Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಇಲವಾಲದ ಕರ್ನಾಟಕ ಪಬ್ಲಿಕ್ ಶಾಲೆಗೆ ಮಿನಿ ವಿಜ್ಞಾನ ಪ್ರಯೋಗಾಲಯ, ಡಿಜಿಟಲ್ ಸ್ಮಾರ್ಟ್ ಬೋರ್ಡ್ ಹಾಗೂ ಶೈಕ್ಷಣಿಕ ಕಿಟ್‌ಗಳ ಕೊಡುಗೆ

ಮೈಸೂರು: ಸಮರ್ಥನಂ ಟ್ರಸ್ಟ್ ಫಾರ್ ದಿ ಡಿಸೇಬಲ್ಡ್ ಹಾಗೂ ಐ.ಐ.ಎಫ್.ಎಲ್. ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ, ಸಿ.ಎಸ್.ಆರ್. ಯೋಜನೆಯಡಿ ಮೈಸೂರಿನ ಇಲವಾಲದ ಕರ್ನಾಟಕ ಪಬ್ಲಿಕ್ ಶಾಲೆಗೆ ಮಿನಿ ವಿಜ್ಞಾನ ಪ್ರಯೋಗಾಲಯ, ಡಿಜಿಟಲ್ ಸ್ಮಾರ್ಟ್ ಬೋರ್ಡ್ ಹಾಗೂ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಿಟ್‌ಗಳನ್ನು ಕೊಡುಗೆಯಾಗಿ ನೀಡಿ ಶಾಲೆಯ ಶೈಕ್ಷಣಿಕ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಲಾಯಿತು.ಕಾರ್ಯಕ್ರಮದ ಶಾಲೆಯ ಪ್ರಭಾರ ಉಪಪ್ರಾಂಶುಪಾಲ ಶಂಕರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಮರ್ಥನಂ ಟ್ರಸ್ಟ್ ಹಾಗೂ ಐ.ಐ.ಎಫ್.ಎಲ್. ಫೌಂಡೇಶನ್ ವತಿಯಿಂದ ದೊರೆತಿರುವ ಮಿನಿ ವಿಜ್ಞಾನ ಪ್ರಯೋಗಾಲಯ ಮತ್ತು ಡಿಜಿಟಲ್ ಸ್ಮಾರ್ಟ್ ಬೋರ್ಡ್…

Read More

ದಸರಾ ಹಬ್ಬದಲ್ಲಿ ಸರ್ಕಾರ ಕಂಬಳ ಕ್ರೀಡೆ ಆಯೋಜಿಸುವುದಕ್ಕೆ ಪರಿಸರಕ್ಕಾಗಿ ನಾವು ಸಂಘಟನೆ ತೀವ್ರ ವಿರೋಧ

ಮೈಸೂರು; ವಿಶ್ವ ವಿಖ್ಯಾತ ನಾಡ ಹಬ್ಬ ದಸರಾ ಹಬ್ಬದ ಸಂದರ್ಭದಲ್ಲಿ ಸರ್ಕಾರವು ಕಂಬಳ ಕ್ರೀಡೆ ಆಯೋಜಿಸುವುದಕ್ಕೆ ಪರಿಸರಕ್ಕಾಗಿ ನಾವು ಸಂಘಟನೆ ತೀವ್ರ ವಿರೋಧ ವ್ಯಕ್ತಪಡಿಸಿದೆ.ಈ ಕುರಿತು ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಪರಶುರಾಮೇಗೌಡ ಹಾಗೂ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರು, ವಿಶ್ವ ವಿಖ್ಯಾತ ಮೈಸೂರು ದಸರಾ ಹಬ್ಬವು ಐತಿಹಾಸಿಕ ಹಿನ್ನೆಲೆ, ಭವ್ಯ ಪರಂಪರೆ, ಸಾಂಸ್ಕöÈತಿಕ ವೈಶಿಷ್ಟ÷್ಯಗಳು ಮತ್ತು ಧಾರ್ಮಿಕ ಆಚರಣೆಗಳನ್ನು ಹೊಂದಿದೆ. ಪ್ರತಿ ವರ್ಷ…

