Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಕೃಷಿ ಭೂಮಿಯ ಆರೋಗ್ಯವನ್ನು ಕಾಪಾಡಲು ಬಹುಬೆಳೆ ಪದ್ಧತಿ ಅಳವಡಿಸಿಕೊಳ್ಳುವುದು ಅತ್ಯಗತ್ಯ; ಪ್ರಧಾನ ವಿಜ್ಞಾನಿ ಡಾ. ಎಂ.ಜೆ. ಚಂದ್ರೇಗೌಡ

ಮೈಸೂರು; ಕೃಷಿ ಭೂಮಿಯ ಆರೋಗ್ಯವನ್ನು ಕಾಪಾಡಲು ಬಹುಬೆಳೆ ಪದ್ಧತಿ ಅಳವಡಿಸಿಕೊಳ್ಳುವುದು ಅತ್ಯಗತ್ಯವಾಗಿದೆ ಎಂದು ಬೆಂಗಳೂರಿನ ಐಸಿಎಆರ್-ಅಟಾರಿ ವಲಯ-11ರ ಪ್ರಧಾನ ವಿಜ್ಞಾನಿ ಡಾ. ಎಂ.ಜೆ. ಚಂದ್ರೇಗೌಡ ಹೇಳಿದರು.ಮೈಸೂರಿನ ನಾಗನಹಳ್ಳಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಐಸಿಎಆರ್ ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರ, ಸುತ್ತೂರು ಕೃಷಿ ಭೂಮಿ ಉಳಿಸಿ ಅಭಿಯಾನ ಹಾಗೂ ಬದಲಾದ ಹವಾಮಾನಕ್ಕೆ ಸೂಕ್ತ ಬೆಳೆಗಳ ಆಯ್ಕೆ ಕುರಿತು ರೈತ-ವಿಜ್ಞಾನಿಗಳ ಸಂವಾದ ಭಾರತೀಯ ಕೃಷಿ ಅನುಸಂಧಾನ ಪರಿಷತ್, ಜೆಎಸ್‌ಎಸ್ ಕೃಷಿ ವಿಜ್ಞಾನ ಕೇಂದ್ರ, ಸುತ್ಥೂರು, ಕೃಷಿ ಇಲಾಖೆ ಮೈಸೂರು,…

Read More

ವಶಪಡಿಸಿಕೊಂಡಿದ್ದ 10.55 ಲಕ್ಷರೂ ಮೌಲ್ಯದ ಮಾದಕ ವಸ್ತುಗಳ ನಾಶ

ಮೈಸೂರು: ಜಿಲ್ಲೆಯಲ್ಲಿ ಎನ್.ಡಿ.ಪಿ.ಎಸ್. ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಮಾದಕ ವಸ್ತು, ದ್ರವ್ಯಗಳನ್ನು ನ್ಯಾಯಾಲಯದ ಆದೇಶದಂತೆ ಇಂದು ಜಯಪುರದಲ್ಲಿರುವ ಜಿಪ್ಸ್ ಬೈಯೋಟೆಕ್ ಸಂಸ್ಥೆಯ ಕುಲುಮೆಯಲ್ಲಿ ಜಿಲ್ಲಾ ಮಾದಕ ವಸ್ತುಗಳ ವಿಲೇವಾರಿ ಸಮಿತಿಯ ವತಿಯಿಂದ ನಿಯಮಾನುಸಾರವಾಗಿ ನಾಶಪಡಿಸಲಾಯಿತು ಎಂದು ಪೊಲೀಸ್ ಅಧೀಕ್ಷಕರಾದ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.ಮೈಸೂರು ಜಿಲ್ಲಾ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ 27 ಎನ್.ಡಿ.ಪಿ.ಎಸ್ ಪ್ರಕಣಗಳಲ್ಲಿ ಒಟ್ಟು 19 ಕೆ.ಜಿ 404 ಗ್ರಾಂ ಮಾದಕ ವಸ್ತುವನ್ನು (19 ಕೆ.ಜಿ 414 ಗ್ರಾಂ ಗಾಂಜಾ ಮತ್ತು 6 ಗ್ರಾಂ ಎಂ.ಡಿ.ಎA.ಎ ಪೌಡರ್)…

