Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ನಾವು ಕಂಬಳ ಕ್ರೀಡೆಗೆ ವಿರುದ್ಧವಿಲ್ಲ, ಆದರೆ ನಾಡ ಹಬ್ಬ ಮೈಸೂರು ದಸರಾ ವೇಳೆ ಕಂಬಳ ಕ್ರೀಡೋತ್ಸವ ನಡೆಸುವುದು ಬೇಡ: ಸಂಸದ ಯದುವೀರ್

ಮೈಸೂರು: ನಾವು ಕಂಬಳ ಕ್ರೀಡೆಗೆ ವಿರುದ್ಧವಿಲ್ಲ. ಆದರೆ ನಾಡ ಹಬ್ಬ ಮೈಸೂರು ದಸರಾ ವೇಳೆ ಕಂಬಳ ಕ್ರೀಡೋತ್ಸವ ನಡೆಸುವುದು ಬೇಡ ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇನೆ ಎಂದು ಮೈಸೂರಿನ ರಾಜವಂಶಸ್ಥರೂ ಆದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.ಶನಿವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವ ಪ್ರಸಿದ್ಧಿಯಾಗಿರುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆ ನಡೆಸುವುದು ಬೇಡ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲೇ ಸ್ಪಷ್ಟವಾಗಿ ಹೇಳಿದ್ದೇನೆ ಎಂದರು.ಕAಬಳ ವಿಚಾರದಲ್ಲಿ ಶಾಸಕ…

Read More

ಕಾಯಕ ಸಮಾಜಗಳನ್ನ ರಾಜ್ಯ ಸರ್ಕಾರ ನಿರ್ಲಕ್ಷ ಮಾಡಿದೆ; ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ

ಮೈಸೂರು; ಅಹಿಂದ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದವರು ಸಣ್ಣ ಸಣ್ಣ ನಿರ್ಲಕ್ಷ÷್ಯ ಮಾಡಿದ್ದಾರೆ ತಾತ್ಸಾರ ಮಾಡಿದ್ದಾರೆ ಕಾಯಕ ಸಮಾಜಗಳನ್ನ ಸರ್ಕಾರ ನಿರ್ಲಕ್ಷ ಮಾಡಿದೆ ಅವರ ಅಭಿವೃದ್ಧಿಗೆ ಯಾವುದೇ ಯೋಜನೆಗಳನ್ನು ಜಾರಿಗೆ ತಂದಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶನಿವಾರ ನಗರದ ಜೆ.ಕೆ.ಮೈದಾನದಲ್ಲಿ ಕಾಯಕ ಸಮುದಾಯಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ವಿಧಾನ ಪರಿಷತ್ ಸದಸ್ಯ ಆರ್.ರಘುಗೆ ಅಭಿನಂದನೆ ಹಾಗೂ ಬಿಜೆಪಿಗೆ ಕೃತಜ್ಞತಾ ಸಮರ್ಪಣಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಾಯಕ ಸಮಾಜದ ಯೋಜನೆಗಳನ್ನು…

Read More

ಹಣೆಯ ಮೇಲೆ ವಿಭೂತಿ ಪ್ರೀತಿ,ಹೃದಯದ ಒಳಗೆ ಬಾಂಗ್ಲಾವಲಸಿಗರ ಪ್ರೀತಿ: ಡಿಕೆಶಿಗೆ ಕುಟುಕುಸಿಎಂ ಕೈಗೆ ಧಾರ,ಕೊರಳಿಗೆ ಹಾರ ಹಾಕಿಕೊಂಡಾಕ್ಷಣ ಅವರನ್ನು ಹಿಂದೂ ಪರ ಎಂದು ನಂಬಲಾಗದು

ಮೈಸೂರು: ಡಿ.ಕೆ.ಶಿವಕುಮಾರ್ ಟೆಂಡರ್ ಸಿಎಂ. ಸಿದ್ದರಾಮಯ್ಯರ ನಂತರ ಟೆಂಡರ್ ಆಗಿಯೇ ಮುಖ್ಯಮಂತ್ರಿ ಸ್ಥಾನಕ್ಕೆ ಬಂದಿದ್ದಾರೆ. 3ರಿಂದ 4ಸಾವಿರ ಕೋಟಿ ಟೆಂಡರ್‌ಗೆ ಅನುಮೋದನೆ ಪಡೆದುಕೊಂಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದರು. ನಗರದ ಜೆ.ಕೆ.ಮೈದಾನದಲ್ಲಿ ಕಾಯಕ ಸಮುದಾಯಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ವಿಧಾನ ಪರಿಷತ್ ಸದಸ್ಯ ಆರ್.ರಘುಗೆ ಅಭಿನಂದನೆ ಹಾಗೂ ಬಿಜೆಪಿಗೆ ಕೃತಜ್ಞತಾ ಸಮರ್ಪಣಾ ಸವಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ ಮೂರು ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಸಿದ್ದರಾಮಯ್ಯರು ಏನೂ ಅಭಿವೃದ್ಧಿ ಕೆಲಸ ಮಾಡಿಲ್ಲ. ಮುಡಾದಲ್ಲಿ…

