Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

admin

ಪೀಳಿಗೆಯ ಆರೋಗ್ಯಕರ ಹಾಗೂ ಸಂಸ್ಕಾರಯುತ ಬೆಳವಣಿಗೆಗೆ ಶ್ರೀಗರ್ಭ ಗರ್ಭಸಂಸ್ಕಾರವು ಅತ್ಯಗತ್ಯ

ಮೈಸೂರು; ಶ್ರೀಗರ್ಭ ಗರ್ಭಸಂಸ್ಕಾರವು ಸನಾತನ ಪರಂಪರೆಯಿAದ ಬಂದ ಅಮೂಲ್ಯ ಸಂಸ್ಕಾರವಾಗಿದ್ದು, ಮುಂದಿನ ಪೀಳಿಗೆಯ ಆರೋಗ್ಯಕರ ಹಾಗೂ ಸಂಸ್ಕಾರಯುತ ಬೆಳವಣಿಗೆಗೆ ಇದು ಅತ್ಯಂತ ಅನಿವಾರ್ಯವೆಂದು ಆಯುಷ್ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಲಕ್ಷಿö್ಮ ನಾರಾಯಣ ಹೇಳಿದರು.ಸೋಮವಾರ ನಗರದ ಪತ್ರಕರ್ತರ ಭವನದಲ್ಲಿ ಪರಮಹಂಸ ಯೋಗ ಮಹಾವಿದ್ಯಾಲಯದ ಸಹಭಾಗಿತ್ವದಲ್ಲಿ ನಡೆದ ಶ್ರೀಗರ್ಭ ಗರ್ಭಸಂಸ್ಕಾರ ಮಹಾವಿದ್ಯಾಲಯದ ಪ್ರಥಮ ವಾರ್ಷಿಕೋತ್ಸವ ಹಾಗೂ ಗ್ರಾಜುಯೇಷನ್ ಡೇ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ಶ್ರೀಗರ್ಭ ಸಂಸ್ಥಾಪಕರಾದ ಡಾ. ಕಾವ್ಯಾ ಎಸ್ ಅವರು ಗರ್ಭ ಸಂಸ್ಕಾರದ ಮಹತ್ವವನ್ನು ವೈಜ್ಞಾನಿಕ ಹಾಗೂ ಸಂಸ್ಕಾರಯುತ ದೃಷ್ಟಿಕೋನದಿಂದ…

Read More

ಸತೀಶ್ ಜಾರಕಿಹೊಳಿಗೆ ಡಿಸಿಎಂ ಸ್ಥಾನದೊಂದಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ನೀಡಲು ಆಗ್ರಹ

ಮೈಸೂರು; ಮಾಜಿ ಸಚಿವ ಸತೀಶ್ ಜಾರಕಿ ಹೊಳಿಗೆಯವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಡಿಸಿಎಂ ಸ್ಥಾನವನ್ನು ನೀಡಬೇಕೆಂದು ವಾಲ್ಮೀಕಿ ನಾಯಕ ಸಂಘಗಳ ಒಕ್ಕೂಟದ ಅಧ್ಯಕ್ಷ ದ್ಯಾವಪ್ಪ ನಾಯಕ ಆಗ್ರಹಿಸಿದರು. ಸೋಮವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿರವರು ರಾಜ್ಯದ ಪ್ರಶ್ನಾತೀತ ನಾಯಕರು, ಆಹಿಂದ ಮತ್ತು ಶೋಷಿತ ಸಮುದಾಯಗಳ ಪರವಾಗಿ ಸುಮಾರು 30 ವರ್ಷಗಳಿಂದ ನಿರಂತರವಾಗಿ ಕೆಲಸ ನಿರ್ವಹಿಸಿಕೊಂಡು ಬರುತ್ತಿರುವ ರಾಜ್ಯದ ಏಕೈಕ ವ್ಯಕ್ತಿ.  ಇವರು ರಾಜಕೀಯ ಕ್ಷೇತ್ರಕ್ಕೆ ಸೀಮಿತವಾಗದೆ, ಸಾಮಾಜಿಕವಾಗಿಯೂ…

