Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ದಸರಾದಲ್ಲಿ ಪಾಲ್ಗೊಳ್ಳಲಿರುವ ಆನೆಗಳಿಗೆಲ್ಲಾ ಹೃದಯ, ಆರೋಗ್ಯ ತಪಾಸಣೆ

*20 ಆನೆಗಳ ಆರೋಗ್ಯವನ್ನು ತಪಾಸಣೆ ನಡೆಸಿದ ವೈದ್ಯರು, ಅರಣ್ಯ ಇಲಾಖೆಯ ಅಧಿಕಾರಿಗಳ ತಂಡಮೈಸೂರು: ಈ ಬಾರಿ ನಡೆಯಲಿರುವ ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾದಲ್ಲಿ ಪಾಲ್ಗೊಳ್ಳಲಿರುವ ಗಜಪಡೆಯ ಆಯ್ಕೆ ಪ್ರಕ್ರಿಯೆಯನ್ನು ಅರಣ್ಯ ಇಲಾಖೆ ಆರಂಭಿಸಿದ್ದು, ಆನೆಗಳ ಆರೋಗ್ಯವನ್ನು ತಪಾಸಣೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಆನೆಗಳ ಹೃದಯ ತಪಾಸಣೆಗಾಗಿ ಇಸಿಜಿ ಪರೀಕ್ಷೆ ನಡೆಸಲಾಗಿದೆ.ಮೊದಲ ಹಂತವಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ವೈದ್ಯರ ತಂಡ, ತಮ್ಮ ಸಿಬ್ಬಂದಿಗಳೊ0ದಿಗೆ ಮಡಿಕೇರಿಯ ಮತ್ತಿಗೋಡು ಹಾಗೂ ದುಬಾರೆ, ಬಂಡೀಪುರದ ರಾಂಪುರ ಆನೆ ಶಿಬಿರಗಳಿಗೆ…

Read More

ಪರಿಶಿಷ್ಟಪಂಗಡಕ್ಕೆ ಶೇ 7ರಷ್ಟು ಮೀಸಲಾತಿ ನೀಡದಿದ್ದರೆ ಸರ್ಕಾರ ಉರುಳಿಸುವ ತನಕ ಹೋರಾಟ; ಮಾಜಿ ಸಚಿವ ಶ್ರೀರಾಮುಲು ಎಚ್ಚರಿಕೆ

ಮೈಸೂರು; ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಶೇ 7ಕ್ಕೇರಿಸಿ ಆದೇಶ ಹೊರಡಿಸಲಾಗಿತ್ತು. ಅದನ್ನು ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಬೇಕು. ಇಲ್ಲದಿದ್ದರೆ ಸರ್ಕಾರ ಉರುಳಿಸುವ ತನಕ ಹೋರಾಟವನ್ನು ನಡೆಸಲಾಗುವುದು ಎಂದು ಮಾಜಿ ಸಚಿವ ಶ್ರೀರಾಮುಲು ಎಚ್ಚರಿಕೆ ನೀಡಿದರು. ಮಂಗಳವಾರ ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಎಸ್‌ಟಿ ಮೋರ್ಚಾದಿಂದ ಏರ್ಪಡಿಸಲಾಗಿದ್ದ ಸಾಮಾಜಿಕ ನ್ಯಾಯಕ್ಕಾಗಿ ಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನ ರಚಿಸಿದಾಗಲೇ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿಯನ್ನು…

