ಸಾಮಾಜಿಕ ನ್ಯಾಯದಡಿ ಭೋವಿ ಸಮಾಜಕ್ಕೆ ಸಚಿವ ಸ್ಥಾನ ನೀಡಬೇಕು; ಸೀತಾರಾಮ್
ಮೈಸೂರು : ಸಾಮಾಜಿಕ ನ್ಯಾಯದಡಿ ಭೋವಿ ಸಮಾಜಕ್ಕೆ ಸಚಿವ ಸ್ಥಾನ ನೀಡಬೇಕೆಂದು ಶ್ರೀ ಶಿವಯೋಗಿಸಿದ್ದರಾಮೇಶ್ವರ ಭೋವಿ ಹಿತರಕ್ಷಣಾ ಸಮಿತಿ ಕಾಂಗ್ರೆಸ್ ವರಿಷ್ಠರು ಹಾಗೂ ಮುಖ್ಯಮಂತ್ರಿಗಳನ್ನು ಆಗ್ರಹ ಮಾಡುತ್ತದೆ ಎಂದು ಬೋವಿ ನಿಗಮದ ಮಾಜಿ ಅಧ್ಯಕ್ಷ ಜಿ.ವೊ ಸೀತಾರಾಮ್ ಹೇಳಿದರುಬುಧವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಸಾಮಾಜಿಕವಾಗಿ, ಕರ್ನಾಟಕದಲ್ಲಿ ಭೋವಿ (ಒಡ್ಡರು) ಸಮುದಾಯವು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಸಾಕಷ್ಟು ಹಿಂದುಳಿದಿದೆ. ಸಮುದಾಯದ ಏಳಿಗೆಗಾಗಿ ಸರ್ಕಾರದಲ್ಲಿ ಸೂಕ್ತ ಪ್ರಾತಿನಿದ್ಯದ ಅಗತ್ಯವಿದೆ ಎಂಬುದು ನಮ್ಮ ಮತ್ತು ಸಮುದಾಯದ…