Read More

ಜಿಲ್ಲೆಯಲ್ಲಿ ಆರಂಭವಾದ ಶಾಲೆಗಳಲ್ಲಿ ಮಕ್ಕಳ ಕಲರವ

*ಶಾಲೆಗೆ ಬಂದ ಮಕ್ಕಳಿಗೆ ಅದ್ಧೂರಿ ಸ್ವಾಗತ, ಆರತಿ ಬೆಳಗಿದರು, ಪುಸ್ತುಗಳು, ಹೂವುಗಳನ್ನು ನೀಡಿ ಸ್ವಾಗತಿಸಿದರು. ಸರ್ಕಾರಿ ಶಾಲೆಗಳು ಇಂದು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುತ್ತಿವೆ: ಶಾಸಕ ಟಿ.ಶ್ರೀವತ್ಸಮೈಸೂರು: ಜಿಲ್ಲೆಯಲ್ಲಿ ಶಾಲೆಗಳು ಆರಂಭವಾಗಿದ್ದು, ಮಕ್ಕಳ ಕಲರವ ಶುರುವಾಗಿದೆ. ಸೋಮವಾರ ಶಾಲೆಗಳ ಬಾಗಿಲು ತೆರೆಯುತ್ತಿದ್ದಂತೆ ಶಾಲೆಗಳಿಗೆ ಆಗಮಿಸಿದ ಮಕ್ಕಳಿಗೆ ಶಾಸಕರು, ಅಧಿಕಾರಿಗಳು, ಶಾಲಾಭಿವೃದ್ಧಿ ಸಮಿತಿಯವರು, ವಿವಿಧ ಸಂಘ, ಸಂಸ್ಥೆಗಳವರು ಭರ್ಜರಿ ಸ್ವಾಗತವನ್ನು ನೀಡಿ, ಬರಮಾಡಿಕೊಂಡರು. ಕೆಲವಡೆ ಮಕ್ಕಳಿಗೆ ಆರತಿ ಬೆಳಗಿ, ಹೂವುಗಳನ್ನು ನೀಡಿದರೆ, ಮತ್ತೆ ಹಲವಡೆ ಮಕ್ಕಳಿಗೆ ಪುಸ್ತಕ, ಸಿಹಿಯನ್ನು…

Read More

ಮೊಬೈಲ್ ನ್ನು ಅತಿಯಾಗಿ ನೋಡುವವರಿಗೆ ಬರುತ್ತಿದೆ ಟೆಕ್ಸ್÷್ಟ ನೆಕ್’ ಅಥವಾ ಟೆಕ್ ನೆಕ್ ಕಾಯಿಲೆ !

ಈಗಿನ ಕಾಲದ ಜನರು ಏನು ಬೇಕಾದರೂ ಬಿಡ್ತಾರೆ, ಆದರೆ ಒಂದು ನಿಮಿಷವೂ ಮೊಬೈಲ್ ನೋಡುವುದನ್ನು ಬಿಡಲ್ಲ ಎನ್ನುತ್ತಾರೆ. ಅಷ್ಟು ಮಟ್ಟಿಗೆ ಮೊಬೈಲ್ ಗೆ ಅಡೀಟ್ ಆಗಿದ್ದಾರೆ. ಅದರಲ್ಲೂ ಈಗಿನ ಯುವ ಜನರಂತೂ ತಮ್ಮ ಮೊಬೈಲ್ ಇಲ್ಲದಿದ್ದರೆ ಬದುಕುವುದೇ ಕಷ್ಟ ಎನ್ನುವಷ್ಟರ ಮಟ್ಟಕ್ಕೆ ಅವಲಂಬಿತರಾಗಿದ್ದಾರೆ. ಆದರೆ ಅಷ್ಟೇ ಪ್ರಮಾಣದಲ್ಲಿ ರೋಗಗಳಿಗೆ ತುತ್ತಾಗಿ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ . ಸ್ಮಾರ್ಟ್ಫೋನ್‌ಗಳ ಅತಿಯಾದ ಬಳಕೆ ಮತ್ತು ನಿರಂತರವಾಗಿ ಸ್ಕಿçÃನ್‌ಗಳನ್ನು ನೋಡುತ್ತಾ ಕಾಲ ಕಳೆಯುವವರಲ್ಲಿ `ಟೆಕ್ಸ್÷್ಟ ನೆಕ್’ ಅಥವಾ ಟೆಕ್ ನೆಕ್ ಕಾಯಿಲೆಯ…

