Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ: ಗೊರಹಳ್ಳಿ ಜಗದೀಶ್

 ದೊಡ್ಡಕಮರಹಳ್ಳಿ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ  ಪಿರಿಯಾಪಟ್ಟಣ : ಶಿಕ್ಷಕರು ನೀಡುವ ಶಿಕ್ಷಣ, ಸಂಸ್ಕಾರ ಹಾಗೂ ಮಾರ್ಗದರ್ಶನವು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ ಎಂದು ಪಿರಿಯಾಪಟ್ಟಣ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ನಿಕಟ ಪೂರ್ವ ಅಧ್ಯಕ್ಷ ಗೊರಹಳ್ಳಿ ಜಗದೀಶ್ ಹೇಳಿದರು. ತಾಲೂಕಿನ ದೊಡ್ಡಕಮರಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಭಾನುವಾರ 2006-07ನೇ ಸಾಲಿನ ವಿದ್ಯಾರ್ಥಿಗಳಿಂದ ಆಯೋಜಿಸಿದ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಶಿಕ್ಷಕರು ಕಲಿಸುವ ಪಾಠಗಳು ತರಗತಿಗೆ ಮಾತ್ರ ಸೀಮಿತವಾಗದೆ, ಜೀವನದ…

Read More

ಸಹಜ ರಂಗ’ ರಂಗ ತರಬೇತಿ ಶಿಬಿರ ಉದ್ಘಾಟನೆ

ಮೈಸೂರು: ‘ನಿರಂತರ’ ರಂಗ ಸಂಸ್ಥೆಯ ವತಿಯಿಂದ ಯುವ ಸಮುದಾಯ ಹಾಗೂ ಜೆನ್ ಜೀ ತಲೆಮಾರನ್ನು ಒಳಗೊಂಡ ಸತತ ೨೦ನೇ ವರ್ಷದ ‘ಸಹಜ ರಂಗ’ ಡಿವೈಸ್ಡ್ ರಂಗ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವು ನಗರದ ಗಾಂಧಿ ಭವನದಲ್ಲಿ ಸಕ್ರಿಯ ರಂಗಾಸಕ್ತರ ಪಾಲ್ಗೊಳ್ಳುವಿಕೆಯೊಂದಿಗೆ ಯಶಸ್ವಿಯಾಗಿ ನೆರವೇರಿತು.ಕಾರ್ಯಕ್ರಮದ ಪ್ರಸ್ತಾವಿಕ ನುಡಿಗಳನ್ನಾಡಿದ ‘ನಿರಂತರ’ ಸಂಸ್ಥೆಯ ನಿರ್ದೇಶಕ ಪ್ರಸಾದ್ ಕುಂದೂರು, “ಒಟ್ಟಾಗಿ ಕೆಲಸ ಮಾಡುವ ಮೂಲಕ ಪರಸ್ಪರ ಧೈರ್ಯ ತುಂಬಿಕೊಳ್ಳುವುದು ಮತ್ತು ನವಚೈತನ್ಯ ಪಡೆಯುವುದು ಇಂತಹ ಸಮಾವೇಶಗಳ ಮುಖ್ಯ ಉದ್ದೇಶ. ‘ಸಹಜ ರಂಗ’ ಕೇವಲ…

Read More

ವಿಜಯ ವಿಠ್ಠಲ ವಿದ್ಯಾಶಾಲೆಗೆ ಮೈಸೂರು ಮಹಾನಗರ ಜೂನಿಯರ್ ಬ್ಯಾಂಡ್ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ

ಮೈಸೂರು; ಮೈಸೂರು ಮಹಾನಗರಕ್ರೀಡಾ ಭಾರತಿ ಹಾಗೂ ಬಿ.ಎಸ್.ಎಸ್. ವಿದ್ಯೋದಯ ಜಂಟಿಯಾಗಿ ಆಯೋಜಿಸಿದ್ದ ‘ಮೈಸೂರು ಮಹಾನಗರಜೂನಿಯರ್ ಬ್ಯಾಂಡ್ ಸ್ಪರ್ಧೆ’ಯಲ್ಲಿ ಸರಸ್ವತಿಪುರಂನ ವಿಜಯ ವಿಠ್ಠಲ ವಿದ್ಯಾಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಬಹುಮಾನವನ್ನು ತಮ್ಮದಾಗಿಸಿಕೊಂಡಿದ್ದಾರೆ. ಸ್ಪರ್ಧೆಯಲ್ಲಿ ಅತ್ಯುತ್ತಮ ಸಂಗೀತ ಪ್ರತಿಭೆ, ಶಿಸ್ತು, ಸಮನ್ವಯತೆ ಮತ್ತುತಂಡದ ಭಾವನೆಯನ್ನು ಪ್ರದರ್ಶಿಸಿದ ವಿದ್ಯಾರ್ಥಿಗಳು ತೀರ್ಪುಗಾರರು ಹಾಗೂ ಆಯೋಜಕರಿಂದ ಮೆಚ್ಚುಗೆ ಪಡೆದರು.

