ಮಹಾರಾಣಿ ಟ್ರೋಫಿ ಟಿ20 ಎರಡನೇ ಸೀಸನ್ ಗೆ ಮೈಸೂರು ವಾರಿಯರ್ಸ್ ಮಹಿಳಾ ತಂಡ ಪ್ರಕಟ, ಶುಭಾ ಸತೀಶ್ ಗೆ ನಾಯಕತ್ವ
ಮೈಸೂರು; ಮೈಸೂರು ವಾರಿಯರ್ಸ್ ಫ್ರಾಂಚೈಸಿಯ ಮಾಲೀಕರಾದ ಎನ್ಆರ್ ಗ್ರೂಪ್, ಮಹಾರಾಣಿ ಟ್ರೋಫಿ ಕೆಎಸ್ಸಿಎ ಟಿ20 ಕ್ರಿಕೆಟ್ ಟೂರ್ನಿಯ ಎರಡನೇ ಆವೃತ್ತಿಗೆ ಮೈಸೂರು ವಾರಿಯರ್ಸ್ ಮಹಿಳಾ ತಂಡವನ್ನು ಅಧಿಕೃತವಾಗಿ ಪ್ರಕಟಿಸಿದೆ. ಮುಂಬರುವ ಸರಣಿಗಾಗಿ ತಂಡ ಹಾಗೂ ನಾಯಕಿಯನ್ನು ಘೋಷಿಸಿದ್ದು, ರಾಜ್ಯದ ಪ್ರತಿಭಾವಂತ ಆಟಗಾರ್ತಿ ಶುಭಾ ಸತೀಶ್ ಗೆ ನಾಯಕತ್ವ ಹೊಣೆ ನೀಡಲಾಗಿದೆ.ಭಾರತ ತಂಡದ ಮಾಜಿ ಆಟಗಾರ್ತಿ ಕರುಣಾ ಜೈನ್ ಮುಖ್ಯ ತರಬೇತುದಾರರಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ಮಾರ್ಗದರ್ಶನದಲ್ಲಿ ತಂಡವು ಕಠಿಣ ತರಬೇತಿಯಲ್ಲಿ ನಿರತವಾಗಿದೆ.ಭಾರತದ ಮಹಿಳಾ ಅಂಧರ ಕ್ರಿಕೆಟ್ ತಂಡದ ವಿಶ್ವಕಪ್…