ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಲೆAದು ವಿಶೇಷ ಪೂಜೆ ಸಲ್ಲಿಸಿ, 101 ತೆಂಗಿನಕಾಯಿ ಒಡೆದ ಅಭಿಮಾನಿಗಳು
ಮೈಸೂರು; ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲೆಂದು ಆಶಿಸಿ ಅಖಿಲ ಕರ್ನಾಟಕ ಒಕ್ಕಲಿಗರ ಸಂಘ, ಮೈಸೂರು ಜಿಲ್ಲಾ ಘಟಕದ ವತಿಯಿಂದ ಗುರುವಾರ ಅಗ್ರಹಾರದ 101 ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿಸಿ, 101 ತೆಂಗಿನ ಕಾಯಿ ಹಿಡುಗಾಯಿ ಒಡೆಯಲಾಯಿತು.ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ, ಆಪತ್ಭಾಂದವನಾಗಿ ಕೆಲಸವನ್ನು ಮಾಡಿಕೊಂಡು ಬರುತ್ತಿರುವ ಡಿ.ಕೆ.ಶಿವಕುಮಾರ್ ಅವರು , ಪಕ್ಷದ ರಾಜ್ಯಾಧ್ಯಕ್ಷನಾಗಿ ಕಾಂಗ್ರೆಸ್ 135 ಕ್ಕಿಂತ ಹೆಚ್ಚು ಸೀಟುಗಳು ಬರುವಂತೆ ಕಾರ್ಯ ನಿರ್ವಹಿಸಿದ್ದಾರೆ. ಮೂಲ ಕಾಂಗ್ರೆಸ್ಸಿಗರಾದ ಡಿಕೆ…