Skip to main content

3Kaala News

ಸುಭಾಷಿತ 

ಜೀವನ ಅನ್ನುವ ಜೋಳಿಗೆಯಲ್ಲಿ ಭಗವಂತ ಎಲ್ಲರಿಗೂ ಸಂತೋಷದ ಬುತ್ತಿಯನ್ನು ಇಟ್ಟು ಕಳಿಸುತ್ತಾನೆ. ಆದರೆ ನಾವು ನಮ್ಮ ಜೋಳಿಗೆಯಲ್ಲಿ ಏನಿದೆ ಎಂದು ನೋಡಿ ಆನಂದಪಡುವುದನ್ನು ಬಿಟ್ಟು,ಬೇರೆಯವರ ಜೋಳಿಗೆಯಲ್ಲಿ ಏನಿದೆ ಎಂದು ತಿಳಿದುಕೊಳ್ಳುವ ಕೆಟ್ಟ ಕುತೂಹಲದಿಂದ ಸದಾ ದುಃಖಿಯಾಗಿರುತ್ತೇವೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸಂಘದ ಮೈಸೂರು ಜಿಲ್ಲಾ ಘಟಕಕ್ಕೆ ನೂತನ ಪದಾದಿಕಾರಿಗಳ ನೇಮಕ

ಮೈಸೂರು ; ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಮೈಸೂರು ಜಿಲ್ಲಾ ಘಟಕದ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮವು ಟಿ. ನರಸೀಪುರ ಪುರಸಭೆಯಲ್ಲಿ ರಾಜ್ಯಾಧ್ಯಕ್ಷೆ ಶೈಲಾ ಕೆ.ಡಿ. ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷರಾಗಿ ಟಿ. ನರಸೀಪುರ ಪುರಸಭೆಯ ಮುಖ್ಯಾಧಿಕಾರಿ ಶ್ರೀನಿವಾಸ್ ಅವರನ್ನು ಆಯ್ಕೆ ಮಾಡಲಾಯಿತು. ಜಿಲ್ಲಾ ಕಾರ್ಯದರ್ಶಿಯಾಗಿ ಕಡಕೊಳ ಪಟ್ಟಣ ಪಂಚಾಯಿತಿಯ ಪ್ರಭಾರ ಆರೋಗ್ಯ ನಿರೀಕ್ಷಕ ಮಂಜುನಾಥ್ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಹೂಟಗಳ್ಳಿ ನಗರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಶಿವಪ್ರಸಾದ್ ಅವರನ್ನು…

Read More

ಹೆಚ್.ಐ.ವಿ, ಏಡ್ಸ್ ಕುರಿತು ಜಾಗೃತಿ ಮೂಡಿಸಲು ಬೈಕ್ ರ‍್ಯಾಲಿ

ಮೈಸೂರು: ಹೆಚ್.ಐ.ವಿ, ಏಡ್ಸ್ ಅರಿವಿನ ಮಾಸಾಚರಣೆ-2026ರ ಅಂಗವಾಗಿ ಹೆಚ್.ಐ.ವಿ, ಏಡ್ಸ್ ಸೋಂಕು ಹರಡುವಿಕೆ, ತಡೆಗಟ್ಟುವಿಕೆ, ಪರೀಕ್ಷೆ ಮತ್ತು ಚಿಕಿತ್ಸೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಬೈಕ್ ರ‍್ಯಾಲಿ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಶನಿವಾರ ನಗರದಲ್ಲಿ ನಡೆಸಲಾಯಿತು.ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಿಂದ ಆರಂಭಗೊAಡ ಬೈಕ್ ರ‍್ಯಾಲಿಗೆ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ. ಮೊಹಮ್ಮದ್ ಸಿರಾಜ್ ಅಹಮದ್ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಬಳಿಕ ರ‍್ಯಾಲಿಯು ದೇವರಾಜ ಅರಸು ರಸ್ತೆ, ಜೆ.ಎಲ್.ಬಿ. ರಸ್ತೆ,…

Read More

ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಹಸ್ತಕ್ಷೇಪ ಹೆಚ್ಚಾಗುತ್ತಿದೆ; ಹೆಚ್.ಪಿ. ಅಮರನಾಥ್

