Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಅವ್ಯವಹಾರ ನಡೆದಿದೆ ಎಂದು ಶಾಸಕರು ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ; ಮಾಜಿ ಶಾಸಕ ಹರ್ಷವರ್ಧನ್

ನಂಜನಗೂಡು; ಶ್ರೀಕಂಠೇಶ್ವರಸ್ವಾಮಿ ದೇವಾಲಯದಲ್ಲಿ 2024-25ನೇ ಸಾಲಿನಲ್ಲಿ ಅವ್ಯವಹಾರವಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಅವರು ಆರೋಪಿಸಿರುವುದರಲ್ಲಿ ವಾಸ್ತವವಾಗಿ ಯಾವುದೇ ಹುರುಳಿಲ್ಲ ಎಂದು ಮಾಜಿ ಶಾಸಕ ಬಿ.ಹರ್ಷವರ್ಧನ್ ಹೇಳಿದರು.     ಅವರು ಗುರುವಾರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಇತ್ತೀಚೆಗೆ ದೇವಾಲಯದಲ್ಲಿ ಸಭೆ ನಡೆಸಿ ದೇವಸ್ಥಾನದಲ್ಲಿ 2024-25ನೇ ಸಾಲಿನಲ್ಲಿ 4ಕೋಟಿ ಅಂದಾಜು ಮೊತ್ತದ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದರು. ಆದರೆ ಈ ಸಂಬಂಧ ಯಾವುದೇ ದಾಖಲೆಗಳನ್ನು ಬಿಡುಗಡೆ…

Read More

ಸೆ.6 ರಂದು ಕತ್ತಲ ನೆರಳು ನಾಟಕ ಪ್ರದರ್ಶನ

ಮೈಸೂರು; ಇಲ್ಲಿನ ರಾಮಕೃಷ್ಣನಗರದ ಮಂಡ್ಯ ರಮೇಶ್ ಅವರ ನಟನ ರಂಗಮAದಿರದಲ್ಲಿ ಬೆಂಗಳೂರು ಥಿಯೇಟರ್ ಕಲೆಕ್ಟಿವ್ ಸಂಸ್ಥೆ ಡೇವಿಡ್ ಹ್ಯಾರೋವರ್ ರ ಬ್ಲಾ÷್ಯಕ್ ಬರ್ಡ್ ನಾಟಕ ಆಧರಿಸಿದ ಕತ್ತಲ ನೆರಳು ನಾಟಕ ಪ್ರದರ್ಶನವನ್ನು ಸೆ.6 ರಂದು ಏರ್ಪಡಿಸಲಾಗಿದೆ. ರಂಗಕಲಾವಿದರಾದ ಬಾಲಾಜಿ ಮನೋಹರ್, ಸಿರಿರವಿಕುಮಾರ್, ಮತ್ತು ರಂಗಾಯಣ ರಘು ಅವರ ಪುತ್ರಿ ಚುಕ್ಕಿ. ರ.ಮ. ಈ ನಾಟಕದಲ್ಲಿ ಅಭಿನಯಿಸಿರುತ್ತಾರೆ. ನಾಟಕದ ರೂಪಾಂತರ ಮತ್ತು ನಿರ್ದೇಶನ ರಂಗಕರ್ಮಿ ವೆಂಕಟೇಶ್ ಪ್ರಸಾದ್ ಅವರದ್ದು.ಸೆ.6 ರಂದು ಮಧ್ಯಾಹ್ನ 3.30 ಹಾಗೂ ಸಂಜೆ 6.30ಕ್ಕೆ ಎರಡು…

Read More

ರೈತರು ಮುಂಗಾರು ಹಂಗಾಮಿನಲ್ಲಿ ಹವಾಮಾನಕ್ಕೆ ಅನುಗುಣವಾಗಿ ಬೆಳೆಗಳ ಆಯ್ಕೆ ಮಾಡುವುದು ಅವಶ್ಯಕ: ಮಂಜುಳ ಎಂ.ಬಿ.

