3Kaala News

ಸುಭಾಷಿತ 

ಒಬ್ಬರ ಯಶಸ್ಸನ್ನು ನೋಡಿ ಹೊಟ್ಟೆಕಿಚ್ಚು ಪಡುತ್ತಿದ್ದಾರೆಂದರೆ,
ಅವರಲ್ಲಿ ಶ್ರಮಪಡುವ ಯೋಗ್ಯತೆಯೂ ಇಲ್ಲ,
ಆ ಯಶಸ್ಸಿನ ಹಿಂದಿರುವ ಕಷ್ಟಗಳನ್ನು ಅರಿಯುವ ಯೋಗ್ಯತೆಯೂ ಇಲ್ಲ ಎಂದೇ ಅರ್ಥ.
ಸೋಮಾರಿಗಳ ಕಣ್ಣಿಗೆ ಸಾಧನೆ ಯಾವತ್ತೂ ಅದೃಷ್ಟದಂತೆ ಕಾಣುತ್ತದೆ

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ನಾನು ಬದುಕಿದ್ದೀನಿ, ಆರೋಗ್ಯವಾಗಿದ್ದೀನಿ; ಚಿತ್ರ ನಟ ದೊಡ್ಡಣ್ಣ

ಬೆಂಗಳೂರು; ಬೆಳ್ಳಂಬೆಳಗ್ಗೆ ಕಿಡಿಗೇಡಿಗಳು ನಾನು ಸತ್ತೋದೆ ಅನ್ನೋ ಸುದ್ದಿ ಹಬ್ಬಿಸಿದ್ದಾರೆ. ನಾನು ಬದುಕಿದ್ದೀನಿ, ಆರೋಗ್ಯವಾಗಿ ಇದೀನಿ ಎಂದು ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಹೇಳಿದರು.ಬೆಳಗ್ಗೆ ಏಳೋ ಮುಂಚೆನೇ ಯಾರೋ ಅವಿವೇವಿಕಿಗಳು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ಗಳನ್ನು ಹಾಕಿ ನಾನು ಸತ್ತುಹೋದೆ ಅಂತ ಸುದ್ದಿ ಹಬ್ಬಿಸಿದಾರೆ. ಅದೆಲ್ಲ ಶುದ್ಧ ಸುಳ್ಳು. ನನ್ನ ಆರೋಗ್ಯಚನಾಗಿದೆ, ಬೆಳಗ್ಗೆಯಿಂದ ಪಾಪ ನನ್ನ ಮಕ್ಕಳು, ಮೊಮ್ಮಕ್ಕಳು ಕಾಲ್ ಮಾಡ್ತಾನೇ ಇದಾರೆ. ದೇವರ ಆಶೀರ್ವಾದ ಇರೋವರೆಗೂ ಗಟ್ಟಿಯಾಗಿನೇ ಇರ್ತೀನಿ ಎಂದು ನುಡಿದರು. .ಬದುಕಿರೋ ಮನುಷ್ಯ ಸತ್ತುಹೋದ…

Read More

ಪ್ರತಿ ತಾಲೂಕು ಮಟ್ಟದಲ್ಲಿ ಕಡ್ಡಾಯವಾಗಿ ಜೀವವೈವಿಧ್ಯ ನಿರ್ವಹಣಾ ಸಮಿತಿ ಬಿಎಂಸಿ ಅಸ್ತಿತ್ವದಲ್ಲಿರಬೇಕು; ವಡ್ನಾಳ್ ಜಗದೀಶ್

*ಪರಿಸರ ಸಂರಕ್ಷಣೆ ಮಾಡುವ ಮೂಲಕ ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕುಮೈಸೂರು; ನಾವು ಪರಿಸರದ ಸೌಲಭ್ಯವನ್ನು ಬಳಸಿ ಅನುಭವಿಸಿದ್ದೇವೆ, ಈ ಪರಿಸರವನ್ನು ಸಂರಕ್ಷಣೆ ಮಾಡಿ ಮುಂದಿನ ಪೀಳಿಗೆ ಹಸ್ತಾಂತರಿಸಬೇಕು ಎಂದು ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ವಡ್ನಾಳ್ ಜಗದೀಶ್ ಹೇಳಿದರು.ಶುಕ್ರವಾರ ಮೈಸೂರಿನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಜೀವವೈವಿಧ್ಯ ಸಂರಕ್ಷಣೆ ಹಾಗೂ ಜೀವವೈವಿಧ್ಯ ನಿರ್ವಹಣಾ ಸಮಿತಿಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ನಮ್ಮ ಪೂರ್ವಜರು ನಮಗಿಂತ ಅತ್ಯುತ್ತಮ ಮತ್ತು ಸ್ವಚ್ಛವಾದ ಪರಿಸರವನ್ನು ಅನುಭವಿಸಿದ್ದರು. ಆದರೆ ಪ್ರಸ್ತುತ ದಿನಗಳಲ್ಲಿ ನಮಗೆ ಅಂತಹ…