Read More

ಹಿಂದೂ ಎನ್ನುವುದು ಒಂದು ರಿಲಿಜಿಯನ್ ಅಲ್ಲ, ಅದೊಂದು ಶ್ರೇಷ್ಠ ಜೀವನ ಶೈಲಿ; ಜಯರಾಮ್ ಬೊಳ್ಳಾಜೆ

ಮೈಸೂರು; ರಾಷ್ಟ್ರೀಯ ಸ್ವಯಂ ಸೇವಕ ಸಂಘವು ಹಿಂದೂ ಸಮಾಜದ ಮೌಲ್ಯಗಳ ನೆಲಗಟ್ಟಿನ ಮೇಲೆ, ವ್ಯಕ್ತಿ ನಿರ್ಮಾಣದಿಂದ ರಾಷ್ಟç ನಿರ್ಮಾಣ ಎಂಬ ಮೂಲ ಮಂತ್ರವನ್ನು ಇಟ್ಟುಕೊಂಡು ಕಾರ್ಯ ನಿರ್ವಹಿಸುತ್ತಿದೆ ಎಂದು ವಕ್ತಾರ ಜಯರಾಮ್ ಬೊಳ್ಳಾಜೆ ತಿಳಿಸಿದರು.ನಗರದ ಕೃಷ್ಣಮೂರ್ತಿಪುರಂನಲ್ಲಿರುವ ಬಿಎಸ್‌ಎಸ್ ವಿದ್ಯೋದಯ ಶಾಲೆಯ ಸಭಾಂಗಣದಲ್ಲಿ ನಡೆದ ಮೈಸೂರು ಮಹಾನಗರದ ವತಿಯಿಂದ ಪ್ರಮುಖ ನಾಗರೀಕ ಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಂಘ ಸ್ಥಾಪನೆಯ ಉದ್ದೇಶ, ಕಾರ್ಯಶೈಲಿ ಹಾಗೂ ಕಾರ್ಯವ್ಯಾಪ್ತಿಯನ್ನು ಸವಿವರವಾಗಿ ಪ್ರಸ್ತುತಪಡಿಸಿದರು.ಸಂಘವು ಹಿಂದೂ ಸಮಾಜದ ಮೌಲ್ಯಗಳ ನೆಲಗಟ್ಟಿನ ಮೇಲೆ, ವ್ಯಕ್ತಿ ನಿರ್ಮಾಣದಿಂದ…

Read More

ಎಸ್‌ಐಆರ್ ವಿಚಾರವಾಗಿ ಬಿಜೆಪಿ ಅನಗತ್ಯ ಹಾಗೂ ಆಧಾರ ರಹಿತ ಆರೋಪ ಮಾಡುವ ಮೂಲಕ ನಗೆಪಾಟಲಿಗೀಡಾಗಿದೆ; ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್

ಮೈಸೂರು: ಎಸ್‌ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲ ದಿನಗಳಿಂದ ಅನಗತ್ಯ ಹಾಗೂ ಆಧಾರ ರಹಿತ ಆರೋಪ ಮಾಡುವ ಮೂಲಕ ನಗೆಪಾಟಲಿಗೀಡಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಲೇವಡಿ ಮಾಡಿದರು.ಭಾನುವಾರ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ದೇಶದ 13 ರಾಜ್ಯಗಳಲ್ಲಿ ಎಸ್‌ಐಆರ್ ಮಾಡಿ 6.5 ಕೋಟಿ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟು, ಆ ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದಿದೆ. ಅದರಂತೆ ಕರ್ನಾಟಕ ರಾಜ್ಯದಲ್ಲೂ 1…

Read More

ಜು.7 ರಂದು ಸಾಮಾಜಿಕ ನ್ಯಾಯಕ್ಕಾಗಿ ಜಾಗೃತಿ ಸಮಾವೇಶ ಆಯೋಜನೆ; ಬಿಜೆಪಿ ರಾಜ್ಯ ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್

ಮೈಸೂರು: ನಗರದಲ್ಲಿ ಜುಲೈ 7ರಂದು ನಿತ್ಯೋತ್ಸವ ಕಲ್ಯಾಣಮಂಟಪದಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಜಾಗೃತಿ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಬಿಜೆಪಿ ರಾಜ್ಯ ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ತಿಳಿಸಿದರು.ಭಾನುವಾರ ನಗರದ ಚಾಮರಾಜಪುರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾವೇಶದಲ್ಲಿ ಮಾಜಿ ಸಚಿವರಾದ ಬಿ.ಶ್ರೀರಾಮುಲು,ರಮೇಶ್ ಜಾರಕಿಹೊಳಿ, ರಾಜೂಗೌಡ, ಶಾಂತರಾಮ್ ಸಿದ್ದಿ, ಎಸ್ ಟಿ ಮೋರ್ಚಾ ಅಧ್ಯಕ್ಷ ಬಂಗಾರು ಹನುಮಂತು, ಮಾಜಿ ಸಚಿವರು,ಮಾಜಿ ಸಂಸದರು,ಮಾಜಿ ಶಾಸಕರು,ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಮತ್ತಿತರ ನಾಯಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು.ಪರಿಶಿಷ್ಟ ಪಂಗಡಕ್ಕೆ…

Read More

ರಾಮಾಯಣ, ಮಹಾಭಾರತ, ವಿಕ್ರಮಾದಿತ್ಯನ ಕಾಲಘಟ್ಟಗಳಲ್ಲಿ ಜಾರಿಯಲ್ಲಿದ್ದ ನ್ಯಾಯ ನೀಡಿಕೆಯ ಕ್ರಮಗಳನ್ನು ನಾವು ಈಗಲೂ ಅನುಸರಿಸಬಹುದಾಗಿದೆ; ಸಿ.ವಿ.ಗೋಪಿನಾಥ್