ನ0ಜನಗೂಡು: ರೈತರು ಮುಂಗಾರು ಹಂಗಾಮಿನಲ್ಲಿ ಹವಾಮಾನಕ್ಕೆ ಅನುಗುಣವಾಗಿ ಬೆಳೆಗಳ ಆಯ್ಕೆ ಮಾಡುವುದು ಅವಶ್ಯಕವಾಗಿದೆ ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಕೃಷಿ ಅಧಿಕಾರಿ ಮಂಜುಳ ಎಂ.ಬಿ. ಹೇಳಿದರು. ಜಿಲ್ಲಾ ಕೃಷಿ ತರಬೇತಿ ಕೇಂದ್ರ, ನಾಗನಹಳ್ಳಿ ಕೃಷಿ ಕೇಂದ್ರದ ವತಿಯಿಂದ 2026-27ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ನಂಜನಗೂಡು ತಾಲ್ಲೂಕು ಕಸಬಾ ಹೋಬಳಿಯ ನವಿಲೂರು ಗ್ರಾಮದಲ್ಲಿ ಹವಾಮಾನ ವೈಪರೀತ್ಯಕ್ಕೆ ಪರ್ಯಾಯ ಬೆಳೆ ಪದ್ದತಿಗಳು ಹಾಗೂ ಬರ ಪರಿಸ್ಥಿತಿಯಲ್ಲಿ ಜಾನುವಾರುಗಳ ನಿರ್ವಹಣೆ ಕುರಿತು ಆಯೋಜಿಸಿದ್ದ ಒಂದು ದಿನದ ಹೊರಾಂಗಣ…

Read More

ವಿಜಯ ವಿಠ್ಠಲ ವಿದ್ಯಾಶಾಲೆಯಲ್ಲಿ ಸಂಭ್ರಮದಿ0ದ ನಡೆದ ಕೃಷ್ಣಜನ್ಮಾಷ್ಟಮಿ ಆಚರಣೆ

ಮೈಸೂರು; ನಗರದ ವಿಜಯ ವಿಠ್ಠಲ ವಿದ್ಯಾಶಾಲೆಯಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯನ್ನು ಅತ್ಯಂತ ಭಕ್ತಿ, ಸಂತೋಷ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಈ ಹಬ್ಬದ ಸಮೃದ್ಧ ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಮಹತ್ವವನ್ನು ಪರಿಚಯಿಸುವುದು ಮತ್ತು ಶ್ರೀಕೃಷ್ಣನು ಬೋಧಿಸಿದ ಕಾಲಾತೀತ ಮೌಲ್ಯಗಳನ್ನು ತಿಳಿಸಿಕೊಡುವುದು ಈ ಆಚರಣೆಯ ಮುಖ್ಯ ಉದ್ದೇಶವಾಗಿತ್ತು.ಈ ಕಾರ್ಯಕ್ರಮದಲ್ಲಿ ಭಕ್ತಿಗೀತೆಗಳು, ನೃತ್ಯಗಳು, ಕೃಷ್ಣನಜೀವನಆಧಾರಿತ ಪ್ರಸ್ತುತಿಗಳು ಮತ್ತು ಸಾಂಪ್ರದಾಯಿಕ ಕಲಾಪ್ರದರ್ಶನಗಳು ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳು ಜರುಗಿದವು. ವಿದ್ಯಾರ್ಥಿಗಳು ಶ್ರೀಕೃಷ್ಣ ಮತ್ತು ರಾಧೆಯ ವೇಷಭೂಷಣ ಧರಿಸಿ ಶಾಲೆಯ ಆವರಣದಲ್ಲಿ ಹಬ್ಬದ ವಾತಾವರಣವನ್ನು ಸೃಷ್ಟಿಸಿ,…

Read More

ರೈತರ ಸಂಕಷ್ಟ ಪರಿಸ್ಥಿತಿಯಲ್ಲಿ ಸರ್ಕಾರ ರೈತರ ಜೊತೆ ನಿಲ್ಲಬೇಕು : ಬ್ಲೂ ಇಂಡಿಯಾ ಪಕ್ಷದ ಅಧ್ಯಕ್ಷ ರಾಜಶೇಖರ್ ದೊಡ್ಡಣ್ಣ ಮೌರ್ಯ 

