Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಮೈಸೂರಿನ 7 ವರ್ಷದ ಗಾಯತ್ರಿ ಎಸ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಸೇರ್ಪಡೆ

ಮೈಸೂರು: ನಗರದ ಶ್ರೀ ವಿವೇಕ ಬಾಲೋದ್ಯಾನ ಪಬ್ಲಿಕ್ ಸ್ಕೂಲ್ ನ 2ನೇ ತರಗತಿ ವಿದ್ಯಾರ್ಥಿನಿ ಗಾಯತ್ರಿ.ಎಸ್ ತಮ್ಮ ಅಸಾಧಾರಣ ಗಾಯನ ಕೌಶಲ್ಯದಿಂದ ರಾಷ್ಟ ಮಟ್ಟದ ದಾಖಲೆಯನ್ನು ನಿರ್ಮಿಸಿದ್ದಾರೆ.ಐದು ವಿಭಿನ್ನ ಪ್ರಕಾರಗಳ ಹಾಡುಗಳನ್ನು ಪ್ರದರ್ಶಿಸಿದ ಅತ್ಯಂತ ವೇಗವಾಗಿ ಪ್ರಕಾರಗಳನ್ನು ಬದಲಾಯಿಸಿದ ಕಿರಿಯ ಗಾಯಕಿ ಎಂಬ ಶೀರ್ಷಿಕೆಯಡಿ ಅವರ ಹೆಸರು ನ್ಯಾಷನಲ್ ಬುಕ್ ಆಫ್ ರೆಕಾರ್ಡ – 2026ರಲ್ಲಿ ದಾಖಲಾಗಿದೆ.ಗಾಯತ್ರಿ ಒಂದೇ ಪ್ರದರ್ಶನದಲ್ಲಿ 25ಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ವಿಶೇಷವೆಂದರೆ ಒಂದು ಸೆಕೆಂಡ್‌ನೊಳಗೆ ಒಂದು ಪ್ರಕಾರದಿಂದ ಇನ್ನೊಂದು ಪ್ರಕಾರಕ್ಕೆ ತಕ್ಷಣವೇ…

Read More

ದಸರಾಪಾಸ್‌ಗಳನ್ನುಸಂಪೂರ್ಣವಾಗಿತಿರಸ್ಕರಿಸಿದ ಸಂಸದ ಯದುವೀರ್

* ಸಾರ್ವಜನಿಕರಿಗೆ ಪಾರದರ್ಶಕವಾಗಿ ಲಭ್ಯವಾಗುವ ವ್ಯವಸ್ಥೆಗೆ ಒತ್ತಾಯ ಬೆಂಗಳೂರು; ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಉನ್ನತ ಮಟ್ಟದ ದಸರಾ ಸಮಿತಿ ಸಭೆಯಲ್ಲಿ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭಾಗವಹಿಸಿ, ಮುಂಬರುವ ನಾಡಹಬ್ಬ ಮೈಸೂರು ದಸರಾ ಸಿದ್ಧತೆಗಳ ಕುರಿತು ತಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಮಂಡಿಸಿದರು. ಈ ಸಂದರ್ಭದಲ್ಲಿ ಸಂಸದರು ಮಹತ್ವದ ನಿರ್ಧಾರವೊಂದನ್ನು ಪ್ರಕಟಿಸಿ, ಸಂಸದರಿಗೆ ನೀಡಲಾಗುವ ಎಲ್ಲಾ ವಿಧದ ದಸರಾ ಪಾಸ್‌ಗಳನ್ನು ತಾವು ಸ್ವೀಕರಿಸುವುದಿಲ್ಲ ಎಂದು ತಿಳಿಸಿದರು. ದಸರಾ ಮಹೋತ್ಸವವು…