Read More

ಸಂಗೀತ ಮತ್ತು ಕಲೆಗಳು ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ; ಶ್ರೀನಿವಾಸನ್ ಎನ್.

ಮೈಸೂರು: ಸಂಗೀತ ಮತ್ತು ಕಲೆಗಳು ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಮೈಸೂರಿನ ವಿಜಯನಗರದಲ್ಲಿರುವ ಶ್ರೀಯೋಗಾನರಸಿಂಹಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸನ್ ಎನ್. ತಿಳಿಸಿದರು.ನಗರದ ಹೂಟಗಳ್ಳಿ ಹೌಸಿಂಗ್ ಬೋರ್ಡ್ನ ಶ್ರೀ ಅನಂತೇಶ್ವರ ಭವನದಲ್ಲಿ ಸರ್ವಕಲಾ ಸೇವಾ ಟ್ರಸ್ಟ್ ಹಾಗೂ ಪಂಚಾಯತ್ ಗ್ರಾಮೀಣಾಭಿವೃದ್ಧಿ ರೈತರ ಸೇವಾ ಸಮಿತಿ ಮೈಸೂರು ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟç ಮಟ್ಟದ ಸುಗ್ಗಿಯರ ಕಲೋತ್ಸವ ಗಾಯನ ಸೀಸನ್ 3 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಯುವ ಪ್ರತಿಭೆಗಳಿಗೆ…

Read More

ಸೇವೆಯಿಂದ ನಿವೃತ್ತರಾದ ಪೊಲೀಸ್ ಅಧಿಕಾರಿಗಳಿಗೆ ಬೀಳ್ಕೋಡುಗೆ

ಮೈಸೂರು; ಪೊಲೀಸ್ ಇಲಾಖೆಯಲ್ಲಿ ಸುಧೀರ್ಘ ಅವಧಿಯವರೆಗೆ ಪ್ರಾಮಾಣಿಕತೆ ಹಾಗೂ ಕರ್ತವ್ಯಪರತೆಯಿಂದ ಸೇವೆ ಸಲ್ಲಿಸಿ ವಯೋ ನಿವೃತ್ತಿಗೊಂಡ ಪೊಲೀಸ್ ಅಧಿಕಾರಿಗಳನ್ನು ಸನ್ಮಾನಿಸಿ ಬೀಳ್ಕೋಡಲಾಯಿತು.ಪಿಎಸ್‌ಐಗಳಾದ ಭಾಸ್ಕರ್ ಕೆ.ಎಸ್, ಗೋಪಾಲಕೃಷ್ಣ ಕೆ, ಎಆರ್‌ಎಸ್‌ಐಗಳಾದ ಚಿಕ್ಕಮಲ್ಲಪ್ಪ, ನಂಜುAಡಯ್ಯ ಸಿ.ಎಂ , ಪ್ರಶಾಂತ್ ಎಎಸ್‌ಐಗಳಾದ ಮನೋಹರ್, ರಾಮಸ್ವಾಮಿ ಹೆಚ್.ಜಿ ಹಾಗೂ ಮುಖ್ಯಪೇದೆ ಮಿತ್ರಕುಮಾರ್ ರವರನ್ನು ಮೈಸೂರು ಜಿಲ್ಲಾ ಪೊಲೀಸ್ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಅಪರ ಪೊಲೀಸ್ ಅಧೀಕ್ಷಕ ಮಲ್ಲಿಕ್ ಸಿ ರವರು, ನಿವೃತ್ತ ಅಧಿಕಾರಿಗಳ ಸೇವೆಯನ್ನು ಸ್ಮರಿಸಿ, ಅವರ ಮುಂದಿನ ನಿವೃತ್ತ ಜೀವನವು…

