Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೈಸೂರು ದಸರಾ ಕವಿಗೋಷ್ಠಿ ಉಪಸಮಿತಿ ನೇಮಕ

ಮೈಸೂರು: ಈ ಬಾರಿ ನಡೆಯಲಿರುವ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಆಚರಣೆಯ ಅಂಗವಾಗಿ ಆಯೋಜಿಸಲಾಗುವ ದಸರಾ ಕವಿಗೋಷ್ಠಿ ಕಾರ್ಯಕ್ರಮಗಳಿಗಾಗಿ ಕವಿಗೋಷ್ಠಿ ಉಪಸಮಿತಿಯನ್ನು ನೇಮಕ ಮಾಡಲಾಗಿದೆ.ಮೈಸೂರು ಮಹಾನಗರ ಪಾಲಿಕೆಯ ಉಪ ಆಯುಕ್ತ ಡಾ. ಎಂ. ದಾಸೇಗೌಡ ದಸರಾ ಕವಿಗೋಷ್ಠಿ ಉಪಸಮಿತಿಯ ಉಪವಿಶೇಷಾಧಿಕಾರಿಯಾಗಿ, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಪ್ರೊ. ನಂಜಯ್ಯ ಹೊಂಗನೂರು ಕಾರ್ಯಾಧ್ಯಕ್ಷರಾಗಿ, ಸಿದ್ದಾರ್ಥನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ. ತ್ರಿವೇಣಿ ಕಾರ್ಯದರ್ಶಿಯಾಗಿ ಹಾಗೂ ದೇವನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ…

Read More

ಜಯ ಲಕ್ಷ್ಮಿಪುರಂ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಆ.29ರಿಂದ ಶ್ರೀಗುರು ರಾಘವೇಂದ್ರಸ್ವಾಮಿಯವರ 355ನೇ ಆರಾಧನಾ ಮಹೋತ್ಸವ

ಮೈಸೂರು; ನಗರದ ಜಯ ಲಕ್ಷ್ಮಿಪುರಂ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಆ.29ರಿಂದ 31ರವರೆಗೆ ಶ್ರೀಗುರು ರಾಘವೇಂದ್ರಸ್ವಾಮಿಯವರ 355ನೇ ಆರಾಧನಾ ಮಹೋತ್ಸವವನ್ನು ಆಯೋಜಿಸಲಾಗಿದೆ.ಆರಾಧನಾ ದಿನಗಳಲ್ಲಿ ಬೆಳಿಗ್ಗೆ 5.30ಕ್ಕೆ ಸುಪ್ರಭಾತ, 7ರಿಂದ 7.45ರವರೆಗೆ ಮಹಾಪಂಚಾಮೃತಅಭಿಷೇಕ, 8ರಿಂದ 10ರವರೆಗೆ ಕನಕಾಭಿಷೇಕ, ಸರ್ವಸೇವೆ, ಇತ್ಯಾದಿ, ಮಧ್ಯಾಹ್ನ 12ಕ್ಕೆ ಮಹಾಮಂಗಳಾರತಿ, 12.30ರಿಂದ 2ರವರೆಗೆ ಪ್ರಸಾದ ವಿನಿಯೋಗ, ಸಂಜೆ 7ಕ್ಕೆ ಸ್ವಸ್ತವಾಚನ, ಶ್ರೇಯಪ್ರಾರ್ಥನೆ, ಮಹಾಮಂಗಳಾರತಿ ಇರುತ್ತದೆ.ಆ.31ರಂದು ಸೋಮವಾರ ಬೆಳಿಗ್ಗೆ 10 ಗಂಟೆಗೆ ಜಯಲಕ್ಷಿö್ಮÃಪುರಂ ಪ್ರಮುಖ ಬೀದಿಗಳಲ್ಲಿ ಶ್ರೀ ಗುರುರಾಯರ ಮಹಾರಥೋತ್ಸವವನ್ನು ಏರ್ಪಡಿಸಲಾಗಿದೆ.ಸಂಜೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಆ.29ರಂದು…

