Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿದ್ಯಾರ್ಥಿಗಳು ದುಷ್ಟ ಚಟದಿಂದ ದೂರ ಇರಿ ಎಸ್ ಪಿ ಮುತ್ತುರಾಜ್

ವರದಿ ಜಿ ಬಂಗಾರುಚಾಮರಾಜನಗರ ಜೂನ್ 23; ವಿದ್ಯಾರ್ಥಿಗಳು ಮಾದಕ ವ್ಯಸನ ಅಭ್ಯಾಸದಿಂದ ದೂರ ಇರಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ಮುತ್ತುರಾಜ್ ಸಲಹೆ ನೀಡಿದರುನಗರದ ಜೋಡಿ ರಸ್ತೆಯಲ್ಲಿರುವ ಜೆಎಸ್ಎಸ್ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪೊಲೀಸ್ ವತಿಯಿಂದಮಂಗಳವಾರ ಮಧ್ಯಾನ ಏರ್ಪಡಿಸಿದ ಅಂತರಾಷ್ಟ್ರೀಯ ಮಾದಕ ವ್ಯಸನ ತಡೆ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ವಿದ್ಯಾರ್ಥಿಗಳು ಮದ್ಯಪಾನ ಧೂಮಪಾನ ಬಗ್ಗೆ ನಿಮ್ಮ ಪೋಷಕರಿಗೆ ಹಾಗೂ ನಿಮ್ಮ ಸ್ನೇಹಿತರಿಗೆ ಇದರ ಬಗ್ಗೆ ಜಾಗೃತಿ ಮೂಡಿಸುವ ಕರ್ತವ್ಯ ನಿಮ್ಮದು…

Read More

ಟಾಟಾ ಎಲೆಕ್ಟ್ರಿಕ್ ಸಫ್ಟ್ ಕಂಪೆನಿಗೆ ವಿತರಣಾ ಪರವಾನಗಿ ನೀಡಿಕೆಗೆ ಆಕ್ಷೇಪಣೆ, ಸಲಹೆಗಳ ನೀಡಿಕೆ:ಲಿಂಗರಾಜು

ಮೈಸೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಅಧಿಸೂಚನೆಗೆ ಸಂಬಂಧಿಸಿದಂತೆ ವಿದ್ಯುತ್ ವಿತರಣಾ ಸಂಸ್ಥೆಗಳ ಕಾರ್ಯವ್ಯಾಪ್ತಿಯ ಪ್ರದೇಶಗಳಲ್ಲಿ ಟಾಟಾ ಎಲೆಕ್ಟ್ರಿಕ್ ಸಫ್ಟ್ ಕಂಪೆನಿಗೆ ವಿತರಣಾ ಪರವಾನಗಿ ನೀಡುವ ಕುರಿತು ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ನೀಡಿದೆ ಎಂದು ಸಂಸ್ಥೆಯ ಅಧ್ಯಕ್ಷ ಕೆ.ಬಿ. ಲಿಂಗರಾಜು ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ವಿದ್ಯುತ್ ಹೆಚ್ಚುವರಿ ವಿತರಣಾ ಪರವಾನಗಿದಾರರ ಪ್ರವೇಶದಿಂದ ಸ್ಪರ್ಧಾತ್ಮಕ ವಾತಾವರಣ ನಿರ್ಮಾಣವಾಗಿ ಕಾರ್ಯಕ್ಷಮತೆ, ಸೇವಾ ಗುಣಮಟ್ಟ ಹಾಗೂ ಗ್ರಾಹಕ ಸ್ನೇಹಿ ಆಡಳಿತದಲ್ಲಿ ಸುಧಾರಣೆ…

Read More

ವಿದ್ಯುತ್ ಖಾಸಗೀಕರಣವನ್ನು ಕೈಬಿಡದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ

ಮೈಸೂರು : ವಿದ್ಯುತ್ ವಲಯವನ್ನು ಖಾಸಗೀಕರಣ ಮಾಡುವುದು ರೈತರ ಮರಣ ಶಾಸನ ಬರೆದಂತೆ. ಹಾಗಾಗಿ ವಿದ್ಯುತ್ ಖಾಸಗೀಕರಣವನ್ನು ಕೈಬಿಡದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತಸಂಘದ (ರೈತಬಣ) ಅಧ್ಯಕ್ಷ ಇಂಗಲಗುಪ್ಪೆ ಕೃಷ್ಣೇಗೌಡ ಎಚ್ಚರಿಕೆ ನೀಡಿದರು.ಮಂಗಳವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರೈತರ ಹೆಸರೇಳಿ ಅಧಿಕಾರಕ್ಕೆ ಬಂದವರು ಈಗ ಖಾಸಗಿ ಕಂಪನಿ ಜತೆ ಕೈ ಜೋಡಿಸಿ ರೈತರ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು. ರಾಜ್ಯದಲ್ಲಿ ಸರ್ಕಾರಿ ಸ್ವಾಮ್ಯದಲ್ಲಿರುವ…