Read More

ಕೆ ಆರ್ ಕ್ಷೇತ್ರದಲ್ಲಿ ಗೋ ಹತ್ಯೆಗೆ ಅವಕಾಶ ಇಲ್ಲ ; ಶಾಸಕ ಟಿ.ಎಸ್.ಶ್ರೀವತ್ಸ

ಮೈಸೂರು; ಕೆ ಆರ್ ಕ್ಷೇತ್ರದಲ್ಲಿ ಗೋ ಹತ್ಯೆಗೆ ಅವಕಾಶ ಇಲ್ಲ ಎಂದು ಶಾಸಕ ಟಿ.ಎಸ್. ಶ್ರೀವತ್ಸ ಹೇಳಿದರು. ಮೈಸೂರಿನ ನಾಚನಹಳ್ಳಿ ಪಾಳ್ಯದ ಪಕ್ಕದಲ್ಲಿರುವ ಪ್ರಕೃತಿ ಬಡಾವಣೆಯಲ್ಲಿ ಕಡೆದು ಹಾಕಿದ್ದ ಹಸುವಿನ ಅವಶೇಷಗಳನ್ನು ಹಾಕಿದ್ದ ಸ್ಥಳಕ್ಕೆ ಭೇಟಿ ನೀಡಿ ಸ್ಥಳಿಯ ಪೊಲೀಸ್ ನಿರೀಕ್ಷಕ ಯೋಗಾಂಜನಪ್ಪ ರಿಂದ ಮಾಹಿತಿಯನ್ನು ಪಡೆದರು. ರಾತ್ರಿ 10:30 ರಲ್ಲಿ ಹಸುವಿನ ಕತ್ತಿನ ಭಾಗವನ್ನು ಈ ಸ್ಥಳಕ್ಕೆ ತಂದು ಬಿಸಾಡಿರುತ್ತಾರೆ. ಇದು ಹೊರಗಿನಿಂದ ತಂದು ಬಿಸಾಡಿರಬಹುದು ಅಥವಾ ಅಕ್ಕಪಕ್ಕದವರು ಬಿಸಾಡಿರಬಹುದು. ಈಗಾಗಲೇ ಈ ಸಂಬAಧ ಎಫ್.ಐ.ಆರ್…

Read More

ಶ್ರಮದಾನ ಮೂಲಕ ಪ್ಲಾಸ್ಟಿಕ್ ಮುಕ್ತ ಚಾಮುಂಡಿಬೆಟ್ಟಕ್ಕೆ ಜಾಗೃತಿ

ಮೈಸೂರು: ಆಷಾಢ ಮಾಸದ ಶುಕ್ರವಾರಗಳು, ಚಾಮುಂಡೇಶ್ವರಿಯ ಜಯಂತಿ ಪ್ರಯುಕ್ತ ಲಕ್ಷಾಂತರ ಮಂದಿ ಭಕ್ತರು ಚಾಮುಂಡಿಬೆಟ್ಟಕ್ಕೆ ತಾಯಿ ಚಾಮುಂಡೇಶ್ವರಿಯ ದರ್ಶನಕ್ಕೆ ಬರುವ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮೈಸೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಿ.ಕೃಷ್ಣ ಅವರ ನೇತೃತ್ವದಲ್ಲಿ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಸಿಬ್ಬಂದಿಗಳು ಗುರುವಾರ ಶ್ರಮದಾನ ಮಾಡುವ ಮೂಲಕ ಸ್ವಚ್ಛತಾ ಕಾರ್ಯ ನೆರವೇರಿಸಿದರು.ತಾಲ್ಲೂಕು ಪಂಚಾಯಿತಿ ಹಾಗೂ ಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿಯ ಸಹಯೋಗದೊಂದಿಗೆ ಇಂದು ಮುಂಜಾನೆ ಬೆಟ್ಟದ ಪಾದದಿಂದ ದೇವಾಲಯದವರೆಗೂ ಮೆಟ್ಟಿಲುಗಳನ್ನು…

Read More

ಮೈಸೂರು ಜಿಲ್ಲೆಯ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ;23,49,006 ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸಲಾಗಿದ್ದು,ಶೇ 83.90% ರಷ್ಟು ಸಾಧನೆ

