Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ನಗರದಲ್ಲಿ ಪೊಲೀಸರಿಂದ ರೌಡಿಗಳ ಪರೇಡ್

ಮೈಸೂರು; ನಗರದಲ್ಲಿ ಪೊಲೀಸರು ರೌಡಿಗಳ ಪರೇಡ್ ನಡೆಸಿದರು.ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರ ಸೂಚನೆಯಂತೆ, ಡಿಸಿಪಿಗಳಾದ ಡಾ:ಹರ್ಷ ಪ್ರಿಯಂವದ ಮತ್ತು ಶಿ ಸುಂದರ್ ರಾಜ್ ಕೆ.ಎಸ್ ಅವರ ನೇತೃತ್ವದಲ್ಲಿ ವಿಜಯನಗರ ಉಪವಿಭಾಗದ ರೌಡಿಗಳ ಪರೇಡ್ ನಡೆಸಲಾಯಿತು. ರೌಡಿ ನಿಗ್ರಹ ದಳದ ಈ ಕಾರ್ಯಾಚರಣೆಯಲ್ಲಿ, ಯಾವುದೇ ಕಾನೂನು ಬಾಹಿರ ಚಟುವಟಿಕೆ ಅಥವಾ ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಲಾಯಿತು. ಅಲ್ಲದೆ, ತಪುö್ಪ ಹಾದಿ ಬಿಟ್ಟು ಸಮಾಜದಲ್ಲಿ ಒಳ್ಳೆಯ ನಾಗರಿಕರಾಗಿ ಬದುಕುವಂತೆ ಬುದ್ಧಿವಾದ ಹೇಳಲಾಯಿತು.

Read More

ಡಿ.ಬನುಮಯ್ಯ ಯುವ ಬ್ರಿಗೇಡ್ ವತಿಯಿಂದ ಬನುಮಯ್ಯ ಜಯಂತಿ ಆಚರಣೆ

ಮೈಸೂರು; ಧರ್ಮ ಪ್ರಕಾಶ್ ರಾವ್ ಬಹದ್ದೂರ್ ಡಿ ಬನುಮಯ್ಯನವರ 166 ನೇ ಜಯಂತಿಯನ್ನು ಇಂದು ಬನುಮಯ್ಯ ಕಾಲೇಜಿನ ಆವರಣದಲ್ಲಿ ಆಚರಿಸಲಾಯಿತು. ಬನುಮಯ್ಯ ಅವರ ಪುತ್ಥಳಿಗೆ ಶಾಸಕ ಟಿ.ಎಸ್ ಶ್ರೀವತ್ಸ ಅವರು ಮಾಲಾರ್ಪಣೆ ಮಾಡುವ ಮೂಲಕ ಜಯಂತಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು ಮತ್ತು ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು ವಿಶೇಷವಾಗಿ ಈ ಬಾರಿಯ ಎಸ್…