Read More

ಪ್ರತಿಭೆ ಎಂಬುದು ವಿದ್ಯಾರ್ಥಿಯೊಳಗಿನ ಸಾಮಥ್ರ್ಯ, ಪರಿಶ್ರಮ, ಶಿಸ್ತು ಮತ್ತು ಸತತ ಪ್ರಯತ್ನದ ಪ್ರತೀಕ; ಸ್ವಾಮಿ ಯುಕ್ತೇಶಾನಂದಜೀ

ಮೈಸೂರು; ಪ್ರತಿಭೆ ಎಂಬುದು ವಿದ್ಯಾರ್ಥಿಯೊಳಗಿನ ಸಾಮಥ್ರ್ಯ, ಪರಿಶ್ರಮ, ಶಿಸ್ತು ಮತ್ತು ಸತತ ಪ್ರಯತ್ನದ ಪ್ರತೀಕ ಎಂದು ಮೈಸೂರಿನ ರಾಮಕೃಷ್ಣ ವಿದ್ಯಾಶಾಲೆಯ ಸ್ವಾಮಿ ಯುಕ್ತೇಶಾನಚಿದಜೀ ಹೇಳಿದರು.ನಗರದ ವಿಜಯ ವಿಠ್ಠಲ ವಿದ್ಯಾಸಂಸ್ಥೆಯಲ್ಲಿ ಮಾರ್ಚ್-ಏಪ್ರಿಲ್ 2026 ರಲ್ಲಿ ನಡೆದ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಏರ್ಪಡಿಸಲಾಗಿದ್ದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಭೆ ಎಂಬುದು ಕೇವಲ ಪರೀಕ್ಷೆಯ ಅಂಕಗಳಿಂದ ಅಳೆಯುವ ವಿಷಯವಲ್ಲ. ಪ್ರತಿಭೆ ಎಂಬುದು ವಿದ್ಯಾರ್ಥಿಯೊಳಗಿನ ಸಾಮಥ್ರ್ಯ,…

Read More

ಎಚ್.ವಿ. ರಾಜೀವ್‍ರಿಂದ ವಿದ್ಯಾರ್ಥಿನಿಗೆ ಉಚಿತವಾಗಿ ಸೈಕಲ್ ವಿತರಣೆ

ಮೈಸೂರು; ಎಚ್.ವಿ. ರಾಜೀವ್ ಸ್ನೇಹ ಬಳಗದ ವತಿಯಿಂದ ಮೈಸೂರಿನ ನಾಚನಹಳ್ಳಿ ಪಾಳ್ಯದ ನಿವಾಸಿಯಾದ ಅಬ್ದುಲ್ ಗಫರ್ ರವರ ಸಾಕು ಮಗಳಾದ ಜೋಹರ್ ಕೌಶರ್‍ರಿಗೆ ಮುಡಾ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಅವರು ಸೈಕಲ್‍ನ್ನು ಕೊಡುಗೆಯಾಗಿ ನೀಡಿದರು.ಜೋಹರ್ ಕೌಶರ್‍ರಿಗೆ ಸೆಂಟ್ ಥಾಮಸ್ ಶಾಲೆಯಲ್ಲಿ 8ನೇ ತರಗತಿಯನ್ನು ವ್ಯಾಸಂಗ ಮಾಡುತ್ತಿದ್ದು, ಅವರ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿಉಚಿತವಾಗಿ ಸೈಕಲ್ ವಿತರಣೆಯನ್ನು ಮಾಡಿದರು.ಬಳಿಕ ಮಾತನಾಡಿದ ಅವರು,ಅಬ್ದುಲ್ ಗಫರ್ ಗೆ ಈಗಾಗಲೇ ಇಬ್ಬರು ಮಕ್ಕಳಿದ್ದರೂ ಸಹ, ಈ ಮಗುವನ್ನು ತಮ್ಮ ಮಗುವಿನಂತೆ ಸಾಕಿ-ಬೆಳೆಸುತ್ತಿರುವುದು ಅವರ…

