ಪ್ರಕೃತಿಯನ್ನು ಉಳಿಸುವ ಮೂಲಕವೇ ಮಾನವಕುಲದ ಭವಿಷ್ಯವನ್ನು ಸುರಕ್ಷಿತಗೊಳಿಸಲು ಸಾಧ್ಯ; ಹಿರಿಯ ಸಾಹಿತಿ ಪ್ರೊ. ಕೆ. ಕಾಳಚೆನ್ನೆಗೌಡ
ಮೈಸೂರು: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಪ್ರಕೃತಿಯನ್ನು ಉಳಿಸುವ ಮೂಲಕವೇ ಮಾನವಕುಲದ ಭವಿಷ್ಯವನ್ನು ಸುರಕ್ಷಿತಗೊಳಿಸಲು ಸಾಧ್ಯ ಎಂದು ಹಿರಿಯ ಸಾಹಿತಿ ಹಾಗೂ ಶಿಕ್ಷಣ ತಜ್ಞ ಪ್ರೊ. ಕೆ. ಕಾಳಚೆನ್ನೆಗೌಡ ತಿಳಿಸಿದರು.ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸಮರ್ಥನಂ ಅಂಗವಿಕಲರ ಸಂಸ್ಥೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ 8ನೇ ವರ್ಷದ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,ಪ್ರಕೃತಿ ಮತ್ತು ಪರಿಸರ ಮಾನವನ ಬದುಕಿನ ಅವಿಭಾಜ್ಯ ಅಂಗಗಳಾಗಿವೆ. ವ್ಯಕ್ತಿಯ ಬೆಳವಣಿಗೆಗೆ ಕುಟುಂಬದ ಜೊತೆಗೆ ಉತ್ತಮ ಪರಿಸರವೂ ಅಗತ್ಯವಾಗಿದೆ….