Read More

ಹಿಂದೂ ಎನ್ನುವುದು ಒಂದು ರಿಲಿಜಿಯನ್ ಅಲ್ಲ, ಅದೊಂದು ಶ್ರೇಷ್ಠ ಜೀವನ ಶೈಲಿ; ಜಯರಾಮ್ ಬೊಳ್ಳಾಜೆ

ಮೈಸೂರು; ರಾಷ್ಟ್ರೀಯ ಸ್ವಯಂ ಸೇವಕ ಸಂಘವು ಹಿಂದೂ ಸಮಾಜದ ಮೌಲ್ಯಗಳ ನೆಲಗಟ್ಟಿನ ಮೇಲೆ, ವ್ಯಕ್ತಿ ನಿರ್ಮಾಣದಿಂದ ರಾಷ್ಟç ನಿರ್ಮಾಣ ಎಂಬ ಮೂಲ ಮಂತ್ರವನ್ನು ಇಟ್ಟುಕೊಂಡು ಕಾರ್ಯ ನಿರ್ವಹಿಸುತ್ತಿದೆ ಎಂದು ವಕ್ತಾರ ಜಯರಾಮ್ ಬೊಳ್ಳಾಜೆ ತಿಳಿಸಿದರು.ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಬಿಎಸ್‌ಎಸ್ ವಿದ್ಯೋದಯ ಶಾಲೆಯ ಸಭಾಂಗಣದಲ್ಲಿ ನಡೆದ ಮೈಸೂರು ಮಹಾನಗರದ ವತಿಯಿಂದ ಪ್ರಮುಖ ನಾಗರೀಕ ಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಂಘ ಸ್ಥಾಪನೆಯ ಉದ್ದೇಶ, ಕಾರ್ಯಶೈಲಿ ಹಾಗೂ ಕಾರ್ಯವ್ಯಾಪ್ತಿಯನ್ನು ಸವಿವರವಾಗಿ ಪ್ರಸ್ತುತಪಡಿಸಿದರು.ಸಂಘವು ಹಿಂದೂ ಸಮಾಜದ ಮೌಲ್ಯಗಳ ನೆಲಗಟ್ಟಿನ ಮೇಲೆ, ವ್ಯಕ್ತಿ ನಿರ್ಮಾಣದಿಂದ…

Read More

ಎಸ್‌ಐಆರ್ ವಿಚಾರವಾಗಿ ಬಿಜೆಪಿ ಅನಗತ್ಯ ಹಾಗೂ ಆಧಾರ ರಹಿತ ಆರೋಪ ಮಾಡುವ ಮೂಲಕ ನಗೆಪಾಟಲಿಗೀಡಾಗಿದೆ; ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್

ಮೈಸೂರು: ಎಸ್‌ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲ ದಿನಗಳಿಂದ ಅನಗತ್ಯ ಹಾಗೂ ಆಧಾರ ರಹಿತ ಆರೋಪ ಮಾಡುವ ಮೂಲಕ ನಗೆಪಾಟಲಿಗೀಡಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಲೇವಡಿ ಮಾಡಿದರು.ಭಾನುವಾರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ದೇಶದ 13 ರಾಜ್ಯಗಳಲ್ಲಿ ಎಸ್‌ಐಆರ್ ಮಾಡಿ 6.5 ಕೋಟಿ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟು, ಆ ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದಿದೆ. ಅದರಂತೆ ಕರ್ನಾಟಕ ರಾಜ್ಯದಲ್ಲೂ 1…

Read More

ಪುಸ್ತಕಗಳು ಜ್ಞಾನ, ಸಂಸ್ಕಾರ, ಸೃಜನಶೀಲತೆ ಮತ್ತು ಚಿಂತನೆಯನ್ನು ಬೆಳೆಸುವ ಅತ್ಯುತ್ತಮ ಸಾಧನಗಳಾಗಿವೆ; ಸಂಸದ ಡಾ. ಸಿ.ಎನ್. ಮಂಜುನಾಥ್

ಮೈಸೂರು: ಪುಸ್ತಕಗಳು ಜ್ಞಾನ, ಸಂಸ್ಕಾರ, ಸೃಜನಶೀಲತೆ ಮತ್ತು ಚಿಂತನೆಯನ್ನು ಬೆಳೆಸುವ ಅತ್ಯುತ್ತಮ ಸಾಧನಗಳಾಗಿವೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ. ಸಿ.ಎನ್. ಮಂಜುನಾಥ್ ಹೇಳಿದರು.ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಮೈಸೂರು ಒರೇಟರ್ಸ್ ಫೋರಂ ಚಾರಿಟೇಬಲ್ ಟ್ರಸ್ಟ್ ಹಾಗೂ ಮೈಸೂರು ಬುಕ್ ಕ್ಲಬ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ 10ನೇ `ಮೈಸೂರು ಸಾಹಿತ್ಯ ಸಂಭ್ರಮ 2026′ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ತಂತ್ರಜ್ಞಾನ ಎಷ್ಟೇ ವೇಗವಾಗಿ ಬೆಳೆಯುತ್ತಿದ್ದರೂ ಪುಸ್ತಕಗಳ ಮಹತ್ವ ಎಂದಿಗೂ ಕಡಿಮೆಯಾಗುವುದಿಲ್ಲ. ಪುಸ್ತಕಗಳು ಜ್ಞಾನ, ಸಂಸ್ಕಾರ,…