Read More

ಕಠಿಣ ಪರಿಶ್ರಮದಿಂದ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಿ; ಶಾಸಕ ಹರೀಶ್‌ಗೌಡ

ಮೈಸೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಠಿಣ ಅಭ್ಯಾಸ ಮತ್ತು ಪರಿಶ್ರಮದಿಂದ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ಹುಣಸೂರು ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಡಿ.ಹರೀಶ್ ಗೌಡ ಹೇಳಿದರು.ಮೈಸೂರಿನ ಮಾನಸಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಿದ್ದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಹಿರಿಯ ಪತ್ರಕರ್ತರಿಗೆ ಅಭಿನಂದನೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಠ್ಯ ಅಭ್ಯಾಸದೊಂದಿಗೆ ಲೋಕಜ್ಞಾನವನ್ನು ವಿದ್ಯಾರ್ಥಿಗಳು ಗಳಿಸಬೇಕು. ಯಾವ ವಿದ್ಯಾರ್ಥಿ ಸಾಮಾನ್ಯ ಜ್ಞಾನವನ್ನು ಸಂಪಾದಿಸುವುದಿಲ್ಲವೋ, ಆತ…

Read More

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಹರಕೆ ತೀರಿಸಿದ ಅಭಿಮಾನಿಗಳು

ಮೈಸೂರು; ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಆಯ್ಕೆಯಾದ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ಡಿಕೆ ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಭಾನುವಾರ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಹರಕೆ ತೀರಿಸಲಾಯಿತು.ಚಾಮುಂಡಿ ಬೆಟ್ಟದಲ್ಲಿ ಡಿಕೆ ಶಿವಕುಮಾರ್ ಭಾವಚಿತ್ರ ಹಿಡಿದು 101 ತೆಂಗಿನಕಾಯಿ ಹೊಡೆದು ನಂತರ ಚಾಮುಂಡಮ್ಮನ ತೇರು ಸೇವೆ ನೆರೆವೇರಿಸುವ ಮೂಲಕ ಅಭಿಮಾನಿಗಳು ಹರಕೆ ತೀರಿಸಿದರು,ಆರು ತಿಂಗಳ ಹಿಂದೆ ಡಿಕೆ ಶಿವಕುಮಾರ್ ರವರು ಮುಖ್ಯಮಂತ್ರಿ ಆಗಲಿ ಎಂದು ಅಭಿಮಾನಿಗಳು ಚಾಮುಂಡಮ್ಮನ ಮೊರೆ ಹೋಗಿ, ಹರಕೆ ಮಾಡಿಕೊಂಡಿದ್ದರು, ಇಂದು ಭಾನುವಾರ ಚಾಮುಂಡಿ ಬೆಟ್ಟದಲ್ಲಿ ಹರಕೆ…

