Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಚಾಮರಾಜನಗರದಲ್ಲೂ ರಂಗಾಯಣ ಸ್ಥಾಪನೆಯಾಗಬೇಕು: ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್

ಚಾಮರಾಜನಗರ: ರಾಜ್ಯದ ವಿವಿಧ ಕಡೆ ರಂಗಾಯಣ ಇರುವಂತೆಯೇ ಜಾನಪದ ಕಲೆಗಳ ತವರೂರು ಎನಿಸಿದ ಚಾ.ನಗರದಲ್ಲೂ ರಂಗಾಯಣ ಸ್ಥಾಪಿಸಬೇಕು ಎಂದು ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್‍ ಮುನ್ನಾ ಒತ್ತಾಯಿಸಿದರು.ನಗರದ ಡಾ. ರಾಜಕುಮಾರ್‍ ರಂಗಮಂದಿರದಲ್ಲಿ, ರಂಗಾಯಣ ಶಿವಮೊಗ್ಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಂಗವಾಹಿನಿ, ರಾಜ್ಯ ರೈತ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೊಳುವಾರು ಮಹಮ್ಮದ್ ಕುಂಇ್ಞು ಅವರ ಕಾದಂಬರಿ ಆಧಾರಿತ ಸ್ವಾತಂತ್ರ್ಯದ ಓಟ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಗಡಿ ಜಿಲ್ಲೆ ಚಾಮರಾಜನಗರ…

Read More

ಜನ ವಿಶ್ವಾಸ ಕಾಯ್ದೆ-2026 ಕುರಿತು ಆರ್‌ಪಿಎಫ್ ಸಿಬ್ಬಂದಿಗೆ ಜಾಗೃತಿ ಹಾಗೂ ಮಾಹಿತಿ ಕಾರ್ಯಕ್ರಮ

ಮೈಸೂರು; ಜನ ವಿಶ್ವಾಸ (ತಿದ್ದುಪಡಿ ನಿಬಂಧನೆಗಳು) ಕಾಯ್ದೆ, 2026 ಹಾಗೂ ಅದರ ಅನ್ವಯ ರೈಲ್ವೆ ಕಾಯ್ದೆ, 1989 ಮತ್ತು ಕಲ್ಕತ್ತಾ ಮೆಟ್ರೋ ರೈಲ್ವೆ (ಕಾರ್ಯಾಚರಣೆ ಮತ್ತು ನಿರ್ವಹಣೆ) ತಾತ್ಕಾಲಿಕ ನಿಬಂಧನೆಗಳ ಕಾಯ್ದೆ, 1985 ರಲ್ಲಿ ಮಾಡಲಾದ ತಿದ್ದುಪಡಿಗಳ ಕುರಿತು ಮಾಹಿತಿ ಮತ್ತು ಜಾಗೃತಿ ಕಾರ್ಯಕ್ರಮವನ್ನು ಇಂದು ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.ಈ ಕಾರ್ಯಕ್ರಮದಲ್ಲಿ ಮೈಸೂರು ಹಾಗೂ ಹುಬ್ಬಳ್ಳಿ ವಿಭಾಗಗಳ ರೈಲ್ವೆ ರಕ್ಷಣಾ ಪಡೆ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದರು.ಭಾರತದ ರಾಷ್ಟçಪತಿಗಳ ಅನುಮೋದನೆ ಪಡೆದಿರುವ ಹಾಗೂ…

Read More

ಜೂನ್ 27 ರಂದು `ಹಕ್ಕಿ ಮತ್ತು ಅವಳು’ ಎಂಬ ವಿಶಿಷ್ಟ ಏಕವ್ಯಕ್ತಿ ಕಾವ್ಯಾಭಿನಯ ರಂಗಪ್ರಯೋಗ

ಮೈಸೂರು; ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆ ವತಿಯಿಂದ ಹಕ್ಕಿ ಮತ್ತು ಅವಳು’ ಎಂಬ ವಿಶಿಷ್ಟ ಏಕವ್ಯಕ್ತಿ ಕಾವ್ಯಾಭಿನಯ ರಂಗಪ್ರಯೋಗವು ಜೂನ್ 27 ರ ಶನಿವಾರ ಸಂಜೆ 6 ಗಂಟೆಗೆ ನಗರದ ಹಾರ್ಡಿ್ವಕ್ ಶಾಲಾ ಆವರಣದಲ್ಲಿರುವ ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿದೆ.ಖ್ಯಾತ ರಂಗಕರ್ಮಿ ಡಾ. ಶ್ರೀಪಾದ ಭಟ್ ಅವರ ಪರಿಕಲ್ಪನೆ, ವಿನ್ಯಾಸ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿರುವ ಈ ರಂಗಪ್ರಯೋಗದಲ್ಲಿ ಕಾವ್ಯ ಹಂದೆ ಅವರು ಅಭಿನಯಿಸಲಿದ್ದಾರೆ. ಕನ್ನಡದಲ್ಲಿನ ಹಾಗೂ ಕನ್ನಡಕ್ಕೆ ಅನುವಾದಗೊಂಡಿರುವ ಆಯ್ದ ಕವನಗಳು, ಕಥೆಗಳು ಮತ್ತು…