Read More

ಜು.7 ರಂದು ಸಾಮಾಜಿಕ ನ್ಯಾಯಕ್ಕಾಗಿ ಜಾಗೃತಿ ಸಮಾವೇಶ ಆಯೋಜನೆ; ಬಿಜೆಪಿ ರಾಜ್ಯ ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್

ಮೈಸೂರು: ನಗರದಲ್ಲಿ ಜುಲೈ 7ರಂದು ನಿತ್ಯೋತ್ಸವ ಕಲ್ಯಾಣಮಂಟಪದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಜಾಗೃತಿ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಬಿಜೆಪಿ ರಾಜ್ಯ ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ತಿಳಿಸಿದರು.ಭಾನುವಾರ ನಗರದ ಚಾಮರಾಜಪುರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶದಲ್ಲಿ ಮಾಜಿ ಸಚಿವರಾದ ಬಿ.ಶ್ರೀರಾಮುಲು,ರಮೇಶ್ ಜಾರಕಿಹೊಳಿ, ರಾಜೂಗೌಡ, ಶಾಂತರಾಮ್ ಸಿದ್ದಿ, ಎಸ್ ಟಿ ಮೋರ್ಚಾ ಅಧ್ಯಕ್ಷ ಬಂಗಾರು ಹನುಮಂತು, ಮಾಜಿ ಸಚಿವರು,ಮಾಜಿ ಸಂಸದರು,ಮಾಜಿ ಶಾಸಕರು,ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಮತ್ತಿತರ ನಾಯಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು.ಪರಿಶಿಷ್ಟ ಪಂಗಡಕ್ಕೆ…

Read More

ಜುಲೈ 5 ರಂದು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಕರೆಂಟ್ ಇರಲ್ಲಮೈಸೂರು: ಚಾಮುಂಡಿಪುರ0 ಉಪವಿಭಾಗದ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಕಾಮಗಾರಿ ಹಾಗೂ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿದ್ದು, ಜು. 5 ರಿಂದ 7 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.ಜುಲೈ 5 ರಂದು ಕೋರ್ಟ್ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು: ಗೀತಾ ರಸ್ತೆ, ದೇವ ಪಾರ್ಥಿವ ರಸ್ತೆ, ರಾಮಸ್ವಾಮಿ ವೃತ್ತ, ಕೋರ್ಟ್ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು.ಜುಲೈ 6 ರಂದು ಕನಕಗಿರಿ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳು: ಕನಕಗಿರಿ, ಸುಯೇಜ್…

Read More

ಎಚ್.ಡಿ.ಕೋಟೆ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷರಾಗಿ ವಕೀಲ ಆರ್.ನಾಗೇಶ್ ಆಯ್ಕೆ,

2 ಮತದ ರೋಚಕ ಜಯ, ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವ ವಕೀಲರು. ಎಚ್.ಡಿ.ಕೋಟೆ : ತಾಲ್ಲೂಕು ವಕೀಲರ ಸಂಘದ ನೂತನ ಆಡಳಿತ ಮಂಡಳಿಗೆ ಶನಿವಾರ ಚುನಾವಣೆ ನಡೆದು ವಕೀಲ ಆರ್.ನಾಗೇಶ್ 68 ಮತಗಳನ್ನು ಪಡೆಯುವ ಮೂಲಕ ಪ್ರತಿ ಸ್ಪರ್ಧಿ ಹಿರಿಯ ವಕೀಲ ಡಿ.ಆರ್.ಮಹೇಶ್ (66) ಅವರ ವಿರುದ್ಧ 2 ಮತಗಳ ಅಂತರದಲ್ಲಿ ರೋಚಕ ಜಯಗಳಿಸುವ ಮೂಲಕ ನೂತನ ಅಧ್ಯಕ್ಷರಾಗಿ ಆಯ್ಕೆಯಾದರು. ತಾಲ್ಲೂಕು ವಕೀಲರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಆರ್.ನಾಗೇಶ್ ಹೆಸರು ಘೋಷಣೆ ಆಗುತ್ತಿದ್ದಂತೆ ಅವರನ್ನು ಬೆಂಬಲಿಸಿದ್ದ ವಕೀಲರ…