Read More

ನಾಲ್ವಡಿ ಕೃಷ್ಣರಾಜರ ಮಾಡಿದ ಅಭಿವೃದ್ಧಿ ಕೆಲಸಗಳು ಅಜರಾಮರ ; ಶಾಸಕ ಟಿ.ಎಸ್.ಶ್ರೀವತ್ಸ

ಮೈಸೂರು ; ಮೈಸೂರು ಸಂಸ್ಥಾನವನ್ನಾಳಿದ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮಾಡಿದ ಶಾಶ್ವತ ಕೆಲಸಗಳಿಂದ ಕನ್ನಡ ನಾಡಿನ ಅಭಿವೃದ್ಧಿ ನೂರ್ಮಡಿಯಾಗಿದೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ ಹೇಳಿದರು.ನಗರದ ಜೆಎಲ್‍ಬಿ ರಸ್ತೆಯಲ್ಲಿರುವ ನಾದಬ್ರಹ್ಮ ಸಭಾಂಗಣದಲ್ಲಿ ಪಾತಿ ಫೌಂಡೇಶನ್‍ವತಿಯಿಂದ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ 142ನೇ ಜಯಂತೋತ್ಸವ ಪ್ರಯುಕ್ತ ಆಯೋಜಿಸಿದ್ದ ರಸಮಂಜರಿ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರದ ಸಾಧಕರಾದಡಾ, ಚಂದ್ರಶೇಖರ್ ( ಯೋಗ ಹಾಗೂ ವೈದ್ಯಕೀಯ ಕ್ಷೇತ್ರ), ಯೋಗ ಪ್ರಕಾಶ್ ( ಯೋಗ ಕ್ಷೇತ್ರ), ಸೀಮಾ( ಯೋಗ ಕ್ಷೇತ್ರ),…

Read More

ಸಂಸದ ಯದುವೀರ್ ಒಡೆಯರ್‍ರಿಂದ ಇಂದು ಕೇಂದ್ರ ಸರ್ಕಾರದ ಯೋಜನೆಗಳ ಮೇಳ ಆಯೋಜನೆ

ಮೈಸೂರು: ಕೇಂದ್ರ ಸರ್ಕಾರದ ವಿವಿಧ ಜನಪರ ಯೋಜನೆಗಳನ್ನು ನೇರವಾಗಿ ಸಾರ್ವಜನಿಕರಿಗೆ ತಲುಪಿಸುವ ಉದ್ದೇಶದಿಂದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇಂದ್ರ ಸರ್ಕಾರದ ಯೋಜನೆಗಳ ಮೇಳವನ್ನು ಜೂನ್ 23 ರಂದು ಬೆಳಿಗ್ಗೆ 9:30 ಗಂಟೆಯಿಂದ ಕಾಡಾ ಭವನದಲ್ಲಿರುವ ಸಂಸದರ ಕಚೇರಿಯಲ್ಲಿ ಆಯೋಜಿಸಿದ್ದಾರೆ.ಈ ಮೇಳದಲ್ಲಿ ಕೇಂದ್ರ ಸರ್ಕಾರದ ಹಲವು ಪ್ರಮುಖ ಯೋಜನೆಗಳ ಕುರಿತು ಮಾಹಿತಿ ಪ್ರದರ್ಶನ ಏರ್ಪಡಿಸಲಾಗಿದ್ದು, ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲೇ ಉಪಸ್ಥಿತರಿದ್ದು, ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಿ, ಯೋಜನೆಗಳ ಪ್ರಯೋಜನಗಳನ್ನು ಹೇಗೆ ಪಡೆಯಬಹುದು ಎಂಬುದರ ಕುರಿತು…

Read More

ಫುಟ್ ಪಾತ್‍ನಲ್ಲಿ ನಿತ್ರಾಣಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿ ಸಾವು

ಮೈಸೂರು: ನಗರದ ನಜರ್‍ಬಾದ್ ಪೆÇಲೀಸ್ ಠಾಣೆ ವ್ಯಾಪ್ತಿಯ ರೇಸ್ ಕೋರ್ಸ್ ರಸ್ತೆಯ ಫುಟ್ ಪಾತ್‍ನಲ್ಲಿ ನಿತ್ರಾಣಗೊಂಡು ಬಿದ್ದಿದ್ದ 60 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ.ನಿತ್ರಾಣಗೊಂಡು ಬಿದ್ದಿದ್ದ ಈ ವ್ಯಕ್ತಿಯನ್ನು ಚಿಕಿತ್ಸೆಗಾಗಿ, ಮೈಸೂರು ನಗರದ ಸಂಚಲನ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಪ್ರಕರಣ ನಜರ್‍ಬಾದ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಮೃತನ ಹೆಸರು ಶಿವಕುಮಾರ್ (ಅಪರಿಚಿತ ಗಂಡಸು), ಆಗಿದ್ದು, 5.8 ಅಡಿ ಎತ್ತರ, . ಈತನ ಕೋಲು ಮುಖ, ಸಣ್ಣ ಶರೀರ, ಎಣಗೆಂಪು ಮೈಬಣ್ಣ, ತಲೆಯ ಮುಂಭಾಗ ಕೂದಲು ಉದುರಿಹೋಗಿದ್ದು,…

