Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಜೆಎಸ್‌ಎಸ್ ಮೈಸೂರು ಅರ್ಬನ್ ಹಾತ್‌ನಲ್ಲಿ ಗುಜರಾತ್ ಕರಕುಶಲ ಉತ್ಸವಕ್ಕೆ ಭರ್ಜರಿ ಸ್ಪಂದನೆ

• 100ಕ್ಕೂ ಹೆಚ್ಚು ಗುಜರಾತ್ ಕರಕುಶಲ ಕಲಾವಿದರ ವೈವಿಧ್ಯಮಯ ಕಲಾಕೃತಿಗಳು ಮೈಸೂರು: ನಗರದ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿರುವ ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ ನಡೆಯುತ್ತಿರುವ ಗುಜರಾತ್ ಕರಕುಶಲ ಉತ್ಸವ 2026ಕ್ಕೆ ಸಾರ್ವಜನಿಕರಿಂದ ಭರ್ಜರಿ ಸ್ಪಂದನೆ ದೊರೆಯುತ್ತಿದ್ದು, ಉತ್ಸವ ಎಲ್ಲರ ಕಣ್ಮನ ಸೆಳೆಯುತ್ತಿದೆ.ಜುಲೈ 3ರಂದು ಆರಂಭಗೊAಡಿರುವ ಈ ಉತ್ಸವವು ಜುಲೈ 12ರವರೆಗೆ ನಡೆಯಲಿದ್ದು, ಗುಜರಾತ್‌ನ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ 100ಕ್ಕೂ ಹೆಚ್ಚು ಕರಕುಶಲ ಕಲಾವಿದರು ತಮ್ಮ ಅಪರೂಪದ ಕೈಮಗ್ಗ, ಕರಕುಶಲ ಹಾಗೂ ಸಾಂಪ್ರದಾಯಿಕ ಉತ್ಪನ್ನಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕೆ ಇಟ್ಟಿದ್ದಾರೆ.ಉತ್ಸವದಲ್ಲಿ…

Read More

ಮೈಸೂರಿನ 7 ವರ್ಷದ ಗಾಯತ್ರಿ ಎಸ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಸೇರ್ಪಡೆ

ಮೈಸೂರು: ನಗರದ ಶ್ರೀ ವಿವೇಕ ಬಾಲೋದ್ಯಾನ ಪಬ್ಲಿಕ್ ಸ್ಕೂಲ್ ನ 2ನೇ ತರಗತಿ ವಿದ್ಯಾರ್ಥಿನಿ ಗಾಯತ್ರಿ.ಎಸ್ ತಮ್ಮ ಅಸಾಧಾರಣ ಗಾಯನ ಕೌಶಲ್ಯದಿಂದ ರಾಷ್ಟ ಮಟ್ಟದ ದಾಖಲೆಯನ್ನು ನಿರ್ಮಿಸಿದ್ದಾರೆ.ಐದು ವಿಭಿನ್ನ ಪ್ರಕಾರಗಳ ಹಾಡುಗಳನ್ನು ಪ್ರದರ್ಶಿಸಿದ ಅತ್ಯಂತ ವೇಗವಾಗಿ ಪ್ರಕಾರಗಳನ್ನು ಬದಲಾಯಿಸಿದ ಕಿರಿಯ ಗಾಯಕಿ ಎಂಬ ಶೀರ್ಷಿಕೆಯಡಿ ಅವರ ಹೆಸರು ನ್ಯಾಷನಲ್ ಬುಕ್ ಆಫ್ ರೆಕಾರ್ಡ – 2026ರಲ್ಲಿ ದಾಖಲಾಗಿದೆ.ಗಾಯತ್ರಿ ಒಂದೇ ಪ್ರದರ್ಶನದಲ್ಲಿ 25ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ವಿಶೇಷವೆಂದರೆ ಒಂದು ಸೆಕೆಂಡ್‌ನೊಳಗೆ ಒಂದು ಪ್ರಕಾರದಿಂದ ಇನ್ನೊಂದು ಪ್ರಕಾರಕ್ಕೆ ತಕ್ಷಣವೇ…

