3Kaala News

ಸುಭಾಷಿತ 

ಓಟದ ಬದುಕಿನಲ್ಲಿ ಎಲ್ಲವನ್ನು ತಕ್ಷಣವೇ ಪಡೆದುಕೊಳ್ಳಬೇಕೆಂಬ ನಿನ್ನ ಹಟವೇ ನಿನ್ನ ನೆಮ್ಮದಿಯನ್ನು ಕದಿಯುತ್ತದೆ. ಸಮಯಕ್ಕಿಂತ ಮುಂಚೆ, ಹಣೆ ಬರಕಿಂತ ಮುಂಚೆ, ಹೆಚ್ಚಿಗೆ ಯಾರಿಗೂ ಏನೂ ಸಿಗುವುದಿಲ್ಲ . ನಿನ್ನ ಪ್ರಯತ್ನ ನಿರಂತರವಾಗಿರಲಿ. ಆದರೆ, ಫಲಿತಾಂಶಕ್ಕಾಗಿ ಇಂದಿನ ಶಾಂತಿಯನ್ನು ಬಲಿ ಕೊಡಬೇಡ. ಭಗವಾನ್ ಶ್ರೀ ಕೃಷ್ಣ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಆತಂಕ ಬೇಡ: ತಾಲ್ಲೂಕು ಅಧ್ಯಕ್ಷ ಗುರುಸ್ವಾಮಿ


ಮೈಸೂರು: ಬಡವರಿಗೆ ಅನುಕೂಲವಾಗಲೆಂದು ಗ್ಯಾರಂಟಿ ಯೋಜನೆಗಳನ್ನು ನಮ್ಮ ಸರ್ಕಾರ ಅನುಷ್ಠಾನ ಮಾಡಿದ್ದು, ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ. ಆದ್ದರಿಂದ ಫಲಾನುಭವಿಗಳು ಆತಂಕಕ್ಕೆ ಒಳಗಾಗಬಾರದು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ಗುರುಸ್ವಾಮಿ ತಿಳಿಸಿದರು.
ಗುರುವಾರ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಯನ್ನು ಅತ್ಯಂತ ಯಶಸ್ವಿಯಾಗಿ ಮುನ್ನಡೆಸುತ್ತಿದೆ ಎಂದು ಹೇಳಿದರು.
ಗೃಹಲಕ್ಷಿ÷್ಮ ಯೋಜನೆಯ ಹಣವು ಮೃತಪಟ್ಟವರ ಖಾತೆಗೆ ಸಂದಾಯವಾಗುತ್ತಿದ್ದರೆ, ಅಂತಹ ಪ್ರಕರಣವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಅದೇ ಕುಟುಂಬದ ಅರ್ಹ ಯಜಮಾನಿಯನ್ನು ನೋಂದಣಿ ಮಾಡಿಸಬೇಕು. ಅಲ್ಲದೆ, ತಾಂತ್ರಿಕ ಸಮಸ್ಯೆಯಿಂದ ಹೆಸರು ಕೈಬಿಟ್ಟದ್ದಲ್ಲಿ ಅವರನ್ನು ನೋಂದಣಿ ಮಾಡಿಸಬೇಕು ಎಂದು ತಿಳಿಸಿದರು.
ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಿದರೆ ಗ್ಯಾರಂಟಿ ಯೋಜನೆಯ ದುರುಪಯೋಗ ತಡೆಗಟ್ಟಬಹುದು. ಆದ್ದರಿಂದ ಗ್ರಾಮ ಪಂಚಾಯಿತಿಯೂ ಸೇರಿದಂತೆ ಇಲಾಖೆಗಳು ಒಟ್ಟಾಗಿ ಪರಿಶೀಲನೆ ಮಾಡಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಯನ್ನು ತಲುಪಿಸುವ ಮೂಲಕ ಯಶಸ್ವಿಗೊಳಿಸಬೇಕು ಎಂದರು.
ತಾಲ್ಲೂಕು ವ್ಯಾಪ್ತಿಯ ಗೃಹಲಕ್ಷಿ÷್ಮÃ ಫಲಾನುಭವಿಗಳು ನಗರ ಪ್ರದೇಶದಲ್ಲಿ 2825, ಗ್ರಾಮಾಂತರದಲ್ಲಿ 1527 ಸೇರಿದಂತೆ ಒಟ್ಟು 4352 ಮರಣ ಹೊಂದಿದ್ದಾರೆ. ಅದರಲ್ಲಿ ಇಲ್ಲಿಯವರೆಗೆ 1756 ಫಲಾನುಭವಿಗಳನ್ನು ಅದೇ ಮನೆಯಲ್ಲಿ ಗುರುತಿಸಿ ನೋಂದಣಿ ಮಾಡಿಸಿ ಅವರ ಖಾತೆಗೆ ಹಣ ಜಮೆಯಾಗುತ್ತಿದೆ ಎಂದು ಮಾಹಿತಿ ಇದೆ. ಈ ಪ್ರಗತಿಯ ವೇಗ ಹೆಚ್ಚಿಸಬೇಕು ಎಂದು ಸೂಚನೆ ನೀಡಿದರು.
ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸಿ.ಕೃಷ್ಣ ಮಾತನಾಡಿ, ಗ್ಯಾರಂಟಿ ಯೋಜನೆಯನ್ನು ನಮ್ಮ ತಾಲ್ಲೂಕಿನಲ್ಲಿ ಉತ್ತಮವಾಗಿ ಅನುಷ್ಠಾನಗೊಳಿಸಬೇಕು. ಮೃತಪಟ್ಟ ಗೃಹಲಕ್ಷಿ÷್ಮÃ ಫಲಾನುಭವಿಗಳನ್ನು ಪರಿಶೀಲನೆ ನಡೆಸಬೇಕು. ಅಧ್ಯಕ್ಷರು ಹಾಗೂ ಸದಸ್ಯರು ತಿಳಿಸುವ ದೂರುಗಳಿಗೆ ಸಂಬAಧಿಸಿದ ಅಧಿಕಾರಿಗಳು ಸ್ಪಂದಿಸಿ ಮುತವರ್ಜಿಯಿಂದ ಸಮಸ್ಯೆ ಬಗೆಹರಿಸಬೇಕು ಎಂದು ಸೂಚಿಸಿದರು.
ಯುವನಿಧಿ ಯೋಜನೆ ಕುರಿತು ಜಾಗೃತಿ ಮೂಡಿಸಬೇಕು. ಫಲಾನುಭವಿಗಳೊಡನೆ ಸೌಜನ್ಯದಿಂದ ವರ್ತಿಸಿ, ಯೋಜನೆ ಸಂಬAಧ ಯಾವುದೇ ಗೊಂದಲವಿದ್ದರೂ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಸಮಿತಿಯ ಸದಸ್ಯರಾದ ಬಿ.ರವಿ, ರಾಣಿ, ಎಂ.ಸೋಮಣ್ಣ, ಕರೀಗೌಡ, ಮಹದೇವು, ಶಂಕರ್, ತಾ.ಪಂ.ಯೋಜನಾಧಿಕಾರಿ ಸುರೇಶ್, ವಿಷಯ ನಿರ್ವಾಹಕ ಬಿ.ಆರ್.ಸೋಮಶೇಖರ್ ಸೇರಿದಂತೆ ಸಂಬAಧಪಟ್ಟ ಇಲಾಖಾ ಅಧಿಕಾರಿಗಳು ಹಾಜರಿದ್ದರು.