Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕನ್ನಡ ವಿವೇಕ ಪರಂಪರೆ ಮತ್ತು ಕುವೆಂಪು ಕುರಿತು ವಿಚಾರ ಸಂಕಿರಣ

ಮೈಸೂರು; ನಗರದ ಎಸ್‌ಬಿಆರ್‌ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ) ಕನ್ನಡ ವಿಭಾಗ, ಅಭಿನವ ಬೆಂಗಳೂರು, ಎಸ್.ಟಿ.ಜಿ ಸಮೂಹ ಶಿಕ್ಷಣ ಸಂಸ್ಥೆಗಳು, ಚಿನಕುರಳಿ ಹಾಗೂ ವಿಸ್ಮಯ ಅಡ್ವರ್ಟೈಸರ್ಸ್ ಸಹಯೋಗದೊಂದಿಗೆ ಕನ್ನಡ ವಿವೇಕ ಪರಂಪರೆ ಮತ್ತು ಕುವೆಂಪು’ ಎಂಬ ವಿಷಯ ಕುರಿತು ಎರಡು ದಿನದ ಅಂತÀರರಾಷ್ಟಿçÃಯ ವಿಚಾರ ಸಂಕಿರಣವನ್ನು ಆಯೋಜಿಸಲಾಗಿತ್ತು.ಸಂಕಿರಣದಲ್ಲಿ 40ಕ್ಕೂ ಹೆಚ್ಚು ಸಂಪನ್ಮೂಲ ವ್ಯಕ್ತಿಗಳು 7 ಅಂಕಣಗಳಲ್ಲಿ ತಮ್ಮ ವಿಚಾರವನ್ನು ಮಂಡಿಸಿದರು ಅಮೇರಿಕಾ ಮತ್ತು ರಷ್ಯಾ ದೇಶಗಳಿಂದಲ್ಲೂ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿರುವುದು ಸಂಕಿರಣದ ಆಕರ್ಷಣೀಯವಾಗಿದೆ. ಉದ್ಘಾಟನಾ ಸಮಾರಂಭದ…

Read More

ರಾಜ್ಯ ಮಟ್ಟದ ದಸರಾ ಕಲಾ ಪ್ರದರ್ಶನ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026 ರಲ್ಲಿ ಲಲಿತಕಲೆ ಮತ್ತು ಕರಕುಶಲ ಉಪಸಮಿತಿ ವತಿಯಿಂದ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು, ಸಿದ್ದಾರ್ಥನಗರ, ಮೈಸೂರು ಸಂಸ್ಥೆಯ ಆವರಣದಲ್ಲಿ ರಾಜ್ಯ ಮಟ್ಟದ ದಸರಾ ಕಲಾ ಪ್ರದರ್ಶನವನ್ನು ಆಯೋಜಿಸಲಾಗುತ್ತದೆ. ಈ ಪ್ರದರ್ಶನಕ್ಕೆ ಕಲಾಕೃತಿಗಳನ್ನು ಆಹ್ವಾನಿಸಲಾಗಿದೆ.ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ, ಛಾಯಾಚಿತ್ರ, ಅನ್ವಯಕಲೆ ವಿಭಾಗಗಳಲ್ಲಿ ವೃತ್ತಿಪರ ಹಾಗೂ ಹವ್ಯಾಸಿ ವಿಭಾಗಗಳಿರುತ್ತದೆ. ಸಾಂಪ್ರದಾಯಿಕ ಶಿಲ್ಪಕಲೆ, ಸಾಂಪ್ರದಾಯಿಕ ಚಿತ್ರಕಲೆ, ಕರಕುಶಲ ಕಲೆ /ಇನ್ನಿತರೆ ವಿಭಾಗಗಳಲ್ಲಿ ಹವ್ಯಾಸಿ ವಿಭಾಗಗಳಿರುವುದಿಲ್ಲ. ಎಲ್ಲಾ ವಿಭಾಗಗಳಲ್ಲಿ ಅತ್ಯುತ್ತಮ ಮೂರು ಕಲಾಕೃತಿಗಳಿಗೆ…

