ಮೈಸೂರು ವಿವಿ ಕುಲಸಚಿವರಾಗಿ (ಮೌಲ್ಯಮಾಪನ) ಪ್ರೊ. ಕೆಂಪೇಗೌಡ ಬಿ.ಕೆ ನೇಮಕ
ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಕುಲಸಚಿವರನ್ನಾಗಿ (ಮೌಲ್ಯಮಾಪನ) ಪ್ರೊ. ಕೆಂಪೇಗೌಡ ಬಿ.ಕೆ. ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರಸ್ತುತ ಮೈಸೂರು ಜಿಲ್ಲೆಯ ನಂಜನಗೂಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರು ಹಾಗೂ ಪ್ರಾಂಶುಪಾಲರಾಗಿರುವ ಪ್ರೊ. ಕೆಂಪೇಗೌಡ ಅವರನ್ನು ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಈ ನೇಮಕ ಮಾಡಲಾಗಿದೆ.
ನೇಮಕಾತಿ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ ಎಂದು ಉನ್ನತ ಶಿಕ್ಷಣ ಇಲಾಖೆಯ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
--°C
Mysore, IN
Loading...