ಶ್ರೀಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶುಕವನ’ ತಾತ್ಕಾಲಿಕ ಬಂದ್
ಮೈಸೂರು: ನಗರದ ಪ್ರಸಿದ್ಧ ಪ್ರವಾಸಿ ಆಕರ್ಷಣೆಗಳಲ್ಲೊಂದಾದ ಅವಧೂತ ದತ್ತ ಪೀಠದ ಗಿಳಿಗಳ ಪುನರ್ವಸತಿ ಕೇಂದ್ರಶುಕವನ’ವು ಜೂನ್ 1 ರಿಂದ ಮುಂದಿನ ಸೂಚನೆಯವರೆಗೆ ತಾತ್ಕಾಲಿಕವಾಗಿ ಮುಚ್ಚಲ್ಪಡಲಿದೆ ಎಂದು ದತ್ತ ಪೀಠದ ಆಡಳಿತ ಮಂಡಳಿ ತಿಳಿಸಿದೆ.ಅಭಿವೃದ್ಧಿ ಹಾಗೂ ನವೀಕರಣ ಕಾಮಗಾರಿಗಳ ಹಿನ್ನೆಲೆಯಲ್ಲಿ ಶುಕವನಕ್ಕೆ ಸಾರ್ವಜನಿಕರ ಪ್ರವೇಶವನ್ನು ಸದ್ಯಕ್ಕೆ ನಿರ್ಬಂಧಿಸಲಾಗುತ್ತಿದೆ .ಶುಕವನ ಮುಚ್ಚಲ್ಪಟ್ಟಿದ್ದರೂ, ಅದಕ್ಕೆ ಹೊಂದಿಕೊAಡAತಿರುವ ವಿಶ್ವವಿಖ್ಯಾತ ಬೋನ್ಸಾಯ್ ಉದ್ಯಾನವನ ಮತ್ತು ವಿಶ್ವಂ ವಸ್ತು ಸಂಗ್ರಹಾಲಯಗಳು ಎಂದಿನAತೆ ಕಾರ್ಯನಿರ್ವಹಿಸಲಿವೆ. ಪ್ರವಾಸಿಗರು ಮತ್ತು ಸಾರ್ವಜನಿಕರು ಎಂದಿನAತೆ ಈ ಎರಡು ಸ್ಥಳಗಳಿಗೆ ಭೇಟಿ ನೀಡಬಹುದಾಗಿದೆ…