
ಮೈಸೂರು : ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಪಕ್ಕಕ್ಕೆ ದುಡಿದಿರುವ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕು, ಎಲ್ಲಿಂದಲೋ ಬಂದವರಿಗೆ ಸ್ಥಾನ ನೀಡಿದರೆ ಪಕ್ಷದ ಮುಂಚೂಣಿ ಘಟಕದ ಎಲ್ಲರೂ ಸಾಮೂಹಿಕವಾಗಿ ರಾಜೀನಾಮೆ ನೀಡುತ್ತೇವೆ ಎಂದು ಮುಂಚೂಣಿ ಘಟಕಗಳ ಒಕ್ಕೂಟದ ಅಧ್ಯಕ್ಷ ಡಾ.ಎಂ.ನಾಗರಾಜು ಪಕ್ಷದ ವರಿಷ್ಠರಿಗೆ ಎಚ್ಚರಿಕೆ ನೀಡಿದರು.
ಶನಿವಾರ ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಕಾಂಗ್ರೆಸ್ ಪಕ್ಷದ ವಿವಿಧ 25 ಮುಂಚೂಣಿ ಘಟಕಗಳ ಅಧ್ಯಕ್ಷರ ಸಭೆಯ ನೇತೃತ್ವವಹಿಸಿ ಮಾತನಾಡಿದ ಅವರು.
ಎಐಸಿಸಿ ವೀಕ್ಷಕರಾಗಿ ಬಂದಿದ್ದ ರಾಜೇಶ್ ಠಾಕೂರ್ ಅವರಿಗೆ ನಾವೆಲ್ಲರೂ ಸೇರಿ ಸೂಕ್ತ ಅಭ್ಯರ್ಥಿಯನ್ನು ಅಧ್ಯಕ್ಷರನ್ನಾಗಿ ಮಾಡುವಂತೆ ಕೋರಿದ್ದೆವು, ಆದರೇ, ನಾವು ಸೂಚಿಸಿದ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ಮಾಡದೆ, ಎಲ್ಲಿಂದಲೋ ಬಂದವರಿಗೆ ಜಿಲ್ಲಾಧ್ಯಕ್ಷ ಸ್ಥಾನ ನೀಡಲಾಗುತ್ತಿದೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದು ತಪುö್ಪ, ಪಕ್ಷಕ್ಕೆ ದುಡಿದವರನ್ನು ಮಾತ್ರ ಮೈಸೂರು ಜಿಲ್ಲಾ ಅಧ್ಯಕ್ಷರಾಗಿ ನೇಮಿಸಬೇಕು ಇಲ್ಲದಿದ್ದಲ್ಲಿ ನಾವೆಲ್ಲರೂ ಪಕ್ಷದಿಂದ ಹೊರಹೋಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಮೈಸೂರು ಜಿಲ್ಲಾ ಕಾಂಗ್ರೆಸ್ ಸಹಕಾರ ವಿಭಾಗದ ಅಧ್ಯಕ್ಷ ಎಸ್.ಸಿದ್ದಯ್ಯ ಮಾತನಾಡಿ, ಪಕ್ಷಕ್ಕೆ ದುಡಿದ ವ್ಯಕ್ತಿಗಳಿಗೆ ಅಧ್ಯಕ್ಷ ಸ್ಥಾನ ನೀಡಲಿ ಇಲ್ಲದಿದ್ದಲ್ಲಿ ವಿಜಯಕುಮಾರ್ ಕಟ್ಟಿದ ಸಂಘಟನೆ ಹೊಳೆಯಲ್ಲಿ ಹುಣುಸೇಹಣ್ಣು ಕಿವಿಚಿದಂತಾಗುತ್ತದೆ ಎಂದು ಪರೋಕ್ಷವಾಗಿ ಕಾಂಗ್ರೆಸ್ ಪಕ್ಷಕ್ಕೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಮುಂಚೂಣಿ ಘಟಕಗಳ ಹಲವು ಮುಖಂಡರು ಉಪಸ್ಥಿತರಿದ್ದರು.