Read More

ಜುಲೈ 5ರಂದು ‘ಪಾರ್ಟಿ’ ನಾಟಕ ಪ್ರದರ್ಶನ

ಮೈಸೂರು; ಸಿ.ಜಿ.ಕೆ. ನೆನಪಿನ ಗ್ರೀಷ್ಮ ರಂಗೋತ್ಸವ 2026 ಅಂಗವಾಗಿ ನಿರಂತರ ರಂಗ ತಂಡ ಹಾಗೂ ರಂಗಾಯಣವತಿಯಿAದಜುಲೈ 5ರಂದು ‘ಪಾರ್ಟಿ’ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ.ಖ್ಯಾತ ಮರಾಠಿ ನಾಟಕಕಾರ ಮಹೇಶ್ ಎಲ್ಕುಂಚವಾರ್ ಅವರ ಬಹುಚರ್ಚಿತ ನಾಟಕ ‘ಪಾರ್ಟಿ’ ಇದೇ ಜುಲೈ 5ರ ಭಾನುವಾರ ಸಂಜೆ 6.30 ಗಂಟೆಗೆ ಮೈಸೂರಿನ ರಂಗಾಯಣದ ಭೂಮಿಗೀತ ರಂಗಮAದಿರದಲ್ಲಿ ಪ್ರದರ್ಶನಗೊಳ್ಳಲಿದೆ.ಭಾರತೀಯ ರಂಗಭೂಮಿಯಲ್ಲಿ ವಿಶಿಷ್ಟ ಸ್ಥಾನ ಪಡೆದಿರುವ ‘ಪಾರ್ಟಿ’ ನಾಟಕವು ಕಲೆ, ಸಾಹಿತ್ಯ, ಬೌದ್ಧಿಕ ವಲಯ, ಸಾಮಾಜಿಕ ಮೌಲ್ಯಗಳು ಹಾಗೂ ಮಾನವ ಸಂಬAಧಗಳ ಸಂಕೀರ್ಣತೆಯನ್ನು ಸೂಕ್ಷ÷್ಮವಾಗಿ ವಿಶ್ಲೇಷಿಸುವ…

Read More

ಶ್ರೀರಾಘವೇಂದ್ರಸ್ವಾಮಿಗಳ ಪಂಚಲೋಹ ಶಿಲಾ ಮತ್ತು ಬೃಂದಾವನ ಪ್ರತಿಷ್ಠಾಪನಾ ಕಾರ್ಯಕ್ರಮ

ಮೈಸೂರು; ಶ್ರೀರಾಘವೇಂದ್ರಸ್ವಾಮಿಗಳ ಪಂಚಲೋಹ ಶಿಲಾ ಮತ್ತುಬೃಂದಾವನ ಪ್ರತಿಷ್ಠಾಪನಾ ಕಾರ್ಯಕ್ರಮಮೈಸೂರಿನ ರಾಮಕೃಷ್ಣನಗರ ವಿವೇಕಾನಂದರಸ್ತೆಯಲ್ಲಿರುವ ಶ್ರೀದೇವಿ ಭೂದೇವಿ ಸಮೇತ ಶ್ರೀನಿವಾಸ ಗಣಪತಿವಾಯುದೇವ ದೇವಸ್ಥಾನದ ಆವರಣದಲ್ಲಿ ಜುಲೈ 5 ರಂದು ನಡೆಯಲಿದೆ.ಭಾನುವಾರ ಬೆಳಿಗ್ಗೆ 8.30ಕ್ಕೆ ಕಾರ್ಯಕ್ರಮವು ನೆರವೇರಲಿದೆ ಎಂದು ಟ್ರಸ್ಟಿಗಳಾದ ಸುಧಾರಾವ್, ಹರೀಶ್ರಾವ್, ಗುರುರಾಜರಾ ಪ್ರಕಟಣೆಯಲ್ಲಿತಿಳಿಸಿದ್ದಾರೆ.

Read More