ನಗರ ಸ್ಥಳೀಯ ಸಂಸ್ಥೆಗಳು ಸಂಪನ್ಮೂಲ ಕ್ರೋಢೀಕರಣಕ್ಕೆ ಹೆಚ್ಚು ಒತ್ತು ನೀಡಬೇಕು : ಸಚಿವ ಹೆಚ್.ಸಿ.ಬಾಲಕೃಷ್ಣ
ಮೈಸೂರು: ರಾಜ್ಯದ ಜನಸಂಖ್ಯೆಯಲ್ಲಿ ಅಂದಾಜು ಶೇ ೪೦ ರಷ್ಟು ಜನ ನಗರ ಪ್ರದೇಶದಲ್ಲಿ ವಾಸವಾಗಿದ್ದು, ನಗರ ಪ್ರದೇಶಗಳ ಅಭಿವೃದ್ಧಿಗೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಶೇ ೩೦ ರಷ್ಟು ಅನುದಾನ ದೊರಕುತ್ತದೆ, ಉಳಿದ ಹಣವನ್ನು ಕ್ರೋಢೀಕರಿಸಬೇಕಿರುತ್ತದೆ. ಈ ಹಿನ್ನಲೆಯಲ್ಲಿ ಸಂಪನ್ಮೂಲ ಕ್ರೋಢೀಕರಣಕ್ಕೆ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹೆಚ್ಚು ಒತ್ತು ನೀಡಬೇಕು ಎಂದು ಪೌರಾಡಳಿತ ಸಚಿವ ಹೆಚ್.ಸಿ ಬಾಲಕೃಷ್ಣ ತಿಳಿಸಿದರು.ಮಂಗಳವಾರ ಮೈಸೂರಿನ ಹುಣಸೂರು ರಸ್ತೆಯಲ್ಲಿರುವ ಮೈಸೂರು ವಿಭಾಗ ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಹಾಸನ ಹಾಗೂ ಮಂಡ್ಯ…