Read More

ಕೆಇಆರ್‌ಸಿಗೆ ಸೆಸ್ಕ್ ವತಿಯಿಂದ ಆಕ್ಷೇಪಣೆ ಸಲ್ಲಿಕೆ ಟಿಪಿಸಿಎಲ್‌ನ ವ್ಯವಹಾರ ಮಾದರಿಯು ಹೆಚ್ಚುವರಿ ದರ ಪಾವತಿಸುವ ಗ್ರಾಹಕರನ್ನು ಆಕರ್ಷಿಸುವುದರ ಮೇಲೆ ಕೇಂದ್ರೀಕೃತವಾಗಿದೆ. ಇದರಿಂದ ಸೆಸ್ಕ್ ತನ್ನ 80% ಕ್ರಾಸ್ ಸಬ್ಸಿಡಿ ಪಡೆಯುವ ವರ್ಗದ ಗ್ರಾಹಕರಿಗೆ ಸೇವೆ ಒದಗಿಸಲು ಅವಲಂಬಿಸಿರುವ ಆರ್ಥಿಕ ಆಧಾರವೇ ದುರ್ಬಲಗೊಳ್ಳುವ ಸಾಧ್ಯತೆಯಿದೆ.

Read More

ವಿಜಯ ವಿಠ್ಠಲದಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮ

ಮೈಸೂರು; ನಗರದ ವಿಜಯ ವಿಠ್ಠಲ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಸರಸ್ವತಿಪುರಂ ಪೋಲೀಸ್ ಠಾಣೆಯವರು ಆಯೋಜಿಸಿದ್ದರು. ಕಾರ್ಯಕ್ರಮವನ್ನು ಸರಸ್ವತಿಪುರಂ ಪೋಲೀಸ್ ಠಾಣೆಯ ಆರಕ್ಷಕ ಉಪ ನಿರೀಕ್ಷಕರಾದ ಭವ್ಯ ಮತ್ತು ಸಾಮಾಜಿಕ ಕಾರ್ಯಕರ್ತ ಮಹೇಶ್‌ರವರು ಉದ್ಘಾಟಿಸಿದರು. ಬಳಿಕ ಮಹೇಶ್ ಮಾತನಾಡಿ, ವಿದ್ಯಾರ್ಥಿ ಜೀವನವು ಅತ್ಯಂತ ಅಮೂಲ್ಯವಾದದ್ದು. ಈ ಸಮಯದಲ್ಲಿ ಸರಿಯಾದ ಮಾರ್ಗವನ್ನು ಆರಿಸಿಕೊಂಡರೆ, ಜೀವನ ಯಶಸ್ವಿಯಾಗುತ್ತದೆ. ಆದರೆ ಕೆಲವೊಮ್ಮೆ ಕೆಟ್ಟ ಸ್ನೇಹ, ಕುತೂಹಲ, ಒತ್ತಡ ಮತ್ತು ಸಾಮಾಜಿಕ ಮಾಧ್ಯಮಗಳ ಪ್ರಭಾವದಿಂದ ಕೆಲವು…

Read More

ವಿಜಯನಗರ ಉಪ ವಿಭಾಗದ ಪೊಲೀಸರಿಂದ ಜಾಗೃತಿ ಜಾಥಾ

ಮಾದಕ ವ್ಯಸನದಿಂದ ದೂರವಿರಿ; ಎಸಿಪಿ ರವಿಪ್ರಸಾದ್ಮೈಸೂರು: ಮಾದಕ ವಸ್ತುಗಳ ಸೇವನೆಯು ವ್ಯಕ್ತಿಯ ಆರೋಗ್ಯ, ಶಿಕ್ಷಣ, ಕುಟುಂಬ ಹಾಗೂ ಸಮಾಜದ ಮೇಲೆ ಗಂಭೀರ ದುಷ್ಪರಿಣಾಮಗಳನ್ನು ಉಂಟುಮಾಡುವುದರ ಜೊತೆಗೆ ಅಪರಾಧ ಚಟುವಟಿಕೆಗಳಿಗೆ ದಾರಿಮಾಡಿಕೊಡುತ್ತದೆ ಎಂದು ವಿಜಯನಗರ ಉಪವಿಭಾಗದ ಉಪ ಪೊಲೀಸ್ ಆಯುಕ್ತ ರವಿಪ್ರಸಾದ್ ಹೇಳಿದರು.ಅಂತಾರಾಷ್ಟಿçÃಯ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ, ಮೈಸೂರು ನಗರ ಪೊಲೀಸ್ ಸಹಯೋಗದೊಂದಿಗೆ ವಿಜಯನಗರ ಪೊಲೀಸ್ ಠಾಣಾ ವತಿಯಿಂದ ಗುರುವಾರ ಆಯೋಜಿಸಲಾಗಿದ್ದ ಜಾಗೃತಿ ಸಪ್ತಾಹ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು,ಸಾರ್ವಜನಿಕರು ವಿಶೇಷವಾಗಿ ಯುವಜನತೆ ಮತ್ತು…

