Skip to main content

3Kaala News

ಸುಭಾಷಿತ 

ನಾವು ಏನು ಹೇಳುತ್ತೇವೆ ಅನ್ನೋದಕ್ಕಿಂತ, ಹೇಗೆ ಹೇಳುತ್ತೇವೆ ಅನ್ನುವುದೇ ಬದುಕಿನ ಗುಟ್ಟು.
ಮಾತಿನ ಶೈಲಿ ಹೃದಯ ಗೆಲ್ಲಬಹುದು, ಸಮಸ್ಯೆ ಪರಿಹರಿಸಬಹುದು, ಅಥವಾ ಸಂಬಂಧ ಉಳಿಸಬಹುದು.
ಮಾತು ಮನುಷ್ಯನ ಶಕ್ತಿ — ಅದನ್ನು ಜಾಣ್ಮೆಯಿಂದ ಬಳಕೆ ಮಾಡಿದರೆ ಬದುಕು ಸುಲಭವಾಗುತ್ತದೆ

 

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಆಧುನಿಕ ತಂತ್ರಜ್ಞಾನವನ್ನು ವಿವೇಕದಿಂದ ಬಳಸಬೇಕು; ಶ್ರೀ ವಿದ್ಯಾಬಲ್ಲಭತೀರ್ಥಸ್ವಾಮೀಜಿ


ಮೈಸೂರು; ಸಮಯದ ಸದ್ಬಳಕೆ, ವ್ಯಾಸಂಗದತ್ತ ಏಕಾಗ್ರತೆ ಹಾಗೂ ಸಚ್ಚಾರಿತ್ರ‍್ಯ ಮತ್ತು ಸತ್ಸಂಪ್ರದಾಯಗಳನ್ನು ಮೈಗೂಡಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಶ್ರೀ ಕಾಣಿಯೂರು ಮಠದ ಶ್ರೀ ವಿದ್ಯಾಬಲ್ಲಭತೀರ್ಥಸ್ವಾಮೀಜಿ ತಿಳಿಸಿದರು.
ಮೈಸೂರಿನ ವಿಜಯ ವಿಠಲ ವಿದ್ಯಾ ಸಂಸ್ಥೆಗಳಲ್ಲಿ ನಡೆದ ಶ್ರೀಗಳಿಂದ ಆಶೀರ್ವಚನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಆಶೀರ್ವಚನ ನೀಡಿ ಮಾತನಾಡಿದ ಶ್ರೀಗಳು, ಸಾರ್ಥಕ ಹಾಗೂ ಯಶಸ್ವಿ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಶಿಸ್ತು, ಭಕ್ತಿ, ಸನ್ಮೌಲ್ಯಗಳು ಮತ್ತು ಜವಾಬ್ದಾರಿಯುತ ನಡವಳಿಕೆಯ ಪ್ರಾಮುಖ್ಯತೆಯನ್ನು ತಿಳಿಸಿಕೊಟ್ಟರು. ಆಧುನಿಕ ತಂತ್ರಜ್ಞಾನವನ್ನು ವಿವೇಕದಿಂದ ಬಳಸಬೇಕು ಮತ್ತುಅದುಅಧ್ಯಯನ ಹಾಗೂ ಕರ್ತವ್ಯಗಳಿಂದ ಗಮನವನ್ನು ಬೇರೆಡೆಗೆ ಸೆಳೆಯದಂತೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.
ತಂದೆ-ತಾಯಿ ಹಾಗೂ ಗುರುಹಿರಿಯರನ್ನುಗೌರವಿಸಲು, ಧನಾತ್ಮಕ ಮನೋಭಾವವನ್ನು ಬೆಳೆಸಿಕೊಳ್ಳಲು ಮತ್ತು ನಿರಂತರ ಶ್ರೇಷ್ಠತೆಯತ್ತ ಶ್ರಮಿಸಲು ತಿಳಿಸಿದರು. ಆಧುನಿಕ ಶಿಕ್ಷಣ ಮತ್ತು ಅವಕಾಶಗಳನ್ನು ಪಡೆದುಕೊಳ್ಳುವಾಗ ನಮ್ಮ ಸಮೃದ್ಧ ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಪರಂಪರೆಯನ್ನು ಮರೆಯದೆ ನಡೆದುಕೊಳ್ಳುವಂತೆ ಉಪದೇಶಿಸಿದರು.ಕಾರ್ಯಕ್ರಮದ ಮುಕ್ತಾಯದಲ್ಲಿ ವಿದ್ಯಾರ್ಥಿಗಳಿಗೆ ಮಂತ್ರಾಕ್ಷತೆ ನೀಡಿ, ಅವರ ಯಶಸ್ವಿ ಮತ್ತು ಸಾರ್ಥಕ ಭವಿಷ್ಯಕ್ಕೆ ಹಾರೈಸಿದರು. ಸಮಾಜಕ್ಕೆ ಸಕಾರಾತ್ಮಕಕೊಡುಗೆ ನೀಡುವ ಜವಾಬ್ದಾರಿಯುತ ಮತ್ತು ಉನ್ನತ ಸಾಧಕರಾಗಲು ಸ್ಪೂರ್ತಿ ತುಂಬಿದರು.
ಈ ಸಂದರ್ಭದಲ್ಲಿ ವಿಜಯ ವಿಠಲ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಆರ್. ವಾಸುದೇವ ಭಟ್, ವಿಜಯ ವಿಠಲ ಸಂಯುಕ್ತ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲ ಹೆಚ್. ಸತ್ಯಪ್ರಸಾದ್ ಹಾಗೂ ವಿಜಯ ವಿಠಲ ವಿದ್ಯಾಶಾಲೆಯ ಪ್ರಾಂಶುಪಾಲರಾದ ವೀಣಾಎಸ್. ಎ. ಉಪಸ್ಥಿತರಿದ್ದರು.