Read More

ನಗರಪಾಲಿಕೆ ವ್ಯಾಪ್ತಿಯಲ್ಲಿ ತೆರಿಗೆ ಬಾಕಿದಾರರ ವಿರುದ್ಧ ನಿಯಮಾನುಸಾರ ಕಠಿಣ ಕ್ರಮಕ್ಕೆ ಆಯುಕ್ತರ ಸೂಚನೆ

ಮೈಸೂರು; ನಗರಪಾಲಿಕೆಯ ವ್ಯಾಪ್ತಿಯಲ್ಲಿ ತೆರಿಗೆಯನ್ನು ಬಾಕಿ ಉಳಿಸಿಕೊಂಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಕೂಡಲೇ ಬಾಕಿಯನ್ನು ವಸೂಲಿ ಮಾಡುವಂತೆ ನಗರಪಾಲಿಕೆಯ ಆಯುಕ್ತೆ ಸವಿತಾ ಅಧಿಕಾರಿಗಳಿಗೆ ಸೂಚಿಸಿದರು. ಮಹಾನಗರ ಪಾಲಿಕೆ ವ್ಯಾಪ್ತಿಯ ತೆರಿಗೆ ಬಾಕಿದಾರರ ಕುರಿತು ಮೈಸೂರು ಮಹಾನಗರ ಪಾಲಿಕೆಯ ಹೆಚ್ಚುವರಿ ಆಯುಕ್ತೆ ವೀಣಾ, ಉಪ ಆಯುಕ್ತರು (ಕಂದಾಯ) ಸೋಮಶೇಖರ್ ಹಾಗೂ ವಲಯಾಧಿಕಾರಿಗಳು, ಕಂದಾಯ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರೊಂದಿಗೆ ಸೋಮವಾರ ವಿಶೇಷ ಪರಿಶೀಲನಾ ಸಭೆ ನಡೆಸಿದರು.ಸಭೆಯಲ್ಲಿ ಪಾಲಿಕೆ ವ್ಯಾಪ್ತಿಯ ಪ್ರತಿಯೊಂದು ವಾರ್ಡ್ನ ತೆರಿಗೆ ಬಾಕಿದಾರರ ವಿವರಗಳನ್ನು ಪ್ರತ್ಯೇಕವಾಗಿ…

Read More

ಲಕ್ಷ್ಮಿನರಸಿಂಹಸ್ವಾಮಿ ದೇವಸ್ಥಾನದಲ್ಲಿ ಅದ್ಧೂರಿ ಶ್ರೀ ಕೃಷ್ಣಜನ್ಮಾಷ್ಠಮಿ

ಮೈಸೂರು; ನಗರದ ಕಾಳಿದಾಸ ರಸ್ತೆಯಲ್ಲಿರುವ ಯದುಗಿರಿ ಯತಿರಾಜ ಇದರ ಶಾಖಾ ಮಠ ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಸ್ಥಾನದಲ್ಲಿ ಶ್ರೀ ಕೃಷ್ಣಜನ್ಮಾಷ್ಠಮಿಯನ್ನು ಅದ್ಧೂರಿಯಾಗಿ ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಬೆಳಿಗ್ಗೆಯಿಂದಲೇ ದೇವಸ್ಥಾನವನ್ನು ಶುಚಿಗೊಳಿಸಿ, ತಳಿರು ತೋರಣಗಳಿಂದ ಸಿಂಗರಿಸಿ, ವಿಧವಿಧವಾದ ರಂಗೋಲಿ ಬಿಡಿಸಿ ಕಂಗೊಳಿಸಲಾಗಿತ್ತು. ಶ್ರೀ ಕೃಷ್ಣನ ಮಂಟಪಕ್ಕೆ ಫಲವಸ್ತçಗಳನ್ನು ಕಟ್ಟಿ, ಹೂವಿನಿಂದ ಅಲಂಕಾರ ಮಾಡಲಾಗಿತ್ತು. ಬಂದ ಎಲ್ಲ ಭಕ್ತಾದಿಗಳಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ದೇವಸ್ಥಾನದ ಟ್ರಸ್ಟಿ ಶಾಂತಾರ0, ಅರ್ಚಕ ರಾಘವನರಸಿಂಹನ್, ನಾರಾಯಣ ಹಾಗೂ ಅಪಾರ ಭಕ್ತವೃಂದ ಉಪಸ್ಥಿತರಿದ್ದರು.

