧಾಮದ ಶಾಗ್ಯ ಅರಣ್ಯ ವಲಯದಲ್ಲಿ ಅರಣ್ಯ ಸಿಬ್ಬಂದಿಯಿAದ ನಡೆದ ಮೂವರ ಎನ್‌ಕೌಂಟರ್ ಪ್ರಕರಣದ ಮರಣೋತ್ತರ ಹಾಗೂ ಎಫ್‌ಎಸ್‌ಎಲ್ ವರದಿಗಳು ಲಭ್ಯವಾಗಿವೆ. ಮೃತ ಅಂತೋನಿಸ್ವಾಮಿ, ಪೀಟರ್, ಕುಮಾರ್ ಅವರ ದೇಹದ ಎದೆ, ತೊಡೆ, ಹೊಟ್ಟೆ ಭಾಗಕ್ಕೆ ಗುಂಡು ಬಿದ್ದಿದ್ದು, ಒಳ ಉಡುಪಿನಲ್ಲಿ ಪ್ರೆöÊಮರ್ ಪತ್ತೆಯಾಗಿದೆ.ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಮೃತ ಅಂತೋನಿಸ್ವಾಮಿ, ಪೀಟರ್ ಮತ್ತು ಕುಮಾರ್ ದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು. ವರದಿಯಲ್ಲಿ ಮೃತರ ದೇಹದ ಯಾವ ಭಾಗಗಳಿಗೆ ಗುಂಡುಗಳು ತಗುಲಿವೆ ಹಾಗೂ…

Read More

ಬುಡಕಟ್ಟು ಭಾಷೆ, ಸಂಸ್ಕೃತಿ ಸಂರಕ್ಷಣೆಗೆ ರಾಷ್ಟ್ರೀಯ ಸಂಕಲ್ಪ ಅಗತ್ಯ: ಕೇಂದ್ರ ಸಚಿವ ದುರ್ಗಾದಾಸ್ ಉಯಿಕಿ

ಮೈಸೂರು ; ಬುಡಕಟ್ಟು ಬಾಷೆ, ಸಂಸ್ಕೃತಿ ಸಂರಕ್ಷಣೆಗೆ ರಾಷ್ಟ್ರೀಯ ಸಂಕಲ್ಪ ಅಗತ್ಯವಾಗಿದೆ. ನಾವೇಲ್ಲರೂ ಸೇರಿ ಬುಡಕಟ್ಟು ಬಾಷೆ, ಸಂಸ್ಕೃತಿ ಯನ್ನು ಉಳಿಸಿ ಬೆಳೆಸುವ ಸಂಕಲ್ಪ ಮಾಡಬೇಕು ಎಂದು ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರಗಳ ಮಂತ್ರಾಲಯದ ರಾಜ್ಯ ಸಚಿವ ದುರ್ಗಾದಾಸ್ ಉಯಿಕಿ ತಿಳಿಸಿದರು.ಸೋಮವಾರ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆವತಿಯಿAದ ಬುಡಕಟ್ಟು ಭಾಷೆಗಳು ಮತ್ತು ವಸ್ತು ಸಂಗ್ರಹಾಲಯಗಳು ಕುರಿತು ಹಮ್ಮಿಕೊಂಡಿದ್ದ ರಾಷ್ಟಿçÃಯ ವಿಚಾರಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ…

Read More

ರಾಹುಲ್ ಗಾಂಧಿ ಈ ದೇಶದಲ್ಲಿ ಇರುವುದಕ್ಕೆ ನಾಲಾಯಕ್: ಸಚಿವ ಸೋಮಣ್ಣ

ಮೈಸೂರು; ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಮ್ಮ ದೇಶದಲ್ಲಿ ಇರುವುದಕ್ಕೆ ನಾಲಾಯಕ್ ಆಗಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ವಾಗ್ದಾಳಿ ನಡೆಸಿದರು.ಪೊಲೀಸ್ ಠಾಣೆಯಲ್ಲಿ ಅಮಿತ್ ಶಾ ಫೋಟೋ ನೋಡಿ ರಾಹುಲ್‌ಗಾಂಧಿ ಕಿಡಿಕಾರಿರುವುದಕ್ಕೆ ಪ್ರತಿಕ್ರಿಯಿಸಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ರಾಹುಲ್ ಗಾಂಧಿಗೆ ಈ ದೇಶದ ಇತಿಹಾಸ, ಸಂಸ್ಕöÈತಿ ಏನು ಗೊತ್ತಿಲ್ಲ, ಈ ದೇಶದ ನಡೆದು ಬಂದ ಹಾದಿ, ಒಕ್ಕೂಟದ ವ್ಯವಸ್ಥೆ ಗೊತ್ತಿಲ್ಲ. ಕ್ಷÄಲ್ಲಕ ಮನೋಭಾವದ ವ್ಯಕ್ತಿಯಾಗಿದ್ದಾರೆ. 10 ದಿನ ಭಾರತದಲ್ಲಿ 20 ದಿನ ವಿದೇಶದಲ್ಲಿರುತ್ತಾರೆ. ಇಂತಹ ನಾಲಾಯಕ್‌ಗಳ ಬಗ್ಗೆ…

Read More

ಜೆಎಸ್‌ಎಸ್ ಮೈಸೂರು ಅರ್ಬನ್ ಹಾತ್‌ನಲ್ಲಿ ನನ್ನ ಕೈಮಗ್ಗ, ನನ್ನ ಹೆಮ್ಮೆ” ಹಾಥ್ ಕರ್ಗ್ ಉತ್ಸವ್”

ಮೈಸೂರು; ನಗರದ ಹೆಬ್ಬಾಳ್‌ನಲ್ಲಿರುವ ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ “ಹಾಥ್ ಕರ್ಗ್ ಉತ್ಸವ್ ನನ್ನ ಕೈಮಗ್ಗ, ನನ್ನ ಹೆಮ್ಮೆ” ಎಂಬ ರಾಜ್ಯಮಟ್ಟದ ಕೈಮಗ್ಗ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆ. 26 ರಿಂದ ಸೆ.8 ರವರೆಗೆ 14 ದಿನಗಳ ಕಾಲ ಆಯೋಜಿಸಲಾಗಿದೆ ಎಂದು ಜೆಎಸ್‌ಎಸ್ ವಿದ್ಯಾಪೀಠದ ತಾಂತ್ರಿಕ ಶಿಕ್ಷಣ ವಿಭಾಗದ ಉಪ ನಿರ್ದೇಶಕ ಬಿ.ಇಳಂಗೋವನ್ ತಿಳಿಸಿದರು.ಸೋಮವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಭಾರತ ಸರ್ಕಾರದ ಜವಳಿ ಸಚಿವಾಲಯದ ಅಭಿವೃದ್ಧಿ ಆಯುಕ್ತರು (ಕೈಮಗ್ಗ), ನವದೆಹಲಿ…

Read More