Read More

ಶ್ರೀಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶುಕವನ’ ತಾತ್ಕಾಲಿಕ ಬಂದ್

ಮೈಸೂರು: ನಗರದ ಪ್ರಸಿದ್ಧ ಪ್ರವಾಸಿ ಆಕರ್ಷಣೆಗಳಲ್ಲೊಂದಾದ ಅವಧೂತ ದತ್ತ ಪೀಠದ ಗಿಳಿಗಳ ಪುನರ್ವಸತಿ ಕೇಂದ್ರಶುಕವನ’ವು ಜೂನ್ 1 ರಿಂದ ಮುಂದಿನ ಸೂಚನೆಯವರೆಗೆ ತಾತ್ಕಾಲಿಕವಾಗಿ ಮುಚ್ಚಲ್ಪಡಲಿದೆ ಎಂದು ದತ್ತ ಪೀಠದ ಆಡಳಿತ ಮಂಡಳಿ ತಿಳಿಸಿದೆ.ಅಭಿವೃದ್ಧಿ ಹಾಗೂ ನವೀಕರಣ ಕಾಮಗಾರಿಗಳ ಹಿನ್ನೆಲೆಯಲ್ಲಿ ಶುಕವನಕ್ಕೆ ಸಾರ್ವಜನಿಕರ ಪ್ರವೇಶವನ್ನು ಸದ್ಯಕ್ಕೆ ನಿರ್ಬಂಧಿಸಲಾಗುತ್ತಿದೆ .ಶುಕವನ ಮುಚ್ಚಲ್ಪಟ್ಟಿದ್ದರೂ, ಅದಕ್ಕೆ ಹೊಂದಿಕೊAಡAತಿರುವ ವಿಶ್ವವಿಖ್ಯಾತ ಬೋನ್ಸಾಯ್ ಉದ್ಯಾನವನ ಮತ್ತು ವಿಶ್ವಂ ವಸ್ತು ಸಂಗ್ರಹಾಲಯಗಳು ಎಂದಿನAತೆ ಕಾರ್ಯನಿರ್ವಹಿಸಲಿವೆ. ಪ್ರವಾಸಿಗರು ಮತ್ತು ಸಾರ್ವಜನಿಕರು ಎಂದಿನAತೆ ಈ ಎರಡು ಸ್ಥಳಗಳಿಗೆ ಭೇಟಿ ನೀಡಬಹುದಾಗಿದೆ…

Read More

ಅಂಬಾವಿಲಾಸ ಅರಮನೆ ಮೈದಾನದಲ್ಲಿ ನೂರಾರು ಮಂದಿ ಯೋಗಪಟುಗಳಿಂದ ಯೋಗಾಭ್ಯಾಸ

ಮೈಸೂರು ; ವಿಶ್ವ ಯೋಗ ದಿನದಂದು ಅರಮನೆ ನಗರಿ, ಯೋಗ ನಗರಿ ಎಂದು ಹೆಸರಾಗಿರುವ ಮೈಸೂರು ನಗರದ ವಿವಿಧೆಡೆ 1.20 ಲಕ್ಷ ಜನ ಏಕಕಾಲಕ್ಕೆ ಯೋಗಾಭ್ಯಾಸ ಮಾಡುವ ಮಹಾಸಂಕಲ್ಪದೊAದಿಗೆ ಭಾನುವಾರ ಸಾಮೂಹಿಕ ಯೋಗಾಭ್ಯಾಸ ಮಾಡಲಾಯಿತು.ಯೋಗ ಫೆಡರೇಷನ್ ಆಫ್ ಮೈಸೂರು ವತಿಯಿಂದ ನಗರದ ಅಂಬಾವಿಲಾಸ ಅರಮನೆ ಮುಂಗಾದ ಮೈದಾನದಲ್ಲಿ ಆಯೋಜಿಸಲಾಗಿದ್ದ ಮಹಾಸಂಕಲ್ಪ ದಿನಸ್ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಯೋಗಪಟುಗಳು ಸಾಮೂಹಿಕ ಯೋಗ್ಯಾಭ್ಯಾಸ ಮಾಡಿದರು.ಆಯುಷ್ ಸಚಿವಾಲಯದ ಸಾಮಾನ್ಯ ಯೋಗ ಶಿಷ್ಟಾಚಾರದ ಪ್ರಕಾರ, 45 ನಿಮಿಷಗಳ ಯೋಗಾಭ್ಯಾಸ ಮಾಡಲಾಯಿತು.ಪ್ರಾರ್ಥನೆ, ಚಾಲನಾ ಕ್ರಿಯೆಗಳ…

Read More