Read More

ಡಿ.ಕೆ.ಶಿವಕುಮಾರ್ ಅವರಿಗೆ ಶುಭ ಕೋರಿದ ಹೆಚ್.ವಿ.ರಾಜೀವ್

ದೆಹಲಿಯ ಕರ್ನಾಟಕ ಭನವನದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಶಾಸಕರು ಹಾಗೂ ಮಾಜಿ ಸಚಿವರಾದ ಎಸ್.ಟಿ. ಸೋಮಶೇಖರ್ ಹಾಗೂ ಶಾಸಕ ಎ.ಸಿ. ಶ್ರೀನಿವಾಸ್ ರವರೊಂದಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಹಾಗೂ ಕೆ.ಪಿ.ಸಿ.ಸಿ ಸದಸ್ಯ ಎಚ್.ವಿ. ರಾಜೀವ್ ರವರು ಭೇಟಿ ಮಾಡಿ ಶುಭ ಕೋರಿದರು.

Read More

ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿ ಬಂದ ಎಚ್.ಡಿ. ದೇವೇಗೌಡರಿಗೆ ರಾಜ್ಯಸಭಾ ಸದಸ್ಯ ಸ್ಥಾನ ದೊಡ್ಡದೇನಲ್ಲ; ಶಾಸಕ ಎಚ್.ಡಿ. ರೇವಣ್ಣ

ಮೈಸೂರು: ‘ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿ ಬಂದ ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ರಾಜ್ಯಸಭಾ ಸದಸ್ಯ ಸ್ಥಾನ ದೊಡ್ಡದೇನಲ್ಲ’ ಎಂದು ಶಾಸಕ ಎಚ್.ಡಿ. ರೇವಣ್ಣ ಹೇಳಿದರು.ಗುರುವಾರ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ.ದೇವೇಗೌಡರು ರಾಜ್ಯಸಭಾ ಸದಸ್ಯ ಸ್ಥಾನವನ್ನು ನನಗೆ ಕೊಡಿ ಎಂದು ಯಾರಲ್ಲೂ ಕೇಳಿರಲೇ ಇಲ್ಲ. ಆದರೆ ಮಾಧ್ಯಮದಲ್ಲಿ ಆ ವಿಚಾರ ಪ್ರಸ್ತಾಪವಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಒಮ್ಮೆ ಹೆಚ್.ಡಿ.ದೇವೇಗೌಡರ ಹೆಸರು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಪ್ಯಾನಲ್‌ನಲ್ಲಿ ಇದೆ ಎಂದರು. ಮತ್ತೊಮ್ಮೆ…

Read More

ಕಲಬುರಗಿ ಸೇರಿದಂತೆ ಇಡೀ ಕರ್ನಾಟಕ ಡ್ರಗ್ಸ್, ಮಾದಕವ್ಯಸನಿಗಳ ಕೇಂದ್ರವಾಗಿ ಮಾರ್ಪಟ್ಟಿದೆ; ಬಿಜೆಪಿ ರಾಜ್ಯ ವಕ್ತಾರ ಎಂ.ಜಿ. ಮಹೇಶ್