Read More

ಹಿರಿಯ ಲೇಖಕಿ ಸಿ.ಎನ್.ಮುಕ್ತಾ ನಿಧನ

ಮೈಸೂರು: ಖ್ಯಾತ ಲೇಖಕಿ ಸಿ.ಎನ್.ಮುಕ್ತಾ (ಕಳ್ಳಂಬೆಳ್ಳ ನರಸಿಂಹ ಮೂರ್ತಿ ಮುಕ್ತಾ) ಶುಕ್ರವಾರ ಬೆಳಗಿನ ಜಾವ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅವರಿಗೆ 75 ವರ್ಷ ವಯಸ್ಸಾಗಿತ್ತು. ಅವಿವಾಹಿತರಾಗಿದ್ದ ಅವರಿಗೆ ಸೋದರ, ಸೋದರಿ ಇದ್ದಾರೆ. ಲೇಖಕರಾಗಿದ್ದ ನವರತ್ನರಾಮ್ ರಾವ್ ಅವರು ಇವರ ಚಿಕ್ಕಪ್ಪ.ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕಿಯಾಗಿ, ಮುಖ್ಯ ಶಿಕ್ಷಕಿಯಾಗಿ 25 ವರ್ಷಕ್ಕೂ ಅಧಿಕವಾಗಿ ವಿವಿಧೆಡೆ ಕಾರ್ಯ ನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದಿದ್ದರು. ಅವರ ಕಾದಂಬರಿಗಳಲ್ಲಿ ಸುಖದ ಸೋಪಾನ, ಕ್ಷಮಯಾ ಧರಿತ್ರಿ, ದಡ ಸೇರಿದ ನೌಕೆ, ಜೀವನಚಕ್ರ, ಅಮೃತಮಯಿ,…

Read More

ಮೈಸೂರು ವಿವಿಯ ಎಸ್.ಸಿ. ಎಸ್.ಟಿ. ಸಂಶೋಧಕರಿಗೆ ಶಿಷ್ಯವೇತನ ಬಿಕ್ಕಟ್ಟು ಬಗೆಹರಿಸಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

ಮೈಸೂರು ; ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2026-27ನೇ ಸಾಲಿನಲ್ಲಿ ಸಂಶೋಧನೆ ಕೈಗೊಂಡಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳ ಶಿಷ್ಯವೇತನದ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಅಧಿಕಾರಿಗಳ ಸಭೆ ಜರುಗಿತು.ಸಚಿವರ ಗೃಹ ಕಛೇರಿ “ಕಾವೇರಿ”ಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದ ಸಚಿವರು, ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.ತಲಾ 58 ವಿದ್ಯಾರ್ಥಿಗಳಿಗೆ ಹಂಚಿಕೆ:ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಒಟ್ಟು…

Read More

600 ಕೋಟಿರೂಗಳನ್ನು ವಿವಿಧ ಆಯೋಗಗಳ ಹೆಸರಿನಲ್ಲಿ ಖರ್ಚು ಮಾಡಿದ್ದರೂ, ಹಿಂದುಳಿದ ಸಮುದಾಯಕ್ಕೆ ಯಾವುದೇ ನೈಜ ಪ್ರಯೋಜನ ಸಿಕ್ಕಿಲ್ಲ; ಬಿಜೆಪಿ ಸಂಸದ ಪಿ.ಸಿ.ಮೋಹನ್

ಮೈಸೂರು: ಸರ್ಕಾರ ಸುಮಾರು 600 ಕೋಟಿ ರೂ ಸಾರ್ವಜನಿಕ ಹಣವನ್ನು ವಿವಿಧ ಆಯೋಗಗಳ ಹೆಸರಿನಲ್ಲಿ ಖರ್ಚು ಮಾಡಿದ್ದರೂ, ಹಿಂದುಳಿದ ಸಮುದಾಯಕ್ಕೆ ಯಾವುದೇ ನೈಜ ಪ್ರಯೋಜನ ಸಿಕ್ಕಿಲ್ಲ ಎಂದು ಬಿಜೆಪಿ ಸಂಸದ ಪಿ.ಸಿ.ಮೋಹನ್ ಆರೋಪಿಸಿದರು.ಗುರುವಾರ ನಗರದ ಚಾಮರಾಜಪುರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕಳೆದ 12 ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ಹಾಗೂ ಸಿದ್ದರಾಮಯ್ಯ ಹಿಂದುಳಿದ ವರ್ಗಗಳಿಗೆ ನಿರಂತರ ಅನ್ಯಾಯ ಮಾಡುತ್ತಾ ಬಂದಿದ್ದಾರೆ. ಹಿಂದುಳಿದ ವರ್ಗಗಳ ಚಾಂಪಿಯನ್ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯನವರು 2013ರಲ್ಲಿ ಹಿಂದುಳಿದ ವರ್ಗಗಳ ಹೆಸರಿನಲ್ಲಿ ಹುಸಿ…