Read More

ಕಾರು ಬೈಕ್‌ಗೆ ಡಿಕ್ಕಿ ಹೊಡೆದು ಮೂವರು ಸಾವು

ಹನೂರು; ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಆರ್.ಎಸ್.ದೊಡ್ಡಿ ಸಮೀಪದ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ಗುರುವಾರ ರಾತ್ರಿ ಸಂಭವಿಸಿದೆ.ಹನೂರು ತಾಲೂಕಿನ ಕೊಪ್ಪ ಗ್ರಾಮದ ನಿವಾಸಿಗಳಾದ ಸುರೇಶ್ (24), ಮಹೇಂದ್ರ (35) ಹಾಗೂ ಮುನಿಯಪ್ಪ (35) ಮೃತಪಟ್ಟ ದುರ್ದೆÊವಿಗಳು. ಈ ಮೂವರು ಗೌರಿ ಗಣೇಶ ಹಬ್ಬದ ಸಿದ್ಧತೆಯಲ್ಲಿ ತೊಡಗಿದ್ದ ಇವರು, ಇದಕ್ಕಾಗಿಯೇ ಕೊಳ್ಳೇಗಾಲದತ್ತ ತೆರಳುತ್ತಿದ್ದಾಗ ಬೈಕ್‌ಗೆ ಮಲೆಮಹದೇಶ್ವರ ಬೆಟ್ಟದತ್ತ ವೇಗವಾಗಿ…

Read More

ಪಿರಿಯಾಪಟ್ಟಣದ ಅಭಿವೃದ್ಧಿಗೆ ಶ್ರಮಿಸಿದ್ದೇನೆ: ಮಾಜಿ ಸಚಿವ ಕೆ. ವೆಂಕಟೇಶ್

ಪಿರಿಯಾಪಟ್ಟಣದಲ್ಲಿ ಕಾಮಗಾರಿಗಳ ಶಂಕುಸ್ಥಾಪನೆ  ಪಿರಿಯಾಪಟ್ಟಣ : ನನ್ನ ಆಡಳಿತ ಅವಧಿಯಲ್ಲಿ ಪಟ್ಟಣದ ಅಭಿವೃದ್ಧಿಗಾಗಿ ಸುಮಾರು 84 ಕೋಟಿ ಹಣ ಮಂಜೂರು ಮಾಡಿಸಿ ವಿವಿಧ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳುವ ಮೂಲಕ ಪಟ್ಟಣದ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಎಂದು ಮಾಜಿ ಸಚಿವ ಕೆ. ವೆಂಕಟೇಶ್ ತಿಳಿಸಿದರು. ಪಟ್ಟಣದ ಬಿಎಂ ರಸ್ತೆಯ ಅಗ್ನಿಶಾಮಕ ದಳ ಕಚೇರಿಯ ಮುಂಭಾಗ ನಗರ ಭೂ ಸಾರಿಗೆ ಇಲಾಖೆ (ಡಲ್ಟ್ ) ಅನುದಾನದಲ್ಲಿ ಸುಮಾರು 492 ಲಕ್ಷ ರೂಗಳಲ್ಲಿ ಪಾದಚಾರಿ ಮಾರ್ಗ ಕಾಮಗಾರಿಗೆ ಶಂಕು ಸ್ಥಾಪನೆ ನೆರೆವೇರಿಸಿ ಮಾತನಾಡಿದ…

Read More

ಕೆರೆಗಳನ್ನು ಸಂರಕ್ಷಣೆ ಮಾಡುವುದು ‌ ನಮ್ಮೆಲ್ಲರ ಜವಾಬ್ದಾರಿ : ಶಾಸಕ ದರ್ಶನ್ ಧ್ರುವನಾರಾಯಣ್

ನಂಜನಗೂಡು :  ರಾಜ್ಯಾದ್ಯಾಂತ ಭೀಕರ ಬರ ಪರಿಸ್ಥಿತಿಯಲ್ಲಿ ನಮ್ಮ ಜೀವನವನ್ನು ಉಳಿಸಿಕೊಳ್ಳುವ ಸಲುವಾಗಿ ಕೆರೆಗಳನ್ನು ಸಂರಕ್ಷಿಸುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.    ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ 11 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ತಾಲೂಕಿನ ದೇವಿರಮ್ಮನಹಳ್ಳಿ ಕೆೆೆರೆಯ ನಾಮಫಲಕ ಅನಾವರಣ ಮತ್ತು ಕೆರೆಗೆ ಬಾಗಿನ ಸಮರ್ಪಿಸಿ ಗ್ರಾಮಸ್ಥರಿಗೆ ಕೆರೆಯ ಹಸ್ತಾಂತರ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು.    ರಾಜ್ಯದ ಹಲವು…