Read More

ಜುಲೈ 1 ರಿಂದ 31 ರವರೆಗೆ ಜಿಲ್ಲೆಯಾದ್ಯಂತ ಮುಂಗಾರು ಬೆಳೆ ಸಮೀಕ್ಷೆ

ಶೇ 100 ರಷ್ಟು ಬೆಳೆ ಸಮೀಕ್ಷೆ ಪೂರ್ಣಗೊಳಿಸಿ : ಜಿ. ಲಕ್ಷ್ಮೀಕಾಂತ ರೆಡ್ಡಿಮೈಸೂರು: ಜಿಲ್ಲೆಯಾದ್ಯಂತ ಜುಲೈ 1 ರಿಂದ 31 ರವರೆಗೆ ಜಿಲ್ಲೆಯಾದ್ಯಂತ ಮುಂಗಾರು ಬೆಳೆ ಸಮೀಕ್ಷೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.ಬುಧವಾರ ನಗರದಲ್ಲಿ ನಡೆದ ಜಿಲ್ಲಾ ಮಟ್ಟದ ಬೆಳೆ ಸಮೀಕ್ಷೆ ಅನುಷ್ಠಾನ ಸಮಿತಿ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ, ದ್ವಿದಳಧಾನ್ಯಗಳಲ್ಲಿ ಆತ್ಮ ನಿರ್ಭರತೆ ಅಭಿಯಾನ, ಹಾಗೂ ಎಣ್ಣೆ ಕಾಳು ಅಭಿಯಾನ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಜಿಲ್ಲೆಯಲ್ಲಿ ಈ ವರ್ಷ…

Read More

ಸಾಲಭಾದೆ ತಾಳದೆ ರೈತ ಆತ್ಮಹತ್ಯೆ

ಪಿರಿಯಾಪಟ್ಟಣ: ಸಾಲ ಭಾದೆ ತಾಳದೆ ರೈತರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಕೊತ್ತವಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಸ್ವಾಮಿ ಗೌಡ (51) ಆತ್ಮಹತ್ಯೆ ಮಾಡಿಕೊಂಡವರು.ಇವರು ತಮ್ಮ ಜಮೀನಿನಲ್ಲಿ ತಂಬಾಕು ನಾಟಿ ಮಾಡಿದ್ದು, ಆ ತಂಬಾಕು ಸಸಿಗಳಿಗೆ ರೋಗ ಹರಡಿತ್ತು. ಅಲ್ಲದೆ ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದಿದ್ದರು. ಇವರು 20 ಲಕ್ಷ ರೂ.ಗಳಿಗೂ ಹೆಚ್ಚು ಸಾಲ ಮಾಡಿದ್ದು, ಕಿತ್ತೂರಿನ ಕಾವೇರಿ ಗ್ರಾಮೀಣ ಬ್ಯಾಂಕಿನಲ್ಲಿ 5 ಲಕ್ಷ ರೂ. ಹಾಗೂ…

Read More

ಜೂನ್ 28 ರಿಂದ ಜುಲೈ 1 ರವರೆಗೆ ಪಲ್ಸ್ ಪೋಲಿಯೋ ಅಭಿಯಾನ

5 ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ತಪ್ಪದೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ: ಜಿ. ಲಕ್ಷ್ಮಿ ಕಾಂತ ರೆಡ್ಡಿಮೈಸೂರು; ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೂ ಪಲ್ಸ್ ಪೋಲಿಯೋ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಿ ಎಂದು ಜಿಲ್ಲಾಧಿಕಾರಿ ಜಿ ಲಕ್ಷ್ಮಿಕಾಂತ ರೆಡ್ಡಿ ತಿಳಿಸಿದರು.ಬುಧವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಪೂರ್ವಸಿದ್ಧತಾ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನವನ್ನು ಶೇಕಡಾ ನೂರರಷ್ಟು ಯಶಸ್ವಿಗೊಳಿಸಲು, ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯತೆಯಿಂದ…

