Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕಠಿಣ ಪರಿಶ್ರಮದಿಂದ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಿ; ಶಾಸಕ ಹರೀಶ್‌ಗೌಡ

ಮೈಸೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಠಿಣ ಅಭ್ಯಾಸ ಮತ್ತು ಪರಿಶ್ರಮದಿಂದ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ಹುಣಸೂರು ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದರು.ಮೈಸೂರಿನ ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಿದ್ದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಹಿರಿಯ ಪತ್ರಕರ್ತರಿಗೆ ಅಭಿನಂದನೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಠ್ಯ ಅಭ್ಯಾಸದೊಂದಿಗೆ ಲೋಕಜ್ಞಾನವನ್ನು ವಿದ್ಯಾರ್ಥಿಗಳು ಗಳಿಸಬೇಕು. ಯಾವ ವಿದ್ಯಾರ್ಥಿ ಸಾಮಾನ್ಯ ಜ್ಞಾನವನ್ನು ಸಂಪಾದಿಸುವುದಿಲ್ಲವೋ, ಆತ…

Read More

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಹರಕೆ ತೀರಿಸಿದ ಅಭಿಮಾನಿಗಳು

ಮೈಸೂರು; ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಆಯ್ಕೆಯಾದ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ಡಿಕೆ ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಭಾನುವಾರ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಹರಕೆ ತೀರಿಸಲಾಯಿತು.ಚಾಮುಂಡಿ ಬೆಟ್ಟದಲ್ಲಿ ಡಿಕೆ ಶಿವಕುಮಾರ್ ಭಾವಚಿತ್ರ ಹಿಡಿದು 101 ತೆಂಗಿನಕಾಯಿ ಹೊಡೆದು ನಂತರ ಚಾಮುಂಡಮ್ಮನ ತೇರು ಸೇವೆ ನೆರೆವೇರಿಸುವ ಮೂಲಕ ಅಭಿಮಾನಿಗಳು ಹರಕೆ ತೀರಿಸಿದರು,ಆರು ತಿಂಗಳ ಹಿಂದೆ ಡಿಕೆ ಶಿವಕುಮಾರ್ ರವರು ಮುಖ್ಯಮಂತ್ರಿ ಆಗಲಿ ಎಂದು ಅಭಿಮಾನಿಗಳು ಚಾಮುಂಡಮ್ಮನ ಮೊರೆ ಹೋಗಿ, ಹರಕೆ ಮಾಡಿಕೊಂಡಿದ್ದರು, ಇಂದು ಭಾನುವಾರ ಚಾಮುಂಡಿ ಬೆಟ್ಟದಲ್ಲಿ ಹರಕೆ…

Read More

ಶ್ರೀಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶುಕವನ’ ತಾತ್ಕಾಲಿಕ ಬಂದ್

ಮೈಸೂರು: ನಗರದ ಪ್ರಸಿದ್ಧ ಪ್ರವಾಸಿ ಆಕರ್ಷಣೆಗಳಲ್ಲೊಂದಾದ ಅವಧೂತ ದತ್ತ ಪೀಠದ ಗಿಳಿಗಳ ಪುನರ್ವಸತಿ ಕೇಂದ್ರಶುಕವನ’ವು ಜೂನ್ 1 ರಿಂದ ಮುಂದಿನ ಸೂಚನೆಯವರೆಗೆ ತಾತ್ಕಾಲಿಕವಾಗಿ ಮುಚ್ಚಲ್ಪಡಲಿದೆ ಎಂದು ದತ್ತ ಪೀಠದ ಆಡಳಿತ ಮಂಡಳಿ ತಿಳಿಸಿದೆ.ಅಭಿವೃದ್ಧಿ ಹಾಗೂ ನವೀಕರಣ ಕಾಮಗಾರಿಗಳ ಹಿನ್ನೆಲೆಯಲ್ಲಿ ಶುಕವನಕ್ಕೆ ಸಾರ್ವಜನಿಕರ ಪ್ರವೇಶವನ್ನು ಸದ್ಯಕ್ಕೆ ನಿರ್ಬಂಧಿಸಲಾಗುತ್ತಿದೆ .ಶುಕವನ ಮುಚ್ಚಲ್ಪಟ್ಟಿದ್ದರೂ, ಅದಕ್ಕೆ ಹೊಂದಿಕೊAಡAತಿರುವ ವಿಶ್ವವಿಖ್ಯಾತ ಬೋನ್ಸಾಯ್ ಉದ್ಯಾನವನ ಮತ್ತು ವಿಶ್ವಂ ವಸ್ತು ಸಂಗ್ರಹಾಲಯಗಳು ಎಂದಿನAತೆ ಕಾರ್ಯನಿರ್ವಹಿಸಲಿವೆ. ಪ್ರವಾಸಿಗರು ಮತ್ತು ಸಾರ್ವಜನಿಕರು ಎಂದಿನAತೆ ಈ ಎರಡು ಸ್ಥಳಗಳಿಗೆ ಭೇಟಿ ನೀಡಬಹುದಾಗಿದೆ…