Read More

ಚಾಮರಾಜನಗರದಲ್ಲೂ ರಂಗಾಯಣ ಸ್ಥಾಪನೆಯಾಗಬೇಕು: ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್

ಚಾಮರಾಜನಗರ: ರಾಜ್ಯದ ವಿವಿಧ ಕಡೆ ರಂಗಾಯಣ ಇರುವಂತೆಯೇ ಜಾನಪದ ಕಲೆಗಳ ತವರೂರು ಎನಿಸಿದ ಚಾ.ನಗರದಲ್ಲೂ ರಂಗಾಯಣ ಸ್ಥಾಪಿಸಬೇಕು ಎಂದು ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್‍ ಮುನ್ನಾ ಒತ್ತಾಯಿಸಿದರು.ನಗರದ ಡಾ. ರಾಜಕುಮಾರ್‍ ರಂಗಮಂದಿರದಲ್ಲಿ, ರಂಗಾಯಣ ಶಿವಮೊಗ್ಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ರಂಗವಾಹಿನಿ, ರಾಜ್ಯ ರೈತ ಸಂಘ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೊಳುವಾರು ಮಹಮ್ಮದ್ ಕುಂಇ್ಞು ಅವರ ಕಾದಂಬರಿ ಆಧಾರಿತ ಸ್ವಾತಂತ್ರ್ಯದ ಓಟ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಗಡಿ ಜಿಲ್ಲೆ ಚಾಮರಾಜನಗರ…

Read More

ಜನ ವಿಶ್ವಾಸ ಕಾಯ್ದೆ-2026 ಕುರಿತು ಆರ್‌ಪಿಎಫ್ ಸಿಬ್ಬಂದಿಗೆ ಜಾಗೃತಿ ಹಾಗೂ ಮಾಹಿತಿ ಕಾರ್ಯಕ್ರಮ

ಮೈಸೂರು; ಜನ ವಿಶ್ವಾಸ (ತಿದ್ದುಪಡಿ ನಿಬಂಧನೆಗಳು) ಕಾಯ್ದೆ, 2026 ಹಾಗೂ ಅದರ ಅನ್ವಯ ರೈಲ್ವೆ ಕಾಯ್ದೆ, 1989 ಮತ್ತು ಕಲ್ಕತ್ತಾ ಮೆಟ್ರೋ ರೈಲ್ವೆ (ಕಾರ್ಯಾಚರಣೆ ಮತ್ತು ನಿರ್ವಹಣೆ) ತಾತ್ಕಾಲಿಕ ನಿಬಂಧನೆಗಳ ಕಾಯ್ದೆ, 1985 ರಲ್ಲಿ ಮಾಡಲಾದ ತಿದ್ದುಪಡಿಗಳ ಕುರಿತು ಮಾಹಿತಿ ಮತ್ತು ಜಾಗೃತಿ ಕಾರ್ಯಕ್ರಮವನ್ನು ಇಂದು ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.ಈ ಕಾರ್ಯಕ್ರಮದಲ್ಲಿ ಮೈಸೂರು ಹಾಗೂ ಹುಬ್ಬಳ್ಳಿ ವಿಭಾಗಗಳ ರೈಲ್ವೆ ರಕ್ಷಣಾ ಪಡೆ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದರು.ಭಾರತದ ರಾಷ್ಟçಪತಿಗಳ ಅನುಮೋದನೆ ಪಡೆದಿರುವ ಹಾಗೂ…