Read More

42 ರೈತ ಕುಟುಂಬಗಳ ಮಕ್ಕಳ ಉದ್ಯೋಗಕ್ಕಾಗಿ ಹೋರಾಟ

ಮೈಸೂರು: ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆಗೆ ಭೂಮಿ ನೀಡಿದ 42 ರೈತ ಕುಟುಂಬಗಳ ಮಕ್ಕಳಿಗೆ ಕಾಯಂ ಉದ್ಯೋಗ ನೀಡಬೇಕು ಹಾಗೂ ನೀಡಿರುವ ಲಿಖಿತ ಭರವಸೆಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ರೈತರು ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ಮತ್ತು ಜನಾಂದೋಲನಗಳ ಮಹಾ ಮೈತ್ರಿಯ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಹೋರಾಟವನ್ನು ನಡೆಸಲಾಗುತ್ತಿದೆ.ಐದು ದಿನಗಳಿಂದ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದರೂ ಜಿಲ್ಲಾಡಳಿತವು ರೈತರ ಬೇಡಿಕೆಗಳಿಗೆ ಸ್ಪಂದಿಸಿಲ್ಲ ಎಂದು ಹೋರಾಟಗಾರರು…

Read More

ಅಲ್ಜೆöಮರ್ಸ್ ಕುರಿತು ಜಾಗೃತಿ ಮೂಡಿಸಿದ ನಮ್ಮ ನಡಿಗೆ ಆರೋಗ್ಯದೆಡೆಗೆ’

ಮೈಸೂರು; ವಿಶ್ವ ಅಲ್ಜೆ0ಮರ್ಸ್ ತಿಂಗಳ ಅಂಗವಾಗಿ ಅಲ್ಜೆöÊಮರ್ಸ್ ಅಂಡ್ ರಿಲೇಟೆಡ್ ಡಿಸಾರ್ಡರ್ಸ್ ಸೊಸೈಟಿ ಆಫ್ ಇಂಡಿಯಾ , ಮೈಸೂರು ಶಾಖೆ, ಶಾರದಾ ವಿಲಾಸ ಕಾಲೇಜ್ ಆಫ್ ಫಾರ್ಮಸಿ, ಹಾಗೂ ವಿವೇಕ ಆಸ್ಪತ್ರೆ ಸಹಯೋಗದಲ್ಲಿ ಶುಕ್ರವಾರ ಚಾಮುಂಡಿ ಬೆಟ್ಟದ ಪಾದದಿಂದ ಬೆಟ್ಟದ ಮೇಲ್ಭಾಗದವರೆಗೆ ನಮ್ಮ ನಡಿಗೆ ಆರೋಗ್ಯದೆಡೆಗೆ’ ಎಂಬ ಘೋಷವಾಕ್ಯದೊಂದಿಗೆ ಜಾಗೃತಿ ಟ್ರೆಕ್ಕಿಂಗ್ ಕಾರ್ಯಕ್ರಮವನ್ನು ನಡೆಸಲಾಯಿತು.ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿಧಾನ ಪರಿಷತ್ ಸದಸ್ಯ ಕೆ. ವಿವೇಕಾನಂದ ಮಾತನಾಡಿ, ಅಲ್ಜೆöÊಮರ್ಸ್ ಸೇರಿದಂತೆ ಸ್ಮರಣಶಕ್ತಿ ಸಂಬAಧಿತ ಕಾಯಿಲೆಗಳ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು…