ಮೈಸೂರು : ಸಹಕಾರ ಸಂಘಗಳು ಆರ್ಥಿಕ ಸ್ವಾವಲಂಬನೆಯ ಹೆಬ್ಬಾಗಿಲುಗಳಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಹಸ್ತಕ್ಷೇಪ ಹೆಚ್ಚಾಗಿ ಅನೇಕ ಸಂಘಗಳು ಕೋರ್ಟ್ ಕಟ್ಟಲೆ ಮೆಟ್ಟಿಲೇರಿವೆ. ಇದರಿಂದ ಸಹಕಾರಿ ತತ್ವಕ್ಕೆ ಧಕ್ಕೆ ಉಂಟಾಗುತ್ತಿದೆ ಎಂದು ಹಿರಿಯ ಸಹಕಾರಿ ಹಾಗೂ ಹುಣಸೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಹೆಚ್.ಪಿ. ಅಮರನಾಥ್ ಕಳವಳ ವ್ಯಕ್ತಪಡಿಸಿದರು.ನಗರದ ಪತ್ರಕರ್ತರ ಭವನದಲ್ಲಿ ಇಂದು ನಡೆದ 10ನೇ ಸರ್ವ ಸದಸ್ಯರ ಸಭೆ, ಅಭ್ಯುದಯ ಸಹಕಾರಿ ರತ್ನ ಪ್ರಶಸ್ತಿ ಪ್ರದಾನ ಹಾಗೂ ವೈದ್ಯಕೀಯ ಉಪಕರಣ ವಿತರಣೆಯ…

Read More

ಆರೋಗ್ಯಕರ ಜೀವನಶೈಲಿಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಾಗಿದೆ; ಡಾ. ಈ.ಸಿ. ನಿಂಗರಾಜ್ ಗೌಡ

ಮೈಸೂರು: ದೇಹ ಮತ್ತು ಮನಸ್ಸಿನ ಆರೋಗ್ಯವನ್ನು ಸಮತೋಲನದಲ್ಲಿಟ್ಟುಕೊಳ್ಳಲು ಆರೋಗ್ಯಕರ ಜೀವನಶೈಲಿಯ ವಿಧಾನಗಳ ಬಗ್ಗೆಯೂ ಜನರಲ್ಲಿ ಅರಿವು ಮೂಡಬೇಕಿದೆ ಎಂದು ಬಿಜೆಪಿ ಮೈಸೂರು ವಿಭಾಗೀಯ ಸಹ ಪ್ರಭಾರಿ ಡಾ. ಈ.ಸಿ. ನಿಂಗರಾಜ್ ಗೌಡ ಹೇಳಿದರು.ಮೈಸೂರಿನ ಸಿದ್ಧಾರ್ಥ ಲೇಔಟ್‌ನಲ್ಲಿ ಆರ್ವಿಕಾ ವೆಲ್ನೆಸ್ ಸೆಂಟರ್‌ನ ಎರಡನೇ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಆರೋಗ್ಯದ ಬಗ್ಗೆ ಜನರು ಮುನ್ನೆಚ್ಚರಿಕೆ ವಹಿಸುವುದು ಇಂದಿನ ಅಗತ್ಯವಾಗಿದೆ. ದೇಹಕ್ಕೆ ಸಮರ್ಪಕ ವಿಶ್ರಾಂತಿ, ಸಮತೋಲಿತ ಆಹಾರ, ನಿಯಮಿತ ವ್ಯಾಯಾಮ, ಉತ್ತಮ ನಿದ್ರೆ ಹಾಗೂ ಮಾನಸಿಕ ನೆಮ್ಮದಿ ಆರೋಗ್ಯಕರ ಜೀವನದ…

Read More

ಎನ್.ಆರ್. ಕ್ಷೇತ್ರದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ವಿಶೇಷ ಆಂದೋಲನ