ಪಿರಿಯಾಪಟ್ಟಣ : ಅನಾವಷ್ಟಿಯ ಪರಿಣಾಮವಾಗಿ ಬಿತ್ತಿದ ಬೆಳೆ ಕೈ ಕೊಟ್ಟರೂ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಪಿರಿಯಾಪಟ್ಟಣವನ್ನು ಬರ ಪೀಡಿತ ತಾಲ್ಲೂಕಿನ ಪಟ್ಟಿಯಿಂದ ಹೊರ ಹಾಕಲಾಗಿದೆ ಎಂದು ಬ್ಲೂ ಇಂಡಿಯಾ ಪಾರ್ಟಿ ರಾಜ್ಯಾಧ್ಯಕ್ಷ ರಾಜಶೇಖರ ದೊಡ್ಡಣ್ಣ ಮೌರ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಪಟ್ಟಣದ ಕಾರ್ಯನಿರತ ಪತ್ರಕರ್ತರ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಉದ್ದೇಶಿಸಿ ಮಾತನಾಡಿದ ಅವರು ಮೈಸೂರಿನ ಎಂಟು ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಿ, ಪಿರಿಯಾಪಟ್ಟಣವನ್ನು ಹೊರತು ಪಡೆಸಿರುವುದು ಮಲತಾಯಿ ಧೋರಣೆಯಾಗಿದೆ ತಾಲೂಕಿನಲ್ಲಿ ಬರ ಬಂದು ರೈತರು ಸಂಕಷ್ಟ ಪರಿಸ್ಥಿತಿಯಲ್ಲಿ ಇದ್ದಾರೆ ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ…

Read More

ಟಿಎಪಿಸಿಎಂಎಸ್ ಸಹಕಾರ ಸಂಘಕ್ಕೆ 61 ಲಕ್ಷ ನಿವ್ವಳ ಲಾಭ:ಕಾರ್ಯದರ್ಶಿ ಬಿ.ವಿ.ಕಲಾವತಿ

ಟಿಎಪಿಸಿಎಂಎಸ್ ಸಹಕಾರ ಸಂಘದ ವಾರ್ಷಿಕ ಮಹಾಸಭೆ  ಪಿರಿಯಾಪಟ್ಟಣ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಮತ್ತು ಸಹಕಾರ ಸಂಘ ಷೇರುದಾರರು ಮತ್ತು ಹಿರಿಯ ಮಾರ್ಗದರ್ಶನದಲ್ಲಿ ನಡೆದು 2025-26 ಸಾಲಿನಲ್ಲಿ 61.46 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಟಿಎಪಿಸಿಎಂಎಸ್ ನ ಕಾರ್ಯದರ್ಶಿ ಬಿ.ವಿ.ಕಲಾವತಿ ತಿಳಿಸಿದರು.  ಪಟ್ಟಣದ ಆದಿ ಚುಂಚನಗಿರಿ ಸಮುದಾಯ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅವರು  ಪಿರಿಯಾಪಟ್ಟಣ ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘವು 1949ರಲ್ಲಿ ಸ್ಥಾಪನೆಯಾಗಿ ಅಲ್ಲಿಂದ ಇಲ್ಲಿಯವರೆಗೂ…

Read More

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ನಿಧಿ ಅರಿವು ಕಾರ್ಯಕ್ರಮ

ತಿ.ನರಸೀಪುರ; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮೈಸೂರು ಹಾಗೂ ಟಿ. ನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ಯುವ ನಿಧಿ ಯೋಜನೆಯ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಟಿ. ನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿತ್ತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಮಾತನಾಡಿ,ಯುವ ನಿಧಿ ಯೋಜನೆಯ ಉದ್ದೇಶ, ಅರ್ಹತೆ ಹಾಗೂ ಯುವಜನರಿಗೆ ದೊರೆಯುವ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಯೋಜನೆಯ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು..ಈ…

Read More

ಯುವಜನರಲ್ಲಿ ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ: ಎಎಸ್ಪಿ ಎಲ್ ನಾಗೇಶ್

