ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರ ಅಡ್ಡಮತದಾನ ಪ್ರಕರಣವನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ; ಸಂಸದ ಯದುವೀರ್
ಮೈಸೂರು:ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರ ಅಡ್ಡಮತದಾನ ಪ್ರಕರಣವನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.ಶನಿವಾರ ಮೈಸೂರಿನ ಚಾಮರಾಜಪುರಂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಶಾಸಕರ ಅಡ್ಡ ಮತದಾನಕ್ಕೂಪಕ್ಷದ ನಾಯಕತ್ವಕ್ಕೂ ಯಾವುದೇ ಸಂಬಂಧವಿಲ್ಲ. ಈ ಬೆಳವಣಿಗೆಯು ನಾಯಕತ್ವದ ಮೇಲೆ ಯಾವ ಪರಿಣಾಮವನ್ನೂ ಬೀರುವುದಿಲ್ಲ. ಜೆಡಿಎಸ್-ಬಿಜೆಪಿ ಮೈತ್ರಿ ಮೇಲೂ ಕೆಟ್ಟ ಪರಿಣಾಮ ಉಂಟಾಗುವುದಿಲ್ಲ’ ಎಂದು ಹೇಳಿದರು.ಇಡೀ ಪ್ರಕರಣವನ್ನು ಪಕ್ಷ ಗಂಭೀರವಾಗಿ ತೆಗೆದುಕೊಂಡಿದೆ. ಅಡ್ಡಮತದಾನ ಮಾಡಿದವರನ್ನು ಪತ್ತೆ ಹಚ್ಚುತ್ತೇವೆ….