ಮೈಸೂರು; ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಸಂಬAಧ ವಿಶೇಷ ಆಂದೋಲನವನ್ನು ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಇಂದು ವಿವಿಧ ಮತಗಟ್ಟೆ ವ್ಯಾಪ್ತಿಗಳಲ್ಲಿ ಮತದಾರರ ಪರಿಶೀಲನೆ ಹಾಗೂ ನೋಂದಣಿಗೆ ಸಂಬAಧಿಸಿದ ಕಾರ್ಯಗಳನ್ನು ನಡೆಸಲಾಯಿತು. .ಮೈಸೂರು ಮಹಾನಗರ ಪಾಲಿಕೆ ವಾರ್ಡ್ ನಂ. 27ರ ಗಾಂಧೀನಗರದ ಮಹದೇವಪುರ ರಸ್ತೆಯಲ್ಲಿರುವ ಲಿಟಲ್ ಸಿಸ್ಟರ್ ಆಫ್ ದಿ ಪೂರ್ ವೃದ್ಧಾಶ್ರಮಕ್ಕೆ ಅಧಿಕಾರಿಗಳು ಭೇಟಿ ನೀಡಿ, ಮತದಾರರ ಪರಿಶೀಲನೆ ನಡೆಸಿದರು. ಈ ವೃದ್ಧಾಶ್ರಮವು ಮತಗಟ್ಟೆ ಸಂಖ್ಯೆ 137 ಹಾಗೂ 140ರ ವ್ಯಾಪ್ತಿಗೆ ಒಳಪಟ್ಟಿದ್ದು,…

Read More

ಕೇಸರಿಮಯವಾದ ಮೈಸೂರು: ಸಾಮೂಹಿಕ ಗಣಪತಿ ವಿಸರ್ಜನೆಗೆ ನಗರ ಸಜ್ಜು

ಮೈಸೂರು: ಮೈಸೂರು ಸಾರ್ವಜನಿಕ ಗಣೇಶ ವಿಸರ್ಜನಾ ಸಮಿತಿ ವತಿಯಿಂದ ಭಾನುವಾರ ಅದ್ಧೂರಿಯಾಗಿ ನಡೆಯಲಿರುವ ಭವ್ಯ ಸಾಮೂಹಿಕ ಗಣಪತಿ ವಿಸರ್ಜನಾ ಮಹೋತ್ಸವಕ್ಕೆ ಸಾಂಸ್ಕöÈತಿಕ ನಗರಿ ಮೈಸೂರು ಸಜ್ಜಾಗಿದೆ. ಮೆರವಣಿಗೆ ಸಾಗುವ ಪ್ರಮುಖ ವೃತ್ತಗಳು ಹಾಗೂ ರಸ್ತೆಗಳನ್ನು ಕಾರ್ಯಕರ್ತರು ಕೇಸರಿ ಧ್ವಜಗಳಿಂದ ಅಲಂಕರಿಸಿ ಹಬ್ಬದ ವಾತಾವರಣವನ್ನು ನಿರ್ಮಿಸಿದ್ದಾರೆ.ಮಧ್ಯಾಹ್ನ 1.45 ಗಂಟೆಗೆ ಮೈಸೂರಿನ ವೀರನಗೆರೆಯ ಶ್ರೀ ವೀರ ಗಣಪತಿ ದೇವಸ್ಥಾನದ ಮುಂಭಾಗದಿAದ ಆರಂಭವಾಗಲಿರುವ ಭವ್ಯ ಮೆರವಣಿಗೆ ನಗರದ ಫೌಂಟೆನ್ ವೃತ್ತ, ಅಶೋಕ ರಸ್ತೆ, ಚರ್ಚ್ ಸರ್ಕಲ್, ದೇವರಾಜ ಪೊಲೀಸ್ ಠಾಣೆ ವೃತ್ತ,…

Read More

ಅಂಬೇಡ್ಕರ್ ಓದುವುದು ಎಂದರೆ ನಮ್ಮ ಜೀವನವನ್ನು ನಾವೇ ಓದಿದಂತೆ; ಪ್ರೊ. ಕೃಷ್ಣನಾಯಕ

ಮೈಸೂರು: ಅಂಬೇಡ್ಕರ್ ಅವರು ಸಂವಿಧಾನವನ್ನು ರಚಿಸುವ ಸಮಯದಲ್ಲಿ ವಿವಿಧ ದೇಶಗಳ ಸಂವಿಧಾನಗಳನ್ನು ಓದಿ ನಮ್ಮ ಭಾರತೀಯ ಸಂವಿಧಾನವನ್ನು ರಚಿಸಿದರು. ಹಾಗಾಗಿ ಅವರನ್ನು ಕುರಿತು ಓದುವುದು ಎಂದರೆ ನಮ್ಮ ಜೀವನ ಕುರಿತು ನಾವೇ ಓದುಕೊಂಡAತೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಕೃಷ್ಣನಾಯಕ ತಿಳಿಸಿದರು.ಕನ್ನಡ ಮತ್ತು ಸಂಸ್ಕöÈತಿ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೆಗ್ಗಡದೇವನಕೋಟೆ ಇವರ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಸಂವಿಧಾನ ಶಿಲ್ಪಿ ಭಾರತ ರತ್ನ…