Read More

ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ; ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಮೈಸೂರು: ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.ಶನಿವಾರ ನಗರದ ಜೆ.ಕೆ.ಮೈದಾನದಲ್ಲಿ ಕಾಯಕ ಸಮುದಾಯಗಳ ಒಕ್ಕೂಟದ ವತಿಯಿಂದ ಆಯೋಜಿಸಿದ್ದ ವಿಧಾನ ಪರಿಷತ್ ಸದಸ್ಯ ಆರ್.ರಘುಗೆ ಅಭಿನಂದನೆ ಹಾಗೂ ಬಿಜೆಪಿಗೆ ಕೃತಜ್ಞತಾ ಸಮರ್ಪಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಸಮಾನತೆ ದೂರ ಮಾಡಿ ಸಮ ಸಮಾಜದ ನಿರ್ವಾಣ ಕನಸನ್ನು ಬಸವಣ್ಣ ಕಂಡಿದ್ದರು. ಆದರೆ, ಕಾಯುವುದೇ ಕೈಲಾಸ ಎಂದು ಅಹಿಂದ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದವರು, ಸಮುದಾಯಗಳ ನಡುವೆ ವಿಷಬೀಜ ಬಿತ್ತುವ…

Read More

ಮಾದಕ ವಸ್ತುಗಳ ವ್ಯಸನವು ಸಮಾಜದ ಒಂದು ದೊಡ್ಡ ಪಿಡುಗಾಗಿದೆ : ಎ ಎಸ್ ಐ  ಮಂಜುನಾಥ್ 

ಪಿರಿಯಾಪಟ್ಟಣ :ಮಾದಕ ವಸ್ತುಗಳ ವ್ಯಸನವು ಸಮಾಜದ ಒಂದು ದೊಡ್ಡ ಪಿಡುಗಾಗಿದೆ ಎಂದು ಬೆಟ್ಟದಪುರ ಪೊಲೀಸ್ ಠಾಣೆಯ ಎಎಸ್ಐ ಮಂಜುನಾಥ್ ತಿಳಿಸಿದರು. ತಾಲೂಕಿನ ಬೆಟ್ಟದಪುರ ಎಸ್ ಎಂ ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಬೆಟ್ಟದಪುರ ಪೊಲೀಸ್ ಠಾಣೆ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಒಮ್ಮೆ ಮಾದಕ ವಸ್ತುಗಳ ಬಳಕೆ ಮಾಡುವುದಕ್ಕೆ ಹೋದರೆ ಮುಂದಿನ…

Read More

ಎನ್‌ಸಿಸಿ ಕೆಡೆಟ್‌ಗಳಿಗಾಗಿ ಸಂಚಾರ ಜಾಗೃತಿ

ಮೈಸೂರು; ನಗರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಸುಮಾರು ೬೦೦ ಎನ್‌ಸಿಸಿ ಕೆಡೆಟ್‌ಗಳಿಗಾಗಿ ಸಂಚಾರ ಜಾಗೃತಿ ಮತ್ತು ಮಾದಕ ವಸ್ತು ಬಳಕೆ ವಿರುದ್ಧ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.ಈ ಕಾರ್ಯಕ್ರಮದಲ್ಲಿ ಸಂಚಾರ ನಿಯಮಗಳು ಮತ್ತು ನಿಬಂಧನೆಗಳನ್ನು ಪಾಲಿಸುವ ಬಗ್ಗೆ ಅರಿವು ಮೂಡಿಸಲಾಯಿತು. ಮಾದಕವಸ್ತುಗಳ ಬಳಕೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲಾಗುವ ಹಾನಿಕಾರಕ ಪರಿಣಾಮಗಳು. ಮತ್ತು ರಸ್ತೆ ಸುರಕ್ಷತೆಯನ್ನು ಉತ್ತೇಜಿಸುವಲ್ಲಿ ಮತ್ತು ಮಾದಕ ಮುಕ್ತ ಸಮಾಜವನ್ನು ನಿರ್ಮಿಸುವಲ್ಲಿ ಶಿಸ್ತಿನ ನಾಗರಿಕರಾಗಿ ಎನ್‌ಸಿಸಿ ಕೆಡೆಟ್‌ಗಳ ಪಾತ್ರ. ಹಾಗು ಸಮಾಜದಲ್ಲಿ ಈ…

