ಡಿ.ಕೆ.ಶಿವಕುಮಾರ್ ಅವರಿಗೆ ಶುಭ ಕೋರಿದ ಹೆಚ್.ವಿ.ರಾಜೀವ್
ದೆಹಲಿಯ ಕರ್ನಾಟಕ ಭನವನದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಶಾಸಕರು ಹಾಗೂ ಮಾಜಿ ಸಚಿವರಾದ ಎಸ್.ಟಿ. ಸೋಮಶೇಖರ್ ಹಾಗೂ ಶಾಸಕ ಎ.ಸಿ. ಶ್ರೀನಿವಾಸ್ ರವರೊಂದಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಗೂ ಕೆ.ಪಿ.ಸಿ.ಸಿ ಸದಸ್ಯ ಎಚ್.ವಿ. ರಾಜೀವ್ ರವರು ಭೇಟಿ ಮಾಡಿ ಶುಭ ಕೋರಿದರು.
ಒಂದು ವಾರಗಳ ಕಾಲ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ
ಮೈಸೂರು: ನಗರದ ಚಾಮುಂಡಿಬೆಟ್ಟದ ಪಾದದಲ್ಲಿರುವ ಅಯ್ಯಪ್ಪ ಸ್ವಾಮಿ ಮತ್ತು ಗುರುವಾಯೂರಪ್ಪನ್ ದೇವಾಲಯದಲ್ಲಿ ಜೂ.12ರಿಂದ 19ರವರೆಗೆ ಸಹಸ್ರ ಕಲಶ ಪೂಜೆಯನ್ನು ಆಯೋಜಿಸಲಾಗಿದೆ ಶಬರಿಮಲೆ ಅಯ್ಯಪ್ಪ ಪೂಜಾ ಸಮಿತಿ ಅಧ್ಯಕ್ಷ ಜಿ.ಶ್ರೀನಿವಾಸ ತಿಳಿಸಿದರು.ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 12 ರಿಂದ 19ರ ತನಕ ನಿತ್ಯ ಬೆಳಿಗ್ಗೆ, ಮಧ್ಯಾಹ್ನ ಮತ್ತು ಸಂಜೆ ವಿವಿಧ ಪೂಜೆಗಳು ನಡೆಯುತ್ತವೆ. ಗಣಪತಿ ಹೋಮ, ಉಷಾ ಪೂಜಾ, ಮುಳ ಪೂಜಾ,ಅತ್ತಾಳ ಪೂಜಾ, ವಾಸ್ತು ಹೋಮ, ವಾಸ್ತು ಕಲಶಾಭಿಷೇಕಂ, ವಾಸ್ತು ಪ್ಮಣ್ಯಂ ಮುಂತಾದ…
ಜೂನ್ 27 ರಂದು ಕೆಂಪೇಗೌಡ ಜಯಂತಿ ಅರ್ಥಪೂರ್ಣವಾಗಿ ಆಚರಣೆ : ಆರ್. ಐಶ್ವರ್ಯ
ಮೈಸೂರು ; ನಾಡ ಪ್ರಭು ಕೆಂಪೇಗೌಡ ಜಯಂತಿಯನ್ನು ಜೂನ್ 27 ರಂದು ಮೈಸೂರು ನಗರದಲ್ಲಿ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಆರ್. ಐಶ್ವರ್ಯ ತಿಳಿಸಿದರು.ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ವಿವಿಧ ಜಯಂತಿಯ ಆಚರಣೆ ಸಂಬAಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ನಾಡ ಪ್ರಭು ಕೆಂಪೇಗೌಡ ಜಯಂತಿಯನ್ನು ಜೂನ್ 27.ರಂದು ಬೆಳಗ್ಗೆ 11:30 ಕ್ಕೆ ನಗರದ ಕಲಾಮಂದಿರದಲ್ಲಿ ಆಚರಣೆ ಮಾಡಲಾಗುವುದು. ವೇದಿಕೆ ಕಾರ್ಯಕ್ರಮಕ್ಕೂ ಮೊದಲು ವೇದಿಕೆ ಮೇಲೆ ಗೀತಾ ಗಾಯನ ಏರ್ಪಡಿಸಲಾಗುವುದು. ಸಮುದಾಯದ…
ಜೂ.27ಕ್ಕೆ ಕೆಂಪೇಗೌಡ ಜಯಂತಿ ಆಚರಣೆಗೆ ಒಮ್ಮತದ ನಿರ್ಣಯ
