Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ ಗುಜರಾತ್ ಕರಕುಶಲ ಉತ್ಸವಕ್ಕೆ ಚಾಲನೆ

ಮೈಸೂರು: ನಗರದ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿರುವ ಜೆಎಸ್‌ಎಸ್ ಅರ್ಬನ್ ಹಾತ್‌ನಲ್ಲಿ ಶುಕ್ರವಾರ ಸಂಜೆ ನಡೆದ ಸಮಾರಂಭದಲ್ಲಿ ಗುಜರಾತ್ ಕರಕುಶಲ ಉತ್ಸವ-2026ಕ್ಕೆ ಚಾಲನೆ ನೀಡಲಾಯಿತು.ಕೈಮಗ್ಗ ಮತ್ತು ಜವಳಿ ಇಲಾಖೆ, ಕರ್ನಾಟಕ ಸರ್ಕಾರದ ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕ ಎ. ಬಿ. ಬಸವರಾಜು ಉತ್ಸವವನ್ನು ಉದ್ಘಾಟಿಸಿದರು. ಈ ವೇಳೆ ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಎಚ್. ಆರ್. ರಾಜಪ್ಪ, ಇಂಡೆಕ್ಸ್÷್ಟ-ಸಿ, ಗುಜರಾತ್‌ನ ಪ್ರಧಾನ ವ್ಯವಸ್ಥಾಪಕ (ಹಾತ್) ಹಾಗೂ…

Read More

ವೀರನಹೊಸಳ್ಳಿ ವಲಯ ವ್ಯಾಪ್ತಿಯಲ್ಲಿ ಇಬ್ಬರ ಮೇಲೆ ದಾಳಿ ನಡೆಸಿದ್ದ ಕರಡಿ ಕರಡಿ ಸೆರೆನಿಟ್ಟುಸಿರು ಬಿಟ್ಟ ಚಾಕಹಳ್ಳಿ, ಚಕ್ಕೋಡನಹಳ್ಳಿ ಗ್ರಾಮಸ್ಥರು

ಎಚ್.ಡಿ.ಕೋಟೆ; ತಾಲೂಕಿನ ವೀರನಹೊಸಹಳ್ಳಿ ಅರಣ್ಯ ವಲಯ ವ್ಯಾಪ್ತಿಯಲ್ಲಿ ಕರಡಿಯೊಂದು ಇಬ್ಬರ ಮೇಲೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ನಡೆದಿದೆ. ಗಾಯಾಳುಗಳನ್ನು ಚಾಕಹಳ್ಳಿ ಗ್ರಾಮದ ನಿವಾಸಿ ನಾರಾಯಣ್ ನಾಯಕ್ (60) ಹಾಗೂ ಚಕ್ಕೋಡನಹಳ್ಳಿ ಗ್ರಾಮದ ಮರಿಗೌಡ (ಶಿವಪ್ಪ) ಗಾಯಗೊಂಡವರಾಗಿದ್ದು, ಅವರನ್ನು ಎಚ್.ಡಿ.ಕೋಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.ಎಚ್.ಡಿ. ತಾಲೂಕಿನ ಚಾಕಹಳ್ಳಿ ಗ್ರಾಮದ ಹುಚ್ಚನಾಯಕ ಪುತ್ರ ನಾರಾಯಣ ನಾಯಕ್ ಎಂಬುವವರು, ತಮ್ಮ ಮೊಮ್ಮಗನ ಜೊತೆ ಬಹಿರ್ದೆಸೆಗೆ ತೆರಳುತ್ತಿದ್ದಾಗ, ಮೇಟಿಕುಪ್ಪೆ ಅರಣ್ಯ ವಲಯದಿಂದ ಬಂದ ಕರಡಿ ದಾಳಿ ಮಾಡಿದೆ. ಕೈಗೆ ಕಚ್ಚಿ…

Read More

ಕಡಕೊಳ ಗ್ರಾಮದ ಹೆದ್ದಾರಿಯಲ್ಲಿ ವ್ಯಾಪಕ ಅಪಘಾತ ದೂರಿನ ಹಿನ್ನೆಲೆ;ಸ್ಥಳಕ್ಕೆ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ, ಪರಿಶೀಲನೆ

