ದಸರಾ ಗಜಪಡೆಗಳಿಗೆ ಭಾರ ಹೊರುವ ತಾಲಿಮು*ಗಂಡು ಆನೆಗಳಿಗೆ ಹಂತ, ಹಂತವಾಗಿ ತೂಕ ಹೆಚ್ಚಳ
ಮೈಸೂರು; ಈ ಬಾರಿ ಅದ್ಧೂರಿಯಾಗಿ ಜರುಗಲಿರುವ ವಿಶ್ವಪ್ರಸಿದ್ಧ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲೆಂದು ಕಾಡಿನ ವಿವಿಧ ಶಿಬಿರಗಳಿಂದ ಅರಮನೆ ನಗರಿ ಮೈಸ್ರರಿಗೆ ಬಂದಿರುವ ಗಜಪಡೆಗೆ ಇದೀಗ ಭಾರ ಹೊರೆಸುವ ತಾಲೀಮು ಆರಂಭಿಸಲಾಗಿದೆ.ಗಜಪಯಣದ ಮೂಲಕ ಮೈಸೂರಿಗೆ ಬಂದಿರುವ ಮೊದಲ ಹಂತದ ಗಜಪಡೆಗೆ ನಿತ್ಯವೂ ಎರಡು ಹೊತ್ತು ಅರಮನೆಯಿಂದ ಬನ್ನಿಮಂಟಪದ ತನಕ ತಾಲೀಮು ನಡೆಸಲಾಗುತ್ತಿತ್ತು. ನಾಗರೀಕ ಜೀವನಕ್ಕೆ ಆನೆಗಳು ಹೊಂದಿಕೊಳ್ಳುತ್ತಿದ್ದು, ಎಷ್ಟೇ ಜನರು ಎದುರಿಗೆ ಬಂದರೂ, ಹೋದರೂ ನಿಂತಿದ್ದರೂ ಆನೆಗಳು ಕೊಂಚವೂ ಗಲಿಬಿಲಿಗೊಳ್ಳದೆ ನಿತ್ಯವೂ ತಾಲೀಮು ನಡೆಸುತ್ತಿವೆ….