Read More

ಅಟಲ್ ಪಿಂಚಣಿ ಯೋಜನೆ ಕಾರ್ಯಾಗಾರ ಯಶಸ್ವಿ

ಮೈಸೂರು: ಅಟಲ್ ಪಿಂಚಣಿ ಯೋಜನೆ(ಎಪಿವೈ) ಪ್ರಚಾರ ಮತ್ತು ರಾಜ್ಯಮಟ್ಟದ ಕಾರ್ಯತಂತ್ರ ಪರಿಶೀಲನಾ ಸಭೆ ಸಂಪನ್ನವಾಯಿತು.ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ(ಪಿಎಫ್‌ಆರ್ಡಿಎ), ಕರ್ನಾಟಕ ರಾಜ್ಯಮಟ್ಟದ ಬ್ಯಾಂಕರ್ಗಳ ಸಮಿತಿ (ಎಸ್‌ಎಲ್ಬಿಸಿ) ಮತ್ತು ಲೀಡ್ ಬ್ಯಾಂಕ್(ಭಾರತೀಯ ಸ್ಟೇಟ್ ಬ್ಯಾಂಕ್) ಸಂಯುಕ್ತಾಶ್ರಯದಲ್ಲಿ ಖಾಸಗಿ ಹೋಟೆಲ್‌ನಲ್ಲಿ ಅಟಲ್ ಪೆನ್ಶನ್ ಯೋಜನೆ ಕುರಿತು ಒಂದು ದಿನದ ಕಾರ್ಯಾಗಾರ ಏರ್ಪಡಿಸಲಾಗಿತ್ತು.ವಿವಿಧ ಬ್ಯಾಂಕ್ ಗಳ ಪ್ರತಿನಿಧಿಗಳು ಹಾಗೂ ರಾಜ್ಯದ ಎಲ್ಲಾ ಜಿಲ್ಲೆಗಳ ಲೀಡ್ ಬ್ಯಾಂಕ್ ವ್ಯವಸ್ಥಾಪಕರ ಕಾರ್ಯಕ್ಷಮತೆ ಕುರಿತು ಸುದೀರ್ಘ ಸಂವಾದ ಮತ್ತು ಪ್ರಗತಿ ಪರಿಶೀಲನೆ ನಡೆಯಿತು.ಕರ್ನಾಟಕ…

Read More

ರಾಜ್ಯ ಮಟ್ಟದ ಯೋಗಾಸನ ಚಾಂಪಿಯನ್‌ಶಿಪ್‌ನಲ್ಲಿ ವಿಜಯ ವಿಠಲ ವಿದ್ಯಾಶಾಲೆಯ ವಿದ್ಯಾರ್ಥಿಗಳ ಸಾಧನೆ

ಮೈಸೂರು; 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ, ಜಿ.ಕೆ. ವಿನ್ಯಾಸ ಯೋಗ ಕೇಂದ್ರವು ಶ್ರೀ ಕೃಷ್ಣ ಯೋಗಸ್ ಸಹಯೋಗದೊಂದಿಗೆ ಆಯೋಜಿಸಿದ್ದ ರಾಜ್ಯ ಶಾಲಾ ಮತ್ತು ಕಾಲೇಜು ಮಟ್ಟದ ಯೋಗಾಸನ ಚಾಂಪಿಯನ್‌ಶಿಪ್-2026 ರಲ್ಲಿ ವಿಜಯ ವಿಠಲ ವಿದ್ಯಾಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ.ಈ ಚಾಂಪಿಯನ್‌ಶಿಪ್‌ನಲ್ಲಿ ವಿಜಯ ವಿಠಲ ವಿದ್ಯಾಶಾಲೆಯ ವಿದ್ಯಾರ್ಥಿಗಳು ಶ್ಲಾಘನೀಯ ಸ್ಥಾನಗಳನ್ನು ಗಳಿಸಿದ್ದಾರೆ. ಲೇಖನಾ ಎನ್. ದ್ವಿತೀಯ ಸ್ಥಾನ, ಕನಿಷ್ಕ ತೃತೀಯ ಸ್ಥಾನ, ಕನ್ನಿಕಾ ವೈ.ಎ. ಮತ್ತು ಅದಿತಿ ಸಿ. ಚತುರ್ಥ ಸ್ಥಾನ ಹಾಗೂ ಪಾವನಿ ಗೌಡ…

Read More