Read More

ಜೂನ್ 27 ರಂದು `ಹಕ್ಕಿ ಮತ್ತು ಅವಳು’ ಎಂಬ ವಿಶಿಷ್ಟ ಏಕವ್ಯಕ್ತಿ ಕಾವ್ಯಾಭಿನಯ ರಂಗಪ್ರಯೋಗ

ಮೈಸೂರು; ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆ ವತಿಯಿಂದ ಹಕ್ಕಿ ಮತ್ತು ಅವಳು’ ಎಂಬ ವಿಶಿಷ್ಟ ಏಕವ್ಯಕ್ತಿ ಕಾವ್ಯಾಭಿನಯ ರಂಗಪ್ರಯೋಗವು ಜೂನ್ 27 ರ ಶನಿವಾರ ಸಂಜೆ 6 ಗಂಟೆಗೆ ನಗರದ ಹಾರ್ಡಿ್ವಕ್ ಶಾಲಾ ಆವರಣದಲ್ಲಿರುವ ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿದೆ.ಖ್ಯಾತ ರಂಗಕರ್ಮಿ ಡಾ. ಶ್ರೀಪಾದ ಭಟ್ ಅವರ ಪರಿಕಲ್ಪನೆ, ವಿನ್ಯಾಸ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿರುವ ಈ ರಂಗಪ್ರಯೋಗದಲ್ಲಿ ಕಾವ್ಯ ಹಂದೆ ಅವರು ಅಭಿನಯಿಸಲಿದ್ದಾರೆ. ಕನ್ನಡದಲ್ಲಿನ ಹಾಗೂ ಕನ್ನಡಕ್ಕೆ ಅನುವಾದಗೊಂಡಿರುವ ಆಯ್ದ ಕವನಗಳು, ಕಥೆಗಳು ಮತ್ತು…

Read More

ಜುಲೈ 1 ರಿಂದ 31 ರವರೆಗೆ ಜಿಲ್ಲೆಯಾದ್ಯಂತ ಮುಂಗಾರು ಬೆಳೆ ಸಮೀಕ್ಷೆ

ಶೇ 100 ರಷ್ಟು ಬೆಳೆ ಸಮೀಕ್ಷೆ ಪೂರ್ಣಗೊಳಿಸಿ : ಜಿ. ಲಕ್ಷ್ಮೀಕಾಂತ ರೆಡ್ಡಿಮೈಸೂರು: ಜಿಲ್ಲೆಯಾದ್ಯಂತ ಜುಲೈ 1 ರಿಂದ 31 ರವರೆಗೆ ಜಿಲ್ಲೆಯಾದ್ಯಂತ ಮುಂಗಾರು ಬೆಳೆ ಸಮೀಕ್ಷೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.ಬುಧವಾರ ನಗರದಲ್ಲಿ ನಡೆದ ಜಿಲ್ಲಾ ಮಟ್ಟದ ಬೆಳೆ ಸಮೀಕ್ಷೆ ಅನುಷ್ಠಾನ ಸಮಿತಿ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ, ದ್ವಿದಳಧಾನ್ಯಗಳಲ್ಲಿ ಆತ್ಮ ನಿರ್ಭರತೆ ಅಭಿಯಾನ, ಹಾಗೂ ಎಣ್ಣೆ ಕಾಳು ಅಭಿಯಾನ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಜಿಲ್ಲೆಯಲ್ಲಿ ಈ ವರ್ಷ…

Read More

ಸಾಲಭಾದೆ ತಾಳದೆ ರೈತ ಆತ್ಮಹತ್ಯೆ

ಪಿರಿಯಾಪಟ್ಟಣ: ಸಾಲ ಭಾದೆ ತಾಳದೆ ರೈತರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಕೊತ್ತವಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಸ್ವಾಮಿ ಗೌಡ (51) ಆತ್ಮಹತ್ಯೆ ಮಾಡಿಕೊಂಡವರು.ಇವರು ತಮ್ಮ ಜಮೀನಿನಲ್ಲಿ ತಂಬಾಕು ನಾಟಿ ಮಾಡಿದ್ದು, ಆ ತಂಬಾಕು ಸಸಿಗಳಿಗೆ ರೋಗ ಹರಡಿತ್ತು. ಅಲ್ಲದೆ ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದಿದ್ದರು. ಇವರು 20 ಲಕ್ಷ ರೂ.ಗಳಿಗೂ ಹೆಚ್ಚು ಸಾಲ ಮಾಡಿದ್ದು, ಕಿತ್ತೂರಿನ ಕಾವೇರಿ ಗ್ರಾಮೀಣ ಬ್ಯಾಂಕಿನಲ್ಲಿ 5 ಲಕ್ಷ ರೂ. ಹಾಗೂ…

Read More