Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಯುವ ದಸರಾ ಉದ್ಘಾಟನೆಗೆ ಖ್ಯಾತ ನಟ, ನೃತ್ಯ ನಿರ್ದೇಶಕ ಪ್ರಭುದೇವ ಅವರಿಗೆ ಅಧಿಕೃತ ಆಹ್ವಾನ


ಮೈಸೂರು: ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಲ್ಲಿ ಒಂದಾದ ಯುವ ದಸರಾ 2026ರ ಉದ್ಘಾಟನಾ ಕಾರ್ಯಕ್ರಮಕ್ಕೆ ಭಾರತದ ಖ್ಯಾತ ನೃತ್ಯಗಾರ, ನೃತ್ಯ ನಿರ್ದೇಶಕ, ನಟ ಹಾಗೂ ಚಿತ್ರ ನಿರ್ದೇಶಕರಾದ ಪ್ರಭುದೇವ ಅವರನ್ನು ಅಧಿಕೃತವಾಗಿ ಆಹ್ವಾನಿಸಲಾಗಿದೆ.
ಯುವ ದಸರಾ ಸಮಿತಿಯ ಕಾರ್ಯಧ್ಯಕ್ಷ ಸೋಮಶೇಖರ್, ಕಾರ್ಯದರ್ಶಿಗಳಾದ ಅರುಣ್ ಹಾಗೂ ಸತ್ಯಮೂರ್ತಿ ಅವರು ಚೆನ್ನೆöÊನಲ್ಲಿರುವ ಪ್ರಭುದೇವ ಅವರ ನಿವಾಸಕ್ಕೆ ತೆರಳಿ, ಮೈಸೂರು ದಸರಾದಲ್ಲಿ ನಡೆಯುವ ಯುವ ದಸರಾ ಕಾರ್ಯಕ್ರಮಕ್ಕೆ ಆಗಮಿಸುವಂತೆ ಅಧಿಕೃತವಾಗಿ ಆಹ್ವಾನಿಸಿದರು.
ಆಹ್ವಾನವನ್ನು ಸಂತೋಷದಿAದ ಸ್ವೀಕರಿಸಿದ ಪ್ರಭುದೇವ ಅವರು, ಯುವ ದಸರಾ ಕಾರ್ಯಕ್ರಮಕ್ಕೆ ಆಗಮಿಸಲು ತಮ್ಮ ಒಪ್ಪಿಗೆಯನ್ನು ವ್ಯಕ್ತಪಡಿಸಿದ್ದಾರೆ.
ಅವರ ಆಗಮನವು ಯುವ ದಸರಾ ಕಾರ್ಯಕ್ರಮದ ಮೆರುಗನ್ನು ಮತ್ತಷ್ಟು ಹೆಚ್ಚಿಸಲಿದೆ.