ಒಗ್ಗಟ್ಟಿನಿಂದ ಇದ್ದರೆ ಬಾಂಧವ್ಯ ವೃದ್ಧಿ: ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ. ರಾಜೀವ್
ಮೈಸೂರು: ಬ್ರಾಹ್ಮಣ ಸಮುದಾಯವು ಸಂಘಟಿತವಾಗಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದರೆ ಮಾತ್ರ, ಸಮಾಜದ ಬಾಂಧವ್ಯ ಮತ್ತಷ್ಟು ಗಟ್ಟಿಯಾಗಲು ಸಾಧ್ಯ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್ ತಿಳಿಸಿದರು.ಮೈಸೂರಿನ ದಟ್ಟಗಳ್ಳಿಯ ಸಾ.ರಾ.ಕನ್ವೆನ್ಸನ್ ಹಾಲ್ನಲ್ಲಿ ನಡೆದ ಮೂಗೂರು ಕರ್ನಾಟಕ ಬ್ರಾಹ್ಮಣ ಸಂಘದ ಶತಮಾನೋತ್ಸವ ಸಂಭ್ರಮ, ವಿವಿಧ ಕ್ಷೇತ್ರಗಳ ಸಾಧಕರ ಸನ್ಮಾನ, ಪ್ರತಿಭಾವಂತ ವಿದ್ಯಾರ್ಥಿಗಳ ಪುರ ಸ್ಥಾರ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಮುದಾಯದ ಪ್ರಗತಿಗೆ ಆಂತರಿಕ ಒಗ್ಗಟ್ಟು ಮತ್ತು ಸಂಘಟನಾ ಶಕ್ತಿ ಪ್ರಮುಖ ಆಧಾರಗಳಾಗಿವೆ….