Read More

ಅಂಬಾವಿಲಾಸ ಅರಮನೆ ಮೈದಾನದಲ್ಲಿ ನೂರಾರು ಮಂದಿ ಯೋಗಪಟುಗಳಿಂದ ಯೋಗಾಭ್ಯಾಸ

ಮೈಸೂರು ; ವಿಶ್ವ ಯೋಗ ದಿನದಂದು ಅರಮನೆ ನಗರಿ, ಯೋಗ ನಗರಿ ಎಂದು ಹೆಸರಾಗಿರುವ ಮೈಸೂರು ನಗರದ ವಿವಿಧೆಡೆ 1.20 ಲಕ್ಷ ಜನ ಏಕಕಾಲಕ್ಕೆ ಯೋಗಾಭ್ಯಾಸ ಮಾಡುವ ಮಹಾಸಂಕಲ್ಪದೊAದಿಗೆ ಭಾನುವಾರ ಸಾಮೂಹಿಕ ಯೋಗಾಭ್ಯಾಸ ಮಾಡಲಾಯಿತು.ಯೋಗ ಫೆಡರೇಷನ್ ಆಫ್ ಮೈಸೂರು ವತಿಯಿಂದ ನಗರದ ಅಂಬಾವಿಲಾಸ ಅರಮನೆ ಮುಂಗಾದ ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಾಸಂಕಲ್ಪ ದಿನಸ್ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಯೋಗಪಟುಗಳು ಸಾಮೂಹಿಕ ಯೋಗ್ಯಾಭ್ಯಾಸ ಮಾಡಿದರು.ಆಯುಷ್ ಸಚಿವಾಲಯದ ಸಾಮಾನ್ಯ ಯೋಗ ಶಿಷ್ಟಾಚಾರದ ಪ್ರಕಾರ, 45 ನಿಮಿಷಗಳ ಯೋಗಾಭ್ಯಾಸ ಮಾಡಲಾಯಿತು.ಪ್ರಾರ್ಥನೆ, ಚಾಲನಾ ಕ್ರಿಯೆಗಳ…