Read More

ಬೆಂಗಳೂರಿನಲ್ಲಿ ಆ. 28 ರಾಜ್ಯ ಮಟ್ಟದ ಎಸ್ಸಿ, ಎಸ್ಟಿ ನೌಕರರ ಐಕ್ಯತಾ ಸಮಾವೇಶ

ಮೈಸೂರು: ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿ ನೇತೃತ್ವದಲ್ಲಿ ಆ. 28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ಜಾಗೃತ ನೌಕರರ ರಾಜ್ಯ ಮಟ್ಟದ 6ನೇ ಐಕ್ಯತಾ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ರಾಜ್ಯ ಸಮಿತಿಯ ಉಪಾಧ್ಯಕ್ಷ ಪ್ರಕಾಶ್ ತಿಳಿಸಿದರು.ಮಂಗಳವಾರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸುಮಾರು 80 ಸಾವಿರಕ್ಕೂ ಹೆಚ್ಚು ಪರಿಶಿಷ್ಟ ಜಾತಿ ಹಾಗೂ 20 ಸಾವಿರಕ್ಕೂ ಹೆಚ್ಚು…

Read More

ಟಾಕ್ಸಿಕ್ ಚಿತ್ರದ ಯಶಸ್ಸಿಗೆ ರಕ್ತದಾನ ಮಾಡಿ ಬೆಂಬಲ ವ್ಯಕ್ತಪಡಿಸಿದ ಅಭಿಮಾನಿಗಳು

ಮೈಸೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಗೀತಾ ಮೋಹನ್ ದಾಸ್ ನಿರ್ದೇಶನದ ಬಹುನಿರೀಕ್ಷಿತ ಟಾಕ್ಸಿಕ್ ಚಿತ್ರ ಬುಧವಾರ ವಿಶ್ವದಾದ್ಯಂತ ತೆರೆ ಕಾಣುತ್ತಿದ್ದು, ಈ ಹಿನ್ನಲೆಯಲ್ಲಿ ನಗರದ ಸಯಾಜಿರಾವ್ ರಸ್ತೆಯಲ್ಲಿರುವ ಜೀವದಾರ ರಕ್ತ ನಿಧಿ ಕೇಂದ್ರದ ಆವರಣದಲ್ಲಿ ಚಿತ್ರ ನಟ ಯಶ್ ಅಭಿಮಾನಿಗಳು ಹಾಗೂ ಕರ್ನಾಟಕ ಹಿತರಕ್ಷಣಾ ವೇದಿಕೆಯ ವತಿಯಿಂದ ಟಾಕ್ಸಿಕ್ ಚಿತ್ರದ ಯಶಸ್ಸಿಗಾಗಿರಕ್ತದಾನ ಮಾಡಿ ಬೆಂಬಲ ವ್ಯಕ್ತಪಡಿಸಿ, ವಿಶಿಷ್ಟ ರೀತಿಯಲ್ಲಿ ಶುಭ ಕೋರಿದರು. ಚಿತ್ರದ ಬಿಡುಗಡೆ ಹಿನ್ನೆಲೆ ಯಶ್ ಅಭಿಮಾನಿ ಬಳಗದ ಸದಸ್ಯರು ಸ್ವಯಂ ಪ್ರೇರಿತವಾಗಿ ರಕ್ತದಾನ…

Read More

ಮೂವರು ಎನ್‌ಕೌಂಟರ್ ಸೇರಿ ನಾಲ್ಕು ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಆದೇಶ

ಹನೂರು; ತಾಲ್ಲೂಕಿನ ಕಾವೇರಿ ವನ್ಯಧಾಮದಲ್ಲಿ ನಡೆದ ಮೂವರು ಶೂಟೌಟ್ ಪ್ರಕರಣ ಹಾಗೂ ವನ್ಯ ಭೇಟೆ ತಡೆ ಶಿಬಿರಗಳ ಧ್ವಂಸ, ಕಾಡಿಗೆ ಬೆಂಕಿ ಹಚ್ಚಿರುವುದು, ಅರಣ್ಯ ಇಲಾಖೆಯ ಕಚೇರಿ ಧ್ವಂಸ ಸ್ಭೆರಿದಂತೆ ಒಟ್ಟು 4 ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ(ಡಿಜಿ ಐಜಿಪಿ)ಡಾ.ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ.ಮೂವರು ಎನ್‌ಕೌಂಟರ್ ಸಂಬAಧಿಸಿದAತೆ ದಾಖಲಿಸಿರುವ ನಾಲ್ಕು ಎಫ್‌ಐಆರ್‌ಗಳನ್ನು ಸಿಐಡಿ ತನಿಖೆಗೆ ವರ್ಗಾವಣೆ ಮಾಡಲಾಗಿದೆ.ಹನೂರು ತಾಲೂಕಿನ ರಾಮಪುರ ಠಾಣೆಯಲ್ಲಿ ದಾಖಲಾದ ಅರಣ್ಯಾಧಿಕಾರಿಗಳ ಮೇಲಿನ ಹಲ್ಲೆ, ಹನೂರು ಠಾಣೆಯಲ್ಲಿ ದಾಖಲಾದ…

Read More

ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ನಿಲ್ಲಿಸಿರುವ ಬಳಕೆಯಲ್ಲಿಲ್ಲದ 382 ವಾಹನಗಳನ್ನು ತೆರವುಗೊಳಿಸಲು ನೋಟಿಸ್ ಅಂಟಿಸಿದ ನಗರಪಾಲಿಕೆ

ಮೈಸೂರು: ಅರಮನೆ ನಗರಿ ಮೈಸೂರಿನ ಸಾರ್ವಜನಿಕ ರಸ್ತೆಗಳು, ಪಾದಚಾರಿ ಮಾರ್ಗಗಳು ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ದೀರ್ಘಕಾಲದಿಂದ ಅನಧಿಕೃತವಾಗಿ ನಿಲ್ಲಿಸಿರುವ ಬಳಕೆಯಲ್ಲಿಲ್ಲದ ವಾಹನಗಳನ್ನು ತೆರವುಗೊಳಿಸಲು ಮೈಸೂರು ಮಹಾನಗರ ಪಾಲಿಕೆ ಇದೀಗ ಮುಂದಾಗಿದೆ.ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಒಟ್ಟು 382 ಪರಿತ್ಯಕ್ತ/ಅನುಪಯುಕ್ತ ವಾಹನಗಳನ್ನು ಗುರುತಿಸಲಾಗಿದ್ದು, ಸದರಿ ವಾಹನಗಳ ಮೇಲೆ ತೆರವುಗೊಳಿಸುವ ನೋಟಿಸ್ ಅಂಟಿಸುವ ಕಾರ್ಯಕ್ಕೆ ಮಂಗಳವಾರ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತೆ ಸವಿತಾ ಎಂ.ಕೆ. ಚಾಲನೆ ನೀಡಿದರು.ಸಾರ್ವಜನಿಕ ರಸ್ತೆಗಳು ಹಾಗೂ ಪಾದಚಾರಿ ಮಾರ್ಗಗಳಲ್ಲಿ ಇಂತಹ ವಾಹನಗಳನ್ನು ನಿಲುಗಡೆ…

Read More

ಸಾಹಿತ್ಯಿಕ, ಸಾಂಸ್ಕöÈತಿಕ, ಆರ್ಥಿಕ ಗಟ್ಟಿಗೊಳಿಸಲು ಬದ್ಧ ; ಡಾ.ಸಿ.ಸೋಮಶೇಖರ

ಮೈಸೂರು: ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷನಾದ ಮೇಲೆ ಸಾಹಿತ್ಯಿಕವಾಗಿ, ಸಾಂಸ್ಕöÈತಿಕವಾಗಿ ಹಾಗೂ ಆರ್ಥಿಕವಾಗಿ ಗಟ್ಟಿಗೊಳಿಸುವ ದಿಸೆಯಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುವೆ ಎಂದು ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ.ಸಿ.ಸೋಮಶೇಖರ ಹೇಳಿದರು.ಮಂಗಳವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ನಾಡು-ನುಡಿ ಸಮ್ಮೇಳನ, ಮಕ್ಕಳ ಸಮ್ಮೇಳನ, ಲೇಖಕಿಯರ ಸಮ್ಮೇಳನ ಆಯೋಜಿಸುವ ಮೂಲಕ ಕಸಾಪಕ್ಕೆ ವೈಭವ ಮರುಕಳಿಸುವಂತೆ ಶ್ರಮಿಸುವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಕನ್ನಡವೆಂದರೆ ಮಮತೆ ಹಾಗೂ ನಿಷ್ಠೆ. ಇದಕ್ಕೆ ಬದ್ಧನಾಗಿರುವೆ. ಮುಖ್ಯವಾಗಿ ಕಸಾಪ ಅಧ್ಯಕ್ಷನಾದ ಮೇಲೆ…