Read More

18 ವರ್ಷ ತುಂಬಿದ ಯುವ ಮತದಾರರು ಮತದಾರರ ಪಟ್ಟಿಗೆ ಸೇರ್ಪಡೆಯಾಗಿ : ಸಿ.ಎಸ್.ಕರುಣಾಕರ್

ಮೈಸೂರು: ಎಲ್ಲಾ ಮತಗಟ್ಟೆಗಳಲ್ಲಿ ಮತಗಟ್ಟೆ ಅಧಿಕಾರಿಗಳು ಸಾರ್ವಜನಿಕರಿಗೆ ಲಭ್ಯವಿದ್ದು, ನಾಗರಿಕರು ಆಕ್ಷೇಪಣೆಗಳ ಅರ್ಜಿಗಳನ್ನು ಸಲ್ಲಿಸಬಹುದು. 18 ವರ್ಷ ತುಂಬಿದ ಅರ್ಹ ಯುವ ಮತದಾರರು ಕೂಡ ಮತದಾರರ ಪಟ್ಟಿಗೆ ಸೇರ್ಪಡೆಗೊಳ್ಳಿ ಎಂದು ಸಹಾಯಕ ನಿರ್ದೇಶಕ(ಗ್ರಾ.ಉ) ಸಿ.ಎಸ್.ಕರುಣಾಕರ್ ತಿಳಿಸಿದರು.ಜಿಲ್ಲಾ ಹಾಗೂ ತಾಲ್ಲೂಕು ಸ್ವೀಪ್ ವತಿಯಿಂದ ಶನಿವಾರ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ಎಸ್ ಐಆರ್ ಭಾಗವಾಗಿ ನಾಗರಿಕರು ತಮ್ಮ ಮತದಾರರ ಗುರುತಿನ…

Read More

ಹಾನಿಗೊಳಗಾದ ಧಾರ್ಮಿಕ ವಿಗ್ರಹಗಳು ಹಾಗೂ ಭಾವಚಿತ್ರಗಳನ್ನು ನಿರ್ವಹಿಸುವ ಸೇವ್ ಹಿಂದೂ ಟೆಂಪಲ್ಸ್ ಗೆ ಸಂಸದ ಯದುವೀರ್ ಒಡೆಯರ್ ಚಾಲನೆ

ಮೈಸೂರು; ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆಯ ಅಂಗವಾಗಿ ನಡೆಯುತ್ತಿರುವ ಸೇವಾ ಸಂಕಲ್ಪ ಕಾರ್ಯಕ್ರಮದ ಭಾಗವಾಗಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಸೇವ್ ಹಿಂದೂ ಟೆಂಪಲ್ಸ್ ವತಿಯಿಂದ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿ, ಹಾನಿಗೊಳಗಾದ ಧಾರ್ಮಿಕ ವಿಗ್ರಹಗಳು ಹಾಗೂ ದೇವರ ಭಾವಚಿತ್ರಗಳನ್ನು ಗೌರವಯುತವಾಗಿ ಸಂಗ್ರಹಿಸಿ ನಿರ್ವಹಿಸುವ ವಿಶೇಷ ಉಪಕ್ರಮಕ್ಕೆ ಚಾಲನೆ ನೀಡಿದರು.ಮನೆಗಳು ಹಾಗೂ ದೇವಾಲಯಗಳಲ್ಲಿ ಪೂಜೆಗೆ ಬಳಸಲಾಗುತ್ತಿದ್ದ ಹಾನಿಗೊಳಗಾದ, ಮುರಿದ, ಹಳೆಯ ಅಥವಾ ಇನ್ನು ಮುಂದೆ ಪೂಜಿಸಲು ಸಾಧ್ಯವಾಗದ ಧಾರ್ಮಿಕ ವಿಗ್ರಹಗಳು ಹಾಗೂ ದೇವರ…

Read More