Read More

ಅಂಬಾವಿಲಾಸ ಅರಮನೆ ಮೈದಾನದಲ್ಲಿ ನೂರಾರು ಮಂದಿ ಯೋಗಪಟುಗಳಿಂದ ಯೋಗಾಭ್ಯಾಸ

ಮೈಸೂರು ; ವಿಶ್ವ ಯೋಗ ದಿನದಂದು ಅರಮನೆ ನಗರಿ, ಯೋಗ ನಗರಿ ಎಂದು ಹೆಸರಾಗಿರುವ ಮೈಸೂರು ನಗರದ ವಿವಿಧೆಡೆ 1.20 ಲಕ್ಷ ಜನ ಏಕಕಾಲಕ್ಕೆ ಯೋಗಾಭ್ಯಾಸ ಮಾಡುವ ಮಹಾಸಂಕಲ್ಪದೊAದಿಗೆ ಭಾನುವಾರ ಸಾಮೂಹಿಕ ಯೋಗಾಭ್ಯಾಸ ಮಾಡಲಾಯಿತು.ಯೋಗ ಫೆಡರೇಷನ್ ಆಫ್ ಮೈಸೂರು ವತಿಯಿಂದ ನಗರದ ಅಂಬಾವಿಲಾಸ ಅರಮನೆ ಮುಂಗಾದ ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಾಸಂಕಲ್ಪ ದಿನಸ್ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಯೋಗಪಟುಗಳು ಸಾಮೂಹಿಕ ಯೋಗ್ಯಾಭ್ಯಾಸ ಮಾಡಿದರು.ಆಯುಷ್ ಸಚಿವಾಲಯದ ಸಾಮಾನ್ಯ ಯೋಗ ಶಿಷ್ಟಾಚಾರದ ಪ್ರಕಾರ, 45 ನಿಮಿಷಗಳ ಯೋಗಾಭ್ಯಾಸ ಮಾಡಲಾಯಿತು.ಪ್ರಾರ್ಥನೆ, ಚಾಲನಾ ಕ್ರಿಯೆಗಳ…

Read More

ಜೂನ್ 3 ರಂದು ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ಸ್ವೀಕಾರ

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಜೂನ್ 3 ರಂದು ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.ಶನಿವಾರ ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗಪಕ್ಷದ ಸಭೆಯಲ್ಲಿ ಡಿಕೆ ಶಿವಕುಮಾರ್ ಅವರ ಹೆಸರನ್ನ ಹಂಗಾಮಿ ಸಿಎಂ ಸಿದ್ದರಾಮಯ್ಯ ಪ್ರಸ್ತಾಪಿಸಿದರು. ಸಿದ್ದರಾಮಯ್ಯ ಪ್ರಸ್ತಾಪಕ್ಕೆ ಹಿರಿಯ ಶಾಸಕರು ಅನುಮೋದನೆ ನೀಡಿದರು.ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಲು ಎಲ್ಲಾ ಶಾಸಕರು ಒಪ್ಪಿಗೆ ಸೂಚಿಸಿದ್ದು, ಈ ಮೂಲಕ ಸಿಎಲ್ ಪಿ ನಾಯಕರಾಗಿ ಆಯ್ಕೆಯಾಗಿದ್ದಾರೆ. ಸಿಎಲ್‌ಪಿ ನಾಯಕನಾಗಿ ಆಯ್ಕೆಯಾದ ಬಳಿಕ…

Read More

ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಆಗ್ರಹ

ಮೈಸೂರು; ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ನಾಯಕ ಸಮಾಜದ ಪ್ರಭಾವಿ ನಾಯಕರಾದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಎಸ್.ಚಿಕ್ಕಮಾದು ಅಭಿಮಾನ ಬಳಗದ ಅಧ್ಯಕ್ಷ ಕ್ಯಾತನಹಳ್ಳಿ ನಾಗರಾಜು ಆಗ್ರಹಿಸಿದ್ದಾರೆ.ಶನಿವಾರ ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಮತ್ತು ಹಾಸನ ಜಿಲ್ಲೆಯಲ್ಲಿ ನಾಯಕ ಸಮಾಜದ ಸುಮಾರು 6 ಲಕ್ಷ ಮತದಾರರು ಇದ್ದು, ಈ ಭಾಗದಲ್ಲಿ ಇದುವರೆಗೂ ಸಚಿವ ಸಾ ಈ ಸಮಾಜಕ್ಕೆ ನೀಡಿಲ್ಲ. ಹಾಗಾಗಿ ಈ ಭಾಗದ…

