
ಮೈಸೂರು: ತಾಲೂಕಿನ ಉದ್ಬೂರು ಗೇಟ್ ಸಮೀಪ ಇರುವ ಡಾ. ವಿಷ್ಣುವರ್ಧನ್ ಸ್ಮಾರಕದಲ್ಲಿ ಚಿತ್ರ ನಟ ಡಾ. ವಿಷ್ಣುವರ್ಧನ್ ಅವರ 76ನೇ ಜನ್ಮದಿನಾಚರಣೆಯನ್ನು ಅಭಿಮಾನಿಗಳು ಸಂಭ್ರಮದಿAದ ಆಚರಿಸಿದರು.
ಈ ಸಂದರ್ಭದಲ್ಲಿ ಸ್ಮಾರಕಕ್ಕೆ ಆಗಮಿಸಿದ ನೂರಾರು ಅಭಿಮಾನಿಗಳಿಗೆ ಹಿರಿಯ ಚಿತ್ರ ನಟಿ ಭಾರತಿ ವಿಷ್ಣುವರ್ಧನ್ ಅವರು ಅನ್ನದಾನ ಮಾಡುವ ಮೂಲಕ ಜನ್ಮದಿನೋತ್ಸವಕ್ಕೆ ವಿಶೇಷ ಮೆರುಗು ತಂದರು. ಅಭಿಮಾನಿಗಳೊಂದಿಗೆ ಆತ್ಮೀಯವಾಗಿ ಬೆರೆತು ಶುಭಾಶಯಗಳನ್ನು ಸ್ವೀಕರಿಸಿದ ಅವರು, ವಿಷ್ಣುವರ್ಧನ್ ಅವರ ಮೇಲಿನ ಅಭಿಮಾನ ಮತ್ತು ಪ್ರೀತಿಯನ್ನು ಸ್ಮರಿಸಿದರು.
ಅನ್ನದಾನ ಕಾರ್ಯಕ್ರಮದಲ್ಲಿ ಪರಿಸರ ಜಾಗೃತಿ ವೇದಿಕೆ ಅಧ್ಯಕ್ಷ ಬನ್ನೂರು ಮಹೇಂದ್ರಸಿAಗ್ ಕಾಳಪ್ಪ, ನಟರಾಜ್, ಗಿರೀಶ್, ಎಸ್.ಎನ್. ರಾಜೇಶ್, ಮಹದೇವ್ ಸೇರಿದಂತೆ ಅನೇಕ ಗಣ್ಯರು ಹಾಗೂ ನೂರಾರು ಅಭಿಮಾನಿಗಳು ಭಾಗವಹಿಸಿದ್ದರು.
ವಿಷ್ಣುವರ್ಧನ್ ಅವರ ಜನ್ಮದಿನದ ಅಂಗವಾಗಿ ಅಭಿಮಾನಿಗಳು ಪುಷ್ಪನಮನ ಸಲ್ಲಿಸಿ, ಕೇಕ್ ಕತ್ತರಿಸಿ, ವಿವಿಧ ಸೇವಾ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ತಮ್ಮ ನೆಚ್ಚಿನ ನಟನಿಗೆ ಗೌರವ ಅರ್ಪಿಸಿದರು.