ವಿದ್ಯುತ್ ಇಲಾಖೆಯನ್ನು ಖಾಸಗಿಕರಣಗೊಳಿಸದಿರಲು ರೈತ ಸಂಘದ ರೈತ ಪರ್ವ ಒತ್ತಾಯ
ಮೈಸೂರು; ವಿದ್ಯುತ್ ಇಲಾಖೆಯನ್ನು ಖಾಸಗಿಕರಣಗೊಳಿಸಬಾರದು ರೈತ ಸಂಘದ ರೈತ ಪರ್ವದ ರಾಜ್ಯಾಧ್ಯಕ್ಷ ಅರುಣ್ ಕುಮಾರ್ ಟಿ.ವಿ. ಒತ್ತಾಯಿಸಿದರು.ಗುರುವಾರ ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ವಿದ್ಯುತ್ ವಲಯವನ್ನು ಖಾಸಾಗೀಕರಣ ಗೊಳಿಸುವ ಹಾಗೂ ಟಾಟಾ ವಿದ್ಯುತ್ ಕಂಪನಿಗೆ ವಿದ್ಯುತ್ ವಿತರಣ ಜವಾಬ್ದಾರಿಯನ್ನು ಕರ್ನಾಟಕ ರಾಜ್ಯ ರೈತ ಸಂಘ ರೈತ ಪರ್ವ ಸಂಘಟನೆಯು ವಿರೋಧಿಸುತ್ತದೆ. ವಿದ್ಯುತ್ ಖಾಸಾಗಿಕರಣದಿಂದ ಜನಸಾಮಾನ್ಯರಿಗೆ ಹಾಗೂ ರೈತಾಪಿ ವರ್ಗದವರಿಗೆ ಅರ್ಥಿಕ ಸಂಕಷ್ಟಕ್ಕೆ ಎಡೆ ಮಾಡಿಕೊಡುತ್ತದೆ. ಉಚಿತ ಪಂಪ್ಸೆಟ್ ವಿದ್ಯುತ್ ಗೆ…