ಮೈಸೂರು: ‘ಕಲಬುರಗಿ ಸೇರಿದಂತೆ ಇಡೀ ಕರ್ನಾಟಕ ಡ್ರಗ್ಸ್, ಮಾದಕವ್ಯಸನಿಗಳ ಕೇಂದ್ರವಾಗಿ ಮಾರ್ಪಟ್ಟಿದೆ. ಸ್ವತಃ ಕಾಂಗ್ರೆಸ್ ಮಂಡಲ ಅಧ್ಯಕ್ಷ ಡ್ರಗ್ಸ್ ಸಾಗಾಣಿಕೆ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ ಎಂದು ಬಿಜೆಪಿ ರಾಜ್ಯ ವಕ್ತಾರ ಎಂ.ಜಿ. ಮಹೇಶ್ ಹೇಳಿದರು.ಗುರುವಾರ ನಗರದ ಚಾಮರಾಜಪುರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಪರಾಧ ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿದೆ.ನ್ಯಾಷನಲ್ ಅಪರಾಧ ರೆಕಾರ್ಡ್ ಬ್ಯೂರೋದ ಇತ್ತೀಚಿನ ವರದಿಯ ಪ್ರಕಾರ, ರಾಜ್ಯದಲ್ಲಿ ಅಪರಾಧ ಚಟುವಟಿಕೆಗಳ ಪ್ರಮಾಣ ಹಿಂದಿನ ವರ್ಷಕ್ಕಿಂತ ಶೇ 10ಕ್ಕಿಂತ ಜಾಸ್ತಿಯಾಗಿದೆ. ಕಲಬುರಗಿ ಜಿಲ್ಲೆಯಲ್ಲಿ…

Read More

ಮೋದಿಯವರ ಆಡಳಿತದಲ್ಲಿ ಭಾರತ ಆರ್ಥಿಕತೆಯಲ್ಲಿ ಮುಂಚೂಣಿಯಲ್ಲಿದೆ; ಸಂಸದ ಯದುವೀರ್

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಆಡಳಿತ 12 ವರ್ಷ ಸುದೀರ್ಘ ಸೇವೆಯಲ್ಲಿ ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಆ ಮೂಲಕ ವಿಕಸಿತ ಭಾರತ ನಿರ್ಮಾಣ ಮಾಡುತ್ತಿದ್ದಾರೆ. ಮೋದಿಯವರ ಆಡಳಿತದಲ್ಲಿ ದೇಶ ಉದ್ದಾರ ಆಗುತ್ತಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.ಬುಧವಾರ ಮೈಸೂರಿನ ಚಾಮರಾಜಪ್ಮರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮೋದಿಯವರು ಪ್ರಧಾನಿಯಾಗುವ ಮೊದಲು ದೇಶದ ಆರ್ಥಿಕ ಪರಿಸ್ಥಿತಿ ಸರಿಯಿರಲಿಲ್ಲ. ಆದರೆ ಮೋದಿ ಅವರು ಅಧಿಕಾರಕ್ಕೆ ಬಂದ ನಂತರ ಕಳೆದ…

Read More

ಮಾದಕ ವಸ್ತುಗಳ ಬಳಕೆ ಹಾಗೂ ಮಾರಾಟಗಾರರ ವಿರುದ್ಧ ಕಠಿಣ ಕ್ರಮ ಜರುಗಿಸಿ; ಶ್ರೀನಿವಾಸ್

ಮೈಸೂರು; ಮಾದಕ ವಸ್ತುಗಳು ಹಾಗೂ ಡ್ರಗ್ಸ್ ಬಳಕೆ ಹಾಗೂ ಮಾರಾಟ ಮಾಡುವವರ ಮೇಲೆ ಕಠಿಣ ಕಾನೂನು ಕ್ರಮಗಳನ್ನು ಜರುಗಿಸುವ ಮೂಲಕ ಮಾರಾಟ ಹಾಗೂ ಬಳಕೆಯನ್ನು ಶೂನ್ಯಕ್ಕೆ ಇಳಿಸಬೇಕು ಎಂದು ಕರ್ನಾಟಕವಿಧಾನ ಮಂಡಲ ಅಧೀನ ಶಾಸನ ರಚನಾ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕ ಶ್ರೀನಿವಾಸ್ ಅವರು ಅಧಿಕಾರಿಗಳಿಗೆ ತಿಳಿಸಿದರು.ಬುಧವಾರ ಮೈಸೂರಿನ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲಿ ್ಲನಡೆದ ಕರ್ನಾಟಕ ವಿಧಾನ ಮಂಡಲ ಅಧೀನ ಶಾಸನ ರಚನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಹಾರ…