ಮೈಸೂರು: ಸಂಭ್ರಮ ಸಡಗರದಿಂದ ಮೈಸೂರಿನ ಕಲಾಮಂದಿರದಲ್ಲಿ ಜೂ.27ರಂದೇ ಸರ್ಕಾರದ ಜತೆಗೆ ಕೆಂಪೇಗೌಡರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸುವುದಾಗಿ ವಿವಿಧ ಜಿಲ್ಲಾ ಒಕ್ಕಲಿಗರ ಸಂಘ ಘೋಷಿಸಿತು.ರಾಜ್ಯ ಒಕ್ಕಲಿಗರ ಸಂಘ ಹಾಗೂ ಮೈಸೂರು ಜಿಲ್ಲಾ ಒಕ್ಕಲಿಗರ ಸಂಘ ವಿವಿಧ ಒಕ್ಕಲಿಗ ಸಂಘ-ಸAಸ್ಥೆಗಳ ನೇತೃತ್ವದಲ್ಲಿ ನಗರದ ಜಲದರ್ಶಿನಿಯಲ್ಲಿ ಈ ಸಂಬAಧ ಸಭೆ ನಡೆಸಿ ಒಮ್ಮತದ ತೀರ್ಮಾನ ಘೋಷಿಸಿದವು. ಪ್ರಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಕರೆದು ಬೇರೊಂದು ದಿನದಂದು ಜಯಂತಿ ಆಚರಿಸಲು ತೀರ್ಮಾನಿಸಿದ್ದರು. ಆದರೆ, ಮುಖ್ಯಮಂತ್ರಿಗಳು ರಾಜ್ಯದ ಇತರ ಕೆಲಸಗಳ ನಿಮಿತ್ತ ಮುಂದಿನ ದಿನಗಳಲ್ಲಿ…
ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿ ಬಂದ ಎಚ್.ಡಿ. ದೇವೇಗೌಡರಿಗೆ ರಾಜ್ಯಸಭಾ ಸದಸ್ಯ ಸ್ಥಾನ ದೊಡ್ಡದೇನಲ್ಲ; ಶಾಸಕ ಎಚ್.ಡಿ. ರೇವಣ್ಣ
ಮೈಸೂರು: ‘ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿ ಬಂದ ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ರಾಜ್ಯಸಭಾ ಸದಸ್ಯ ಸ್ಥಾನ ದೊಡ್ಡದೇನಲ್ಲ’ ಎಂದು ಶಾಸಕ ಎಚ್.ಡಿ. ರೇವಣ್ಣ ಹೇಳಿದರು.ಗುರುವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ.ದೇವೇಗೌಡರು ರಾಜ್ಯಸಭಾ ಸದಸ್ಯ ಸ್ಥಾನವನ್ನು ನನಗೆ ಕೊಡಿ ಎಂದು ಯಾರಲ್ಲೂ ಕೇಳಿರಲೇ ಇಲ್ಲ. ಆದರೆ ಮಾಧ್ಯಮದಲ್ಲಿ ಆ ವಿಚಾರ ಪ್ರಸ್ತಾಪವಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಒಮ್ಮೆ ಹೆಚ್.ಡಿ.ದೇವೇಗೌಡರ ಹೆಸರು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಪ್ಯಾನಲ್ನಲ್ಲಿ ಇದೆ ಎಂದರು. ಮತ್ತೊಮ್ಮೆ…
ಕಲಬುರಗಿ ಸೇರಿದಂತೆ ಇಡೀ ಕರ್ನಾಟಕ ಡ್ರಗ್ಸ್, ಮಾದಕವ್ಯಸನಿಗಳ ಕೇಂದ್ರವಾಗಿ ಮಾರ್ಪಟ್ಟಿದೆ; ಬಿಜೆಪಿ ರಾಜ್ಯ ವಕ್ತಾರ ಎಂ.ಜಿ. ಮಹೇಶ್
ಮೈಸೂರು: ‘ಕಲಬುರಗಿ ಸೇರಿದಂತೆ ಇಡೀ ಕರ್ನಾಟಕ ಡ್ರಗ್ಸ್, ಮಾದಕವ್ಯಸನಿಗಳ ಕೇಂದ್ರವಾಗಿ ಮಾರ್ಪಟ್ಟಿದೆ. ಸ್ವತಃ ಕಾಂಗ್ರೆಸ್ ಮಂಡಲ ಅಧ್ಯಕ್ಷ ಡ್ರಗ್ಸ್ ಸಾಗಾಣಿಕೆ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಎಂ.ಜಿ. ಮಹೇಶ್ ಹೇಳಿದರು.ಗುರುವಾರ ನಗರದ ಚಾಮರಾಜಪುರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಪರಾಧ ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿದೆ.ನ್ಯಾಷನಲ್ ಅಪರಾಧ ರೆಕಾರ್ಡ್ ಬ್ಯೂರೋದ ಇತ್ತೀಚಿನ ವರದಿಯ ಪ್ರಕಾರ, ರಾಜ್ಯದಲ್ಲಿ ಅಪರಾಧ ಚಟುವಟಿಕೆಗಳ ಪ್ರಮಾಣ ಹಿಂದಿನ ವರ್ಷಕ್ಕಿಂತ ಶೇ 10ಕ್ಕಿಂತ ಜಾಸ್ತಿಯಾಗಿದೆ. ಕಲಬುರಗಿ ಜಿಲ್ಲೆಯಲ್ಲಿ…