ಮೈಸೂರು: ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಯುವ ಜನರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಆಯೋಜಿಸಿ ಎಂದು ಅಪರ ಪೊಲೀಸ್ ಅಧೀಕ್ಷಕ ಎಲ್ ನಾಗೇಶ್ ತಿಳಿಸಿದರು.ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಎನ್ ಕಾಡ್9 (ಓಅಔಖಆ) ಸಭೆ ನಡೆಸಿ ಮಾತನಾಡಿದ ಅವರು, ಸಮಾಜ ಕಲ್ಯಾಣ, ಪದವಿ ಪೂರ್ವ ಶಿಕ್ಷಣ ಇಲಾಖೆಗಳು, ಕಾಲೇಜು ಶಿಕ್ಷಣ ಇಲಾಖೆಯಲ್ಲಿ ವಿದ್ಯಾರ್ಥಿಗಳು ಮಾದಕ ವಸ್ತು ಸೇವನೆ ಮಾಡುತ್ತಿದ್ದಲ್ಲಿ ಪತ್ತೆ ಹಚ್ಚಿ ಅವರನ್ನು ಮಾದಕ ವಸ್ತುಗಳಿಂದ ದೂರವಿಡಲು ಯೋಜನೆ ರೂಪಿಸಿ ಎಂದರು.ಕೃಷಿ ಭೂಮಿಯಲ್ಲಿ…

Read More

ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್ ನಿಧನ

ಮೈಸೂರು: ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷ ಮಡ್ಡಿಕೆರೆ ಗೋಪಾಲ್ (77) ಅವರು ಗುರುವಾರ ಬೆಳಿಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾದರು. ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ನಗರದ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಅವರು ಪತ್ನಿ ಡಾ.ಅನಸೂಯಾ ಗೋಪಾಲ್, ಪುತ್ರಿ ಮಾಲಾ, ಅಳಿಯ ಭವಾನಿಶಂಕರ್, ಮೊಮ್ಮಗಳು ಆದ್ಯಾ ಸ್ಭೆರಿದಂತೆ ಅಪಾರ ಬಂಧು, ಬಳಗ, ಸ್ನೇಹಿತರನ್ನು ಅಗಲಿದ್ದಾರೆ.ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನವರಾದ ಮಡ್ಡಿಕೆರೆಯ ಗೋಪಾಲ್ ಅವರು, ಬಿ.ಎ., ಎಲ್‌ಎಲ್‌ಬಿ…

Read More

ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ; ಕುಲಪತಿ ಪ್ರೊ ಎಂಆರ್ ಗಂಗಾಧರ್

ಚಾಮರಾಜನಗರ ;  ವಿದ್ಯಾರ್ಥಿಗಳ ಪ್ರತಿಭೆ ಹೊರತರಲು ಚಾಮರಾಜನಗರ ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ವಿಭಾಗದ ನುರಿತ ದೈಹಿಕ ನಿರ್ದೇಶಕರ ಮಾರ್ಗದರ್ಶನದಿಂದ ಚಾ,ವಿ.ವಿ ವಿದ್ಯಾರ್ಥಿಗಳು ರಾಜ್ಯ ಅಂತ ರಾಜ್ಯ ರಾಷ್ಟ್ರಮಟ್ಟದಲ್ಲಿ(ದಕ್ಷಿಣ ಭಾರತ ಅಂತರ ವಿಶ್ವವಿದ್ಯಾನಿಲಯ ಹಾಗೂ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ) ಭಾಗವಹಿಸಿ ಹಲವಾರು ಬಹುಮಾನಗಳಿಸಿದ್ದಾರೆ ಎಂದು ಚಾಮರಾಜನಗರ ವಿಶ್ವವಿದ್ಯಾಲಯ ಕುಲಪತಿ ಪ್ರೊ ಎಂ ಗಂಗಾಧರ್ ತಿಳಿಸಿದರು. ಚಾಮರಾಜನಗರ ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ವಿಭಾಗ ಸುವರ್ಣ ಗಂಗೋತ್ರಿ ಸಭಾಂಗಣದಲ್ಲಿ 2026, 27ನೇ ಸಾಲಿನ ಶೈಕ್ಷಣಿಕ ಸಾಲಿನ ಕ್ರೀಡಾ ಸಲಹೆ…

Read More