Read More

ಧರ್ಮದ ಉಳಿವಿಗೆ ಹಬ್ಬಗಳ ಆಚರಣೆಯ ಮಹತ್ವವನ್ನ ಯುವಪೀಳಿಗೆಗೆ ತಿಳಿಸುವುದು ಅಗತ್ಯ: ಶೋಭಾ ದಿನೇಶ್

ಮೈಸೂರು: ಹಿಂದೂ ಧರ್ಮ ಉಳಿಯಬೇಕೆಂದರೆ ಇಂತಹ ಹಬ್ಬಗಳು ಎಲ್ಲಾ ಕಡೆಗಳಲ್ಲಿ ಒಟ್ಟುಗೂಡಿ ನಡೆಸಲ್ಪಡುವುದು ಅತಿ ಮುಖ್ಯವಾಗಿದೆ ಎಂದು ಪಂಚಾಯತ್ ಡೆವಲಪ್ಮೆಂಟ್ ಅಧಿಕಾರಿ ಶೋಭಾ ದಿನೇಶ್ ಹೇಳಿದರು.ಶ್ರೀ ದುರ್ಗಾ ಫೌಂಡೇಶನ್ ಟ್ರಸ್ಟ್ ವತಿಯಿಂದ ಶ್ರೀ ವರಮಹಾಲಕ್ಷಿ÷್ಮ ಹಬ್ಬದ ಅಂಗವಾಗಿ ಆಯೋಜಿಸಿದ ವರಮಹಾಲಕ್ಷಿ÷್ಮ ಜೊತೆ ಫೋಟೋ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿ ಮಾತನಾಡಿದ ಅವರು, ಮಕ್ಕಳಿಗೆ ಆಸ್ತಿಯನ್ನು ಮಾಡದೆ ಮಕ್ಕಳನ್ನೇ ಆಸ್ತಿ ಮಾಡಬೇಕು. ಮಾತ್ರವಲ್ಲದೆ ನಮ್ಮ ಧರ್ಮದಜಾಗೃತಿಯನ್ನು ಎಲ್ಲರಲ್ಲೂ ಮೂಡಿಸಬೇಕು ಎಂದು ತಿಳಿಸಿದರು…

Read More

ನೀವೇ ಉದ್ಯೋಗ ಸೃಷ್ಟಿ ಮಾಡುವ ಹಾಗೆ ಬೆಳೆಯಿರಿ : ಡಾ ಉತ್ಸವ್ ಅಗರ್ವಾಲ್.

   ನಂಜನಗೂಡು : ಮುಂದುವರೆಯುತ್ತಿರುವ ತಂತ್ರಜ್ಞಾನದ ಹಾವಳಿಯಿಂದ ಸರ್ಕಾರಗಳು ಎಲ್ಲರಿಗೂ ಉದ್ಯೋಗ ನೀಡಲು ಸಾಧ್ಯವಾಗುವುದಿಲ್ಲ ಆದರೆ ನಾವೇ ಇತರರಿಗೆ ಉದ್ಯೋಗ ಸೃಷ್ಟಿ ಮಾಡಿಕೊಡುವ ಹಾಗೆ ಬೆಳೆಯ ಬೇಕು ಎಂದು ಭೋರುಕ ಫ್ಯಾಬ್ಕಾನ್ಸ್ ಪ್ರವೇಟ್ ಲಿಮಿಟೆಡ್ ನ ಅಧ್ಯಕ್ಷ ಡಾ ಉತ್ಸವ ಅಗರ್ವಾಲ್ ಹೇಳಿದರು.    ತಾಲ್ಲೂಕಿನ ತಾಂಡವಪುರದ ಎಂ ಐ ಟಿ ತಾಂತ್ರಿಕ ಮಹಾ ವಿದ್ಯಾನಿಲಯದ ಆವರಣದಲ್ಲಿ ಶನಿವಾರ ಪ್ರಥಮ ವರ್ಷದ ತಾಂತ್ರಿಕ ಕಾಲೇಜಿಗೆ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಸ್ವಾಗತಿಸುವ ‘ ಅರಂಭ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.  …

