ಚಾಮುಂಡಿಬೆಟ್ಟ ಪ್ಲಾಸ್ಟಿಕ್ ಮುಕ್ತ ವಲಯ:ಆಷಾಢ ಮಾಸದಲ್ಲಿ ಪ್ಲಾಸ್ಟಿಕ್ ಬಳಸದಂತೆ ಭಕ್ತರಿಗೆ ಪ್ರಾಧಿಕಾರ ಸೂಚನೆ
ಮೈಸೂರು: ನಗರದ ಚಾಮುಂಡಿಬೆಟ್ಟ ಪ್ಲಾಸ್ಟಿಕ್ ಮುಕ್ತ ವಲಯವಾಗಿದೆ. ಈ ಹಿನ್ನಲೆಯಲ್ಲಿ ಆಷಾಢ ಮಾಸದ ಶುಕ್ರವಾರಗಳು, ಪ್ರತಿ ಶನಿವಾರ, ಭಾನುವಾರ ಹಾಗೂ ಚಾಮುಂಡೇಶ್ವರಿ ಅಮ್ಮನವರ ಜನ್ಮೋತ್ಸವದ /ವರ್ಧಂತಿ ಪ್ರಯುಕ್ತ ಚಾಮುಂಡಿಬೆಟ್ಟಕ್ಕೆ ಲಕ್ಷಾಂತರ ಭಕ್ತಾದಿಗಳು ಆಗಮಿಸುವ ಹಿನ್ನೆಲೆಯಲ್ಲಿ, ಇಡೀಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಶ್ರೀ ಚಾಮುಂಡೇಶ್ವರಿಕ್ಷೇತ್ರಅಭಿವೃದ್ಧಿ ಪ್ರಾಧಿಕಾರವು ತೀರ್ಮಾನಿಸಿದೆ.ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆಯ ತೀರ್ಮಾನದಂತೆ, ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆಯನ್ನು ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಭಕ್ತಾದಿಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧದ ಕುರಿತು ಅರಿವು ಮೂಡಿಸಲು ಉದ್ದೇಶಿಸಲಾಗಿದೆ.ಈ ಬಾರಿಯ…