ಮೈಸೂರು; ತಾಲೂಕಿನ ಕಡಕೊಳ ಗ್ರಾಮದ ಮೇಲೆ ಹಾದು ಹೋಗಿರುವ ರಾಷ್ಟಿಯ ಹೆದ್ದಾರಿ 766 ರಲ್ಲಿ ಸಂಚಾರದ ಒತ್ತಡ ಹಾಗೂ ವ್ಯಾಪಕ ವಾಹನ ದಟ್ಟಣೆ ಯಿಂದಾಗಿ ಪದೇಪದೇ ಅಪಘಾತ ಸಂಭವಿಸಿ ಸಾವು ನೋವುಗಳು ಜಾಸ್ತಿಯಾಗುತ್ತಿರುವ ಹಿನ್ನಲೆಯಲ್ಲಿ ಇಂದು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.ಇಲ್ಲಿ ನಡೆದಿರುವ ಅಪಘಾತಗಳ ಕುರಿತು ಅಂಕಿ ಅಂಶಗಳ ಸಮೇತ ಕೂಲಂಕುಶವಾಗಿ ಪರಿಶೀಲಿಸಿದರು.ಬಳಿಕ ಕಡಕೊಳ ಗ್ರಾಮದಲ್ಲಿ ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ನಡೆದ ತಾಲೂಕು ಮಟ್ಟದ ಸಾರ್ವಜನಿಕ…

Read More

ಬಿಡದಿ ಟೌನ್ ಶಿಪ್ ನಿಲ್ಲಿಸಿ, ಫಲವತ್ತಾದ ರೈತರ ಜಮೀನು ಉಳಿಸಲು ಆಗ್ರಹಿಸಿ ಮೈಸೂರಿನಲ್ಲಿ ರೈತರ ಪ್ರತಿಭಟನೆ.

ಮೈಸೂರು; ಬಿಡದಿ ಟೌನ್ ಶಿಪ್ ನಿಲ್ಲಿಸಿ, ಫಲವತ್ತಾದ ರೈತರ ಜಮೀನು ಉಳಿಸುವುದು ಸ್ಭೆರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶುಕ್ರವಾರ ಮೈಸೂರಿನಲ್ಲಿ ರೈತರು ಪ್ರತಿಭಟನೆ ನಡೆಸಿದರು.ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಕೆಲಕಾಲ ಧರಣಿ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಈ ವೇಳೆ ಪ್ರತಿಭಟನೆಯ ನೇತೃತ್ವ ವಹಿಸಿದ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ ಶಾಂತಕುಮಾರ್ ಮಾತನಾಡಿ, ರಾಜ್ಯ ಸರ್ಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬಿಡದಿಯ ಸುತ್ತಮುತ್ತಲ ಹಳ್ಳಿಗಳ ರೈತರ ಫಲವತ್ತಾದ…

Read More

ಉಚಿತ ಅಣುಕು ಪರೀಕ್ಷೆಗೆ ನೋಂದಣಿ ಅವಧಿ ವಿಸ್ತರಣೆಮೈಸೂರು: ಕರ್ನಾಟಕ ರಾಜ್ಯ ಪೋಲೀಸ್ ಇಲಾಖಾ ನೇಮಕಾತಿ ಸಮಿತಿಯವರು ಸಿವಿಲ್ ಕಾನ್ಸ್ಟೇಬಲ್, ಸಿಎಆರ್, ಡಿಎಆರ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗಾಗಿ ರಾಜ್ಯಾದ್ಯಂತ ನಡೆಸುತ್ತಿರುವ ಲಿಖಿತ ಪರೀಕ್ಷೆಗೆ ಹಾಜರಾಗುತ್ತಿರುವ ಅಭ್ಯರ್ಥಿಗಳಿಗೆ ನಗರದ ಪೀಪಲ್ಸ್ ಪಾರ್ಕ್ ಬಳಿಯಿರುವ ನಗರ ಕೇಂದ್ರ ಗ್ರಂಥಾಲಯದಲ್ಲಿ ನಡೆಸಲು ಉದ್ದೇಶಿಸಿರುವ ಅಣಕು ಪರೀಕ್ಷೆಯ ನೋಂದಣಿ ಅವದಿಯನ್ನು ವಿಸ್ತರಿಸಲಾಗಿದೆ. ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಹೆಸರನ್ನು ನೋಂದಾಯಿಸಿಕೊಳ್ಳುವ ಕೊನೆಯ ದಿನಾಂಕವನ್ನು ಜುಲೈ 4 ರ ಬದಲಾಗಿ ಜುಲೈ 06, ರವರೆಗೆ ವಿಸ್ತರಿಸಲಾಗಿದ್ದು, ಅಣಕು…