Read More

ಜನರ ಕಷ್ಟವನ್ನು ಪರಿಹರಿಸಲು ರಾಜ್ಯ ಸರ್ಕಾರದಿಂದ ಪ್ರಜಾ ಸೇವೆ; ಶಾಸಕ ರ‍್ಶನ್ ಧ್ರುವನಾರಾಯಣ

ನಂಜನಗೂಡು; ಜನರ ಕಷ್ಟವನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ನೀಡುವ ಸಲುವಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರ ಕಾಂಗ್ರೆಸ್ ಸರ್ಕಾರ ಪ್ರಜಾ ಸೇವಾ ಕಾರ್ಯಕ್ರಮವನ್ನು ರೂಪಿಸಿ ಜನರ ಮನೆ ಬಾಗಿಲಿಗೆ ಸೇವೆಯನ್ನು ಒದಗಿಸಲು ಮುಂದಾಗಿದೆ ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.   ಅವರು ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪ್ರಜಾಸೇವೆ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.  ಸಾರ್ವಜನಿಕರು ಇಲಾಖೆಗಳಿಗೆ ಅಲೆಸುವುದನ್ನು ತಪ್ಪಿಸಿ ಸಾರ್ವಜನಿಕರ ಮನೆ ಬಾಗಿಲಿಗೆ ತೆರಳಿ ಅಹವಾಲು ಸ್ವೀಕರಿಸಿ ಸ್ಥಳದಲ್ಲಿಯೇ ಪರಿಹರಿಸುವ…

Read More

ಎಷ್ಟೇ ತಂತ್ರಜ್ಞಾನ ಬಂದರೂ ಶಿಕ್ಷಕರ ಸ್ಥಾನವನ್ನು ಎಐ ಭರ್ತಿ ಮಾಡಲು ಸಾಧ್ಯವಿಲ್ಲ : ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು: ತಂತ್ರಜ್ಞಾನ ಮತ್ತು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (ಂI) ಬೆಳವಣಿಗೆಯ ಇಂದಿನ ಯುಗದಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಮಾಹಿತಿ ಲಭ್ಯವಿದ್ದರೂ, ಶಿಕ್ಷಕರ ಸ್ಥಾನವನ್ನು ಎಂದಿಗೂ ಯಾವುದೇ ತಂತ್ರಜ್ಞಾನವೂ ಭರ್ತಿ ಮಾಡಲು ಸಾಧ್ಯವಿಲ್ಲ ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.ಶನಿವಾರ ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮೈಸೂರು, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ರವರ 138 ನೇ ಜನ್ಮ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ…

Read More

ಜೀವನದ ಸಾರ್ಥಕತೆಗೆ ಶ್ರೀ ಕೃಷ್ಣನ ತತ್ವ ಸಂದೇಶಗಳು ದಾರಿದೀಪ : ಯಾದವ ಸಂಘದ ಅಧ್ಯಕ ಪಿ.ಡಿ ಪ್ರಸನ್ನ

ಶ್ರೀಲಕ್ಷ್ಮಿ ವೆಂಕಟರಮಣ ದೇವಸ್ಥಾನದಲ್ಲಿ 13ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಪಿರಿಯಾಪಟ್ಟಣ: ಮನುಷ್ಯನ ಜೀವನದ ಸಾರ್ಥಕತೆ ಹಾಗೂ ಧರ್ಮ ಮಾರ್ಗದಲ್ಲಿ ನಡೆಯಲು ಶ್ರೀ ಕೃಷ್ಣನ ಸಂದೇಶಗಳು ಎಲ್ಲರಿಗೂ ದಾರಿದೀಪವಾಗಿವೆ ಎಂದು ತಾಲೂಕು ಯಾದವ ಸಂಘದ ಅಧ್ಯಕ್ಷ ಪಿ.ಡಿ ಪ್ರಸನ್ನ ತಿಳಿಸಿದರು.  ಪಟ್ಟಣ ಚನ್ನಪಟ್ಟಣದ ಬೀದಿಯ ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ತಾಲೂಕು ಶ್ರೀಕೃಷ್ಣ ಯಾದವ(ಗೊಲ್ಲ ) ಸಂಘ ಇವರ ವತಿಯಿಂದ ಆಯೋಜಿಸಲಾಗಿದ್ದ 13ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ…

Read More