Skip to main content

3Kaala News

ಸುಭಾಷಿತ 

ಯಾರಿಗಾದರೂ ಅವರು ಕೃತಜ್ಞತೆಯಿಂದ ಸ್ವೀಕರಿಸಲು ಸಾಧ್ಯವಾಗುವಷ್ಟು ಮಾತ್ರ ಸಹಾಯ ಮಾಡಿ. ನೀವು ಅವನಿಗೆ ಹೆಚ್ಚು ಸಹಾಯ ಮಾಡಿದರೆ, ಅವನು ಅದನ್ನು ತನ್ನ ಹಕ್ಕು ಎಂದು ಪರಿಗಣಿಸಲು ಪ್ರಾರಂಭಿಸುತ್ತಾನೆ. ಮತ್ತು ಅವನು ಅದನ್ನು ಪಡೆಯದಿದ್ದಾಗ, ಅದೇ ವ್ಯಕ್ತಿ ನಿಮ್ಮ ಶತ್ರುವಾಗುತ್ತಾನೆ.

Current Weather Card
--°C
Mysore, IN
Loading...
☁️

Live Gold Silver Fuel News Ticker
Loading live rates...

ಏಷ್ಯಾ ಗ್ರ್ಯಾಂಡ್‌ ಮಾಸ್ಟರ್ ಪ್ರಾಂಜಲಿ ರಾಜ್ ಎ.

ಮೈಸೂರು: ಮೈಸೂರಿನ ಜೆಎಸ್‌ಎಸ್ ಲೇಔಟ್ 2ನೇ ಹಂತದ ಪುಟ್ಟ ಪ್ರತಿಭೆ ಪ್ರಾಂಜಲಿ ರಾಜ್ ಎ. ಅವರು ತಮ್ಮ ಅದ್ಭುತ ಸಾಧನೆಯ ಮೂಲಕ ರಾಜ್ಯದ ಗಮನ ಸೆಳೆದಿದ್ದಾರೆ. ಕೇವಲ 2 ವರ್ಷ 8 ತಿಂಗಳ ವಯಸ್ಸಿನಲ್ಲೇ, 22 ಕನ್ನಡ ಹಾಡುಗಳನ್ನು ಹಾಡಿದ ಸಾಧನೆಗಾಗಿ “ಏಷ್ಯಾ ಗ್ರ್ಯಾಂಡ್‌ ಮಾಸ್ಟರ್ 2026” ಪ್ರಶಸ್ತಿ ಪಡೆದ ಮೊದಲ ಬಾಲ ಪ್ರತಿಭೆಯಾಗಿದ್ದಾರೆ.ಇದರ ಜೊತೆಗೆ, ಅತಿ ಹೆಚ್ಚು ಕನ್ನಡ ಹಾಡುಗಳನ್ನು ಹಾಡಿದ ಪುಟ್ಟ ಮಗುವೆಂಬ ದಾಖಲೆಯೊಂದಿಗೆ “ಇಂಡಿಯಾ ಬುಕ್ ಆಫ್ ರೆಕಾರ್ಡ್್ಸ 2024″ರಲ್ಲಿ ಸ್ಥಾನ ಪಡೆದು…

Read More

ಬಾರ್ ಅಂಡ್ ರೆಸ್ಟೋರೆಂಟ್ ಅಗ್ನಿ ಅವಘಡ : ಐದು ಮಂದಿ ಅಬಕಾರಿ ಅಧಿಕಾರಿಗಳ ಅಮಾನತು

ಮೈಸೂರು; ನಗರದ ದಟ್ಟಗಳ್ಳಿ ಸಮೀಪದ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಆದ ಅಗ್ನಿ ಅವಘಡದ ಸಂಬAಧ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಐದು ಮಂದಿ ಅಬಕಾರಿ ಅಧಿಕಾರಿಗಳ ಅಮಾನತು ಮಾಡಲಾಗಿದೆ.ಮೈಸೂರಿನ ದಟ್ಟಗಳ್ಳಿ 3 ನೇ ಹಚಿತದ ನೇತಾಜಿ ವೃತ್ತದ ಬಳಿಯಿರುವ ಫಾಕ್ಸ್ ಡೆನ್ ಲಿಕ್ಕರ್ ಗ್ಯಾರೇಜ್ ರೆಸ್ಟೋ ಪಬ್‌ನ ಕಟ್ಟಡದ ರೂಪ್ ಟಾಪ್ ನಲ್ಲಿ ಅನುಮತಿ ಪಡೆಯದೆ ಒಣ ಹುಲ್ಲು ಮತ್ತು ಗರಿಗಳಿಂದ ನಿರ್ಮಿಸಿ ಬಾರ್ ಅಂಡ್ ರೆಸ್ಟೋರೆಂಟ್ ನಡೆಸುತ್ತಿದ್ದು, ಈ ಸಂಬAಧ ಪರಿಶೀಲಿಸದೆ ಕರ್ತವ್ಯ…

