ಕರ್ನಾಟಕ ರಾಜಕಾರಣಕ್ಕೆ ‘ವಿಕಾಸಶೀಲ ಇನ್ಸಾನ್ ಪಾರ್ಟಿ’ ಎಂಟ್ರಿ
ಮೈಸೂರು: ಕರ್ನಾಟಕದ ರಾಜಕೀಯ ರಣರಂಗಕ್ಕೆ ಮತ್ತೊಂದು ಹೊಸ ರಾಜಕೀಯ ಪಕ್ಷ ಅಧಿಕೃತವಾಗಿ ಪದಾರ್ಪಣೆ ಮಾಡಿದೆ ಎಂದು ವಿಐಪಿ ಪಕ್ಷದ ರಾಜ್ಯ ಉಪಾಧ್ಯಕ್ಷ ಮೋಹನ್ ಕುಮಾರ್ ಬಿ.ಕೆ ತಿಳಿಸಿದರು.ಗುರುವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ, ಅಂಬಿಗರ ಚೌಡಯ್ಯ, ಬಸವಣ್ಣ, ಬುದ್ಧ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವಗಳಡಿ ಪಕ್ಷವನ್ನು ಮುನ್ನಡೆಸಲಾಗುವುದು ಎಂದು ಹೇಳಿದರು.“ರಾಜ್ಯದಲ್ಲಿ ಕೋಲಿ, ಗಂಗಾಮತ ಹಾಗೂ ಬೆಸ್ತ ಸಮಾಜದವರೇ ನಮ್ಮ ಪಕ್ಷದ ಮೂಲ ಮತದಾರರು. ನಮ್ಮ ಸಮಾಜದ ಜನಸಂಖ್ಯೆ ರಾಜ್ಯದಲ್ಲಿ ಬರೋಬ್ಬರಿ…