Read More

ಖಾಲಿ ಇರುವ ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಮೈಸೂರು: 2026-27ನೇ ಶೈಕ್ಷಣಿಕ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಮೈಸೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಖಾಲಿ ಇರುವ ಆಂಗ್ಲ ಭಾಷೆ, ದೈಹಿಕ ಶಿಕ್ಷಣ, ಕಂಪ್ಯೂಟರ್ ಶಿಕ್ಷಣ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.ಈ ಸಂಬAಧ ನಿಗಧಿತ ವಿದ್ಯಾರ್ಹತೆಯನ್ನು ಹೊಂದಿರುವ (ಪದವಿ, ಬಿ.ಇಡಿ. ಮತ್ತು ಟಿ.ಇ.ಟಿ ವಿದ್ಯಾರ್ಹತೆ) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಜುಲೈ 9 ರ ಒಳಗೆ ಅಗತ್ಯ…

Read More

ಹಾರ್ಟ್ ಸಂಸ್ಥೆಯಿ0ದ ಒಂದು ದಿನದ ಅಣಬೆ ಕೃಷಿ ತರಬೇತಿ ಕಾರ್ಯಗಾರಮೈಸೂರು: ಸಮಾಜದಲ್ಲಿ ಸ್ವಯಂ ಉದ್ಯೋಗ ಮತ್ತು ಗ್ರಾಮೀಣ ಆರ್ಥಿಕಾಭಿವೃದ್ಧಿಯನ್ನು ಉತ್ತೇಜಿಸುವ ಉದ್ದೇಶದಿಂದ ಹಾರ್ಟ್ ಸಂಸ್ಥೆವತಿಯಿAದ ಒಂದು ದಿನದ ಅಣಬೆ ಕೃಷಿ ತರಬೇತಿ ಕಾರ್ಯಗಾರವನ್ನು ಜುಲೈ 12 ರಂದು ಆಯೋಜಿಸಲಾಗಿದೆ.ಮೈಸೂರಿನ ಕೋಟೆಹುಂಡಿಪ್ರದೇಶದಲ್ಲಿರುವ ಹಾರ್ಟ್ ಸಂಸ್ಥೆಯ ತರಬೇತಿ ಕಚೇರಿಯಲ್ಲಿ ನಡೆಯಲಿದೆ.ಅಣಬೆ ಬೆಳೆಯುವ ತಂತ್ರಜ್ಞಾನ, ಉತ್ಪಾದನೆ, ಸಂಗ್ರಹಣೆ ಹಾಗೂ ಮಾರುಕಟ್ಟೆ ಕುರಿತು ಪರಿಣಿತರ ಮಾರ್ಗದರ್ಶನದಲ್ಲಿ ಪ್ರಾಯೋಗಿಕ ಹಾಗೂ ಸೈದ್ಧಾಂತಿಕ ತರಬೇತಿ ನೀಡಲಾಗುತ್ತದೆ.ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ 9353630903ನ್ನು ಸಂಪರ್ಕಿಸಬೇಕೆAದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Read More

ನಂಜನಗೂಡಿನ ಶ್ರೀ ನಂಜು0ಡೇಶ್ವರ ದೇವಾಲಯದಲ್ಲಿ ಸ್ನೇಹಿತರ ಸಮಾಗಮ ಮತ್ತು ಸಮ್ಮಿಲನ ಕಾರ್ಯಕ್ರಮ.

ನಮ್ಮ ಸ್ನೇಹಕ್ಕೆ 20 ವರುಷ, ತಂದಿತು 40 ರಲ್ಲಿ ಹರುಷ.ನಂಜನಗೂಡು; ಸೋಮಹಳ್ಳಿ ಶ್ರೀ ಗಂಗಾಧರೇಶ್ವರ ಡಿ.ಎಡ್ ಕಾಲೇಜಿನಲ್ಲಿ 2005-06 ಸಾಲಿನಲ್ಲಿ ಪ್ರಥಮ ಬ್ಯಾಚ್ ನಲ್ಲಿ ಪ್ರಶಿಕ್ಷಣ ತರಬೇತಿ ಪಡೆದ ಎಲ್ಲಾ ಸ್ನೇಹಿತರು ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಸಮಾಗಮಗೊಂಡರು. ಈ ಸಂದರ್ಭದಲ್ಲಿ ಪ್ರಸಕ್ತ ಸಾಲಿನಲ್ಲಿ ಪ್ರಾಂಶುಪಾಲರಾಗಿದ್ದ ಮಲ್ಲಿಕಾರ್ಜುನ ಸ್ವಾಮಿ ಮಾತನಾಡಿ, 20 ವರ್ಷಗಳ ಹಿಂದಿನ ಸವಿ ಸವಿ ನೆನಪು ನೀಡಿದೆ. ಅಂದಿನ ದಿನಗಳನ್ನು ಮೆಲುಕು ಹಾಕಿ, ಮತ್ತೊಮ್ಮೆ ಆ ಕಾಲೇಜಿನ ದಿನಗಳಿಗೆ ಜಾರಿದ್ದವೆ. ಬದುಕಿನ ಜಂಜಾಟದಿAದ ಹೊರಬಂದು ನಕ್ಕಿ…