Read More

ದಸರಾ ಹಬ್ಬದಲ್ಲಿ ಸರ್ಕಾರ ಕಂಬಳ ಕ್ರೀಡೆ ಆಯೋಜಿಸುವುದಕ್ಕೆ ಪರಿಸರಕ್ಕಾಗಿ ನಾವು ಸಂಘಟನೆ ತೀವ್ರ ವಿರೋಧ

ಮೈಸೂರು; ವಿಶ್ವ ವಿಖ್ಯಾತ ನಾಡ ಹಬ್ಬ ದಸರಾ ಹಬ್ಬದ ಸಂದರ್ಭದಲ್ಲಿ ಸರ್ಕಾರವು ಕಂಬಳ ಕ್ರೀಡೆ ಆಯೋಜಿಸುವುದಕ್ಕೆ ಪರಿಸರಕ್ಕಾಗಿ ನಾವು ಸಂಘಟನೆ ತೀವ್ರ ವಿರೋಧ ವ್ಯಕ್ತಪಡಿಸಿದೆ.ಈ ಕುರಿತು ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಪರಶುರಾಮೇಗೌಡ ಹಾಗೂ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರು, ವಿಶ್ವ ವಿಖ್ಯಾತ ಮೈಸೂರು ದಸರಾ ಹಬ್ಬವು ಐತಿಹಾಸಿಕ ಹಿನ್ನೆಲೆ, ಭವ್ಯ ಪರಂಪರೆ, ಸಾಂಸ್ಕöÈತಿಕ ವೈಶಿಷ್ಟ÷್ಯಗಳು ಮತ್ತು ಧಾರ್ಮಿಕ ಆಚರಣೆಗಳನ್ನು ಹೊಂದಿದೆ. ಪ್ರತಿ ವರ್ಷ…

Read More

ಮತದಾನದ ಹಕ್ಕನ್ನು ಕಸಿಯುವ ಹುನ್ನಾರ: ಎಂ.ಲಕ್ಷ್ಮಣ್

 ​ಪಿರಿಯಾಪಟ್ಟಣ: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಯ ನೆಪದಲ್ಲಿ ಮತದಾರರ ಹಕ್ಕನ್ನು ಕಸಿಯುವ ಹುನ್ನಾರ ನಡೆಸುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದರು. ಪಟ್ಟಣದ ಅಭಯ್ ಕನ್ವೆಸನಲ್ ನಲ್ಲಿ ನಡೆದ ಪಿರಿಯಾಪಟ್ಟಣ ವಿಭಾಗ ಮಟ್ಟದ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಬೂತ್ ಮಟ್ಟದ ಪ್ರತಿನಿಧಿಗಳ (ಬಿಎಲ್ಎ) ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಎಸ್ಐಆರ್  ಪ್ರಕ್ರಿಯೆಗೆ ನಮ್ಮ ವಿರೋಧವಿಲ್ಲ, ಜನರ ಮತದಾನದ ಹಕ್ಕನ್ನು ರಕ್ಷಣೆ ಮಾಡುವುದು ಕಾಂಗ್ರೆಸ್ ಪಕ್ಷದ ಜವಾಬ್ದಾರಿ ಅದಕ್ಕಾಗಿ ದೇಶದಾದ್ಯಂತ ಜನರಲ್ಲಿ ಜಾಗೃತಿ ಮೂಡಿಸಲು ಸಭೆಗಳನ್ನು ನಮ್ಮ ಪಕ್ಷ ಹಮ್ಮಿಕೊಳ್ಳುತ್ತಿದೆ, ಆದರೆ…