Read More

ಗೌಡತಿಯರ ಬಳಗದಿಂದ ನಾಲ್ಕನೇ ವರ್ಷದ ವಾರ್ಷಿಕೋತ್ಸವ

ಮೈಸೂರು; ಇಲ್ಲಿನ ವಿಜಯನಗರ ಹೆಬ್ಬಾಳು ಎರಡನೇ ಹಂತದಲ್ಲಿರುವ ಸಾಧನ ಯೋಗ ಕೇಂದ್ರದಲ್ಲಿ ಗೌಡತಿಯರ ಬಳಗದಿಂದ ನಾಲ್ಕನೇ ವರ್ಷದ ವಾರ್ಷಿಕೋತ್ಸವದ ಸಮಾರಂಭವನ್ನು ಆಚರಣೆ ಮಾಡಲಾಯಿತು4ವರ್ಷದ ವಾರ್ಷಿಕೋತ್ಸವದ ಸವಿನೆನಪಿಗಾಗಿ ಪರಿಸರ ಉಳಿಸಿ ಎನ್ನುವ ವಾಕ್ಯಡೊಡನೆ ಗಿಡ ನೆಡುವ ಮೂಲಕ ವಿನೂತನವಾಗಿ ಆಚರಣೆ ಮಾಡಲಾಯಿತುಈ ಸಂದರ್ಭದಲ್ಲಿ ಬಳಗದ ಅಧ್ಯಕ್ಷ ನಾಗಮಣಿ ಸುಬ್ರಮಣ್ಯ. ರಾಜೇಶ್ವರಿ ನಾಗರಾಜ್. ರಾಣಿ ಮಹೇಶ್. ಸವಿತ ರವಿ ಕುಮಾರ್. ಆಶಾ ದೇವರಾಜ್. ಜಯಂತಿ. ಮೀನಾ ಸುಬ್ರಮಣ್ಯ. ಲಲಿತಕೃಷ್ಣೆ ಗೌಡ ವನಜ ಶಶಿಕಲಾ ಸುವರ್ಣ ಲಕ್ಷ್ಮೇ ಗೌಡ. ಹಾಗೂ ಬಳಗದ…

Read More

ಮಣ್ಣಿನ ಪರೀಕ್ಷೆ ಆಧರಿಸಿ ರೈತರು ಸಮತೋಲಿತ ಗೊಬ್ಬರ ಬಳಕೆ ಮಾಡಬೇಕು; ಮಧುಲತಾ ಹೆಚ್.ಬಿ.

ಮೈಸೂರು: ಮಣ್ಣು, ನೀರಿನ ಸಂರಕ್ಷಣೆ ಸುಸ್ಥಿರ ಕೃಷಿಗೆ ಬುನಾದಿ ಹಾಗೂ ಮಣ್ಣಿನ ಪರೀಕ್ಷೆ ಆಧರಿಸಿ ರೈತರು ಸಮತೋಲಿತ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕಿ ಮಧುಲತಾ ಹೆಚ್.ಬಿ ತಿಳಿಸಿದರು.ಜಿಲ್ಲಾ ಕೃಷಿ ತರಬೇತಿ ಕೇಂದ್ರ, ನಾಗನಹಳ್ಳಿ, ವತಿಯಿಂದ 2026-27ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಜಿಲ್ಲೆಯ ಟಿ.ನರಸೀಪುರ ತಾಲ್ಲೂಕು ಬನ್ನೂರು ಹೋಬಳಿಯ ತುರಗನೂರು ಗ್ರಾಮದಲ್ಲಿ “ಭತ್ತದಲ್ಲಿ ಸಮತೋಲಿತ ರಸಗೊಬ್ಬರ ಬಳಕೆ ಮತ್ತು ಸಮಗ್ರ ಪೀಡೆ ನಿರ್ವಹಣೆ’’ ಕುರಿತು ಸೋಮವಾರ…

Read More