Read More

ದಸರಾಪಾಸ್‌ಗಳನ್ನುಸಂಪೂರ್ಣವಾಗಿತಿರಸ್ಕರಿಸಿದ ಸಂಸದ ಯದುವೀರ್

* ಸಾರ್ವಜನಿಕರಿಗೆ ಪಾರದರ್ಶಕವಾಗಿ ಲಭ್ಯವಾಗುವ ವ್ಯವಸ್ಥೆಗೆ ಒತ್ತಾಯ ಬೆಂಗಳೂರು; ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಉನ್ನತ ಮಟ್ಟದ ದಸರಾ ಸಮಿತಿ ಸಭೆಯಲ್ಲಿ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭಾಗವಹಿಸಿ, ಮುಂಬರುವ ನಾಡಹಬ್ಬ ಮೈಸೂರು ದಸರಾ ಸಿದ್ಧತೆಗಳ ಕುರಿತು ತಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಮಂಡಿಸಿದರು. ಈ ಸಂದರ್ಭದಲ್ಲಿ ಸಂಸದರು ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿ, ಸಂಸದರಿಗೆ ನೀಡಲಾಗುವ ಎಲ್ಲಾ ವಿಧದ ದಸರಾ ಪಾಸ್‌ಗಳನ್ನು ತಾವು ಸ್ವೀಕರಿಸುವುದಿಲ್ಲ ಎಂದು ತಿಳಿಸಿದರು. ದಸರಾ ಮಹೋತ್ಸವವು…

Read More

ಹಿರಿಯ ಲೇಖಕಿ ಸಿ.ಎನ್.ಮುಕ್ತಾ ನಿಧನ

ಮೈಸೂರು: ಖ್ಯಾತ ಲೇಖಕಿ ಸಿ.ಎನ್.ಮುಕ್ತಾ (ಕಳ್ಳಂಬೆಳ್ಳ ನರಸಿಂಹ ಮೂರ್ತಿ ಮುಕ್ತಾ) ಶುಕ್ರವಾರ ಬೆಳಗಿನ ಜಾವ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅವರಿಗೆ 75 ವರ್ಷ ವಯಸ್ಸಾಗಿತ್ತು. ಅವಿವಾಹಿತರಾಗಿದ್ದ ಅವರಿಗೆ ಸೋದರ, ಸೋದರಿ ಇದ್ದಾರೆ. ಲೇಖಕರಾಗಿದ್ದ ನವರತ್ನರಾಮ್ ರಾವ್ ಅವರು ಇವರ ಚಿಕ್ಕಪ್ಪ.ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕಿಯಾಗಿ, ಮುಖ್ಯ ಶಿಕ್ಷಕಿಯಾಗಿ 25 ವರ್ಷಕ್ಕೂ ಅಧಿಕವಾಗಿ ವಿವಿಧೆಡೆ ಕಾರ್ಯ ನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದಿದ್ದರು. ಅವರ ಕಾದಂಬರಿಗಳಲ್ಲಿ ಸುಖದ ಸೋಪಾನ, ಕ್ಷಮಯಾ ಧರಿತ್ರಿ, ದಡ ಸೇರಿದ ನೌಕೆ, ಜೀವನಚಕ್ರ, ಅಮೃತಮಯಿ,…

Read More

ಮೈಸೂರು ವಿವಿಯ ಎಸ್.ಸಿ. ಎಸ್.ಟಿ. ಸಂಶೋಧಕರಿಗೆ ಶಿಷ್ಯವೇತನ ಬಿಕ್ಕಟ್ಟು ಬಗೆಹರಿಸಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು ; ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯವೇತನದ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಅಧಿಕಾರಿಗಳ ಸಭೆ ಜರುಗಿತು.ಸಚಿವರ ಗೃಹ ಕಛೇರಿ “ಕಾವೇರಿ”ಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದ ಸಚಿವರು, ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.ತಲಾ 58 ವಿದ್ಯಾರ್ಥಿಗಳಿಗೆ ಹಂಚಿಕೆ:ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಒಟ್ಟು…

Read More

ಕೆಎಸ್ಒಯು ಪಿರಿಯಾಪಟ್ಟಣ ಪ್ರಾದೇಶಿಕ ಕೇಂದ್ರದಲ್ಲಿ ವಿವಿಧ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