ಮೈಸೂರು; ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026 (ಎಸ್‌ಐಆರ್) ಪ್ರಕ್ರಿಯೆಯು ಅತ್ಯಂತ ಚುರುಕಿನಿಂದ ಸಾಗಿದ್ದು ಜುಲೈ 8 ರವೆರೆಗೆ 23,49,006 ಎನ್ಯುಮರೇಷನ್ ಫಾರ್ಮ್ಗಳನ್ನು ವಿತರಿಸಲಾಗಿದ್ದು,ಶೇ 83.90% ರಷ್ಟು ಸಾಧನೆಯಾಗಿದೆ.ಜಿಲ್ಲೆಯಲ್ಲಿ ಒಟ್ಟು 27,99,693 ಮತದಾರರಿದ್ದು, 2,915 ಮತಗಟ್ಟೆಗಳು ಇರುತ್ತದೆ. ಜಿಲ್ಲೆಯಲ್ಲಿ ಮತಗಟ್ಟೆಗಳ ಪೈ ಕಿ 927 (31.80%) ಮತಗಟ್ಟೆಗಳಲ್ಲಿ 100% ಫಾರ್ಮ್ ವಿತರಣೆ ಆಗಿದೆ.726 (24.90%) ಮತಗಟ್ಟೆಗಳಲ್ಲಿ 90% ಕ್ಕಿಂತ ಅಧಿಕ ವಿತರಣೆಯಾಗಿದೆ.11,419 ಮತದಾರರು ಸ್ವತಃ ಆನ್‌ಲೈನ್ ಮೂಲಕ ಫಾರ್ಮ್ಗಳನ್ನು ಸಲ್ಲಿಸಿದ್ದಾರೆ.ಜಿಲ್ಲೆಯಲ್ಲಿ ವಿತರಿಸಲಾದ ಫಾರ್ಮ್ಗಳ ಪೈಕಿ ಇದುವರೆಗೆ ಒಟ್ಟು…

Read More

ಹೆಚ್ .ಡಿ. ಕೋಟೆ ವಕೀಲರ ಸಂಘದ ನೂತನ ಅದ್ಯಕ್ಷ ರಿಗೆ ಸನ್ಮಾನ

ಮೈಸೂರು; ಹೆಚ್ .ಡಿ. ಕೋಟೆ ವಕೀಲರ ಸಂಘದ ನೂತನ ಅದ್ಯಕ್ಷರಾಗಿ ಆಯ್ಕೆಯಾದ ನಾಗೇಶ್ ರವರನ್ನು ಮೈಸೂರು ವಕೀಲರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.  ಈ ವೇಳೆ ಎಂ ಮಹದೇವಸ್ವಾಮಿ,ಸಿ.ನಾಗರಾಜ್, ಸನತ್ ಕುಮಾರ್,ಪಡುವಾರಹಳ್ಳಿ ಎಂ ರಾಮಕೃಷ್ಣ,ಮಂಜು ಲುಮಾರ್,ಸಿದ್ದೇಗೌಡ,ರವಿ,ಬಸವರಾಜು, ಜಗದೀಶ್ ತಿಮ್ಮಾಚಾರಿ,ಮಣಿಕಂಠ,ಮಧು,ರಾಜೇಶ್ ರವರಿದ್ದರು.

Read More

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕಾರ್ಪೊರೇಟ್ ಸಹಯೋಗ

ಮೈಸೂರು: ಜಿಲ್ಲೆಯ ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಉನ್ನತೀಕರಿಸುವ ಮತ್ತು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ ಸಮುದಾಯ ಮತ್ತು ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ ಸಿ.ಸಿ.ಎಸ್.ಆರ್ ನಿಧಿಯನ್ನು ಬಳಸಿಕೊಳ್ಳುವ ಕುರಿತು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಿ. ಉದಯಕುಮಾರ್ ಅವರು ಪ್ರಸಕ್ತ ಯೋಜನೆಯ ಮುಖ್ಯ ಉದ್ದೇಶಗಳು ಹಾಗೂ ಈ ಯೋಜನೆಯ ಭಾಗವಾಗಿ ಸ್ಥಾಪನೆ ಮಾಡಬೇಕಾಗಿರುವ ಸಿ.ಸಿ.ಎಸ್.ಆರ್ ಕೋಶ ಹಾಗೂ ನಮ್ಮ…

