ಜು.25 ರಿಂದ 28ರ ತನಕ ಇ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
ಮೈಸೂರು: ಜ್ಯೋತಿನಗರ ಉಪವಿಭಾಗದ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಕಾಮಗಾರಿಯನ್ನು ಹಮ್ಮಿಕೊಂಡಿದ್ದು, ಜುಲೈ 25,26, 27,28 ರಂದು ಬೆಳಿಗ್ಗೆ 10 ಗಂಟೆಯಿ0ದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.ಜುಲೈ 25 ರಂದು ಶಕ್ತಿ ಮತ್ತು ಕಾವೇರಿ ಫೀಡರ್ ವ್ಯಾಪ್ತಿಯಲ್ಲಿ ಶಕ್ತಿನಗರ, ಸಾತಗಳ್ಳಿ ಬಡಾವಣೆ, ಕಾವೇರಿ ಮುಖ್ಯ ರಸ್ತೆ, ರಾಘವೇಂದ್ರನಗರ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳು.ಜುಲೈ 26 ರಂದು; ಯಾದವಗಿರಿ ಕೈಗಾರಿಕ ಪ್ರದೇಶ, ಮಂಜುನಾಥಪುರ, ಜಾವಾಸರ್ಕಲ್, ಜಾಯ್ಐಸ್ಕ್ರೀಮ್ ಪ್ಯಾಕ್ಟರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆಜುಲೈ 27 ರಂದು ರಾಧಾಕೃಷ್ಣ…
ನಾನೂ ಸಚಿವ ಸ್ಥಾನದ ಆಕಾಂಕ್ಷಿ; ಶಾಸಕ ಎ.ಆರ್.ಕೃಷ್ಣಮೂರ್ತಿ
ಮೈಸೂರು; ನಾನು ಮೂರನೇ ಬಾರಿ ಶಾಸಕನಾಗಿದ್ದು, ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದು ಕೊಳ್ಳೇಗಾಲ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ತಿಳಿಸಿದರು.ಶುಕ್ರವಾರ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ, ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಹೈಕಮಾಂಡ್ ಬಳಿ ಮನವಿ ಮಾಡಿದ್ದೇನೆ. ಚಾಮರಾಜನಗರ ಜಿಲ್ಲೆಯಲ್ಲಿ ರಾಜುಗೌಡ, ಮಹಾದೇವಪ್ರಸಾದ್, ಪುಟ್ಟರಂಗಶೆಟ್ಟಿ ಸೇರಿದಂತೆ ಅನೇಕರು ಸಚಿವರಾಗಿದ್ದಾರೆ. ಮೀಸಲು ಕ್ಷೇತ್ರದಿಂದ ಗೆದ್ದಿರುವ ನನಗೆ ಅವಕಾಶ ಸಿಕ್ಕಿಲ್ಲ. ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದರು.ದೆಹಲಿಯ ಜಂತರ್ ಮಂತರ್ನಲ್ಲಿ…
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಳ್ಳುತ್ತಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ
ಮೈಸೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವನ್ನು ಕಾಂಗ್ರೆಸ್ ರಾಜಕೀಯವಾಗಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ಮೈಸೂರು ನಗರ ಮತ್ತು ಗ್ರಾಮಾಂತರ ಬಿಜೆಪಿ ವತಿಯಿಂದ ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.ನಗರದ ರಾಮಸ್ವಾಮಿ ವೃತ್ತದ ಬಳಿ ಜಮಾಯಿಸಿದ ನೂರಾರು ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ನಾನಾ ಘೋಷಣೆಗಳನ್ನು ಕೂಗಿ ಆಕ್ರೋಶವ್ಯಕ್ತಪಡಿಸಿದರು.ಈ ವೇಳೆ ಶಾಸಕ ಟಿ.ಎಸ್.ಶ್ರೀವತ್ಸ ಮಾತನಾಡಿ, ಜೈಲಿನಿಂದ ಕೈದಿಗಳು ಪರಾರಿಯಾದರೆ ಅದಕ್ಕೆ ಅಧಿಕಾರಿಗಳು ಕಾರಣವಾದರೆ,ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾದರೆ ಸಚಿವರು ಹೊಣೆಯಾಗಬೇಕಾ? ನಿಮ್ಮ ದ್ವಂದ್ವ ನೀತಿಯ ಬಗ್ಗೆ ಜನರಿಗೆ ಅರ್ಥವಾಗುತ್ತಿದೆ ಎಂದು…
ಶಕ್ತಿ ದೇವತೆಯ ದರ್ಶನಕ್ಕೆಂದು ಚಾಮುಂಡಿಬೆಟ್ಟಕ್ಕೆ ಹರಿದು ಬಂದ ಭಕ್ತ ಗಣ
ಮೈಸೂರು: ಆಷಾಢ ಮಾಸ ಎರಡನೇ ಶುಕ್ರವಾರವಾದ ಇಂದು ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನಕ್ಕೆ ನಗರದ ಚಾಮುಂಡಿಬೆಟ್ಟಕ್ಕೆ ಭಕ್ತ ಸಾಗರವೇ ಬಂದಿತ್ತು. ಬೆಟ್ಟದ ತಾಯಿಗೆ ಚಾಮುಂಡೇಶ್ವರಿಗೆ ಲಕ್ಷಿ÷್ಮÃ ಅಲಂಕಾರ ಮಾಡಲಾಗಿದ್ದು, ತಿಳಿ ಗುಲಾಬಿ ಬಣ್ಣದ ರೇಷ್ಮೆ ಸೀರೆಯಲ್ಲಿ ಕಂಗೊಳಿಸುತ್ತಿರುವ ತಾಯಿಯನ್ನು ಭಕ್ತರು ಕಣ್ಮನ ತುಂಬಿಕೊAಡರು. ಎರಡನೇ ಆಷಾಢ ಶುಕ್ರವಾರದ ಸಂಭ್ರಮದ ಹಿನ್ನೆಲೆಯಲ್ಲಿ ದೇವಾಲಯದ ಹೊರಭಾಗ ಹಾಗೂ ಒಳಭಾಗಗಳನ್ನು ವಿವಿಧ ರೀತಿಯ ಹೂವುಗಳಿಂದ ಮತ್ತು ಹಣ್ಣುಗಳಿಂದ ಅಲಂಕಾರ ಮಾಡಲಾಗಿದೆ. ತೋತಾಪುರಿ ಮಾವಿನ ಕಾಯಿ, ಡ್ರಾ÷್ಯಗನ್ ಫ್ರೂಟ್, ವಿವಿಧ ಹಣ್ಣು,…