Read More

ಮೇಕೆದಾಟು ಯೋಜನೆ ಜಾರಿಗೆ ಪರಿಸರ ನಿಯಂತ್ರಣ ಮಂಡಳಿ ಕೇಂದ್ರ ಸರ್ಕಾರ ಕೂಡಲೇ ಅನುಮತಿ ನೀಡಬೇಕು; ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್

ಮೈಸೂರು: ಮೇಕೆದಾಟು ಯೋಜನೆ ಜಾರಿಗೆ ಪರಿಸರ ನಿಯಂತ್ರಣ ಮಂಡಳಿ ಕೇಂದ್ರ ಸರ್ಕಾರ ಕೂಡಲೇ ಅನುಮತಿ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆಗ್ರಹಿಸಿದರು.ಮಂಗಳವಾರ ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮೇಕೆದಾಟು ವಿಚಾರದಲ್ಲಿ ಸುಪ್ರೀಂಕೋರ್ಟ್ನಲ್ಲಿ ತಮಿಳುನಾಡು ಪಿಟಿಶಿಯನ್ ಹಾಕಿದ್ದಕ್ಕೆ ತಿಂಗಳಿಗೆ 170 ಟಿಎಂಸಿ ನೀರು ಬಿಟ್ಟು, ಉಳಿದ ನೀರನ್ನು ಕರ್ನಾಟಕ ರಾಜ್ಯ ಬಳಕೆ ಮಾಡಿಕೊಳ್ಳುವುದಕ್ಕೆ ಮುಕ್ತ ಅವಕಾಶ ನೀಡಿದೆ. ಮೇಕೆದಾಟು ಯೋಜನೆಗೆ ಡಿಪಿಆರ್ ತಯಾರಿಸಿ ಪರಿಸರ ನಿಯಂತ್ರಣ ಮಂಡಳಿ ಹಾಗೂ ಕೇಂದ್ರ ಸರ್ಕಾರಕ್ಕೆ…

Read More

ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಒಟ್ಟು 3,991 ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಿ

ಬೆಂಗಳೂರು: ರಾಜ್ಯದಲ್ಲಿ ಖಾಲಿಯಿರುವ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಒಟ್ಟು 3,991 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜೂನ್ 10 ರಿಂದ ಆರಂಭವಾಗಲಿದೆಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ e Áತಿಯ ಅಭ್ಯರ್ಥಿಗಳು ಒಳಮೀಸಲಾತಿ ಪ್ರಕಾರ ತಮಗೆ ಅನ್ವಯವಾಗುವ ಎಸ್‌ಸಿ-ಎ, ಎಸ್‌ಸಿ-ಬಿ ಮತ್ತು ಎಸ್‌ಸಿ-ಸಿ ಜಾತಿ ಪ್ರಮಾಣ ಪತ್ರಗಳ ಆರ್‌ಡಿ ಸಂಖ್ಯೆ ನಮೂದಿಸುವುದು ಕಡ್ಡಾಯವಾಗಿದೆ.ಒಟ್ಟು ಹುದ್ದೆಗಳ ಪೈಕಿ 596 ಹುದ್ದೆಗಳು ಕಲ್ಯಾಣ ಕರ್ನಾಟಕ ಹಾಗೂ 3,395…

Read More

ರಾಜ್ಯ ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿ ಶಿವಕುಮಾರ್ ನೇಮಕ

ಮೈಸೂರು: ರಾಜ್ಯ ಬಿಜೆಪಿ ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಮೈಸೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಶಿವಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಇವರು ಈ ಹಿಂದೆ ಎಸ್‌ಟಿ ಮೋರ್ಚಾ ಕೋಶಾಧ್ಯಕ್ಷರಾಗಿ ಕೆಲಸ ಮಾಡಿದ್ದರು. ಈಗ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.ಮೈಸೂರು ನಗರಪಾಲಿಕೆಯ ಸದಸ್ಯರಾಗಿ, ಹಣಕಾಸು ಸ್ಥಾಯಿ ಸಮಿತಿ, ವರ್ಕ್್ಸ ಕಮಿಟಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದ ಶಿವಕುಮಾರ್. ಮಹಾಪೌರರಾಗಿಯೂ ಕೆಲಸ ನಿರ್ವಹಿಸಿದ್ದರು.

Read More