Read More

ಚಾಮುಂಡಿಬೆಟ್ಟ ಪ್ಲಾಸ್ಟಿಕ್ ಮುಕ್ತ ವಲಯ:ಆಷಾಢ ಮಾಸದಲ್ಲಿ ಪ್ಲಾಸ್ಟಿಕ್ ಬಳಸದಂತೆ ಭಕ್ತರಿಗೆ ಪ್ರಾಧಿಕಾರ ಸೂಚನೆ

ಮೈಸೂರು: ನಗರದ ಚಾಮುಂಡಿಬೆಟ್ಟ ಪ್ಲಾಸ್ಟಿಕ್ ಮುಕ್ತ ವಲಯವಾಗಿದೆ. ಈ ಹಿನ್ನಲೆಯಲ್ಲಿ ಆಷಾಢ ಮಾಸದ ಶುಕ್ರವಾರಗಳು, ಪ್ರತಿ ಶನಿವಾರ, ಭಾನುವಾರ ಹಾಗೂ ಚಾಮುಂಡೇಶ್ವರಿ ಅಮ್ಮನವರ ಜನ್ಮೋತ್ಸವದ /ವರ್ಧಂತಿ ಪ್ರಯುಕ್ತ ಚಾಮುಂಡಿಬೆಟ್ಟಕ್ಕೆ ಲಕ್ಷಾಂತರ ಭಕ್ತಾದಿಗಳು ಆಗಮಿಸುವ ಹಿನ್ನೆಲೆಯಲ್ಲಿ, ಇಡೀಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಶ್ರೀ ಚಾಮುಂಡೇಶ್ವರಿಕ್ಷೇತ್ರಅಭಿವೃದ್ಧಿ ಪ್ರಾಧಿಕಾರವು ತೀರ್ಮಾನಿಸಿದೆ.ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆಯ ತೀರ್ಮಾನದಂತೆ, ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆಯನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಭಕ್ತಾದಿಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧದ ಕುರಿತು ಅರಿವು ಮೂಡಿಸಲು ಉದ್ದೇಶಿಸಲಾಗಿದೆ.ಈ ಬಾರಿಯ…

Read More

ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಳ ; ಹೈಕೋರ್ಟ್ ತೀರ್ಮಾನ ನೋಡಿ ಮುಂದಿನ ಹೋರಾಟ; ಮಾಜಿ ಸಚಿವ ರಮೇಶ್ ಜಾರಕಿ ಹೊಳಿ

ಮೈಸೂರು; ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಶೇ 3ರಿಂದ 7 ಕ್ಕೆ ಹೆಚ್ಚಿಸಿರುವ ಕುರಿತು ಜುಲೈ 15 ರಂದು ಹೈಕೋರ್ಟ್ನಲ್ಲಿ ವಿಚಾರಣೆ ನಡೆಯಲಿದ್ದು, ಅಲ್ಲಿನ ತೀರ್ಮಾನ ನಮ್ಮ ಪರವಾಗಿ ಬಿದ್ದರೆ ವಿಜಯೋತ್ಸವ ಮಾಡುತ್ತೇವೆ, ವ್ಯತಿರಿಕ್ತವಾದ ತೀರ್ಮಾನ ಬಂದರೆ ಜುಲೈ 16 ಹಾಗೂ 17 ರಂದು ಬೆಂಗಳೂರಿನಲ್ಲಿ ಸಭೆ ನಡೆಸಿ, ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮಾಜಿ ಸಚಿವ ರಮೇಶ್ ಜಾರಕಿ ಹೊಳಿ ಹೇಳಿದರು.ಮಂಗಳವಾರ ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಎಸ್ಟಿ ಮೋರ್ಚಾದಿಂದ ಏರ್ಪಡಿಸಲಾಗಿದ್ದಸಾಮಾಜಿಕ ನ್ಯಾಯಕ್ಕಾಗಿ…

Read More