Read More

ಕೊಡಗಿನಲ್ಲಿ ಮಾನವ -ಆನೆ ಸಂಘರ್ಷ ನಿವಾರಣೆಗೆ ಕೇಂದ್ರ ಸರ್ಕಾರದಿಂದ ಮಹತ್ವದ ಭರವಸೆ: ಸಂಸದ ಯದುವೀರ್ ಒಡೆಯರ್

ಮೈಸೂರು : ಕೊಡಗು ಜಿಲ್ಲೆಯಲ್ಲಿನ ಮಾನವ-ಆನೆ ಸಂಘರ್ಷ ಸಮಸ್ಯೆ ಪರಿಹಾರಕ್ಕೆ ಸಂಬAಧಿಸಿದAತೆ ಕೇಂದ್ರ ಸರ್ಕಾರ ಅಗತ್ಯ ಸಹಕಾರ ನೀಡುವುದಾಗಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಸಚಿವರು ಭರವಸೆ ನೀಡಿದ್ದಾರೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದ್ರ ಯಾದವ್ ರವರನ್ನು ಭೇಟಿಯಾಗಿ ಸಲ್ಲಿಸಿದ್ದ ಮನವಿಗೆ ಪ್ರತಿಕ್ರಿಯಿಸಿದ ಸಚಿವರು ಕೊಡಗಿನ ಅರಣ್ಯ ಅಂಚಿನ ಪ್ರದೇಶಗಳಲ್ಲಿ ರೈತರು,…

Read More

ಜವಳಿ ಕ್ಷೇತ್ರದಿಂದ ಮಹಿಳೆಯರಿಗೆ ಹೆಚ್ಚಿನ ಉದ್ಯೋಗ ಸಿಗುತ್ತಿದೆ; ಜವಳಿ ಅಭಿವೃದ್ದಿ ಆಯುಕ್ತ ಎ.ಬಿ.ಬಸವರಾಜು

ಮೈಸೂರು: ಜವಳಿ ಕ್ಷೇತ್ರದಿಂದ ಮಹಿಳೆಯರಿಗೆ ಹೆಚ್ಚಿನ ಉದ್ಯೋಗ ಸಿಗುತ್ತಿದೆ ಎಂದು ಜವಳಿ ಅಭಿವೃದ್ದಿ ಆಯುಕ್ತ ಎ.ಬಿ.ಬಸವರಾಜು ತಿಳಿಸಿದರು.ಶುಕ್ರವಾರ ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜವಳಿ ಮತ್ತು ಕೈಮಗ್ಗ ಇಲಾಖೆ ವತಿಯಿಂದ ಏರ್ಪಡಿಸಿದ್ದ ಜಾಗತಿಕ ಮಾರುಕಟ್ಟೆಗೆ ಜವಳಿ ಜಿಲ್ಲಾ ಮಟ್ಟದ ಆಂತರಿಕ ಸಲಹಾ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜವಳಿ-ಕೈ ಮಗ್ಗ ಕ್ಷೇತ್ರ ಅತಿ ಹೆಚ್ಚು ಉದ್ಯೋಗ ಸೃಷ್ಟಿ ಮಾಡುವ ಸಾಮರ್ಥ್ಯವನ್ನು ಹೊಂದಿದ್ದು, 2030ಕ್ಕೆ ಕರ್ನಾಟಕದಲ್ಲಿ 75,200 ಕೋಟಿ ರೂ.ನಷ್ಟು ಉತ್ಪನ್ನಗಳನ್ನು ರಫುö್ತಮಾಡುವ ಗುರಿ ಹೊಂದಲಾಗಿದೆ ಎಂದು ಹೇಳಿದರು.1912ರಲ್ಲಿ…

Read More