ರಾಜೇಂದ್ರ ಶ್ರೀಗಳು ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಕ್ರಾಂತಿಗೈದವರು; ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮೈಸೂರು; ಶಿಕ್ಷಣ ಕ್ಷೇತ್ರದಲ್ಲಿ ಮಹತ್ವವಾದ ಕ್ರಾಂತಿಯನ್ನು ಮಾಡಿದವರು ಸುತ್ತೂರು ಮಹಾ ಸಂಸ್ಥಾನದ ಪರಮಪೂಜ್ಯ ರಾಜೇಂದ್ರ ಶ್ರೀಗಳು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.ಶನಿವಾರ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಏರ್ಪಡಿಸಲಾಗಿದ್ದ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 111ನೇ ಜಯಂತಿ ಮಹೋತ್ಸವವನ್ನು ಮಠದ ಪೀಠಾಧಿಪತಿಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ರಾಜೇಂದ್ರ ಶ್ರೀಗಳು ಅತ್ಯಂತ ಚಿಕ್ಕ ವಯಸ್ಸಿನಿಂದಲೇ ಸೇವಾಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಅವರು ಕೈಗೊಂಡ ಕಾರ್ಯಗಳಿಂದ ಅನೇಕ…