Read More

11 ಮಂದಿ ರೋಗಿಗಳ ಸಾವಿನ ಪ್ರಕರಣದಲ್ಲಿ ಜಯದೇವ ಹೃದ್ರೋಗ ಸಂಸ್ಥೆಗೆ ಮಸಿ ಬಳಿಯುವ ಕೆಲಸ ಮಾಡಬೇಡಿ; ಡಾ.ದಿನೇಶ್

ಮೈಸೂರು; ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿಂದ 11 ಮಂದಿ ರೋಗಿಗಳ ಸಾವಿಗಿದೆ ಎಂಬ ಪ್ರಕರಣದಲ್ಲಿ ಆಸ್ಪತ್ರೆಗೆ ಮಸಿ ಬಳಿಯುವ ಕೆಲಸ ಮಾಡಬೇಡಿ ಎಂದು ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ದಿನೇಶ್ ಹೇಳಿದರು.ಬುಧವಾರ ಮೈಸೂರಿನ ಮೇಟಗಳ್ಳಿಯಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆ ಬೋರ್ಡ್ ರೂಮ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ 11 ಜನ ಗೋಲ್ಡನ್ ಅವರ್ ಮೀರಿ ಬಂದವರು. ತೀವ್ರ ನಿಗಾ ಘಟಕದಲ್ಲಿ ಇಟ್ಟು ಔಷಧೋಪಚಾರ ಮಾಡಲಾಗುತ್ತಿತ್ತು. ಎಲ್ಲರೂ ಒಂದೇ ದಿನ ಅಡ್ಮಿಟ್ ಆಗಿಲ್ಲ….

Read More

ಪರಿಶಿಷ್ಟ ಜಾತಿ ಮತ್ತು ಪಂಗಡದವರ ಸಮಸ್ಯೆಗಳನ್ನು ಪರಿಹರಿಸಲು ಆಯೋಗ ಬದ್ದ: ಡಾ. ಮೂರ್ತಿ ಎಲ್

ಮೈಸೂರು: ಪರಿಶಿಷ್ಟ ಜಾತಿ ಮತ್ತು ಪಂಗಡದವರ ಸಮಸ್ಯೆಗಳನ್ನು ಪರಿಹರಿಸಲು ಆಯೋಗ ಬದ್ಧವಾಗಿದೆ ಎಂದು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ಡಾ. ಮೂರ್ತಿ.ಎಲ್ ಹೇಳಿದರು.ಮಂಗಳವಾರ ನಗರದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಂಘ ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಸಭೆ ಹಾಗೂ ಅಹವಾಲು ಸ್ವೀಕೃತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೈಸೂರು ಜಿಲ್ಲೆಯಿಂದ 150 ಪ್ರಕರಣಗಳು ಆಯೋಗದಲ್ಲಿ ದಾಖಲಾಗಿದ್ದು, 48 ಪ್ರಕರಣಗಳು…

Read More

ಅರಮನೆ ನಗರಿ ಮೈಸೂರಿನಲ್ಲಿ ಯೋಗ ದಿನಕ್ಕೆ ಭರದ ಸಿದ್ದತೆ; ಅನುಕೂಲಕ್ಕೆ ಅನುಗುಣವಾಗಿ ಅಭ್ಯಾಸ

ಮೈಸೂರು: ಜಾಗತಿಕವಾಗಿ ಯೋಗ ನಗರವೆಂದು ಮನ್ನಣೆ ಗಳಿಸಿರುವ ಅರಮನೆ ನಗರಿ ಮೈಸೂರು ಮತ್ತೊಂದು ವಿಶ್ವ ಯೋಗ ದಿನಾಚರಣೆ ಸಂಭ್ರಮಕ್ಕೆ ಸಜ್ಜಾಗಿದೆ. 12ನೇ ಅಂತಾರಾಷ್ಟಿçÃಯ ಯೋಗ ದಿನವನ್ನು ವಿಭಿನ್ನ ಹಾಗೂ ಹೊಸತನದೊಂದಿಗೆ ಆಚರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.ವಿಶ್ವ ಯೋಗ ದಿನ ನಮಗೆಲ್ಲ ಹಬ್ಬವಿದ್ದಂತೆ. ಅದೇ ದಿನ ಮಾಡಿದರೆ ಸಂತೋಷ. ಆದರೆ ಅನುಕೂಲಕ್ಕೆ ತಕ್ಕಂತೆ ಬದಲಾಯಿಸಿಕೊಳ್ಳಲೂ ಅವಕಾಶ ನೀಡಿದ್ದೇವೆ. ಈ ಬಾರಿಯ ಜೂನ್ 21ರ ವಿಶ್ವ ಯೋಗ ದಿನ ಭಾನುವಾರ ಇದೆ. ತಮ್ಮ ಅನುಕೂಲಕ್ಕೆ ಅನುಗುಣವಾಗಿ ಶನಿವಾರ ಅಥವಾ ಸೋಮವಾರ ಯೋಗಾಭ್ಯಾಸ…