Read More

ಕಾಯ್ದೆಯಡಿ ನೋಂದಣಿಯಾಗದ ಡಿ-ಅಡಿಕ್ಷನ್ ಕೇಂದ್ರಗಳ ವಿರುದ್ಧ ಕ್ರಮ: ಜಿ. ಲಕ್ಷ್ಮಿಕಾಂತ್ ರೆಡ್ಡಿ

ಮೈಸೂರು; ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವ್ಯಸನ ವಿಮುಕ್ತ ಕೇಂದ್ರಗಳು ಕಡ್ಡಾಯವಾಗಿ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಅಡಿಯಲ್ಲಿ ನೋಂದಣಿಯಾಗಬೇಕು. ತಪ್ಪಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಎಚ್ಚರಿಕೆದರು.ಬುಧವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ನಾರ್ಕೋ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ನೋಂದಣಿ ಯಾಗದೆ ನಡೆಸುತ್ತಿರುವ ವ್ಯಸನ ವಿಮುಕ್ತಿ ಕೇಂದ್ರಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಕುರಿತು ಸ್ಪಷ್ಟ ನಿರ್ದೇಶನಗಳನ್ನು ನೀಡಿದರು.ಜಿಲ್ಲೆಯಲ್ಲಿರುವ ಪ್ರತಿಯೊಂದು…

Read More

ಹಗಲು ಹೊತ್ತಿನಲ್ಲಿಯೂ ವಾಹನಗಳಲ್ಲಿ ಲೈಟ್ ಹಾಕಿಕೊಂಡು ಓಡಿಸುತ್ತಾರೆ ಗೊತ್ತಾ !

ಹಗಲು ಹೊತ್ತಿನಲ್ಲಿಯೂ ಈತ ಬೈಕ್, ಕಾರ್‌ನಲ್ಲಿ ಲೈಟ್ ಹಾಕಿಕೊಂಡು ಹೋಗುತ್ತಿದ್ದನ್ನೆಲ್ಲಾ, ಇವನಿಗೆ ಗ್ಯಾನ ಇಲ್ವಾ ಎಂದು ಹೀಗೆಳೆಯುತ್ತಿರಾ. ಈ ರೀತಿ ನೀವು ಅಂದು ಕೊಂಡರೆ ಅದು ತಪ್ಪು. ಯಾಕೇಂದರೆ ಹೊಸ ವಿಷಯ ತಿಳಿದುಕೊಂಡಿಲ್ಲ ಎಂದು ಅರ್ಥ. ಹಾಗಾದರೆ ಯಾಕೇ ಲೈಟ್ ಹಾಕಿಕೊಂಡು ವಾಹನ ಓಡಿಸುತ್ತಾರೆ ಗೊತ್ತಾ.. ಇಲ್ಲಿ ಕೇಳಿ. ಹೊಸ ಬೈಕ್‌ಗಳಲ್ಲಿ ಇಂಜಿನ್ ಸ್ಟಾರ್ಟ್ ಆದ ತಕ್ಷಣ ಹೆಡ್‌ಲೈಟ್ ಆನ್ ಆಗಲು ‘ಆಟೋಮ್ಯಾಟಿಕ್ ಹೆಡ್‌ಲೈಟ್ ಆನ್’ ವ್ಯವಸ್ಥೆಯೇ ಕಾರಣ. ಈ ಹೆಡ್‌ಲೈಟ್ ಯಾಕೆ ಆಫ್ ಆಗಲ್ಲ? (ಆಟೋಮ್ಯಾಟಿಕ್…

Read More

ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದೇಶದಲ್ಲಿರುವ ಜನರ ಬಡತನ ನಿರ್ಮೂಲನೆ ಮಾಡಲು ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ; ಸಂಸದ ಯದುವೀರ್

ಮೈಸೂರು: ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದೇಶದಲ್ಲಿರುವ ಜನರ ಬಡತನ ನಿರ್ಮೂಲನೆ ಮಾಡಲು ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.ಮಂಗಳವಾರ ನಗರದ ಕಾಡಾ ಸಾರ್ವಜನಿಕ ಕಚೇರಿ ಕಟ್ಟಡದ ಹೊರಾಂಗಣದಲ್ಲಿ ಆಯೋಜಿಸಿದ್ದ ಕೇಂದ್ರ ಸರ್ಕಾರದ ವಿವಿಧ ಜನಕಲ್ಯಾಣ ಹಾಗೂ ಪ್ರಗತಿಪರ ಯೋಜನೆಗಳ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೃಷಿಕರು,ಕಾರ್ಮಿಕರು,ರೈತರು,ಜನಸಾಮಾನ್ಯರಿಗೆ ಹಲವಾರು ಯೋಜನೆಗಳು ಅನುಷ್ಠಾನಗೊಂಡಿದ್ದರೂ ಕೇಂದ್ರದ ಯೋಜನೆಗಳ ಬಗ್ಗೆ ಸರಿಯಾದ ಮಾಹಿತಿ ಸಿಗದೆ ಬಳಸಿಕೊಳ್ಳುವ ಕೆಲಸವಾಗುತ್ತಿಲ್ಲ. ಹಾಗಾಗಿ…

Read More