Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ವಿದ್ಯಾರ್ಥಿಗಳಿಗೆ ಎಸ್‌ಐಆರ್ ಕುರಿತು ಅರಿವು

ಮೈಸೂರು; ನಗರದ ಎಸ್.ಬಿ.ಆರ್.ಆರ್. ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಎಸ್‌ಐಆರ್ ಕುರಿತು ಅರಿವು ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾಸ್ಟರ್ ಟ್ರೆöÊನರ್, ಚುನಾವಣಾ ತರಬೇತಿ ಮತ್ತು ಜನಗಣತಿ ತರಬೇತಿದಾರ ರಮೇಶ ಎಂ ಆಗಮಿಸಿ, ಮತದಾನದ ಮಹತ್ವ ಹಾಗೂ ಎಸ್‌ಐಆರ್ ಅರ್ಜಿಯನ್ನು ಯಾವ ರೀತಿಯಾಗಿ ಭರ್ತಿ ಮಾಡಬೇಕು ಮತ್ತು ಅದರ ಪ್ರಾಮುಖ್ಯತೆಯನ್ನು ಕುರಿತು ಎಲ್ಲಾ ವಿದ್ಯಾರ್ಥಿಗಳಿಗೆ, ಅಧ್ಯಾಪಕರು ಹಾಗೂ ಅಧ್ಯಾಪಕೇತರರಿಗೆ ತಿಳಿಸಿಕೊಟ್ಟರು.
ಈ ವೇಳೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಆರ್. ಜಯಕುಮಾರಿ, ಸಹಾಯಕ ತರಬೇತುದಾರ ಮಂಜುನಾಥ್, ಸಿಇಓ ಡಾ. ಎಸ್.ಆರ್. ರಮೇಶ್ ಉಪಸ್ಥಿತರಿದ್ದರು.
ಅಧ್ಯಾಪಕರು, ಅಧ್ಯಾಪಕೇತರರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.