Read More

ಮಾನವ ಕುಲಕ್ಕೆ ಕೃತಕ ಬುದ್ಧಿಮತ್ತೆಯು ವರವಾಗಿದೆ;ಶಂಕರ್ ಪ್ರಸಾದ್ ಕೆ. ಎಸ್

ಮೈಸೂರು; ಮಾನವ ಕುಲಕ್ಕೆ ಕೃತಕ ಬುದ್ಧಿಮತ್ತೆಯು ವರವಾಗಿದೆ ಎಂದು ಬೆಂಗಳೂರಿನ ಶಿಕ್ಷಣ ಸಂಶೋಧನಾ ಸಂಸ್ಥೆಯ ಕೈಗಾರಿಕೋದ್ಯಮದ ಸಲಹೆಗಾರ ಶಂಕರ್ ಪ್ರಸಾದ್ ಕೆ.ಎಸ್ ಹೇಳಿದರು.ಮೈಸೂರಿನ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಶುಕ್ರವಾರ ಪ್ಲೇಸ್ಮೆಂಟ್ ಸೆಲ್ ವತಿಯಿಂದ ‘ಓಚಿvigಚಿಣiಟಿg ಣhe ಂge oಜಿ ಂI: ಛಿಚಿಡಿeeಡಿ oಠಿಠಿoಡಿಣuಟಿiಣies ಚಿಟಿಜ ಈuಣuಡಿe sಞiಟಟs ‘ ವಿಷಯ ಕುರಿತಂತೆ ಏರ್ಪಡಿಸಲಾಗಿದ್ದ ಒಂದು ದಿನದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಐ ಕುರಿತು ಯಾರು ಭಯ ಪಡುವ ಅಗತ್ಯವಿಲ್ಲ. ಇಂದಿನ ಆಧುನಿಕ…

Read More

ಕೆ.ಆರ್. ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಪಕ್ಷಗಳ ಸಭೆ

ಮೈಸೂರು ; ನಗರದ ಕೆ.ಆರ್. ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಸಂಬAಧಿಸಿದAತೆ ರಾಜಕೀಯ ಪಕ್ಷಗಳ ಸಭೆಯನ್ನು ಶಾರದಾದೇವಿನಗರ ವಲಯ ಕಚೇರಿ 3ರಲ್ಲಿ ನಡೆಸಲಾಯಿತು.ಸಭೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಸೇರಿದಂತೆ ವಿವಿಧ ಪ್ರಮುಖ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು ಸಭೆಯಲ್ಲಿ ಕ್ಷೇತ್ರದ ಮತದಾರರ ಪಟ್ಟಿಗೆ ಸಂಬAಧಿಸಿದ ವಿಷಯಗಳು, ವಿಶೇಷ ತೀವ್ರ ಪರಿಷ್ಕರಣೆ (SIಖ) ಪ್ರಕ್ರಿಯೆ, ಮತದಾರರ ವಿವರಗಳ ಪರಿಶೀಲನೆ ಹಾಗೂ ರಾಜಕೀಯ ಪಕ್ಷಗಳ ಸಹಕಾರದ ಕುರಿತು ಚರ್ಚಿಸಲಾಯಿತು.ಮತದಾರರ ಪಟ್ಟಿಯ ಪರಿಷ್ಕರಣಾ ಕಾರ್ಯವು…

Read More

ಚಾಮುಂಡಿಬೆಟ್ಟಕ್ಕೆ ಡಿಸೆಂಬರ್ ಅಂತ್ಯದೊಳಗೆ ಪೂರ್ಣ ಪ್ರಮಾಣದಲ್ಲಿ ನೀರಿನ ಸೌಲಭ್ಯ

*ಬೆಟ್ಟದ ತಪ್ಪಲಿನ ಪ್ರಮುಖ ರಸ್ತೆಗಳಲ್ಲಿ ಸ್ವಚ್ಛತೆ ಕಾಪಾಡಲು ಸ್ಥಳೀಯ ಸಂಸ್ಥೆಗಳಿಗೆ ಸೂಚನೆಮೈಸೂರು: ಗ್ರಾಮಾಂತರ ಪ್ರದೇಶಗಳಲ್ಲಿ ಬತ್ತಿಹೋಗಿರುವ ಬೋರ್‌ವೆಲ್‌ಗಳನ್ನು ರೀಡ್ರಿಲ್ ಮಾಡಿಸುವುದು, ಹೊಸದಾಗಿ ಪಾಯಿಂಟ್ ಗುರುತಿಸಿ ಬೋರ್‌ವೆಲ್‌ಗಳನ್ನು ಕೊರೆಸಲು ಮುಂದಾಗಬೇಕು. ಪಂಚಾಯಿತಿಯಲ್ಲಿ ಲಭ್ಯವಿರುವ ಅನುದಾನ ಬಳಸಿಕೊಂಡು ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ತಾಕೀತು ಮಾಡಿದರು. ನಗರದ ಶಾರದಾದೇವಿನಗರದಲ್ಲಿರುವ ನಗರಪಾಲಿಕೆ ವಲಯ ಕಚೇರಿ ಮೂರರಲ್ಲಿ ಶುಕ್ರವಾರ ಕ್ಷೇತ್ರದ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು,ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ…

Read More