Read More

ಪೆಟ್ರೋಲ್, ಡೀಸೆಲ್‌ಗೆ ಪರ್ಯಾಯವಾಗಿ ಶೇಕಡ ನೂರರಷ್ಟು ಎಥನಾಲ್ ಬಳಕೆಗೆ ಆದೇಶ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತ; ಕುರುಬೂರು ಶಾಂತಕುಮಾರ್

ಮೈಸೂರು; ಕಬ್ಬಿನಿಂದ ಹಾಗೂ ಕೃಷಿ ಉತ್ಪನ್ನಗಳಿಂದ ಉತ್ಪಾಧಿಸುವ ಎಥನಾಲ್‌ನ್ನು ಶೇಕಡ ನೂರರಷ್ಟು ಪೆಟ್ರೋಲ್. ಡೀಸೆಲ್‌ಗೆ ಪರ್ಯಾಯವಾಗಿ ಬಳಸಲು ಅನುಮತಿ ನೀಡಿರುವ ಕೇಂದ್ರ ಸರ್ಕಾರದ ಆದೇಶ ಸ್ವಾಗತರ್ಹವಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, 2006 ರಲ್ಲಿ ದಕ್ಷಿಣ ಭಾರತ ರಾಜ್ಯಗಳ ರೈತರ ಸಮಾವೇಶವನ್ನು ಮೈಸೂರಿನಲ್ಲಿ ನಡೆಸಿ ಕಬ್ಬಿನಿಂದ ಎಥನಾಲ್‌ನ್ನು ಉತ್ಪಾದಿಸಲು ಹಾಗೂ ಪೆಟ್ರೋಲ್ ಜೊತೆ ಮಿಶ್ರಣ ಮಾಡಲು ಅವಕಾಶ ನೀಡಬೇಕು. ಇದರಿಂದ ದೇಶ ಖರೀದಿಸುವ…

Read More

ಹಣ ಉಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಮಾಡುತ್ತಿದೆ; ಮಾಜಿ ಸಚಿವ ಡಾ. ಅಶ್ವಥ್ ನಾರಾಯಣ

ಮೈಸೂರು: ರಾಜ್ಯ ಸರ್ಕಾರದ ಖಜಾನೆ ದಿವಾಳಿಯಾಗಿದೆ. ಹೀಗಾಗಿ ಹಣ ಉಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಮಾಡುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ ಟೀಕಿಸಿದರು.ಸೋಮವಾರ ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ 8 ಲಕ್ಷ ಕೋಟಿರೂಗಳ ಸಾಲ ಮಾಡಿದೆ. ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿದೆ. ಗ್ಯಾರಂಟಿ ಯೋಜನೆಗಳಿಗೆಂದು ಹಣವನ್ನೆಲ್ಲಾ ಖರ್ಚು ಮಾಡಿದೆ. ಸರ್ಕಾರದ ಖಜಾನೆ ಬರ್ಬದ್ ಆಗಿದೆ. ಖಜಾನೆಯಲ್ಲಿ ಹಣವಿಲ್ಲದ ಕಾರಣ ಆಡಳಿತ ನಡೆಸಲು…

Read More

ಆರ್.ಟಿ.ವೆಂಕಟೇಶ್, ಅಜ್ಜಮಾಡ ರಮೇಶ್‌ಕುಟ್ಟಪ್ಪ ಅವರಿಗೆ ತೆರೆಮರೆಯ ಸಾಧಕ ಪ್ರಶಸ್ತಿ ಪ್ರದಾನ

ಮೈಸೂರು: ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ 45ನೇ ವರ್ಷದ ವಾರ್ಷಿಕೋತ್ಸವ ಹಾಗೂ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ ಆಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮೈಸೂರಿನ ಲಲಿತಾದ್ರಿಪುರದಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಆರ್ ಟಿ ವೆಂಕಟೇಶ್ ಅಜ್ಜಮಾಡ ರಮೇಶ್ ಕುಟ್ಟಪ್ಪ ತೆರೆಮರೆಯ ಸಾಧಕ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ವತಿಯಿಂದ ನಡೆದ ತೆರೆಮರೆಯ ಸಾಧಕ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕೆ ಆರ್ ಪೇಟೆ ತಾಲೂಕಿನ ಪ್ರಖ್ಯಾತ ವೈದ್ಯರಾದ…