ಜೂನ್ 12 ರಂದು ಚಲನಚಿತ್ರಗೀತೆಗಳ ಕರೋಕೆ ಗಾಯನ
ಮೈಸೂರು : ಯುವ ಪ್ರತಿಭೆಗೆ ವೇದಿಕೆಗೆ ಕಲ್ಪಿಸುವುದಕ್ಕಾಗಿ ಶಿವ ಮ್ಯೂಸಿಕಲ್ ವತಿಯಿಂದಕರೋಕೆ ಗಾಯನವನ್ನು ಜೂನ್ 12 ರಂದು ಮೈಸೂರಿನಲ್ಲಿ ಅಯೋಜಿಸಲಾಗಿದೆ ಎಂದು ವಕೀಲ ಶಿವಕುಮಾರ್ ಹೇಳಿದರುನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೈಸೂರಿನ ನಾದಬ್ರಹ್ಮ ಸಂಗೀತ ಸಭಾ ಭವನದಲ್ಲಿಶುಕ್ರವಾರದಂದು ಚಲನಚಿತ್ರಗೀತೆಗಳ ಕರೋಕೆ ಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮೈಸೂರಿನ ನಾಗರೀಕರಿಗೆ ಹಾಗೂ ಸಂಗೀತ ಪ್ರಿಯರಿಗೆ, ಮನರಂಜನೆ ನೀಡುವುದು ಹಾಗೂ ಯುವ ಪ್ರತಿಭೆಗೆ ವೇದಿಕೆಯನ್ನು ಕಲ್ಪಿಸಲಾಗಿದ್ದು ಕನ್ನಡ ಚಲನಚಿತ್ರಗೀತೆಗಳ ಒಟ್ಟು 45 ಜನಪ್ರಿಯ ಗೀತೆಗಳನ್ನು 10…
ಎರಡು ದಿನಗಳ ಕಾಲ “ಘಾಟಿ “ನಾಟಕ ಪ್ರದರ್ಶನ
ಮೈಸೂರು : ನಾಟ್ಯಲೇಖ ರಂಗಸಮೂಹ ಮೈಸೂರುವತಿಯಿಂದ “ಘಾಟಿ” ನಾಟಕ ಪ್ರದರ್ಶನವನ್ನು ಎರಡು ದಿನಗಳ ಕಾಲ ಅಯೋಜನೆ ಮಾಡಲಾಗಿದೆ ಎಂದು ನಾಟ್ಯಾಲೇಖ ರಂಗಸಮೂಹದ ಖಜಾಂಚಿ ಮಹೇಶ್ ಕಲ್ಲಂಗಡಿ ಹೇಳಿದರುಬುಧವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೈಸೂರಿನ ಕಲಾಮಂದಿರದ ಕಿರುರಂಗಮAದಿರದಲ್ಲಿ ಜೂನ್ 11 ಮತ್ತು 12 ರಂದು ಸಂಜೆ 6.30 ಕ್ಕೆ ಸುಮಧುರ ರಾವ್ ರಚಿಸಿರುವ ಅಮಿತ್ ಜೆ ರೆಡ್ಡೆ ನಿರ್ದೇಶನದ “ಘಾಟಿ ” ಎಂಬ ನಾಟಕ ಪ್ರದರ್ಶನವನ್ನು ಕನ್ನಡ ಮತ್ತು ಸಂಸ್ಕöÈತಿ ಇಲಾಖೆ…
ಜೂನ್ 12 ರಂದು ಲಲಿತಾ ಜಿ.ಟಿ.ದೇವೇಗೌಡರಿಗೆ ಅಭಿನಂದನಾ ಸಮಾರಂಭ
ಮೈಸೂರು : ಕರ್ನಾಟಕ ರಾಜ್ಯ ಸಹಕಾರ ಮಂಡಳದ ಅಧ್ಯಕ್ಷರಾಗಿದ್ದ ಲಲಿತಾ ಜಿ.ಟಿ.ದೇವೇಗೌಡರಿಗೆ ಅಭಿನಂದನಾ ಸಮಾರಂಭವನ್ನು ಜೂನ್ 12 ರಂದು ಮೈಸೂರಿನಲ್ಲಿ ಆಯೋಜಿಸಲಾಗಿದೆ ಎಂದು ಲಲಿತಾಭಿನಂದನ ಸಮಿತಿ ಉಪಾಧ್ಯಕ್ಷ ಎಂ.ಎನ್.ನಟರಾಜ್ ಹೇಳಿದರು.ಬುಧವಾರ ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮಷ್ಟಕ್ಕೆ ತಾವು ಮನೆ ಮನೆಯ ತಪಸ್ವಿನಿಯಂತೆ ಬದುಕುತ್ತಿದ್ದ ಶಾಸಕ ಜಿ.ಟಿ.ದೇವೇಗೌಡರ ಪತ್ನಿಯಾದ ಲಲಿತಾ ಅವರು ಸಹಕಾರ ಕ್ಷೇತ್ರಕ್ಕೆ ಕಾಲಿಟ್ಟಿದ್ದೇ ಒಂದು ಆಕಸ್ಮಿಕ. ಅಲ್ಲಿ ಅವರೆಷ್ಟು ಜನಪ್ರಿಯರಾದರೆಂದರೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷೆಯಾಗುವವರೆಗೂ ಏರಿದರು. ಏರಿದರ…