ಮೈಸೂರು; ಭಾರತ ಜ್ಞಾನ ಪರಂಪರೆ ಅಧ್ಯಯನ ಯೋಗ್ಯವಾಗಿರುವ ಈ ಕಾಲದಲ್ಲಿ ನಮ್ಮ ಪುರಾಣಗಳಲ್ಲಿ ರಾಮಾಯಣ, ಮಹಾಭಾರತ, ವಿಕ್ರಮಾದಿತ್ಯನ ಕಾಲಘಟ್ಟಗಳಲ್ಲಿ ಜಾರಿಯಲ್ಲಿದ್ದ ನ್ಯಾಯ ನೀಡಿಕೆಯ ಕ್ರಮಗಳನ್ನು ನಾವು ಈಗಲೂ ಅನುಸರಿಸಬಹುದಾಗಿದೆ ಎಂದು ಭಾರತ ಸರ್ಕಾರದ ಮಾಜಿ ಹೆಚ್ಚುವರಿ ಕಾರ್ಯದರ್ಶಿ ಸಿ.ವಿ.ಗೋಪಿನಾಥ್ ಹೇಳಿದರು.ಶನಿವಾರ ವಿದ್ಯಾವರ್ಧಕ ಕಾನೂನು ಕಾಲೇಜು ಸಭಾಂಗಣದಲ್ಲಿ ಆಯೋಜಿಸಿದ್ದ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಸಮಾರೋಪ ಕಾರ್ಯಕ್ರಮ”ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಹಿಂದೆ ವಿವೇಚನೆ, ನೈತಿಕತೆ, ಅಂತಃಕರಣಗಳ ಒಳಪ್ರಜ್ಞೆಗಳ ಮೂಲಕ ಎರಡು ಕಡೆಯ ವಾದ ವಿವಾದಗಳನ್ನು ಕೇಳಿಸಿಕೊಂಡು…

Read More

ವೀರನಹೊಸಳ್ಳಿ ವಲಯ ವ್ಯಾಪ್ತಿಯಲ್ಲಿ ಇಬ್ಬರ ಮೇಲೆ ದಾಳಿ ನಡೆಸಿದ್ದ ಕರಡಿ ಕರಡಿ ಸೆರೆನಿಟ್ಟುಸಿರು ಬಿಟ್ಟ ಚಾಕಹಳ್ಳಿ, ಚಕ್ಕೋಡನಹಳ್ಳಿ ಗ್ರಾಮಸ್ಥರು

ಎಚ್.ಡಿ.ಕೋಟೆ; ತಾಲೂಕಿನ ವೀರನಹೊಸಹಳ್ಳಿ ಅರಣ್ಯ ವಲಯ ವ್ಯಾಪ್ತಿಯಲ್ಲಿ ಕರಡಿಯೊಂದು ಇಬ್ಬರ ಮೇಲೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ನಡೆದಿದೆ. ಗಾಯಾಳುಗಳನ್ನು ಚಾಕಹಳ್ಳಿ ಗ್ರಾಮದ ನಿವಾಸಿ ನಾರಾಯಣ್ ನಾಯಕ್ (60) ಹಾಗೂ ಚಕ್ಕೋಡನಹಳ್ಳಿ ಗ್ರಾಮದ ಮರಿಗೌಡ (ಶಿವಪ್ಪ) ಗಾಯಗೊಂಡವರಾಗಿದ್ದು, ಅವರನ್ನು ಎಚ್.ಡಿ.ಕೋಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.ಎಚ್.ಡಿ. ತಾಲೂಕಿನ ಚಾಕಹಳ್ಳಿ ಗ್ರಾಮದ ಹುಚ್ಚನಾಯಕ ಪುತ್ರ ನಾರಾಯಣ ನಾಯಕ್ ಎಂಬುವವರು, ತಮ್ಮ ಮೊಮ್ಮಗನ ಜೊತೆ ಬಹಿರ್ದೆಸೆಗೆ ತೆರಳುತ್ತಿದ್ದಾಗ, ಮೇಟಿಕುಪ್ಪೆ ಅರಣ್ಯ ವಲಯದಿಂದ ಬಂದ ಕರಡಿ ದಾಳಿ ಮಾಡಿದೆ. ಕೈಗೆ ಕಚ್ಚಿ…