Read More

ಗಜಪಯಣದ ಮೂಲಕ ಬುಧವಾರ ಕಾಡಿನಿಂದ ಅರಮನೆ ನಗರಿ ಮೈಸೂರಿಗೆ ಮೊದಲ ಹಂತದ ಗಜಪಡೆ ಆಗಮನ

ಮೈಸೂರು: ಈ ಬಾರಿ ಅದ್ಧೂರಿಯಾಗಿ ನಡೆಯಲಿರುವ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಕ್ಕೆ ಮುನ್ಮ್ನಡಿಯಾಗಿರುವ ಗಜಪಯಣ ಬುಧವಾರ ನಡೆಯಲಿದ್ದು, ಕಾಡಿನಿಂದ ಅರಮನೆ ನಗರಿ ಮೈಸೂರಿಗೆ ಗಜಪಡೆಯ ಮೊದಲ ಹಂತದ ತಂಡ ಆಗಮಿಸಲಿದೆ.ಇದೇ ಮೊದಲ ಬಾರಿಗೆ ಕ್ಯಾಪ್ಟನ್ ಆಯ್ಕೆಯಾಗದೆ ಮೊದಲ ಹಂತದಲ್ಲಿ 9 ಆನೆಗಳು ಮೈಸೂರಿಗೆ ಆಗಮಿಸುತ್ತಿರುವುದು ವಿಶೇಷವಾಗಿದೆ. ಮತ್ತೊಂದು ವಿಶೇಷವೆಂದರೆ ಮೈಸೂರಿಗೆ ಬಂದು ತಾಲೀಮು ಪೂರೈಸಿ, ಎಲ್ಲದರಲ್ಲೂ ಸೈ ಎನಿಸಿಕೊಂಡ ಆನೆಯನ್ನು ಗಜಪಡೆಯ ಕ್ಯಾಪ್ಟನ್ ಆಯ್ಕೆ ಮಾಡಿ ಘೋಷಣೆ ಮಾಡಲಾಗುತ್ತಿದೆ.ಗಜಪಯಣಕ್ಕೆ ಚಾಲನೆ; ಜಿಲ್ಲೆಯ ಹುಣಸೂರು ತಾಲೂಕಿನ ನಾಗರಹೊಳೆ ರಾಷ್ಟಿçÃಯ…

Read More

ನಗರದಲ್ಲಿ ಅಕ್ರಮವಾಗಿ ನಡೆಯುತ್ತಿರುವ ಗೋ ಕಸಾಯಿಖಾನೆಗಳನ್ನು ಮುಚ್ಚಿಸಲು ಆಗ್ರಹಿಸಿ ಪ್ರತಿಭಟನೆ ನಡೆಸಿದ ಹಿಂದೂ ಸಂಘಟನೆಯವರನ್ನು ಬಂಧಿಸಿದ ಪೊಲೀಸರುಮೈಸೂರು: ನಗರದಲ್ಲಿ ಅಕ್ರಮವಾಗಿ ನಡೆಯುತ್ತಿರುವ ಗೋ ಕಸಾಯಿಖಾನೆಗಳನ್ನು ಮುಚ್ಚಿಸಲು ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಪುನೀತ್ ಕೆರೆಹಳ್ಳಿ ಹಾಗೂ ಹಿಂದುತ್ವ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.ಸಿದ್ಧಾರ್ಥನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೇರಿದ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು. ಈ ವೇಳೆ ಮಾತನಾಡಿದ ಮುಖಂಡ ಪುನೀತ್ ಕೆರೆಹಳ್ಳಿ, ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತೇವೆ….

Read More