3Kaala News

ಸುಭಾಷಿತ 

ಓಟದ ಬದುಕಿನಲ್ಲಿ ಎಲ್ಲವನ್ನು ತಕ್ಷಣವೇ ಪಡೆದುಕೊಳ್ಳಬೇಕೆಂಬ ನಿನ್ನ ಹಟವೇ ನಿನ್ನ ನೆಮ್ಮದಿಯನ್ನು ಕದಿಯುತ್ತದೆ. ಸಮಯಕ್ಕಿಂತ ಮುಂಚೆ, ಹಣೆ ಬರಕಿಂತ ಮುಂಚೆ, ಹೆಚ್ಚಿಗೆ ಯಾರಿಗೂ ಏನೂ ಸಿಗುವುದಿಲ್ಲ . ನಿನ್ನ ಪ್ರಯತ್ನ ನಿರಂತರವಾಗಿರಲಿ. ಆದರೆ, ಫಲಿತಾಂಶಕ್ಕಾಗಿ ಇಂದಿನ ಶಾಂತಿಯನ್ನು ಬಲಿ ಕೊಡಬೇಡ. ಭಗವಾನ್ ಶ್ರೀ ಕೃಷ್ಣ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಯೋಗ ಮತ್ತು ಧ್ಯಾನ ಸಕಲರಿಗೂ ಅತೀ ಅವಶ್ಯವಾಗಿದೆ; ಶ್ರೀಹರಿ


ಮೈಸೂರು; ನಗರದ ಶಾರದಾ ವಿಲಾಸ ಫಾರ್ಮಸಿ ಕಾಲೇಜು ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸಂಯುಕ್ತಾಶ್ರಯದಲ್ಲಿ 12 ದಿನಗಳ ಯೋಗ ಶಿಬಿರದ ಸಮಾರೋಪ ಸಮಾರಂಭವನ್ನು ನಗರದ ಶಾರದಾ ವಿಲಾಸ ಮೈದಾನದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದ ಗೌರವ ಅಥಿತಿಗಳಾಗಿ ಆಗಮಿಸಿದ್ದ ಜಿಎಸ್‍ಎಸ್ ಸಂಸ್ಥೆಯ ಮುಖ್ಯಸ್ಥ ಶ್ರೀಹರಿ ಮಾತನಾಡಿ, ಯೋಗ ಮತ್ತು ಧ್ಯಾನ ಸಕಲರಿಗೂ ಅತೀ ಅವಶ್ಯವಾಗಿದೆ. ಭಾರತದಲ್ಲಿ ಮಾತ್ರವಲ್ಲ ಬೇರೆ ದೇಶಗಳಲ್ಲೂ ವ್ಯಾಪಕವಾಗಿ ಯೋಗ ಅಭ್ಯಾಸ ಮಾಡಲಾಗುತ್ತಿದ್ದು ಆರೋಗ್ಯ ವರ್ಧನೆಗೆ ತುಂಬಾ ಅನುಕೂಲ ಆಗಿದೆ. ಇದು ಕೇವಲ ದೈಹಿಕ ಕಸರತ್ತಾಗದೆ ಮನಸ್ಸು ಮತ್ತು ಮಸ್ತಿಷ್ಕದ ಸ್ಥಿಮಿತಕ್ಕೆ ಸಹಾಯ ಮಾಡುತ್ತದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಶಾರದಾ ವಿಲಾಸ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ. ಹನುಮಂತಾಚಾರ್ ಜೋಶಿ ಮಾತನಾಡಿ, ಯೋಗಾಭ್ಯಾಸವು ದೇಹದ ಆರೋಗ್ಯದ ಜೊತೆಗೆ ನಮ್ಮ ಮೆದುಳಿನಲ್ಲಿ ಉತ್ಪತ್ತಿಯಾಗುವ , ನಮ್ಮ ಮಾನಸಿಕ ಆರೋಗ್ಯ, ನೆನಪುಗಳು ಮತ್ತು ಸಂಯಮವನ್ನು ಉಳಿಸಲು ಸಹಾಯಕವಾಗುವ ರಾಸಾಯನಿಕಗಳನ್ನು ಸರಿಯಾದ ಪ್ರಮಾಣದಲ್ಲಿ ನಿಯಂತ್ರಣ ಮಾಡಲು ಸಹಾಯಕವಾಗುತ್ತವೆ ಎಂದು ತಿಳಿಸಿದರು. ನಿಯಮಿತವಾಗಿ ಯೋಗಾಭ್ಯಾಸ ಮಾಡುವವರಿಗೆ ಮರೆಗುಳಿ ರೋಗ – ಅಲ್ಜೆಮರ್ಸ್ , ಜemeಟಿಣiಚಿ ಬರುವ ಸಾಧ್ಯತೆಗಳು ಕಡಿಮೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಯುಕ್ತ ಯೋಗಾಶ್ರಮದ ರಾಕೇಶ್, ದಿನೇಶ್, ನೂರಾರು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿದ್ದರು.