Read More

ಮೇ 31ರಂದು ಅರಮನೆ ಅಂಗಳದಲ್ಲಿ ಯೋಗಾಭ್ಯಾಸ

ಮೈಸೂರು: ಮೈಸೂರು ಯೋಗ ಫೆಡರೇಷನ್ ವತಿಯಿಂದ 12ನೇ ಅಂತಾರಾಷ್ಟಿçÃಯ ಯೋಗ ದಿನಾಚರಣೆ ಅಂಗವಾಗಿ ಮೇ 31ರಂದು ನಗರದ ಅರಮನೆ ಆವರಣದಲ್ಲಿ ಯೋಗಾಭ್ಯಾಸ ಹಾಗೂ ಮಹಾ ಸಂಕಲ್ಪ ದಿವಸ್ ಆಯೋಜಿಸಲಾಗಿದೆ ಎಂದು ಜಿಎಸ್‌ಎಸ್ ಸಮೂಹ ಸಂಸ್ಥೆಗಳ ಮುಖ್ಯಸ್ಥ ಡಿ.ಶ್ರೀಹರಿ ದ್ವಾರಕನಾಥ್ ತಿಳಿಸಿದರು.ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಅಂದು ಬೆಳಗ್ಗೆ 5.30ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಸುಮಾರು ಸಾವಿರ ಮಂದಿ ಯೋಗಾಸಕ್ತರು ಪಾಲ್ಗೊಳ್ಳುವರು. ಇದೇ ವೇಳೆ ನಗರದ ವಿವಿಧ ಅಪಾರ್ಟ್ಮೆಂಟ್, ಶಾಲಾ ಕಾಲೇಜು, ಉದ್ಯಾನಗಳು ಸೇರಿದಂತೆ 120…

Read More

ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯರಿಗೆ ಡಿಸಿಎಂ ಸ್ಥಾನ ನೀಡಲು ಸಂಘಟನೆಗಳ ಆಗ್ರಹ

ಮೈಸೂರು: ನಿರ್ಗಮಿತ ಸಿಎಂ ಸಿದ್ದರಾಮಯ್ಯನವರ ಪುತ್ರರಾದ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಮತ್ತು ಅಹಿಂದ ಮೈಸೂರು ಸಂಘಟನೆಗಳು ಕಾಂಗ್ರೆಸ್ ನಾಯಕರನ್ನು ಒತ್ತಾಯಿಸಿದರು.ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಕೆಪಿಸಿಸಿ ಹಾಗೂ ಎಐಸಿಸಿಗೆ ರವಾನಿಸಲು ತೀರ್ಮಾನಿಸಲಾಯಿತು.ಶನಿವಾರ ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ನಡೆದ ಸಭೆಯಲ್ಲಿ, ‘ಅಹಿಂದ ಸಮಯದಾಯದ ಹಿತರಕಕ್ಷಣೆಗೆ, ಪಕ್ಷದ ಹಿತದೃಷ್ಟಿಯಿಂದ ಯತೀಂದ್ರ ಅವರಿಗೆ ಡಿಸಿಎಂ ಸ್ಥಾನ ಕೊಡಬೇಕು. ಸೂಕ್ಷ÷್ಮ ಸಂವೇದನೆಯುಳ್ಳ ವಿದ್ಯಾವಂತ, ಪ್ರಜ್ಞಾವಂತ ಹಾಗೂ ಸಾಮಾಜಿಕ…

Read More

ಗಣಪತಿ ಶ್ರೀಗಳ 84ನೇ ಜನ್ಮದಿನೋತ್ಸವ ಪ್ರಯುಕ್ತ ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರಿಗೆ ವಿವಿಧ ನೆರವು ವಿತರಣೆ

ಮೈಸೂರು: ಅವಧೂತ ದತ್ತ ಪೀಠದ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ¥ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 84ನೇ ಜನ್ಮದಿನೋತ್ಸವವನ್ನು ಭಾಗವಾಗಿ ಶನಿವಾರ ಆಶ್ರಮದ ವತಿಯಿಂದ ಸಮಾಜದ ವಿಶೇಷಚೇತನರು ಹಾಗೂ ಹಿರಿಯ ನಾಗರಿಕರಿಗೆ ವಿವಿಧ ನೆರವು ನೀಡುವುದರ ಜತೆಗೆ ವೈದ್ಯಕೀಯ ಉಪಕರಣಗಳನ್ನು ಶ್ರೀಗಳು ವಿತರಿಸಿದರು.ಮೈಸೂರು ವಿಭಾಗದ ವಿಶೇಷಚೇತನರು ಮತ್ತು ಹಿರಿಯ ನಾಗರಿಕರ ಇಲಾಖೆ, ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಹಾಗೂ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಂಸ್ಥೆಗಳ ಜಂಟಿ ಸಲಹೆ ಮತ್ತು ಸಹಯೋಗದೊಂದಿಗೆ ಅರ್ಹ…

Read More