ರಾಜ್ಯದಲ್ಲಿ ಹೆಚ್ಚು ಬೇಡಿಕೆಯಿರುವ ಅಣಬೆ ಬೇಸಾಯವನ್ನು ಕೈಗೊಂಡು ಆರ್ಥಿಕವಾಗಿ ಸದೃಢರಾಗಬೇಕು
ಮೈಸೂರು: ರಾಜ್ಯದಲ್ಲಿ ಹೆಚ್ಚು ಬೇಡಿಕೆಯಿರುವ ಅಣಬೆ ಬೇಸಾಯವನ್ನು ಕೈಗೊಂಡು ಆರ್ಥಿಕವಾಗಿ ಸದೃಢರಾಗಬೇಕು ಎಂದು ಹಾರ್ಟ್ ಸಂಸ್ಥೆಯ ಸಂಸ್ಥಾಪಕ ಶಿವಕುಮಾರ್ ಸಲಹೆ ನೀಡಿದರು.ಮೈಸೂರಿನ ಎಚ್.ಡಿ.ಕೋಟೆ-ಮಾನಂದವಾಡಿ ರಸ್ತೆಯ ಕೋಟೆಹುಂಡಿಯಲ್ಲಿರುವ ಹಾರ್ಟ್ ಸಂಸ್ಥೆಯ ತರಬೇತಿ ಕೇಂದ್ರದಲ್ಲಿ ನಡೆದ ಅಣಬೆ ಬೇಸಾಯ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಅಣಬೆ ಬೇಸಾಯವು ಕಡಿಮೆ ಜಾಗ, ಕಡಿಮೆ ಬಂಡವಾಳ ಮತ್ತು ಕಡಿಮೆ ಅವಧಿಯಲ್ಲಿ ಅಧಿಕಾ ಲಾಭ ತಂದುಕೊಡುವ ಕೃಷಿ ವಿಧಾನವಾಗಿದೆ. ಇದು ನಿರುದ್ಯೋಗಿಗಳಿಗೆ ಮತ್ತು ರೈತರಿಗೆ ಉತ್ತಮ ಸ್ವಯಂ ಉದ್ಯೋಗವಾಗಿದ್ದು, ಪ್ರೋಟೀನ್ ಮತ್ತು ಪೋಷಕಾಂಶಗಳನ್ನು…