ಪಿರಿಯಾಪಟ್ಟಣ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ಸರ್ಟಿಫಿಕೇಟ್ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರಾದೇಶಿಕ ನಿರ್ದೇಶಕ ಅರುಣ್ ಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ 2026-27 ನೇ ಸಾಲಿನಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ದೂರ ಶಿಕ್ಷಣದಲ್ಲಿ ಪಡೆಯಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪಿರಿಯಾಪಟ್ಟಣ ಪ್ರಾದೇಶಿಕ ಕೇಂದ್ರದಲ್ಲಿ ವಿವಿಧ ಯುಜಿ, ಪಿಜಿ ಕೋರ್ಸ್‌ಗಳಾದ ಎಂ.ಎ., ಎಂ.ಕಾಂ, ಎಂ.ಬಿ.ಎ., ಎಂ.ಸಿ.ಎ.,…

Read More

600 ಕೋಟಿರೂಗಳನ್ನು ವಿವಿಧ ಆಯೋಗಗಳ ಹೆಸರಿನಲ್ಲಿ ಖರ್ಚು ಮಾಡಿದ್ದರೂ, ಹಿಂದುಳಿದ ಸಮುದಾಯಕ್ಕೆ ಯಾವುದೇ ನೈಜ ಪ್ರಯೋಜನ ಸಿಕ್ಕಿಲ್ಲ; ಬಿಜೆಪಿ ಸಂಸದ ಪಿ.ಸಿ.ಮೋಹನ್

ಮೈಸೂರು: ಸರ್ಕಾರ ಸುಮಾರು 600 ಕೋಟಿ ರೂ ಸಾರ್ವಜನಿಕ ಹಣವನ್ನು ವಿವಿಧ ಆಯೋಗಗಳ ಹೆಸರಿನಲ್ಲಿ ಖರ್ಚು ಮಾಡಿದ್ದರೂ, ಹಿಂದುಳಿದ ಸಮುದಾಯಕ್ಕೆ ಯಾವುದೇ ನೈಜ ಪ್ರಯೋಜನ ಸಿಕ್ಕಿಲ್ಲ ಎಂದು ಬಿಜೆಪಿ ಸಂಸದ ಪಿ.ಸಿ.ಮೋಹನ್ ಆರೋಪಿಸಿದರು.ಗುರುವಾರ ನಗರದ ಚಾಮರಾಜಪುರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕಳೆದ 12 ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ಹಾಗೂ ಸಿದ್ದರಾಮಯ್ಯ ಹಿಂದುಳಿದ ವರ್ಗಗಳಿಗೆ ನಿರಂತರ ಅನ್ಯಾಯ ಮಾಡುತ್ತಾ ಬಂದಿದ್ದಾರೆ. ಹಿಂದುಳಿದ ವರ್ಗಗಳ ಚಾಂಪಿಯನ್ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯನವರು 2013ರಲ್ಲಿ ಹಿಂದುಳಿದ ವರ್ಗಗಳ ಹೆಸರಿನಲ್ಲಿ ಹುಸಿ…

Read More

ತೆಂಗು, ಅಡಿಕೆ ಮತ್ತು ಬಾಳೆ ಬೆಳೆಗಳ ನಿರ್ವಹಣೆ’’ ಕುರಿತು ತರಬೇತಿ ಕಾರ್ಯಕ್ರಮ

ಮೈಸೂರು: ಜಿಲ್ಲಾ ಕೃಷಿ ತರಬೇತಿ ಕೇಂದ್ರ, ನಾಗನಹಳ್ಳಿ, ವತಿಯಿಂದ 2026-27ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಮೈಸೂರು ತಾಲ್ಲೂಕು ಇಲವಾಲ ಹೋಬಳಿಯ ದಡದಕಲ್ಲಹಳ್ಳಿ ಗ್ರಾಮದಲ್ಲಿ “ತೆಂಗು, ಅಡಿಕೆ ಮತ್ತು ಬಾಳೆ ಬೆಳೆಗಳ ನಿರ್ವಹಣೆ’’ ಕುರಿತು ಆಯೋಜಿಸಿದ್ದ ಒಂದು ದಿನದ ಹೊರಾಂಗಣ ತರಬೇತಿಗೆ ಕಾರ್ಯಕ್ರಮವನ್ನು ಅಧಿಕಾರಿಗಳು ಮತ್ತು ರೈತರು ಉದ್ಘಾಟಿಸಿದರು.ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಕೃಷಿ ಅಧಿಕಾರಿ ಮಂಜುಳ ಎಂ.ಬಿ. ಪ್ರಾಸ್ತಾವಿಕ ನುಡಿಯಲ್ಲಿ ಮಾತನಾಡಿ, ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ನೆಡೆಯುವ ತರಬೇತಿಗಳಲ್ಲಿ ರೈತರು ಹೆಚ್ಚು ಭಾಗವಹಿಸಿ,…