Read More

ಮುಂದಿನ ವರ್ಷ ಎರಡು ಕೋಟಿ ಜನರಿಂದ ಯೋಗಾಭ್ಯಾಸಕ್ಕೆ ಸಂಕಲ್ಪ

*ರಾಜ್ಯಾದ್ಯAತ ಯೋಗ ವಿಸ್ತರಣೆಗೆ ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮಿ ಸಲಹೆ —–ಬಾಕ್ಸ್ ನ್ಯೂಸ್ —500ಕ್ಕೂ ಹೆಚ್ಚು ಜನರಿಂದ ಯೋಗಾಭ್ಯಾಸಶ್ರೀಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಆಯೋಜಿಸಿದ್ದ ಸಂಕಲ್ಪ ದಿನದಲ್ಲಿ 500ಕ್ಕೂ ಹೆಚ್ಚು ಯೋಗಪಟುಗಳು ವಿಶ್ವ ಯೋಗ ದಿನದ ಶಿಷ್ಟಾಚಾರದನ್ವಯ ಯೋಗ ತಾಲೀಮು ನಡೆಸಿದರು.ಯೋಗ ಪೂರ್ವಾಭ್ಯಾಸದಲ್ಲಿ ಯೋಗಪಟುಗಳು, ಸಾಧಕರು ಹಾಗೂ ಬೋಧಕರು ಭಾಗವಹಿಸಿದ್ದರು.ಸುಮಾರು 45 ನಿಮಿಷಗಳ ಕಾಲ ಪ್ರಾರ್ಥನೆ, ಚಾಲನಾ ಕ್ರಿಯೆ, ತಾಡಾಸನ, ವೃಕ್ಷಾಸನ, ಪಾದ-ಹಸ್ತಾಸನ, ಅರ್ಧ ಚಕ್ರಾಂತಾಸನ ಮತ್ತು ತ್ರಿಕೋಣಾಸನ, ಭದ್ರಾಸನ, ವಜ್ರಾಸನ, ಅರ್ಧ ಉಷ್ಟಾçಸನ, ಉಷ್ಟಾçಸನ, ಶಶಕಾಸನ,…

Read More

ನಾನು ಬದುಕಿದ್ದೀನಿ, ಆರೋಗ್ಯವಾಗಿದ್ದೀನಿ; ಚಿತ್ರ ನಟ ದೊಡ್ಡಣ್ಣ

ಬೆಂಗಳೂರು; ಬೆಳ್ಳಂಬೆಳಗ್ಗೆ ಕಿಡಿಗೇಡಿಗಳು ನಾನು ಸತ್ತೋದೆ ಅನ್ನೋ ಸುದ್ದಿ ಹಬ್ಬಿಸಿದ್ದಾರೆ. ನಾನು ಬದುಕಿದ್ದೀನಿ, ಆರೋಗ್ಯವಾಗಿ ಇದೀನಿ ಎಂದು ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಹೇಳಿದರು.ಬೆಳಗ್ಗೆ ಏಳೋ ಮುಂಚೆನೇ ಯಾರೋ ಅವಿವೇವಿಕಿಗಳು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ಗಳನ್ನು ಹಾಕಿ ನಾನು ಸತ್ತುಹೋದೆ ಅಂತ ಸುದ್ದಿ ಹಬ್ಬಿಸಿದಾರೆ. ಅದೆಲ್ಲ ಶುದ್ಧ ಸುಳ್ಳು. ನನ್ನ ಆರೋಗ್ಯಚನಾಗಿದೆ, ಬೆಳಗ್ಗೆಯಿಂದ ಪಾಪ ನನ್ನ ಮಕ್ಕಳು, ಮೊಮ್ಮಕ್ಕಳು ಕಾಲ್ ಮಾಡ್ತಾನೇ ಇದಾರೆ. ದೇವರ ಆಶೀರ್ವಾದ ಇರೋವರೆಗೂ ಗಟ್ಟಿಯಾಗಿನೇ ಇರ್ತೀನಿ ಎಂದು ನುಡಿದರು. .ಬದುಕಿರೋ ಮನುಷ್ಯ ಸತ್ತುಹೋದ…

Read More