ಆಲಮಟ್ಟಿ ಜಲಾಶಯದಲ್ಲಿದೆ ಕೇವಲ 9 ಟಿಎಂಸಿಯಷ್ಟು ನೀರು – ಕೃಷ್ಣೆಯ ಒಡಲಲ್ಲಿ ನೀರಿಗಾಗಿ ಹಾಹಾಕಾರ
ವಿಜಯಪುರ: ಪಂಚನದಿಗಳ ಬೀಡು ಎಂದೇ ಹೆಸರಾಗಿರುವ ವಿಜಯಪುರ (Vijayapura) ಜಿಲ್ಲೆಯಲ್ಲಿ ಇದೀಗ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಆಲಮಟ್ಟಿ ಜಲಾಶಯದಲ್ಲಿ (Almatti Dam) ಕೇವಲ 9 ಟಿಎಂಸಿ ನೀರಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಜಿಲ್ಲೆಯ ಜನರು ನೀರಿಗಾಗಿ ಕೃಷ್ಣಾ ನದಿ (Krishna River) ಮೇಲೆ ಅವಲಂಬಿತರಾಗಿದ್ದಾರೆ. ಪಕ್ಕದ ಬಾಗಲಕೋಟೆ (Bagalkote) ಜಿಲ್ಲೆ ಕೂಡ ಕೃಷ್ಣಾ ನದಿ ಮೇಲೆ ಅವಲಂಬಿತವಾಗಿದೆ. ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಗೆ ಆಲಮಟ್ಟಿ ಜಲಾಶಯದಿಂದಲೇ ನೀರು ಸಪ್ಲೈ ಆಗುತ್ತದೆ. ಆದರೆ ಸದ್ಯ ಜಲಾಶಯದಲ್ಲಿ 9 ಟಿಎಂಸಿ ನೀರು…