ಮೈಸೂರು ಮತ್ತು ಕೊಡಗಿನ ಪ್ರವಾಸೋದ್ಯಮ ಹಾಗೂ ಪರಂಪರೆ ಅಭಿವೃದ್ಧಿಗೆ ಕೇಂದ್ರ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿದ ಸಂಸದ ಯದುವೀರ್ ಒಡೆಯರ್
ಮೈಸೂರು; ಮೈಸೂರು ಹಾಗೂ ಕೊಡಗಿನ ಪ್ರಮುಖ ಪ್ರವಾಸೋದ್ಯಮ ಮತ್ತು ಪರಂಪರೆ ಅಭಿವೃದ್ಧಿ ಯೋಜನೆಗಳಿಗೆ ಸಂಬAಧಿಸಿದAತೆ ಎರಡು ಪ್ರಮುಖ ಮನವಿಗಳನ್ನು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಸಲ್ಲಿಸಿದರು..ಮೊದಲ ಮನವಿಯಲ್ಲಿ, ಮೈಸೂರಿನ ಅರ್ಜುನ ವೃತ್ತ (ಎಲ್ಐಸಿ ಜಂಕ್ಷನ್) ಅಭಿವೃದ್ಧಿ ಯೋಜನೆಗೆ ತಾಂತ್ರಿಕ ಅನುಮೋದನೆ ದೊರಕುವ ಉದ್ದೇಶದಿಂದ ಯೋಜನಾ ನಿರ್ವಹಣಾ ಸಲಹೆಗಾರರನ್ನು ನೇಮಕ ಮಾಡುವಂತೆ ಸಚಿವರನ್ನು ಕೋರಿದರು.ಈ ಯೋಜನೆಗೆ ಈಗಾಗಲೇ ಕೇಂದ್ರ ಪ್ರವಾಸೋದ್ಯಮ ಸಚಿವಾಲಯದಿಂದ 20 ಕೋಟಿ ಅನುದಾನ…