ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ಹಾಗೂ ಎಸ್.ಸಿ.ಬಸವರಾಜಗೆ ವಿಧಾನಪರಿಷತ್ ಸ್ಥಾನ ನೀಡಲು ಆಗ್ರಹಿಸಿ ನಾಯಕ ಸಮಾಜದಿಂದ ಬೃಹತ್ ಪ್ರತಿಭಟನೆ
ಮೈಸೂರು; ಜಿಲ್ಲೆಯ ಎಚ್.ಡಿ.ಕೋಟೆ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಬೇಕು ಹಾಗೂ ಎಸ್.ಸಿ.ಬಸವರಾಜು ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕ ಮಾಡಬೇಕೆಂದು ಆಗ್ರಹಿಸಿ ನಗರದಲ್ಲಿ ಸೋಮವಾರ ನಾಯಕ ಸಮುದಾಯದಿಂದ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಜಮಾಯಿಸಿದ್ದ ಮೈಸೂರು ಮತ್ತು ಚಾಮರಾಜನಗರ, ಮಂಡ್ಯ, ಕೊಡಗು ಜಿಲ್ಲೆಯ ದಿವಂಗತ ಎಸ್ ಚಿಕ್ಕಮಾದು ಮತ್ತು ಹೆಚ್ ಡಿ ಕೋಟೆಯ ಶಾಸಕ ಅನಿಲ್ ಚಿಕ್ಕಮಾದು, ಹಾಗೂ ಎಸ್ ಸಿ ಬಸವರಾಜು ರವರ ಅಭಿಮಾನಿಗಳು ಹಾಗೂ ನಾಯಕ…