Read More

ಅಮೀರ್ ಖಾನ್ ಚಿತ್ರಗಳನ್ನು ಬಹಿಷ್ಕರಿಸಿ ಡಾ. ಹೇಮ ನಂದೀಶ್ ಒತ್ತಾಯ

ಮೈಸೂರು: ಹಿಂದೂ ಮಹಿಳೆಯರನ್ನು ಮದುವೆಚಿiÀiÁಗಿ, ಮತ್ತೆ ಕೆಲ ವರ್ಷಗಳ ನಂತರ ತಲಾಕ್ ನೀಡುವುದರೊಂದಿಗೆ, ಹಿಂದೂ ಹೆಣ್ಣುಮಕ್ಕಳನ್ನು ಸಂಪೂರ್ಣವಾಗಿ ದುರುಪಯೋಗ ಪಡಿಸಿಕೊಳ್ಳುತ್ತಿರುವ ಚಿತ್ರನಟ ಅಮೀರ್ ಖಾನ್ ಚಿತ್ರಗಳನ್ನು ಕೂಡಲೇ ಬಹಿಷ್ಕರಿಸಬೇಕು ಎಂದು ಹಿಂದೂ ಪರ ಮುಖಂಡರಾದ ಡಾ. ಹೇಮಾನಂದೀಶ್ ಒತ್ತಾಯಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಕಾಯ್ದೆ ಏಕೆ ಜಾರಿಯಾಗಬೇಕು ಎಂಬುದಕ್ಕೆ ವ್ಯವಸ್ಥಿತವಾಗಿ ಲವ್ ಜಿಹಾದ್ ಎಸಗುತ್ತಿರುವ ಆಮೀರ್ ಖಾನ್‌ನೇ ಒಂದು ದೊಡ್ಡ ಉದಾಹರಣೆ. ತಮ್ಮ ಇಸ್ಲಾಮಿನ ಕಾನೂನನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಕಂಡು…

Read More

65 ಲಕ್ಷರೂಗಳ ಯುಜಿಡಿ ಕಾಮಗಾರಿಗೆ ಶಾಸಕ ಟಿ.ಎಸ್ ಶ್ರೀವತ್ಸ ಚಾಲನೆ

ಮೈಸೂರು; ಕೆಆರ್ ಕ್ಷೇತ್ರದ ವಾರ್ಡ್ ನಂಬರ್ 62 ವ್ಯಾಪ್ತಿಯಲ್ಲಿ ಬರುವ ದೇವರಾಜ ಅರಸ್ ಕಾಲೋನಿ, ಹೊಸೂರು ಹಾಗೂ ನಾಚನಹಳ್ಳಿಪಾಳ್ಯ ಈ ಭಾಗಗಳಲ್ಲಿ ಸುಮಾರು 65 ಲಕ್ಷಗಳ ಯುಜಿಡಿ ಕಾಮಗಾರಿಗೆ ಶಾಸಕ ಟಿ.ಎಸ್ ಶ್ರೀವತ್ಸ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ನಗರ ಪಾಲಿಕೆಯ ಮಾಜಿ ಸದಸ್ಯೆ ಶಾಂತಮ್ಮ ವಡಿವೇಲು, ವಾರ್ಡ್ ಅಧ್ಯಕ್ಷ ರಾಘವೇಂದ್ರ ಎಂ. ಬಿಜೆಪಿ ಮುಖಂಡರಾದ ಎಂ ವಡಿವೇಲು, ಚಂದ್ರಣ್ಣ. ಪ್ರದೀಪ್ ಕುಮಾರ್, ಕಿಶೋರ್, ಮಹಾದೇವ, ನಾಗರಾಜು, ನವೀಂದ್ರ, ನವೀನ್ ಕುಮಾರ್, ಸಿದ್ದರಾಜು, ಮಹದೇವ,…

Read More