Read More

ಕೊಡಗಿನಲ್ಲಿ ಮಾನವ -ಆನೆ ಸಂಘರ್ಷ ನಿವಾರಣೆಗೆ ಕೇಂದ್ರ ಸರ್ಕಾರದಿಂದ ಮಹತ್ವದ ಭರವಸೆ: ಸಂಸದ ಯದುವೀರ್ ಒಡೆಯರ್

ಮೈಸೂರು : ಕೊಡಗು ಜಿಲ್ಲೆಯಲ್ಲಿನ ಮಾನವ-ಆನೆ ಸಂಘರ್ಷ ಸಮಸ್ಯೆ ಪರಿಹಾರಕ್ಕೆ ಸಂಬAಧಿಸಿದAತೆ ಕೇಂದ್ರ ಸರ್ಕಾರ ಅಗತ್ಯ ಸಹಕಾರ ನೀಡುವುದಾಗಿ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಸಚಿವರು ಭರವಸೆ ನೀಡಿದ್ದಾರೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಭೂಪೇಂದ್ರ ಯಾದವ್ ರವರನ್ನು ಭೇಟಿಯಾಗಿ ಸಲ್ಲಿಸಿದ್ದ ಮನವಿಗೆ ಪ್ರತಿಕ್ರಿಯಿಸಿದ ಸಚಿವರು ಕೊಡಗಿನ ಅರಣ್ಯ ಅಂಚಿನ ಪ್ರದೇಶಗಳಲ್ಲಿ ರೈತರು,…

Read More

ಮೈಸೂರು ದಸರಾದಲ್ಲಿ `ಕಂಬಳ’ ಆಯೋಜನೆಗೆ ಸಂಸದ ಯದುವೀರ್ ಆಕ್ಷೇಪ

ಮೈಸೂರು: ಈ ಬಾರಿಯ ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸದಲ್ಲಿ ಮೊದಲ ಬಾರಿಗೆ ಕಂಬಳವನ್ನು ಆಯೋಜಿಸುತ್ತಿರುವುದಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು ನಾಡ ಹಬ್ಬ ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ವಿಚಾರ ಕುರಿತು ಮರು ಚಿಂತನೆ ನಡೆಸುವಂತೆ ಒತ್ತಾಯಿಸಿದ್ದಾರೆ.ಮೈಸೂರಿನ ದಸರಾದಲ್ಲಿ ಕಂಬಳ ನಡೆಸಲು ಚರ್ಚೆ ನಡೆಯುತ್ತಿದೆ. ಕಂಬಳ ಕರಾವಳಿ ಭಾಗದ ಮಣ್ಣು ಸಂಸ್ಕöÈತಿಯ ಸಂಕೇತ. ಇದು ಶತಮಾನಗಳ ಇತಿಹಾಸ ಹೊಂದಿದ್ದು, ತನ್ನದೇ ಆದ…

Read More

ಪಕ್ಷದೊಳಗಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು, ಗೊಂದಲಗಳು ಈಗ ಸಂಪೂರ್ಣವಾಗಿ ಅಂತ್ಯಗೊAಡಿವೆ; ಬಿ.ವೈ.ವಿಜಯೇಂದ್ರ

ಮೈಸೂರು : ಬಿಜೆಪಿ ಪಕ್ಷದೊಳಗಿನ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಹಾಗೂ ಗೊಂದಲಗಳು ಈಗ ಸಂಪೂರ್ಣವಾಗಿ ಅಂತ್ಯಗೊAಡಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.ಗುರುವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ನಡೆದಿರುವುದು ಸೇರಿದಂತೆ ಎಲ್ಲಾ ಪ್ರಮುಖ ಬೆಳವಣಿಗೆಗಳ ಕುರಿತು ದೆಹಲಿಯ ವರಿಷ್ಠರಿಗೆ ಸಮಗ್ರ ಮಾಹಿತಿ ನೀಡಲಾಗಿದೆ. ಈ ವಿಚಾರವನ್ನು ಮತ್ತೆ ಸಾರ್ವಜನಿಕವಾಗಿ ಚರ್ಚಿಸುವ ಅಗತ್ಯವಿಲ್ಲ ಎಂದರು.ಇದೇ ವೇಳೆ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅವರದ್ದು ಎಂದು ಹೇಳಲಾದ ವೈರಲ್ ಆಡಿಯೋ ಕುರಿತು ಪ್ರತಿಕ್ರಿಯಿಸಿ, , ಆ ಧ್ವನಿ…

Read More