Read More

ಜುಲೈ 10 ರಂದು ಮಹಾತ್ಮನ ಮಗಳು’ ಪುಸ್ತಕದ ಬಿಡುಗಡೆ ಹಾಗೂ ಸಂವಾದ ಕಾರ್ಯಕ್ರಮಮೈಸೂರು; ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆಯವರಿAದ ಮೀರಾ ಬೆಹನ್ ಯಾನೆ ಮೀರಕ್ಕ ಎಂದು ಕರೆಯಲ್ಪಡುವ ಮೆಡಿಲಿನ್ ಸ್ಲೇಡ್ ಅವರ ಆತ್ಮ ಕಥೆಯ ಕನ್ನಡ ಅನುವಾದ ‘ಮಹಾತ್ಮನ ಮಗಳು’ ಪುಸ್ತಕದ ಬಿಡುಗಡೆ ಹಾಗೂ ಸಂವಾದ ಕಾರ್ಯಕ್ರಮವನ್ನು ಜುಲೈ 10 ರಂದು ಹಮ್ಮಿಕೊಳ್ಳಲಾಗಿದೆ. ಕನ್ನಡಕ್ಕೆ ಈ ಪುಸ್ತವನ್ನು ಮುಂಜುನಾಥ್ ಚಾಂದ್ ಅವರು ಅನುವಾದಿಸಿದ್ದಾರೆ.ಗಾಂಧೀಜಿಯವರು ತಮ್ಮ ಮಗಳೆಂದೇ ಸ್ವೀಕರಿಸಿದ ಈ ವಿದೇಶಿ ಮಹಿಳೆಯ ಅನುಭವದ ಮೂಸೆಯಲ್ಲಿ ಗಾಂಧೀಜಿಯವರು, ಆಪ್ತವಾಗಿ,…

Read More

30 ಪ್ರಕರಣ ಭೇದಿಸಿದ ಪೊಲೀಸರಿಂದ 35 ಆರೋಪಿಗಳ ಬಂಧನ, 1.55 ಕೋಟಿ ರೂ ಮೌಲ್ಯದ ವಸ್ತುಗಳು ವಶ

ಮೈಸೂರು : ಜಿಲ್ಲಾ ವ್ಯಾಪ್ತಿಯಲ್ಲಿ ನಡೆದ ದರೋಡೆ, ಮನೆಗಳ್ಳತನ, ಬೈಕ್ ಕಳ್ಳತನ ಪ್ರಕರಣ ಸೇರಿ 30 ಪ್ರಕರಣಗಳನ್ನು ಭೇದಿಸಿರುವ ಮೈಸೂರಿನ ಪೊಲೀಸರು 35 ಆರೋಪಿಗಳನ್ನು ಬಂಧಿಸಿ, 1.55 ಕೋಟಿ ರೂ ಮೌಲ್ಯಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ ತಿಳಿಸಿದರು.ಬುಧವಾರ ನಗರದ ತಮ್ಮ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಧಿತರಿAದ 1,55,12,300 ರೂ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.ಇದೇ ತಿಂಗಳ 1ರಂದು ವ್ಯಾಪಾರಿಯೊಬ್ಬರು ಚಿನ್ನ ಮಾರಿ 85 ಲಕ್ಷ ರೂ.ನ್ನು ಎರಡು…

Read More

ಮತದಾನದ ಹಕ್ಕನ್ನು ಕಸಿಯುವ ಹುನ್ನಾರ: ಎಂ.ಲಕ್ಷ್ಮಣ್

 ​ಪಿರಿಯಾಪಟ್ಟಣ: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಯ ನೆಪದಲ್ಲಿ ಮತದಾರರ ಹಕ್ಕನ್ನು ಕಸಿಯುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದರು. ಪಟ್ಟಣದ ಅಭಯ್ ಕನ್ವೆಸನಲ್ ನಲ್ಲಿ ನಡೆದ ಪಿರಿಯಾಪಟ್ಟಣ ವಿಭಾಗ ಮಟ್ಟದ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಬೂತ್ ಮಟ್ಟದ ಪ್ರತಿನಿಧಿಗಳ (ಬಿಎಲ್ಎ) ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಎಸ್ಐಆರ್  ಪ್ರಕ್ರಿಯೆಗೆ ನಮ್ಮ ವಿರೋಧವಿಲ್ಲ, ಜನರ ಮತದಾನದ ಹಕ್ಕನ್ನು ರಕ್ಷಣೆ ಮಾಡುವುದು ಕಾಂಗ್ರೆಸ್ ಪಕ್ಷದ ಜವಾಬ್ದಾರಿ ಅದಕ್ಕಾಗಿ ದೇಶದಾದ್ಯಂತ ಜನರಲ್ಲಿ ಜಾಗೃತಿ ಮೂಡಿಸಲು ಸಭೆಗಳನ್ನು ನಮ್ಮ ಪಕ್ಷ ಹಮ್ಮಿಕೊಳ್ಳುತ್ತಿದೆ, ಆದರೆ…

Read More